News Kadaba

ಸುಬ್ರಮಣ್ಯ: ಅಪ್ರಾಪ್ತ ಬಾಲಕನಿಗೆ ಗದರಿಸಿ ಕೋಲಿನಿಂದ ಹಲ್ಲೆ-ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.29: ಅಪ್ರಾಪ್ತ ಬಾಲಕನಿಗೆ ಗದರಿಸಿ ಕೋಲಿನಿಂದ ಹೊಡೆದ ಆರೋಪದ ಮೇಲೆ ವ್ಯಕ್ತಿಯೋರ್ವರ ವಿರುದ್ಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಮಹಿಳೆಯ ಅಪ್ರಾಪ್ತ ಪ್ರಾಯದ ಮಗನು, ಸ್ಥಳೀಯ ಶಾಲೆಯೊಂದರಲ್ಲಿ ಕಲಿಯುತ್ತಿದ್ದಾನೆ. ನ. 24ರಂದು ಆರೋಪಿ ಚೇತನ್ ಎಂಬವರು ಬಾಲಕನಿಗೆ ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಪ್ರಸಾರವಾಗಿರುವುದು ದೂರುದಾರ ಮಹಿಳೆಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆ ಬಾಲಕನ ತಾಯಿ ಆರೋಪಿ ಚೇತನ್ ಅವರ ವಿರುದ್ಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ದೂರು […]

ಸುಬ್ರಮಣ್ಯ: ಅಪ್ರಾಪ್ತ ಬಾಲಕನಿಗೆ ಗದರಿಸಿ ಕೋಲಿನಿಂದ ಹಲ್ಲೆ-ಪ್ರಕರಣ ದಾಖಲು Read More »

ಕರಾವಳಿ

ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ : ಸಿಎಂ

(ನ್ಯೂಸ್‌ ಕಡಬ) newskadaba.com,  ನ.29: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶನಿವಾರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ

ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ : ಸಿಎಂ Read More »

ಕರ್ನಾಟಕ

‘ಭಾಷಾ ನಿಯಂತ್ರಣಕ್ಕಾಗಿ ಹಿಂಸೆ ತಪ್ಪು’- ಸುನಿಲ್ ಶೆಟ್ಟಿ

(ನ್ಯೂಸ್‌ ಕಡಬ) newskadaba.com,  ನ.29: ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಮರಾಠಿ ಮತ್ತು ವಲಸಿಗರ ನಡುವೆ ಮರಾಠಿ ಭಾಷೆಯ ಕುರಿತು ದೊಡ್ಡ ಚರ್ಚೆ ನಡೆಯುತ್ತಿದೆ. ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ‘ಭಾಷಾ ನಿಯಂತ್ರಣಕ್ಕಾಗಿ ಹಿಂಸೆ ತಪ್ಪು’ ಎಂದು ತಿಳಿಸಿದ್ದಾರೆ. ಮರಾಠಿ ಭಾಷೆಯ ಮೇಲಿನ ಪ್ರಸ್ತುತ ರಾಜಕೀಯ ಮತ್ತು ಅದರಿಂದಾಗುತ್ತಿರುವ ಹಿಂಸಾಚಾರದ ಬಗ್ಗೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಮರಾಠಿ ಭಾಷೆಯ ಮೇಲೆ ರಾಜಕೀಯ ಮಾಡುವುದು ಮತ್ತು ಅದನ್ನು

‘ಭಾಷಾ ನಿಯಂತ್ರಣಕ್ಕಾಗಿ ಹಿಂಸೆ ತಪ್ಪು’- ಸುನಿಲ್ ಶೆಟ್ಟಿ Read More »

ಬ್ರೇಕಿಂಗ್ ನ್ಯೂಸ್

ಪ್ರವಾಹದಿಂದ ತತ್ತರಿಸಿದ ಶ್ರೀಲಂಕಾಗೆ ಭಾರತ ನೆರವು: ‘ಆಪರೇಷನ್ ಸಾಗರ ಬಂಧು’ ಅಡಿ ಕಾರ್ಯಾಚರಣೆ ಆರಂಭ

(ನ್ಯೂಸ್‌ ಕಡಬ) newskadaba.com,  ನ.29: ಪ್ರವಾಹ ಮತ್ತು ಭೂಕುಸಿತದಿಂದ ತತ್ತರಿಸಿರುವ ಶ್ರೀಲಂಕಾಕ್ಕೆ ನೆರವು ನೀಡಲು ಭಾರತ ‘ಆಪರೇಷನ್ ಸಾಗರ ಬಂಧು’ ಅಡಿಯಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದೆ. ಇದರ ಭಾಗವಾಗಿ ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಂಡವರಿಗಾಗಿ ತುರ್ತು ಪರಿಹಾರ ಸಾಮಗ್ರಿಗಳನ್ನ ಭಾರತ ಕಳುಹಿಸಿದೆ. ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿ, ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 100 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ

ಪ್ರವಾಹದಿಂದ ತತ್ತರಿಸಿದ ಶ್ರೀಲಂಕಾಗೆ ಭಾರತ ನೆರವು: ‘ಆಪರೇಷನ್ ಸಾಗರ ಬಂಧು’ ಅಡಿ ಕಾರ್ಯಾಚರಣೆ ಆರಂಭ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೆಹಲಿ ವಾಯು ಮಾಲಿನ್ಯದ ಬಗ್ಗೆ ಪ್ರಧಾನಿ ಮೋದಿಗೆ ಕಿರಣ್ ಬೇಡಿ ಪತ್ರ

(ನ್ಯೂಸ್‌ ಕಡಬ) newskadaba.com,  ನ.29: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಹಲವೆಡೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ 369ರಷ್ಟು ದಾಖಲಾಗಿದೆ. ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಪುದುಚೇರಿ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕಿರಣ್ ಬೇಡಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಕುರಿತು ಬರೆಯುತ್ತಾ, ಪ್ರಧಾನಿ ಮೋದಿ

ದೆಹಲಿ ವಾಯು ಮಾಲಿನ್ಯದ ಬಗ್ಗೆ ಪ್ರಧಾನಿ ಮೋದಿಗೆ ಕಿರಣ್ ಬೇಡಿ ಪತ್ರ Read More »

ರಾಷ್ಟ್ರೀಯ ನ್ಯೂಸ್

ಎ320 ಸಾಫ್ಟ್ವೇರ್ನಲ್ಲಿ ದೋಷ: 250ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ/ರದ್ದಾಗುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ನ.29: ದೇಶದಲ್ಲಿ ಕಾರ್ಯ ನಿರ್ವಹಿಸುವ ಇಂಡಿಗೋ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಿರ್ವಹಿಸುವ ಹಲವಾರು ವಿಮಾನಗಳು ತಮ್ಮ ಎ320 ಸಾಫ್ಟ್‌ವೇರ್‌ನಲ್ಲಿ ಉಂಟಾದ ದೋಷದಿಂದಾಗಿ ಅಡಚಣೆ ಉಂಟಾಗುವ ಸಾಧ್ಯತೆಗಳಿವೆ. ತಾಂತ್ರಿಕ ದೋಷದಿಂದ ಸುಮಾರು 200 ರಿಂದ 250 ವಿಮಾನಗಳ ಹಾರಾಟ ರದ್ದಾಗುವ ಅಥವಾ ವಿಮಾನ ಹಾರಾಟದಲ್ಲಿ ವಿಳಂಬವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಫ್ರೆಂಚ್ ವಿಮಾನಯಾನ ಕಂಪನಿ ಏರ್‌ಬಸ್, ಅತಿಯಾದ ಸೌರ ವಿಕಿರಣವು ಎ320 ಸರಣಿಯ ವಿಮಾನಗಳ ಹಾರಾಟ ನಿಯಂತ್ರಣಗಳಿಗೆ ಅಗತ್ಯವಾದ ನಿರ್ಣಾಯಕ ಡೇಟಾವನ್ನ ನಾಶಪಡಿಸಬಹುದು.

ಎ320 ಸಾಫ್ಟ್ವೇರ್ನಲ್ಲಿ ದೋಷ: 250ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ/ರದ್ದಾಗುವ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ‘ಲಕ್ಷ ಕಂಠ ಗೀತಾ ಗಾಯನ’ಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ

(ನ್ಯೂಸ್‌ ಕಡಬ) newskadaba.com,  ನ.29: ಉಡುಪಿಯಲ್ಲಿ ನಡೆದ ಭವ್ಯವಾದ “ಲಕ್ಷ ಕಂಠ ಗೀತಾ ಗಾಯನ” ಕಾರ್ಯಕ್ರಮವು ಅಧಿಕೃತವಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಸಂಕಲ್ಪದಂತೆ, ಈ ಐತಿಹಾಸಿಕ ಕಾರ್ಯಕ್ರಮವು ನವೆಂಬರ್ 28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನೆರವೇರಿತು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಏಷ್ಯಾ ಮುಖ್ಯಸ್ಥರಾದ ಡಾ. ಮನೀಶ್ ಕುಮಾರ್ ವಿಶ್ನೋಯ್ ಅವರು ಸಮಾರಂಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ: ‘ಲಕ್ಷ ಕಂಠ ಗೀತಾ ಗಾಯನ’ಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.29: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಒಣ ಹವೆ ಕಂಡುಬರುತ್ತಿದೆ. ಆದರೆ, ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ದಿತ್ವಾ ಚಂಡಮಾರುತ ಪರಿಣಾಮದಿಂದ ನ.29 ಮತ್ತು 30ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C

ಇಂದಿನ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ

(ನ್ಯೂಸ್‌ ಕಡಬ) newskadaba.com,  ನ.29: ಬೆಂಗಳೂರಿನಿಂದ ಗುರುರಾಯರ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಜರುಗಿದೆ. ಮೃತರೆಲ್ಲಾ ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ

ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ Read More »

ಕರ್ನಾಟಕ

ಕೆಂಪಳ್ಳ: ಸರಕು ಸಾಗಿಸುತ್ತಿದ್ದ ಟೆಂಪೋ ಪಲ್ಟಿ-ಚಾಲಕನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.29: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.  

ಕೆಂಪಳ್ಳ: ಸರಕು ಸಾಗಿಸುತ್ತಿದ್ದ ಟೆಂಪೋ ಪಲ್ಟಿ-ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top