News Kadaba

ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆ ರಕ್ಷಕ  ಶಿಕ್ಷಕ ಸಂಘದ ರಚನೆ ► ಅಧ್ಯಕ್ಷರಾಗಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆ

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆಯ  ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಮರ್ದಾಳ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆಗೊಂಡರೆ ಉಪಾಧ್ಯಕ್ಷರಾಗಿ ತಮ್ಮಯ್ಯ ಗೌಡ ಬೆತ್ತೋಡಿ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ರೆ|ಫಾ ಜೋಸ್ ವಿ.ಸಿ ಅಧ್ಯಕ್ಷತೆಯಲ್ಲಿ ಜು.18 ರಂದು ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ ಸಮಿತಿ ಸದಸ್ಯರಾಗಿ, ವೀರಪ್ಪ ಗೌಡ ಮೇಪತಪಾಲು, ಶಾಂತಿ ಪಾಲೆತ್ತಡ್ಕ, ನಾಗೇಶ ಗೌಡ ಕೋಕಳ, ಕೇಶವ ಗೌಡ […]

ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆ ರಕ್ಷಕ  ಶಿಕ್ಷಕ ಸಂಘದ ರಚನೆ ► ಅಧ್ಯಕ್ಷರಾಗಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆ Read More »

ಕರಾವಳಿ

ಕಡಬ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಚಿನ್ನ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಪೇಟೆಯ ಹೊರವಲಯದ ಕೊರುಂದೂರು ಎಂಬಲ್ಲಿ ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ಕಳ್ಳರು ವೃದ್ದೆಯ ಕೊರಳಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕೋರಂದೂರು ಹರೀಶ್ ಎಂಬವರ ತಾಯಿ ವಯೋವೃದ್ಧೆ 90 ರ ಹರೆಯದ ಸತ್ಯಭಾಮ ಎಂಬವರ ಕತ್ತಿನಲ್ಲಿದ್ದ ಸುಮಾರು ನಾಲ್ಕು ಪವನ್‍ನ ಚಿನ್ನದ ಸರವನ್ನು ಇಬ್ಬರು ಕಳ್ಳರು ಎಗರಿಸಿದ್ದಾರೆ. ಮನೆಯಲ್ಲಿ ಹರೀಶ್ ಮತ್ತು ಅವರ ತಾಯಿ ಇಬ್ಬರೇ ವಾಸವಾಗಿದ್ದು, ಹರೀಶ್ ಅವರು ಸಂಜೆ ವೇಳೆಗೆ ಕಡಬ

ಕಡಬ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಚಿನ್ನ ಎಗರಿಸಿದ ಕಳ್ಳರು Read More »

ಕರಾವಳಿ

ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಜು.19. ಹೊಟ್ಟೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ರತ್ರೆಯಲ್ಲಿ ನಿಧನರಾಗಿದ್ದಾರೆ. ಸೋಮವಾರದಂದು ಶಿರೂರು ಮೂಲ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಗೆ ಹೊಟ್ಟೆನೋವು ಕಾಣಿಸಿಕೊಂಡು ವಿಪರೀತ ವಾಂತಿ ಮಾಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಬುಧವಾರದಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ Read More »

ಕರಾವಳಿ

ದೀಪಕ್ ರಾವ್ ಕೊಲೆ‌ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿಯ‌ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.17. ಈ ವರ್ಷಾರಂಭದಲ್ಲಿ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೃಷ್ಣಾಪುರ 4 ನೇ ಬ್ಲಾಕ್ ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ದಿ| ಇಸ್ಮಾಯಿಲ್ ಎಂಬವರ ಪುತ್ರ ಸಫ್ವಾನ್ ಯಾನೆ ಚಪ್ಪು ಎಂದ ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ 2 ನೇ ಬ್ಲಾಕ್ ನ ಅಬ್ದುಲ್ ಮಜೀದ್ ಎಂಬವರ ಮನೆಯ ಎದುರು

ದೀಪಕ್ ರಾವ್ ಕೊಲೆ‌ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿಯ‌ ಬಂಧನ Read More »

ಕರಾವಳಿ

ಬೆಳ್ಳಾರೆ: ಪದವಿ ಪೂರ್ವ ಕಾಲೇಜಿನ ಲ್ಯಾಪ್ ಟಾಪ್, ಪ್ರೊಜೆಕ್ಟರ್ ಕಳ್ಳತನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.17. ಇಲ್ಲಿನ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕೊಠಡಿಯ ಒಳನುಗ್ಗಿರುವ ಕಳ್ಳರು ಲ್ಯಾಪ್ ಟಾಪ್ ಹಾಗೂ ಪ್ರೊಜೆಕ್ಟರನ್ನು ಹೊತ್ತೊಯ್ದಿದ್ದಾರೆ. ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗಿನ ನಡುವೆ ಒಳ ನುಗ್ಗಿರುವ ಕಳ್ಳರು 13,000/- ರೂಪಾಯಿ ಮೌಲ್ಯದ ಪ್ಯಾನಾಸೋನಿಕ್ ಕಂಪೆನಿಯ ಪ್ರೊಜೆಕ್ಟರ್ ಮತ್ತು ಸುಮಾರು 10,000/- ರೂಪಾಯಿ ಮೌಲ್ಯದ ಆಸಸ್ ಕಂಪೆನಿಯ ಲ್ಯಾಪ್ ಟಾಪ್ ಸೇರಿ ಒಟ್ಟು ರೂಪಾಯಿ 23,000 ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದಾರೆ. ಸೋಮವಾರದಂದು ಉಪನ್ಯಾಸಕರು ಕಾಲೇಜಿಗೆ ಆಗಮಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಬೆಳ್ಳಾರೆ: ಪದವಿ ಪೂರ್ವ ಕಾಲೇಜಿನ ಲ್ಯಾಪ್ ಟಾಪ್, ಪ್ರೊಜೆಕ್ಟರ್ ಕಳ್ಳತನ Read More »

ಕರಾವಳಿ

ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಕಡಬ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಕಡಬ, ಜೂ.28. ಘಟ್ಟದ ತಪ್ಪಲಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಡಬ ಸಮೀಪದ ಹೊಸಮಠ ಮುಳುಗು ಸೇತುವೆಯು ಗುರುವಾರ ಮಧ್ಯಾಹ್ನದ ಬಳಿಕ ಮತ್ತೆ ಮುಳುಗಡೆಯಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳಿಂದ ಕಡಬ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರ ಪರಿಣಾಮ ನದಿ, ಹಳ್ಳ, ಹೊಳೆಗಳು ತುಂಬಿ ಹರಿಯತೊಡಗಿವೆ. ಗುರುವಾರ ಬೆಳಿಗ್ಗೆಯಿಂದಲೇ ಕಡಬ ಸಮೀಪದ ಹೊಸ್ಮಠದಲ್ಲಿ ಗುಂಡ್ಯ ಹೊಳೆಗೆ ನಿರ್ಮಾಣವಾಗಿದ್ದ ಮುಳುಗು ಸೇತುವೆಯ ಅಂಚಿಗೆ ನೀರು ಹೊಡೆಯುತ್ತಿತ್ತಾದರೂ ಮಧ್ಯಾಹ್ನ ವೇಳೆಗೆ ಮುಳುಗಡೆಯಾಗಿದೆ. ಘಾಟ್ ತಪ್ಪಲಿನಲ್ಲಿ ಮಳೆಯ ಅಬ್ಬರ

ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಕಡಬ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಮರ್ಧಾಳ: ಅಡಿಕೆ ತೋಟದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸಮೀಪದ ಐತ್ತೂರಿನಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಐತ್ತೂರು ಗ್ರಾಮದ ಕೆರ್ಮಾಯಿ ನಿವಾಸಿ ದೇವಸ್ಯ ಎಂಬವರ ಪುತ್ರ ಪ್ರಿನ್ಸ್ ಪಿ.ಡಿ.(23) ಎಂದು ಗುರುತಿಸಲಾಗಿದೆ. ಈತ ಕೆರ್ಮಾಯಿ ಸೈಂಟ್ ಮೇರೀಸ್ ಚರ್ಚಿನ ತೋಟದಲ್ಲಿ ಕೂಲಿ ಕೆಲಸದಲ್ಲಿ ನಿರತನಾಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಅಡಿಕೆ‌ ಮರದ ಗುಂಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ತಕ್ಷಣವೇ ಉಳಿದ ಕೆಲಸಗಾರರು ಈತನನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿದರಾದರೂ ಅದಾಗಲೇ ಮೃತಪಟ್ಟಿದ್ದಾಗಿ

ಮರ್ಧಾಳ: ಅಡಿಕೆ ತೋಟದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು Read More »

ಕರಾವಳಿ

ಅಡ್ಯಾರ್: ಭೀಕರ ಸರಣಿ ಅಪಘಾತ ► ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ಎರಡು ಕಾರುಗಳು, ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ನಡೆದ ಸರಣಿ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಗರದ ಹೊರವಲಯದ ಅಡ್ಯಾರಿನಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಮೃತ ಯುವಕನನ್ನು ಇಲೆಕ್ಟ್ರೀಷಿಯನ್ ವೃತ್ತಿಯಲ್ಲಿದ್ದ ಫಾರೂಕ್(26) ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವಾಹನಗಳು ಏಕಮುಖ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕಣ್ಣೂರು ಮಸೀದಿ ಬಳಿ ತಲುಪಿದಾಗ ಹನೀಫ್ ಎಂಬವರು ಚಲಾಯಿಸುತ್ತಿದ್ದ ಕಾರು ಉಳಿದ ವಾಹನಗಳಿಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ.

ಅಡ್ಯಾರ್: ಭೀಕರ ಸರಣಿ ಅಪಘಾತ ► ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.27. ಠಾಣಾ ವ್ಯಾಪ್ತಿಯ ಶೇಣಿಯಲ್ಲಿ ಯುವತಿಯೋರ್ವಳನ್ನು ಬಲವಂತದಿಂದ ಕರೆದೊಯ್ದು ಸರಣಿ ಅತ್ಯಾಚಾರಗೈದ ಪ್ರಕರಣದ ಮೂವರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮರ ಮೂಡ್ನೂರು ಗ್ರಾಮದ ಕುಡುಂಬಿಲ ನಿವಾಸಿ ಕುಂಇಪ್ಪ ನಾಯ್ಕ ಎಂಬವರ ಪುತ್ರ ಜಯಪ್ರಕಾಶ್ (25), ಚೊಕ್ಕಾಡಿಯ ನೇಣಾರು ನಿವಾಸಿ ಕೂಸಪ್ಪ ನಾಯ್ಕ ಎಂಬವರ ಪುತ್ರ ರಂಜಿತ್ (20), ಕುಕ್ಕುಜಡ್ಕದ ನೇರ್ಲಡ್ಕ ನಿವಾಸಿ ಗುಡ್ಡಪ್ಪನಾಯ್ಕ ಎಂಬವರ ಪುತ್ರ ರವೀಂದ್ರ (35) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರ ಸಂಜೆ ಹಾಲು

ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ Read More »

ಕರಾವಳಿ

ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಮೊಬೈಲ್ ಟವರ್ ಗಳಲ್ಲಿನ ಬ್ಯಾಟರಿ ಕಳವು ಪ್ರಕರಣವನ್ನು ಭೇದಿಸಿರುವ ಉರ್ವ ಠಾಣಾ ಪೊಲೀಸರು ಕಡಬದ ಬಿಳಿನೆಲೆ ನಿವಾಸಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂಡಸ್ ಕಂಪೆನಿಗೆ ಸೇರಿದ 48 ಮೊಬೈಲ್ ಟವರ್‌ನ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಜಾಡು ಹಿಡಿದ ಉರ್ವ ಠಾಣಾ ಪೊಲೀಸರು ಇಂಡಸ್ ಕಂಪೆನಿಯ ಬ್ಯಾಟರಿಗಳ ನಿರ್ವಹಣೆಯ ಗುತ್ತಿಗೆ ಪಡೆದಿದ್ದ ಸಂಸ್ಥೆಯೊಂದರ ಸಿಬ್ಬಂದಿಗಳಾದ ಕಡಬದ ಬಿಳಿನೆಲೆ ನಿವಾಸಿ ಆನಂದ್(28), ಕಡೂರಿನ ಸೋಮನಹಳ್ಳಿ

ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ Read More »

ಕರಾವಳಿ
Scroll to Top