News Kadaba

ಕಾಫ್ ಸಿರಪ್ ಕಳ್ಳಸಾಗಣೆ: ಉತ್ತರ ಪ್ರದೇಶದಲ್ಲಿ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.29: ವಾರಣಾಸಿಯಲ್ಲಿ ಕೋಡೀನ್ ಹೊಂದಿರುವ ಕಾಫ್ ಸಿರಪ್ (ಕೆಮ್ಮಿನ ಸಿರಪ್) ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಆಹಾರ ಮತ್ತು ಔಷಧ ಇಲಾಖೆ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಕಳೆದ ನವೆಂಬರ್ 15ರಂದು ಕಾರ್ಯಾಚರಣೆ ವೇಳೆ 26 ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ಅದರ ಭಾಗವಾಗಿ ಕಾರ್ಯಾಚರಣೆ ಮುಂದುವರಿಸಿದ್ದು, 12 ಅನುಮಾನಾಸ್ಪದ ಕಂಪನಿಗಳು ಕಂಡುಬಂದಿದ್ದವು ಎಂದು ಇಲಾಖೆಯ ಇನ್ಸ್‌ಪೆಕ್ಟರ್ ಜನಬ್ ಅಲಿ ತಿಳಿಸಿದ್ದಾರೆ. “ಈ 12 ಅನುಮಾನಾಸ್ಪದ ಕಂಪನಿಗಳ ಕುರಿತು […]

ಕಾಫ್ ಸಿರಪ್ ಕಳ್ಳಸಾಗಣೆ: ಉತ್ತರ ಪ್ರದೇಶದಲ್ಲಿ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲು Read More »

ಬ್ರೇಕಿಂಗ್ ನ್ಯೂಸ್

ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡಿರುವುದು ನನ್ನ ಪುಣ್ಯ : ಮೋದಿ

(ನ್ಯೂಸ್‌ ಕಡಬ) newskadaba.com,  ನ.28: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರು ವುದು ನನಗೆ ಸಿಕ್ಕ ಪುಣ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಉಡುಪಿ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ

ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡಿರುವುದು ನನ್ನ ಪುಣ್ಯ : ಮೋದಿ Read More »

ಕರಾವಳಿ, ಕರ್ನಾಟಕ

ಮಂಗಳೂರಿನಿಂದ ಪ್ರಧಾನಿ ನಿರ್ಗಮನ

(ನ್ಯೂಸ್‌ ಕಡಬ) newskadaba.com,  ನ.28: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾಗೆ ನಿರ್ಗಮಿಸಿದರು. ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಪ್ರಧಾನಿ ಅವರು, ಬಳಿಕ ವಾಯುಪಡೆ ವಿಮಾನದಲ್ಲಿ ಗೋವಾ ತೆರಳಿದರು. ವಿಮಾನ ನಿಲ್ದಾಣದಲ್ಲಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು ಬೀಳ್ಕೊಟ್ಟರು.

ಮಂಗಳೂರಿನಿಂದ ಪ್ರಧಾನಿ ನಿರ್ಗಮನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೆಹಲಿ – ವಾರಾಣಸಿ ಬಸ್ ಬೆಂಕಿಗಾಹುತಿ – ತಪ್ಪಿದ ದೊಡ್ಡ ದುರಂತ

(ನ್ಯೂಸ್‌ ಕಡಬ) newskadaba.com,  ನ.28: ಮೂವತ್ತರಿಂದ ನಲವತ್ತು ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ದೆಹಲಿ-ವಾರಾಣಸಿ ಸ್ಲೀಪರ್ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗದೆ ಭಾರಿ ದುರಂತವೊಂದು ತಪ್ಪಿದೆ ಎನ್ನಲಾಗಿದೆ. ಬಸ್ ವಾರಾಣಸಿಗೆ ಹೋಗುತ್ತಿತ್ತು, ಮೇಲಿನ ಡೆಕ್​ನಲ್ಲಿ ಇರಿಸಿಲಾಗಿದ್ದ ಸಾಮಾಗ್ರಿಗಳಿಂದ ಹಠಾತ್ ಹೊಗೆ ಬೆಂಕಿಗೆ ಕಾರಣವಾಗಿತ್ತು. ಬಸ್ ಚಾಲಕ ಮತ್ತು ನಿರ್ವಾಹಕ ಕೂಡಲೇ ಎಚ್ಚರಿಕೆ ನೀಡಿದ್ದರು. ಬಸ್ಸನ್ನು ಪಕ್ಕಕ್ಕೆ ನಿಲ್ಲಿಸಲು ಪ್ರಯತ್ನಿಸಿದರು ಅಷ್ಟರಲ್ಲಾಗಲೇ ಬೆಂಕಿ ಹೊತ್ತಿಕೊಳ್ಳಲು ಶುರುವಾಗಿತ್ತು ಎನ್ನಲಾಗಿದೆ. ಬಸ್ಸಿನ ಮೇಲ್ಛಾವಣಿಯಲ್ಲಿದ್ದ ಭಾರವಾದ ಲಗೇಜಿನಲ್ಲಿ ಮೊದಲು ಬೆಂಕಿ

ದೆಹಲಿ – ವಾರಾಣಸಿ ಬಸ್ ಬೆಂಕಿಗಾಹುತಿ – ತಪ್ಪಿದ ದೊಡ್ಡ ದುರಂತ Read More »

ಬ್ರೇಕಿಂಗ್ ನ್ಯೂಸ್

ಡಿ. 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್

(ನ್ಯೂಸ್‌ ಕಡಬ) newskadaba.com,  ನ.28: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಭೇಟಿಯ ಸಮಯದಲ್ಲಿ ಪುಟಿನ್ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಡಿಸೆಂಬರ್ 5ರಂದು ನಡೆಯುವ 23 ನೇ ಭಾರತ-ರಷ್ಯಾ ಸಮ್ಮೇಳನದಲ್ಲಿ ಮೋದಿ ಹಾಗೂ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಎರಡು ದೇಶಗಳ ಸಂಬಂಧಗಳು ಮತ್ತು ಜಾಗತಿಕ

ಡಿ. 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ : ಪ್ರಧಾನಿ ಪಠಿಸಿದ ಭಗವದ್ಗೀತೆ 15ನೇ ಅಧ್ಯಾಯ – ಮಹತ್ವದ ಸಂದೇಶ

(ನ್ಯೂಸ್‌ ಕಡಬ) newskadaba.com,  ನ.28: ಉಡುಪಿ ನಗರ ಇಂದು ಕೇಸರಿಮಯವಾಗಿದ್ದು, ಮಂತ್ರ ಗೀತಾಕಂಠಗಳ ಉದ್ಘಾರ ಬಹುವಾಗಿ ಕೇಳಿಬರುತ್ತಿತ್ತು. ವಿಶ್ವಗೀತಾ ಪಾರಾಯಣ ವೇದಿಕೆ ಬಳಿ ಭರ್ಜರಿ ಲಕ್ಷಕಂಠ ಭಗವದ್ಗೀತೆ ಪಠಣ ನಡೆಯಿತು, ಸಾವಿರಾರು ಭಕ್ತರು ಭಗವದ್ಗೀತೆ ಶ್ಲೋಕಗಳನ್ನು ಪಠಿಸಿದರು. ಪ್ರಧಾನಿಯವರೊಂದಿಗೆ ಸ್ಥಳೀಯ ಬಿಜೆಪಿ ನಾಯಕರು ಕೂಡ ಭಾಗವಹಿಸಿದ್ದರು. ರೋಡ್ ಶೋ ಮುಗಿಸಿ ಶ್ರೀಕೃಷ್ಣದ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 12.15ಕ್ಕೆ ವೇದಿಕೆಯ ಬಳಿ ಬಂದು ʻಪುರುಷೋತ್ತಮ ಯೋಗʼ ಎನ್ನುವ 15ನೇ ಅಧ್ಯಾಯದ ಶ್ಲೋಕ ಪಠಿಸಿದರು. ಈ

ಉಡುಪಿ : ಪ್ರಧಾನಿ ಪಠಿಸಿದ ಭಗವದ್ಗೀತೆ 15ನೇ ಅಧ್ಯಾಯ – ಮಹತ್ವದ ಸಂದೇಶ Read More »

ಕರಾವಳಿ

ದೇಶದ ಮೊದಲ ಖಾಸಗಿ ವಾಣಿಜ್ಯ ರಾಕೆಟ್ ವಿಕ್ರಂ–1 ಅನಾವರಣ

(ನ್ಯೂಸ್‌ ಕಡಬ) newskadaba.com,  ನ.28: ಹೈದರಾಬಾದ್ ಮೂಲದ ಸ್ಟಾರ್ಟ್‌ಅಪ್ ‘ಸ್ಕೈರೂಟ್ ಏರೋಸ್ಪೇಸ್’ ನಿರ್ಮಿಸಿರುವ ಭಾರತದ ಮೊದಲ ಖಾಸಗಿ ವಾಣಿಜ್ಯ ರಾಕೆಟ್‌ ವಿಕ್ರಂ–1 ಅನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ವರ್ಚುವಲ್ ರೀತಿಯಲ್ಲಿ ಅನಾವರಣಗೊಳಿಸಿದರು. ಜೊತೆಗೆ, ಸಂಸ್ಥೆಯ ನೂತನ ಮತ್ತು ಬೃಹತ್‌ ಕ್ಯಾಂಪಸ್‌ವನ್ನೂ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೊದಲ ಬಾರಿಗೆ ‘ಜೆನ್–ಝೀ’ ಎಂಬ ಪದವನ್ನು ಬಳಸುತ್ತಾ, ರಾಕೆಟ್ ನಿರ್ಮಾಣದಲ್ಲಿ ತೊಡಗಿದ್ದ ಯುವ ಇಂಜಿನಿಯರ್‌ಗಳು, ವಿನ್ಯಾಸಕರು ಮತ್ತು ವಿಜ್ಞಾನಿಗಳ ಸೃಜನಶೀಲತೆಯನ್ನು ಮೆಚ್ಚಿಕೊಂಡರು. “ಭಾರತದ ಜೆನ್–ಝೀ ಪೀಳಿಗೆಯವರು ಹೊಸತನಕ್ಕೆ ದಾರಿ

ದೇಶದ ಮೊದಲ ಖಾಸಗಿ ವಾಣಿಜ್ಯ ರಾಕೆಟ್ ವಿಕ್ರಂ–1 ಅನಾವರಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಢಾಕಾ ಕೋರ್ಟ್

(ನ್ಯೂಸ್‌ ಕಡಬ) newskadaba.com,  ನ.28: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ದಾಖಲಾದ ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಢಾಕಾ ಕೋರ್ಟ್ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಂಚು, ವಂಚನೆಯ ಮೂರು ಪ್ರಕರಣಗಳನ್ನು ವಿಚಾರಣೆ ನಡೆಸಿದ ಕೋರ್ಟ್ ತಲಾ 7 ವರ್ಷಗಳಂತೆ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶೇಖ್ ಹಸೀನಾ ಪುತ್ರ, ಪುತ್ರಿಗೂ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಢಾಕಾದ ಪುರ್ಬಾಚಲ್ ಪ್ರದೇಶದಲ್ಲಿ ಸರ್ಕಾರಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ

ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಢಾಕಾ ಕೋರ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ!

(ನ್ಯೂಸ್‌ ಕಡಬ) newskadaba.com,  ನ.28: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಮುದ್ದೇನೂರು ಗ್ರಾಮದ ಬಳಿ ವಿಜಯನಗರ ಪರಂಪರೆ ಪರಿಶೋಧನಾ ಗುಂಪಿನ ಸಂಶೋಧನಾ ತಂಡವು ಸೂರ್ಯ (ಸೂರ್ಯ ದೇವರು) ನ ಕಪ್ಪು ಶಿಲೆಯ ಶಿಲ್ಪ ಮತ್ತು ಬ್ರಹ್ಮನ ಅಪರೂಪದ ವಿಗ್ರಹವನ್ನು ಪತ್ತೆ ಹಚ್ಚಿದೆ. ಗ್ರಾಮಕ್ಕೆ ಹೋಗುವ ರಸ್ತೆಯ ಉದ್ದಕ್ಕೂ ಇರುವ ಮೌನೇಶ್ ಎಂಬುವವರಿಗೆ ಸೇರಿದ ಹೊಲದ ಅಂಚಿನಲ್ಲಿ ಈ ವಿಗ್ರಹಗಳು ಕಂಡುಬಂದಿವೆ. ಕಪ್ಪು ಕಲ್ಲಿನಿಂದ ಕೆತ್ತಿದ ಈ ಶಿಲ್ಪಗಳನ್ನು ಸ್ಥಳೀಯ ನಿವಾಸಿಗಳಾದ ಹನುಮಂತಪ್ಪ, ಜಡೇಶ್ ಮತ್ತು ಬಲ್ಕುಂಡಿ ಗ್ರಾಮದ

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.28: ಪಣಂಬೂರು ಬೀಚ್‌ನಲ್ಲಿ ವರದಿಯಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನವೆಂಬರ್ 24 ರಂದು ಕಳುವಾಗಿದ್ದ 3.33 ಲಕ್ಷ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ನವೆಂಬರ್ 24 ರಂದು, ಸ್ವಾತಿ ನಂದಿಪಲ್ಲಿ (24) ತನ್ನ ಸ್ನೇಹಿತ ರೋಹಿತ್ ವೆಮ್ಮಲೆಟ್ಟಿ ಜೊತೆ ಪಣಂಬೂರು ಬೀಚ್‌ಗೆ ಭೇಟಿ ನೀಡಿದ್ದರು. ಈಜಲು ಸಮುದ್ರಕ್ಕೆ ಇಳಿಯುವ ಮೊದಲು, ಅವರು ತಮ್ಮ ವಸ್ತುಗಳನ್ನು ಕಪ್ಪು

ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top