News Kadaba

ರಾಜಕೀಯದ ಮೇಲಾಟವೋ…? ಸರಕಾರದ ಇಚ್ಚಾಶಕ್ತಿಯ ಕೊರತೆಯೋ..? ► ಅಂತೂ ಕಡಬ ತಾಲೂಕು ಉದ್ಘಾಟನೆಗೆ ಬಿತ್ತು ಬ್ರೇಕ್….!!

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಳೆದ ಹಲವು ದಶಕಗಳ ಬೇಡಿಕೆಯಾಗಿದ್ದ ನೂತನ ಕಡಬ ತಾಲೂಕು ರಚನೆಯ ಕನಸು ನನಸಾಗುವ ಹಂತಕ್ಕೆ ತಲುಪಿದ್ದರೂ ಇದೀಗ ರಾಜಕೀಯದ ಮೇಲಾಟದಿಂದಲೋ..? ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದಲೋ..? ಕಡಬ ತಾಲೂಕು ಉದ್ಘಾಟನೆಗೆ ಬ್ರೇಕ್ ಬಿದ್ದಿದೆ. ಎರಡೆರಡು ಬಾರಿ ದಿನಾಂಕ ನಿಗದಿಯಾಗಿ ಕಾರಣಾಂತರಗಳಿಂದಾಗಿ ಮುಂದೂಡಲಾಗಿದ್ದ ಕಡಬ ತಾಲೂಕು ಉದ್ಘಾಟನೆಯು ಮಾರ್ಚ್ 27 ರಂದು ನಡೆಯಲಿದೆ ಎಂದು ಜಿಲ್ಲಾಡಳಿತದ ವತಿಯಿಂದ ಅಧಿಕೃತ ದಿನಾಂಕ ಘೋಷಣೆಯಾದ ನಂತರ ಕಡಬದಲ್ಲಿ ಸಮಾಧಾನಕರ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ […]

ರಾಜಕೀಯದ ಮೇಲಾಟವೋ…? ಸರಕಾರದ ಇಚ್ಚಾಶಕ್ತಿಯ ಕೊರತೆಯೋ..? ► ಅಂತೂ ಕಡಬ ತಾಲೂಕು ಉದ್ಘಾಟನೆಗೆ ಬಿತ್ತು ಬ್ರೇಕ್….!! Read More »

ಕರಾವಳಿ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ

(ನ್ಯೂಸ್ ಕಡಬ) newskadaba.com ಮಾ.26.  ಪ್ರತಿ ವರ್ಷ ವಿಶ್ವದಾದ್ಯಂತ ಮಾರ್ಚ್ 26ರಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಅಥವಾ ಪರ್ಪಲ್ ಡೇ ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸಿಮೀತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ ಆರೋಗ್ಯ ಸಮಸ್ಯೆ ಎಂದರೂ ತಪ್ಪಲ್ಲ. ಪ್ರತಿ ವರ್ಷ ಫೆಬ್ರವರಿ 9ರಂದು “ವಿಶ್ವ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ Read More »

ಆರೋಗ್ಯ ಮಾಹಿತಿ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com , ಆಲಂಕಾರು ಮಾ.23. ಮೂರ್ತೆದಾರರ ಸೇವಾ ಸಹಕಾರಿ ಸಂಘ ಆಲಂಕಾರು ಪ್ರಧಾನ ಕಚೇರಿ ಹಾಗೂ ಕಡಬ ಶಾಖೆಯಲ್ಲಿ ಏಕಕಾಲದಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ಆಲಂಕಾರು ಪ್ರಧಾನ ಕಚೇರಿಯಲ್ಲಿ ಸ್ಥಳೀಯ ಉಧ್ಯಮಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟಿಸಿದರು. ನಂತರ ಮಾತನಾಡಿ ಸಹಕಾರಿ ಸಂಸ್ಥೆಗಳು ಉನ್ನತ ಸೇವಾ ಮನೋಭಾವದ ಜೊತೆಗೆ ಇಂತಹ ಉನ್ನತ ಸೇವೆಗಳನ್ನು ಮಾಡುವುದರ ಮೂಲಕ ಗ್ರಾಹಕರನ್ನು ತೃಪ್ತಿಪಡಿಸುವ ಯೋಜನೆಗಳನ್ನು ಜಾರಿಗೊಳಿಸಿ ತಾಲೂಕಿಗೆ ಮಾದರಿ ಸಹಕಾರಿ ಸಂಘವಾಗಿ ಮೂಡಿ ಬರಲಿ ಎಂದು ಶುಭ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ Read More »

ಕರಾವಳಿ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.23. ನಿವೃತ್ತ ಸರಕಾರಿ ಉದ್ಯೋಗಿಯನ್ನು ಹನಿಟ್ರ್ಯಾಪ್‌ ನಡೆಸುವ ಮೂಲಕ ಮೂರು ಲಕ್ಷ ರೂ. ವಸೂಲಿ ಮಾಡಿರುವ ಘಟನೆಯು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಸಿಸಿಬಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಮೂವರು ಯುವತಿಯರಾಗಿದ್ದು ಉಳಿದವರನ್ನು ಶಕ್ತಿನಗರದ ರಮೇಶ್‌ (35), ಕಳಸದ ರವಿ (35) ಮತ್ತು ಜೈಲು ರೋಡ್‌ನ‌ ಪ್ರೀತೇಶ್‌ (36) ಎಂದು ಗುರುತಿಸಲಾಗಿದೆ. ನಿವೃತ್ತ ಸರಕಾರಿ ಉದ್ಯೋಗಿಯೊಬ್ಬರನ್ನು ಯುವತಿಯರಿಂದ ಮಸಾಜ್‌ ಮಾಡಿಸುವುದಾಗಿ ಆರೋಪಿಗಳು ನಂಬಿಸಿ ಅವರಿಗೆ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ Read More »

ಕರಾವಳಿ

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಾ.21. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಯವರ ವರ್ಗಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದ್ದು,  ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯಲಿದ್ದಾರೆ. ಅವಧಿಗಿಂತಲು ಮೊದಲೇ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಮಾ.8 ರಂದು ರೋಹಿಣಿ ಸಿಂಧೂರಿ ಯವರು ಸಿಎಟಿ ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ಸಿಎಟಿಯು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ  ನೀಡಿತ್ತು. ಮಾ.13ಕ್ಕೆ ನಡೆಯಬೇಕಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದ್ದು, ಇದರ ಬಗ್ಗೆ ವಿಚಾರಣೆಯು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ನಡೆದಿದೆ. ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯುವಂತೆ ನ್ಯಾಯಮಂಡಳಿಯು

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ Read More »

ಕರಾವಳಿ

ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ

(ನ್ಯೂಸ್ ಕಡಬ) newskadaba.com ಮಾ.20. ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ ಬಿಡುಗಡೆಗೊಂಡಿದ್ದ ಎರಡು ಕೋಟಿ ಅನುದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ ಅವರು ಇಲಾಖಾಧಿಕಾರಿಗಳಿಗೆ ಒತ್ತಡ ಹಾಕಿ ತಡೆ ಹಿಡಿದು ಅಭಿವೃದ್ಧಿಯಲ್ಲಿ ರಾಜಕೀಯ ಮಾಡಿದ್ದಾರೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಆರೋಪಿಸಿದರು. ಅವರು ಭಾನುವಾರ ಕಡಬ ತಾಲೂಕಿನ ಕೊೖಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುಲೂರು ಎಂಬಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಹತ್ತು ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆ ಕಾಂಕ್ರೀಟಿಕರಣವನ್ನು ಉದ್ಘಾಟನೆಗೊಳಿಸಿ

ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ Read More »

ಕರಾವಳಿ

ದೇವರಿಗೆ ಇಟ್ಟ ದೀಪದಿಂದಾಗಿ ಪೈಂಟ್‌ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com .ಉಡುಪಿ, ಮಾ.20. ದೇವರಿಗೆ ಇಟ್ಟ ದೀಪ ಮಗುಚಿ ಬಿದ್ದ ಪರಿಣಾಮ ಪೈಂಟ್‌ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಉಡುಪಿಯಲ್ಲಿ ಮಂಗಳವಾರದಂದು ನಡೆದಿದೆ. ಉಡುಪಿಯ ಈಶ್ವರನಗರದ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಈ ಅಗ್ನಿ ಅವಘಡ ಸಂಭವಿದ್ದರಂದಾಗಿ ಲಕ್ಷಾಂತರ ರುಪಾಯಿಯ ನಷ್ಟ ಸಂಭವಿದೆ . ಪೈಂಟ್‌ ಅಂಗಡಿಯಲ್ಲಿ ದೇವರಿಗೆ ಇಟ್ಟ ದೀಪ ಬಿದ್ದು ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಅಪಾರ ಪ್ರಮಾಣದ ಪೈಂಟ್‌ ಡಬ್ಬಗಳು ಸುಟ್ಟು ಹೋಗಿವೆ. ಕಟ್ಟಡ ಪೂರ್ತಿ ದಟ್ಟ ಹೊಗೆ ಆವರಿಸಿದ್ದರಿಂದಾಗಿ ಅಗ್ನಿ

ದೇವರಿಗೆ ಇಟ್ಟ ದೀಪದಿಂದಾಗಿ ಪೈಂಟ್‌ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಾ.20.ಮಾರ್ಚ್ 23 ರಿಂದ ಎಪ್ರಿಲ್ 6 ರವರೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಸದ್ರಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೆಂದ್ರಗಳನ್ನು ಮುಚ್ಚಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ದಲಿತ ಸಂಘರ್ಷ ಸಮಿತಿ ಮುಖಂಡನ ನೇತೃತ್ವದಲ್ಲಿ ಹನ್ನೊಂದು ಜನ ಹಿಂದುಗಳು ಕಡಬ ತಾಲೂಕಿನ ಆಲಂಕಾರಿನಲ್ಲಿ ಬೌದ್ಧ ಧರ್ಮಕ್ಕೆ ಧರ್ಮಾಂತರವಾಗಿರುವುದು ಸ್ವಯಂಪ್ರೇರಿತ ಧರ್ಮ ಸ್ವೀಕಾರ ಅಲ್ಲ. ಅದು ಕಾನೂನುಬಾಹಿರವಾಗಿದ್ದು, ಬಲವಂತದ ಮತಾಂತರ ಎಂದು ಸಾಮಾಜಿಕ ಕಾರ್ಯಕರ್ತ, ಮೊಗೇರ ಸಮುದಾಯದ ಮುಂದಾಳು ತಿಮ್ಮಪ್ಪ ವಿ.ಕೆ ಆರೋಪಿಸಿದ್ದಾರೆ. ಅವರು  ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮಾಯಕ ಜನರನ್ನು ಬೌದ್ಧ ಧರ್ಮಕ್ಕೆ ಮತಾಂತರಗೊಳಿಸುವ ಮೂಲಕ ದಲಿತ ಸಮಾಜದ ಮೇಲೆ ದಾಳಿ ಮಾಡುವ ಹುನ್ನಾರವಾಗಿದೆ. ದಲಿತ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ Read More »

ಕರಾವಳಿ

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.19. ನಮ್ಮ ದೇಹದ ಮೂಳೆಗಳು ಬಹಳ ಶಕ್ತಿಶಾಲಿಯಾದ ಅಂಗವಾಗಿದೆ. ದೇಹದ ಚಲನೆಗೆ ಬೇಕಾದ ಭದ್ರತೆಯನ್ನು ನೀಡುವುದು ಈ ಎಲುಬುಗಳೇ ಆಗಿರುತ್ತದೆ. ಈ ಎಲುಬುಗಳು ಸಾಮಾನ್ಯವಾಗಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಕೋಲ್ಯಾಜನ್ ಮುಂತಾದವುಗಳಿಂದ ಮಾಡಲ್ಪಟ್ಟಿದೆ. ಸಣ್ಣ ಮಕ್ಕಳಲ್ಲಿ ಎಲುಬು ಬಹಳ ಮೃದುವಾಗಿರುತ್ತದೆ ಮತ್ತು ಕೊಲ್ಯಾಜನ್ ಅಂಶ ಜಾಸ್ತಿ ಇರುತ್ತದೆ. ಮತ್ತು ಬಹಳ ಬೇಗ ಮುರಿಯುದಿಲ್ಲ. ಎಲುಬು ಬೆಂಡಾಗುತ್ತದೆಯೇ (ಬಾಗುವುದು) ಹೊರತು ತುಂಡಾಗುವ ಸಾಧ್ಯತೆ ಕಡಮೆ ಇರುತ್ತದೆ. ವಯಸ್ಸಾದಂತೆಲ್ಲಾ ಎಲುಬಿನ ಸಾಂದ್ರತೆ ಹೆಚ್ಚುತ್ತಲೇ ಹೋಗುತ್ತದೆ.

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ಆರೋಗ್ಯ ಮಾಹಿತಿ
Scroll to Top