News Kadaba

ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪರಿಗೆ ಹೃದಯಾಘಾತ ► ಯಡಿಯೂರಪ್ಪರ ಅಭಿಮಾನಿಗಳನ್ನು ಬೇಸ್ತು ಬೀಳಿಸಿದ ಸುಳ್ಳು ಸುದ್ದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.18. ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ರವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಈ ಹಿಂದಿನ ಫೊಟೊ ಹಾಕಿ ಯಾರೋ ಕೀಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿದ ಘಟನೆ ಸೋಮವಾರದಂದು ನಡೆದಿದೆ. ಅವರು ಇಂದು ತನ್ನ ಡಾಲರ್ಸ್ ಕಾಲೋನಿಯ ಸ್ವಗ್ರಹದಲ್ಲಿ ಗುಜರಾತ್‌ನ ಚುನಾವಣೆಯ ಫಲಿತಾಂಶವನ್ನು ವೀಕ್ಷಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಡಲಾಗಿತ್ತು. ಇದರಿಂದಾಗಿ ಅಭಿಮಾನಿಗಳಲ್ಲಿ ಕೆಲಕಾಲ ಆತಂಕ […]

ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪರಿಗೆ ಹೃದಯಾಘಾತ ► ಯಡಿಯೂರಪ್ಪರ ಅಭಿಮಾನಿಗಳನ್ನು ಬೇಸ್ತು ಬೀಳಿಸಿದ ಸುಳ್ಳು ಸುದ್ದಿ Read More »

ಕರ್ನಾಟಕ

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ವಿಜಯದ ನಗೆ ಬೀರುತ್ತಿದ್ದಂತೆ ರಾಷ್ಟ್ರದಾದ್ಯಂತ ಬಿಜೆಪಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಡಬ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಕೃಷ್ಣ ಶೆಟ್ಟಿ, ಮಾಜಿ‌ ಅಧ್ಯಕ್ಷರಾದ ಸತೀಶ್ ನಾಯ್ಕ್, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಹಿಂದೂ ಮುಖಂಡ ರವಿರಾಜ್ ಶೆಟ್ಟಿ,

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ಕರಾವಳಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.18. ವಿಟ್ಲ ಪರಿಸರದಲ್ಲಿ ಕಳ್ಳರ ಕಾಟ ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಯಾರೂ ಇಲ್ಲದ ವೇಳೆ ಮನೆಯೊಂದರ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳನ್ನು ಎಗರಿಸಿದ ಘಟನೆ ಸೋಮವಾರದಂದು ಬೆಳಕಿಗೆ ಬಂದಿದೆ. ಇಲ್ಲಿನ ಕೇಪು ಗ್ರಾಮದ ಕುಕ್ಕೆಬೆಟ್ಟು ನಿವಾಸಿ ಕೆ.ಪಿ ಸುಲೈಮಾನ್ ಎಂಬವರ ಮನೆಯ ಮುಂಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಮನೆಯ ನಾಲ್ಕು ಕೋಣೆಯ ಕಪಾಟ್ ಗಳಲ್ಲಿ ಸ್ವತ್ತಿಗಾಗಿ ಜಾಲಾಡಿದ್ದಾರೆ. ನಂತರ ವಿದೇಶಿಯ ವಸ್ತುಗಳಾದ 10 ಹಾಲಿನ ಹುಡಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ Read More »

ಕರಾವಳಿ

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ► ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಡಿ ಇಡುತ್ತಿದ್ದಂತೆಯೇ ರಾಷ್ಟ್ರದಾದ್ಯಂತ ಬಿಜೆಪಿ ಹರ್ಷಾಚರಿಸುತ್ತಿದೆ. ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯು 100 ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ದೇಶದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಸಂಭಮಾಚರಣೆಯಲ್ಲಿ ತೊಡಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ 68 ಸ್ಥಾನಗಳ ಪೈಕಿ 42 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಅಧಿಕಾರವನ್ನು ಮರಳಿ ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳಲಿದೆ.

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ► ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಹೈನುಗಾರಿಕೆಯು ಒಂದು ಉತ್ತಮ ಉದ್ಯೋಗವಾಗಿದ್ದು, ವೈಜ್ಞಾನಿಕ ಕಾಲಘಟ್ಟದಲ್ಲಿ ದನಗಳಿಗೆ ಉತ್ತಮ ಪಶು ಆಹಾರವನ್ನು ನೀಡಿ ಅದರ ಆರೋಗ್ಯವನ್ನು ಕಾಪಾಡುವುದು ಕೂಡ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ದ.ಕ.ಸ.ಹಾ.ಉ ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಸೀತಾರಾಮ ರೈ ಸವಣೂರು ಹೇಳಿದರು. ಅವರು ಭಾನುವಾರದಂದು ಕಡಬದ ಶ್ರೀ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ನಡೆದ ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಳ್ಳುವ

ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’ Read More »

ಕರಾವಳಿ

ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ.18. ಅಪಘಾತವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾವೇರಿ ನದಿಗೆ ಉರುಳಿ ಬಿದ್ದ ಘಟನೆ ಕುಶಾಲನಗರ ಸಮೀಪದ ಬೇತ್ರಿ ಸೇತುವೆ ಬಳಿ ಭಾನುವಾರದಂದು ನಡೆದಿದೆ. ಆಂಧ್ರ ಪ್ರದೇಶ ಮೂಲದ ವಿಷ್ಣು ಎಂಬವರು ತನ್ನ ಸ್ನೇಹಿತರಾದ ರಕ್ಷಿತ, ಶರಣ್ಯ ಮತ್ತು ಚಂದನ್ ಎಂಬವರೊಂದಿಗೆ ಶನಿವಾರದಂದು ಬೆಂಗಳೂರಿನಿಂದ ಕಾರೊಂದನ್ನು ಬಾಡಿಗೆಗೆ ಪಡೆದು ಮಡಿಕೇರಿಗೆ ಆಗಮಿಸಿದ್ದರು. ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಮಡಿಕೇರಿಯಿಂದ ನಾಗರಹೊಳೆಗೆ ತೆರಳುತ್ತಿದ್ದಾಗ ಮೂರ್ನಾಡು ಬಳಿಯ ಬೇತ್ರಿ ಸೇತುವೆ ಬಳಿ

ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು Read More »

ಕರ್ನಾಟಕ

ರಾಮಕುಂಜ: ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ| ಹರೀಶ್ ಹಂದೆ ಭೇಟಿ ► ರಾಮಕುಂಜೇಶ್ವರ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ, ಸೆಲ್ಕೋ ಇಂಡಿಯಾದ ಸಂಸ್ಥಾಪಕ ಡಾ.ಹರೀಶ್ ಹಂದೆ ಶುಕ್ರವಾರದಂದು ರಾಮಕುಂಜ ವಿದ್ಯಾಸಂಸ್ಥೆಗೆ ಭೇಟಿ ನೀಡಿದ್ದು ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ನಡೆಸಿದರು. ಸಂಸ್ಥೆಯಲ್ಲಿ ಆಯೋಜಿಸಿದ್ದ ಗಣಿತ ಮಾದರಿಗಳ ಪ್ರದರ್ಶನವನ್ನು ಡಾ.ಹರೀಶ್ ಹಂದೆಯವರು ಈ ವೇಳೆ ಉದ್ಘಾಟಿಸಿದರು. ಭಾರತ ಅಭಿವೃದ್ಧಿ ಹೊಂದಿದಲ್ಲಿ ಮಾತ್ರ ವಿಶ್ವ ಅಭಿವೃದ್ಧಿಗೊಳ್ಳಲಿದೆ ಎಂಬುದು ದೆಹಲಿಯಲ್ಲಿ ಎರಡು ವರ್ಷ ವ್ಯಾಸಾಂಗ ಮಾಡಿದ ಅಮೆರಿಕನ್ ಪ್ರಜೆಯೊಬ್ಬರ ಅಭಿಪ್ರಾಯವಾಗಿದೆ. ಆತನಲ್ಲಿ ಭಾರತದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಗೊಳ್ಳದೇ ಇದ್ದಲ್ಲಿ ವಿಶ್ವ

ರಾಮಕುಂಜ: ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ| ಹರೀಶ್ ಹಂದೆ ಭೇಟಿ ► ರಾಮಕುಂಜೇಶ್ವರ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ Read More »

ಕರಾವಳಿ

ಕಡಬದ ಹಿರಿಯ ಬಿಜೆಪಿ ಮುಖಂಡ ಮನವಳಿಕೆ ಉಮೇಶ್ ರೈ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬದ ಹಿರಿಯ ಬಿಜೆಪಿ ಮುಖಂಡ ನೂಜಿಬಾಳ್ತಿಲ ಗ್ರಾಮದ ಪದಕ ನಿವಾಸಿ ಮನವಳಿಕೆ ಉಮೇಶ್ ರೈ(72) ಭಾನುವಾರ ರಾತ್ರಿ ವಿಧಿವಶರಾದರು. ಮೂಲತ ಆಲಂಕಾರು ಮನವಳಿಕೆ ಗುತ್ತು ಮನೆತನದ ಉಮೇಶ್ ರೈ ಕಡಬ ಪರಿಸರದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅಪಾರ ಶ್ರಮ ವಹಿಸಿದ್ದರು. ಜಿಲ್ಲಾ ಸ್ಕ್ಯಾಡ್ಸ್ ಅಧ್ಯಕ್ಷರಾಗಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಇವರು ಕೆಲದಿನಗಳ ಅಸೌಖ್ಯದಿಂದಾಗಿ ಭಾನುವಾರ ರಾತ್ರಿ ನೂಜಿಬಾಳ್ತಿಲ ಗ್ರಾಮದ ಪದಕದ ತನ್ನ

ಕಡಬದ ಹಿರಿಯ ಬಿಜೆಪಿ ಮುಖಂಡ ಮನವಳಿಕೆ ಉಮೇಶ್ ರೈ ಇನ್ನಿಲ್ಲ Read More »

ಕರಾವಳಿ

ಕೊಯಿಲ ಗ್ರಾ.ಪಂ. ಉಪಚುನಾವಣೆ ► 65.03% ಶಾಂತಿಯುತ ಮತದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಯಿಲ ಗ್ರಾಮ ಪಂಚಾಯತ್ ನ ವಾರ್ಡ್ ನಂ4 ರ ಹಿಂದುಳಿದ ವರ್ಗ ‘ಎ’ಯ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ವಳಕಡಮೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಂತಿಯುತವಾಗಿ ನಡೆಯಿತು. ಒಟ್ಟು 1184 ಮತದಾರರ ಪೈಕಿ 770 ಮತದಾರರು ಮತವನ್ನು ಚಲಾಯಿಸುವ ಮೂಲಕ 65.03% ಶಾಂತಿಯುತ ಮತದಾನ ನಡೆಯಿತು.

ಕೊಯಿಲ ಗ್ರಾ.ಪಂ. ಉಪಚುನಾವಣೆ ► 65.03% ಶಾಂತಿಯುತ ಮತದಾನ Read More »

ಕರಾವಳಿ

ಪ್ರಧಾನಿ ನರೇಂದ್ರ ಮೋದಿ ನಾಳೆ(ಡಿ.18) ಮಂಗಳೂರಿಗೆ ► ಡಿ.19 ರಂದು ಲಕ್ಷದ್ವೀಪಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17.‌ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಿಸೆಂಬರ್ 18 ಸೋಮವಾರದಂದು ರಾತ್ರಿ ಕರಾವಳಿಗೆ ಆಗಮಿಸಲಿದ್ದಾರೆ. ಸೋಮವಾರ ರಾತ್ರಿ 7.00 ಗಂಟೆಗೆ ವಿಶೇಷ ವಿಮಾನದ ಮೂಲಕ ಬಜಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ‌. ಡಿಸೆಂಬರ್ 19 ಮಂಗಳವಾರದಂದು ವಿಶೇಷ ವಿಮಾನದ ಮೂಲಕ ಲಕ್ಷದ್ವೀಪಕ್ಕೆ ತೆರಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಳೆ(ಡಿ.18) ಮಂಗಳೂರಿಗೆ ► ಡಿ.19 ರಂದು ಲಕ್ಷದ್ವೀಪಕ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top