News Kadaba

ಕಡಬದ ಸರಸ್ವತೀ ವಿದ್ಯಾಲಯದ ವತಿಯಿಂದ ► ಮನೆಮದ್ದು ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಸರಸ್ವತೀ ವಿದ್ಯಾಲಯ ಪ್ರೌಢ ಮತ್ತು ಪದವಿಪೂರ್ವ ವಿಭಾಗದ ಬಂಟ್ರ ಗ್ರಾಮ ವಿಕಾಸ ಸಮಿತಿಯ ವತಿಯಿಂದ ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಮನೆಮದ್ದು ಮಾಹಿತಿ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಉಷಾ ಮನೋಹರ್ ರೈ ಮಾತನಾಡಿ, ನಮ್ಮ ಮನೆ ಸುತ್ತಮುತ್ತಲಿನ ಪರಿಸರದಲ್ಲಿ  ಕೆಲವು ರೋಗಗಳ ಉಪಶಮನಕ್ಕೆ ಔಷಧ ದೊರೆಯುತ್ತದೆ. ಆದರೆ ಇದೆಲ್ಲವುಗಳ ಮಾಹಿತಿ ತಿಳಿಯದೆ ಆಸ್ಪತ್ರೆಯನ್ನೇ ಅವಲಂಬಿಸಿದ್ದೇವೆ. ಮನೆ ಮದ್ದಿನ ಮಾಹಿತಿ ಯುವ ಪೀಳಿಗೆಯ ಮೂಲಕ ಪಸರಿಬೇಕಾದಲ್ಲಿ ಮಾಹಿತಿ ಅಗತ್ಯ. ಸುಮಾರು 25 ರೋಗಗಳಿಗೆ […]

ಕಡಬದ ಸರಸ್ವತೀ ವಿದ್ಯಾಲಯದ ವತಿಯಿಂದ ► ಮನೆಮದ್ದು ಮಾಹಿತಿ ಕಾರ್ಯಕ್ರಮ Read More »

ಕರಾವಳಿ

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡ ನೋಂದಣಿಯಾಗದ ಬೈಕ್ ಸೇರಿ 9 ಬೈಕುಗಳು ಹಾಗೂ ಸ್ವಿಫ್ಟ್ ಕಾರಿನ ಮಾಲಕರಿಗೆ ವಾಹನಗಳನ್ನು ಮಾನ್ಯ ನ್ಯಾಯಾಲಯದೊಂದಿಗೆ ವ್ಯವಹರಿಸಿ ಬಿಡುಗಡೆಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿದ್ದರೂ ಇದುವರೆಗೂ ಯಾವುದೇ ವಾಹನಗಳನ್ನು ಬಿಡುಗಡೆಗೊಳಿಸಿರುವುದಿಲ್ಲ. ಈ ಪ್ರಕಟಣೆಯ ಒಂದು ವಾರದೊಳಗೆ ವಾಹನಗಳನ್ನು ಬಿಡುಗಡೆಗೊಳಿಸದೆ ಇದ್ದಲ್ಲಿ ಮಾನ್ಯ ನ್ಯಾಯಾಲಯದ ಅನುಮತಿ ಪಡೆದುಕೊಂಡು ಸದ್ರಿ ವಾಹನಗಳನ್ನು ಬಹಿರಂಗ ಹರಾಜು ಹಾಕಲಾಗುವುದು ಎಂದು ಕಡಬ ಠಾಣಾ ಉಪನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ Read More »

ಕರಾವಳಿ

ಮರ್ಧಾಳ: ಕ್ಯಾನ್ಸರ್ ಪೀಡಿತ ಬಾಲಕನ ಚಿಕಿತ್ಸೆಗೆ ► ಬೇಕಾಗಿದೆ ದಾನಿಗಳ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಶಾಲೆಗೆ ಹೋಗಿ ಶಿಕ್ಷಣ ಕಲಿತು ಉನ್ನತ ಮಟ್ಟಕ್ಕೇರಬೇಕಿದ್ದ ಬಾಲಕನೋರ್ವ ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿ ಇದೀಗ ಆಸ್ಪತ್ರೆಯಲ್ಲಿ ದಿನದೂಡುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾನಿಗಳ ಸಹಾಯಹಸ್ತ ಬೇಕಾಗಿದೆ. ಪುತ್ತೂರು ತಾಲೂಕಿನ ಬಂಟ್ರ ಗ್ರಾಮದ ಕಂಪ ನಿವಾಸಿ ಸುರೇಶ್ ಗೌಡ ಹಾಗೂ ಲಲಿತಾ ದಂಪತಿಯ ಪ್ರಥಮ ಪುತ್ರ ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ರಾಜೇಶ್ ಕ್ಯಾನ್ಸರ್ ರೋಗಕ್ಕೀಡಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. 2014 ರಲ್ಲಿ ಮೈ

ಮರ್ಧಾಳ: ಕ್ಯಾನ್ಸರ್ ಪೀಡಿತ ಬಾಲಕನ ಚಿಕಿತ್ಸೆಗೆ ► ಬೇಕಾಗಿದೆ ದಾನಿಗಳ ಸಹಾಯಹಸ್ತ Read More »

ಕರಾವಳಿ

ಹಾಸನ: ಕೆಎಸ್ಸಾರ್ಟಿಸಿ ಬಸ್ – ಖಾಸಗಿ ಬಸ್ ಢಿಕ್ಕಿ ► ಮೂವರು ಮೃತ್ಯು, 25 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಡಿ.05. ಕೆಎಸ್ಸಾರ್ಟಿಸಿ ಬಸ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು 25 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಆಲೂರು ಠಾಣಾ ವ್ಯಾಪ್ತಿಯ ಯದ್ದುರ್ಗ ಎಂಬಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಮೃತರನ್ನು ಫಾತಿಮಾ(27), ಅಬ್ದುಲ್ ಸಲಾಂ(54) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ನಸುಕಿನ ಜಾವ 2.30. ಗಂಟೆಯ ಸುಮಾರಿಗೆ ಕೆಎಸ್ಆರ್‌ಟಿಸಿ ಅಂಬಾರಿ ಸ್ಲೀಪರ್

ಹಾಸನ: ಕೆಎಸ್ಸಾರ್ಟಿಸಿ ಬಸ್ – ಖಾಸಗಿ ಬಸ್ ಢಿಕ್ಕಿ ► ಮೂವರು ಮೃತ್ಯು, 25 ಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ದತ್ತಜಯಂತಿ ಆಚರಣೆಯ‌‌ ನಂತರ ಪೆಟ್ರೋಲ್ ಬಾಂಬ್ ಪ್ರಯೋಗ ► 5 ಪೆಟ್ರೋಲ್ ಬಾಂಬ್ ಸಹಿತ 13 ಮಂದಿ ವಶಕ್ಕೆ: ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ.4. ದತ್ತಜಯಂತಿಯ ಕೊನೆಯ ದಿನವಾದ ರವಿವಾರದಂದು ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆಯೇ ಪೆಟ್ರೋಲ್ ಬಾಂಬ್ ಪ್ರಯೋಗ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಕೆ.ಅಣ್ಣಾಮಲೈ ತಿಳಿಸಿದ್ದಾರೆ. ಅವರು ಸೋಮವಾರ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಗರದ ತಮಿಳು ಕಾಲನಿಯ ಬಳಿಯ ಮಾರ್ಕೆಟ್ ರಸ್ತೆಯಲ್ಲಿ ಪೊಲೀಸರು ರಾತ್ರಿ ಸಮಯದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಕಿಡಿಗೇಡಿಗಳು

ದತ್ತಜಯಂತಿ ಆಚರಣೆಯ‌‌ ನಂತರ ಪೆಟ್ರೋಲ್ ಬಾಂಬ್ ಪ್ರಯೋಗ ► 5 ಪೆಟ್ರೋಲ್ ಬಾಂಬ್ ಸಹಿತ 13 ಮಂದಿ ವಶಕ್ಕೆ: ಎಸ್ಪಿ ಅಣ್ಣಾಮಲೈ Read More »

ಕರ್ನಾಟಕ

ಕಲ್ಲಾಜೆ: ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಬೈಕ್ ► ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಕೊಂಬಾರು ನಿವಾಸಿ ಚಿದಾನಂದ (26) ಎಂದು ಗುರುತಿಸಲಾಗಿದೆ. ಈತ ಮರ್ಧಾಳದಿಂದ ತನ್ನ ಮನೆಯ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಬಿದ್ದಿದ್ದು, ಚಿದಾನಂದದ ತಲೆಗೆ ಏಟಾಗಿದೆ. ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

ಕಲ್ಲಾಜೆ: ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಬೈಕ್ ► ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ Read More »

ಕರಾವಳಿ

ದತ್ತಪೀಠದಲ್ಲಿನ ಗೋರಿಗಳು ನಕಲಿಗಳೇ ಹೊರತು ಅಸಲಿಗಳಲ್ಲ ► ಚಿಕ್ಕಮಗಳೂರು ಶಾಸಕ‌ ಸಿ.ಟಿ.ರವಿ ಹೇಳಿಕೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ.04. ದತ್ತಪೀಠದಲ್ಲಿರುವುದು ಎಲ್ಲವೂ ನಕಲಿ ಗೋರಿಗಳಾಗಿದ್ದು, ಹಿಂದೆ ಅಲ್ಲಿ ಮುಸಲ್ಮಾನರು ಅಷ್ಟು ಜನ ಇರಲೇ ಇಲ್ಲ. ಹಾಗಿರುವಾಗ ಈ ಗೋರಿಗಳು ಎಲ್ಲಿಂದ ಬಂತು ಎಂದು ಪ್ರಶ್ನಿಸುವ ಮೂಲಕ ಸರ್ವಧರ್ಮದ ಭಾವೈಕ್ಯತಾ ಕೇಂದ್ರವಾಗಿರುವ ದತ್ತಾತ್ರೇಯ ಬಾಬಾ ಬುಡಾನ್ ಗಿರಿಯ ವಿವಾದಿತ ಸ್ಥಳದಲ್ಲಿ ಕೇಸರಿ ಧ್ವಜ ಹಾರಿಸಿ ಗೋರಿ ಧ್ವಂಸಕ್ಕೆ ಯತ್ನಿಸಿದ ಘಟನೆಯನ್ನು ಶಾಸಕ ಸಿ.ಟಿ.ರವಿ ಪರೋಕ್ಷವಾಗಿ ಸಮರ್ಥಿಸಿದ್ದಾರೆ. ದತ್ತಜಯಂತಿಯು ಶೇ.90 ಭಾಗ ಶಾಂತಿಯುತವಾಗಿ ನಡೆದಿದ್ದು, ಸಣ್ಣ ತಪ್ಪಿಗೆ ಹಿಂದೂಗಳ ಮೇಲೆ ಹಲ್ಲೆ ಮಾಡುವುದು

ದತ್ತಪೀಠದಲ್ಲಿನ ಗೋರಿಗಳು ನಕಲಿಗಳೇ ಹೊರತು ಅಸಲಿಗಳಲ್ಲ ► ಚಿಕ್ಕಮಗಳೂರು ಶಾಸಕ‌ ಸಿ.ಟಿ.ರವಿ ಹೇಳಿಕೆ Read More »

ಕರ್ನಾಟಕ

ಕೈಕಂಬ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಪಾದಚಾರಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.03. ಪಾದಚಾರಿ ವ್ಯಕ್ತಿಯೋರ್ವರಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ಕೈಕಂಬ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಕೈಕಂಬ ಸರಕಾರಿ ಶಾಲೆಯ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ. ತಕ್ಷಣವೇ ಗಾಯಾಳುವನ್ನು ಪಿಕಪ್ ವಾಹನದ ಮೂಲಕ ಕರೆದುಕೊಂಡು ಬಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದುಕೊಂಡು

ಕೈಕಂಬ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಪಾದಚಾರಿ ಗಂಭೀರ Read More »

ಕರಾವಳಿ

ಉಳ್ಳಾಲ: ಮುಂದುವರಿದ ಕಡಲ‌ಬ್ಬರ ► ರೆಸಾರ್ಟ್ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.03. ಓಖಿ ಚಂಡಮಾರುತದ ಪರಿಣಾಮದಿಂದಾಗಿ ಸೋಮೇಶ್ವರ, ಉಳ್ಳಾಲ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಎದ್ದಿರುವ ಸಮುದ್ರದ ಅಲೆಗಳ ಅಬ್ಬರವು ಭಾನುವಾರ ಬೆಳಗ್ಗೆಯೂ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಸಮುದ್ರದ ಬೃಹತ್ ಅಲೆಗಳು ಸೋಮೇಶ್ವರ, ಉಚ್ಚಿಲ ಪರಿಸರದ ಕೆಲವು ಮನೆಗಳಿಗೆ ಅಪ್ಪಳಿಸಿ ಸಮುದ್ರ ತೀರದ ನಿವಾಸಿಗಳನ್ನು ಆತಂಕಗೊಳಿಸಿತ್ತು. ಉಳ್ಳಾಲದ ರೆಸಾರ್ಟ್ ಒಂದರ ತಡೆಗೋಡೆಯು ಸಮುದ್ರದ ಅಲೆಗಳಿಗೆ ಸಿಲುಕಿ ಕುಸಿದಿತ್ತು. ಶನಿವಾರ ತಡರಾತ್ರಿಯಿಂದ ಸಮುದ್ರವು ಶಾಂತವಾಗತೊಡಗಿದ್ದು ಅಲೆಗಳ ಅಬ್ಬರ ಮಾತ್ರ ಮುಂದುವರಿದಿದೆ. ಮುಂಜಾಗ್ರತ ಕ್ರಮವಾಗಿ ಪರಿಸರದ ವಿವಿಧೆಡೆ

ಉಳ್ಳಾಲ: ಮುಂದುವರಿದ ಕಡಲ‌ಬ್ಬರ ► ರೆಸಾರ್ಟ್ ತಡೆಗೋಡೆ ಕುಸಿತ Read More »

ಕರಾವಳಿ

‘ಓಖೀ’ ಚಂಡಮಾರುತಕ್ಕೆ ಮಂಗಳೂರು ತತ್ತರ ► ಉಳ್ಳಾಲ ಪರಿಸರದಲ್ಲಿ ಮನೆಗೆ ನುಗ್ಗಿದ ಸಮುದ್ರದ ನೀರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.02. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ‘ಓಖೀ’ ಚಂಡಮಾರುತದ ಎಫೆಕ್ಟ್ ಕರಾವಳಿ ಭಾಗದಲ್ಲಿ ಕಾಣತೊಡಗಿದ್ದು, ಸಮುದ್ರದ ಭೋರ್ಗರೆತ ಹೆಚ್ಚಾಗುತ್ತಿದೆ. ಉಳ್ಳಾಲ – ಸೋಮೇಶ್ವರದಲ್ಲಿ ರಸ್ತೆಗೆ ಅಪ್ಪಳಿಸಿದ ಸಮುದ್ರದ ಅಲೆಗಳಿಂದಾಗಿ ರೆಸಾರ್ಟ್ ನ ತಡೆಗೋಡೆ ಕುಸಿದಿದ್ದು, ಅಲೆಯ ಅಬ್ಬರಕ್ಕೆ ರೆಸಾರ್ಟ್ ನಲ್ಲಿದ್ದ ಜನ ದಿಕ್ಕುಪಾಲಾಗಿ ಓಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಪರಿಸರದಲ್ಲಿ ಪೊಲೀಸರು ಮುನ್ನೆಚ್ಚರಿಕೆ ಘೋಷಿಸಿದ್ದಾರೆ. ಉಚ್ಚಿಲದಲ್ಲಿ ಮನೆಗೆ‌ ಸಮುದ್ರದ ನೀರು ಬಂದಿದೆ. ಇನ್ನುಳಿದಂತೆ ಪಣಂಬೂರು, ಪಡುಬಿದ್ರಿ, ಕಾಪು,

‘ಓಖೀ’ ಚಂಡಮಾರುತಕ್ಕೆ ಮಂಗಳೂರು ತತ್ತರ ► ಉಳ್ಳಾಲ ಪರಿಸರದಲ್ಲಿ ಮನೆಗೆ ನುಗ್ಗಿದ ಸಮುದ್ರದ ನೀರು Read More »

ಕರಾವಳಿ
Scroll to Top