News Kadaba

ಕೆಮ್ಮಾರ: ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಮೂವರು ಗಂಭೀರ ► ಸೇತುವೆಯ ತಡೆಗೋಡೆಗೆ ಗುದ್ದಿದ ಜೀಪ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.23. ಜೀಪೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರ ಎಂಬಲ್ಲಿ ಗುರುವಾರ ತಡ ರಾತ್ರಿ ನಡೆದಿದೆ. ಮೃತರನ್ನು ಕಾಣಿಯೂರಿನ ಕಟ್ಟತ್ತಾರು ನಿವಾಸಿಗಳಾದ ಶಿವಪ್ಪ ಮತ್ತು ಸುಶೀಲಾ ಎಂದು ಗುರುತಿಸಲಾಗಿದೆ. ಇವರು ತಮ್ಮದೇ ಜೀಪಿನಲ್ಲಿ ಉಪ್ಪಿನಂಗಡಿಯಿಂದ ಕಾಣಿಯೂರಿಗೆ ಆಲಂಕಾರು ಶಾಂತಿಮೊಗರು ಮೂಲಕ ತೆರಳುತ್ತಿರುವಾಗ ಜೀಪು ಚಾಲಕನ ನಿಯಂತ್ರಣ ತಪ್ಪಿ ಕೆಮ್ಮಾರ […]

ಕೆಮ್ಮಾರ: ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಮೂವರು ಗಂಭೀರ ► ಸೇತುವೆಯ ತಡೆಗೋಡೆಗೆ ಗುದ್ದಿದ ಜೀಪ್ Read More »

ಕರಾವಳಿ

ಮರಳು ವಾಹನಗಳಿಗೆ ಜಿಪಿಎಸ್ ಕಡ್ಡಾಯ ► ಜಿಲ್ಲಾಧಿಕಾರಿ ಶಶಿಕುಮಾರ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ನ.23. ಮರಳುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಲಾರಿ ಹಾಗೂ ಬೋಟುಗಳಿಗೆ ಜಿಪಿಎಸ್ ಮೆಷಿನ್ ಅಳವಡಿಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮರಳುಗಾರಿಕೆಯಲ್ಲಿ ಬಳಸಲಾಗುವ ಎಲ್ಲಾ ವಿಧದ ಬೋಟುಗಳಿಗೆ ಆಯಾ ನದಿಗೆ ಸಂಬಂಧಪಟ್ಟಂತೆ ನಿರ್ದಿಷ್ಟ ಬಣ್ಣ ಅಳವಡಿಸಬೇಕಾಗುತ್ತದೆ. ಅದೇ ರೀತಿ ಲಾರಿಗಳಿಗೂ “ಮರಳು ಸಾಗಾಟದ ವಾಹನ” ಎಂದು ನಮೂದಿಸಬೇಕಾಗುತ್ತದೆ. ಈಗಾಗಲೇ

ಮರಳು ವಾಹನಗಳಿಗೆ ಜಿಪಿಎಸ್ ಕಡ್ಡಾಯ ► ಜಿಲ್ಲಾಧಿಕಾರಿ ಶಶಿಕುಮಾರ್ ಸೆಂಥಿಲ್ Read More »

ಕರಾವಳಿ

ಡಿಸೆಂಬರ್ 22 ರಿಂದ ಕರಾವಳಿ ಉತ್ಸವ ಆರಂಭ ► ದ.ಕ. ಜಿಲ್ಲಾಧಿಕಾರಿ ಶಶಿಕುಮಾರ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ನ.23. ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22 ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್‌ ತಿಳಿಸಿದ್ದಾರೆ. ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ವಿವಿಧ ಉಪಸಮಿತಿಗಳ ಸಭೆಯಲ್ಲಿ ಮಾತನಾಡಿದ ಅವರು, ಕರಾವಳಿಯ ಸಾಮಾನ್ಯ ಸಂಸ್ಕøತಿಗಳು ಕರಾವಳಿ ಉತ್ಸವದಲ್ಲಿ ಉತ್ಸವದಲ್ಲಿ ಪ್ರತಿಬಿಂಬವಾಗಬೇಕು. ಇಲ್ಲಿನ ಜನತೆಯ ಉತ್ಸವವಾಗಿ ಮಾರ್ಪಾಡಬೇಕು. ಸ್ಥಳೀಯರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು. ಕರಾವಳಿ ಉತ್ಸವ

ಡಿಸೆಂಬರ್ 22 ರಿಂದ ಕರಾವಳಿ ಉತ್ಸವ ಆರಂಭ ► ದ.ಕ. ಜಿಲ್ಲಾಧಿಕಾರಿ ಶಶಿಕುಮಾರ್ ಸೆಂಥಿಲ್ Read More »

ಕರಾವಳಿ

ಕುಂಡಾಜೆ: ಸ್ಕಿಡ್ ಆಗಿ ರಸ್ತೆಗುರುಳಿದ ದ್ವಿಚಕ್ರ ವಾಹನ ► ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.23. ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ನೆಲಕ್ಕುರುಳಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ಸಂಜೆ ಆಲಂಕಾರು ಸಮೀಪದ ಕುಂಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಶರವೂರು ಮಿತ್ರಡ್ಕ ನಿವಾಸಿ ಪೂವಪ್ಪ ಮತ್ತು ಸಹ ಸವಾರ ಜನಾರ್ದನ ಮೂಲ್ಯ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಪೂವಪ್ಪರವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮತ್ತು ಜನಾರ್ದನ ಮೂಲ್ಯರವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ

ಕುಂಡಾಜೆ: ಸ್ಕಿಡ್ ಆಗಿ ರಸ್ತೆಗುರುಳಿದ ದ್ವಿಚಕ್ರ ವಾಹನ ► ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ

ಹೋಂಡಾ ಡಿಯೋ – ಲಾರಿ ಢಿಕ್ಕಿ ► ಗಾಯಗೊಂಡ ಡಿಯೋ‌ ಸವಾರ ಆಸ್ಪತ್ರೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.23. ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ.ರೋಡಿನ ಫ್ಲೈ ಓವರ್ ಬಳಿ ಗುರುವಾರದಂದು ನಡೆದಿದೆ.   ಗಾಯಾಳು ದ್ವಿಚಕ್ರ ವಾಹನ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಬಿ.ಸಿ.ರೋಡಿನಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಘಟನೆ ಸಂಬಂಧ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೋಂಡಾ ಡಿಯೋ – ಲಾರಿ ಢಿಕ್ಕಿ ► ಗಾಯಗೊಂಡ ಡಿಯೋ‌ ಸವಾರ ಆಸ್ಪತ್ರೆಗೆ Read More »

ಕರಾವಳಿ

ವಿಟ್ಲ: ಲಾರಿ – ಬೈಕ್ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ನ.23. ಗೂಡ್ಸ್ ಲಾರಿ ಮತ್ತು ಯಮಹಾ FZ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ಕಾಡುಮಠ ಸೇತುವೆ ಸಮೀಪದ ಅಪಾಯಕಾರಿ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಮಂಚಿ ಸಮೀಪದ ನಾಡಾಜೆ ನಿವಾಸಿಗಳಿಬ್ಬರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡುಮಠ ಸೇತುವೆ ಕಾಮಗಾರಿಯು ಅಪೂರ್ಣವಾಗಿ ಇರುವುದರಿಂದ ಹಳೆಯ ರಸ್ತೆ ಮತ್ತು ಹೊಸ ರಸ್ತೆಯ ಬಗ್ಗೆ ವಾಹನ ಚಾಲಕರಲ್ಲಿ ಗೊಂದಲ ಉಂಟಾಗುತ್ತಿದ್ದು, ಕಳೆದ ಎರಡು ತಿಂಗಳಲ್ಲಿ

ವಿಟ್ಲ: ಲಾರಿ – ಬೈಕ್ ಢಿಕ್ಕಿ ► ಸವಾರರಿಬ್ಬರು ಗಂಭೀರ Read More »

ಕರಾವಳಿ

ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…?

(ನ್ಯೂಸ್ ಕಡಬ) newskadaba.com ಮಡಿಕೇರಿ, ನ.23. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದರ ಹಿಂಬದಿಯ ನಾಲ್ಕೂ ಚಕ್ರಗಳು ಒಟ್ಟಿಗೆ ಕಳಚಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಡಿಕೇರಿಯ ಸೋಮವಾರ ಪೇಟೆ ತಾಲೂಕಿನ ಕುಶಾಲನಗರ ಸಮೀಪದ ಕೊಪ್ಪಳ ಎಂಬಲ್ಲಿ ತಲುಪಿದಾಗ ಹಿಂಬದಿಯ ಚಕ್ರಗಳು ಒಟ್ಟಾಗಿ ಚಾಸಿಸ್ ನಿಂದ ವಿಭಜನೆಗೊಂಡು ಹೊರಕ್ಕುರುಳಿದೆ. ಬಸ್ಸಿನಲ್ಲಿ ಉಂಟಾದ ಈ ಅವಘಡವನ್ನು ಕಂಡು ಬಸ್ ನಲ್ಲಿದ್ದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ‌. ಅದೃಷ್ಟವಶಾತ್

ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…? Read More »

ಕರ್ನಾಟಕ

ಚುನಾವಣೆಯಲ್ಲಿ ಗೆಲ್ಲಲು ನಾನು ವಾಮಾಚಾರ ಮಾಡಿಸಿ ಕೈ ಸುಟ್ಟುಕೊಂಡಿದ್ದೆ ► ಸತ್ಯ ಬಿಚ್ಚಿಟ್ಟ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.23. ತಾನು ಹಿಂದಿನ ಚುನಾವಣೆಯಲ್ಲಿ ಗೆಲ್ಲಲು ವಾಮಾಚಾರದ ಮೊರೆ ಹೋಗಿದ್ದೆ. ಆದರೆ ಚುನಾವಣೆಯಲ್ಲಿ ಅಂದು ಗೆಲ್ಲದೇ 1.50 ಲಕ್ಷ ಕಳೆದುಕೊಂಡಿದ್ದಾಗಿ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿದರು. ಅವರು ಬುಧವಾರದಂದು ವಿಧಾನ ಪರಿಷತ್ ನಲ್ಲಿ, ಮೌಢ್ಯ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಹಲವು ವರ್ಷಗಳ ಹಿಂದಿನ ಮಾತನ್ನು ಬುಧವಾರದಂದು ಬಾಯಿ ಬಿಟ್ಟರು. ನಾನು ಚುನಾವಣೆಗೆ ನಿಂತುಕೊಂಡಾಗ, ಅಂದು ನನ್ನ ಬಳಿ ಇದ್ದ ಸಹಾಯಕರು ವಾಮಾಚಾರ ಮಾಡಿಸಿದರೆ

ಚುನಾವಣೆಯಲ್ಲಿ ಗೆಲ್ಲಲು ನಾನು ವಾಮಾಚಾರ ಮಾಡಿಸಿ ಕೈ ಸುಟ್ಟುಕೊಂಡಿದ್ದೆ ► ಸತ್ಯ ಬಿಚ್ಚಿಟ್ಟ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ Read More »

ಕರ್ನಾಟಕ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ

(ನ್ಯೂಸ್ ಕಡಬ) newskadaba.com ಮೈಸೂರು, ನ.23. ಹಿರಿಯ ಪತ್ರಕರ್ತ ಹಾಗೂ ಆಂದೋಲನ ಪತ್ರಿಕೆ ಸಂಸ್ಥಾಪರಾದ ರಾಜಶೇಖರ ಕೋಟಿ ಅವರು ಗುರುವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜಶೇಖರ ಕೋಟಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಕಳೆದ 42 ವರ್ಷಗಳಿಂದ ಸುದೀರ್ಘ ಕಾಲ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದರು. ಗದಗ ಜಿಲ್ಲೆ ಹುಯಿಲಗೋಳ ಗ್ರಾಮದಲ್ಲಿ ಜನಿಸಿದ ರಾಜಶೇಖರ ಕೋಟಿ ಹಿರಿಯ ಪತ್ರಕರ್ತರಾದ ಡಾ. ಪಾಟೀಲ್ ಪುಟ್ಟಪ್ಪ ಗರಡಿಯಲ್ಲಿ ಪತ್ರಿಕೋದ್ಯಮ ಆರಂಭಿಸಿದ್ದರು. ನಂತರ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಆಂದೋಲನ ದಿನಪತ್ರಿಕೆ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ Read More »

ಕರ್ನಾಟಕ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ನ.23. 2ಜಿ, 3ಜಿ, 4ಜಿ ಆಯ್ತು ಈಗ 5ಜಿ ಯುಗ. ಜಾಗತಿಕ ರಂಗದಲ್ಲಿ ಹೊಸ ಕ್ರಾಂತಿಗೆ 5ಜಿ ದೂರಸಂಪರ್ಕ ಸೇವೆ ಮುನ್ನುಡಿ ಬರೆಯಲಿದೆ. ವಿಶ್ವದಲ್ಲೇ ಅತಿ ವೇಗದ ಮೊಬೈಲ್ ಮತ್ತು ವೈರ್ ಲೆಸ್ ಇಂಟರ್‌ನೆಟ್ ಸೇವೆ ಒದಗಿಸುತ್ತಿರುವ ದಕ್ಷಿಣ ಕೊರಿಯಾದಲ್ಲಿ ಈಗಾಗಲೇ 5ಜಿ ದೂರ ಸಂಪರ್ಕ ಪರೀಕ್ಷಾ ಸಿಗ್ನಲ್‌ಗಳನ್ನು ನೀಡಲಾಗಿದೆ. 5ಜಿ ತಂತ್ರಜ್ಞಾನದಡಿ ಎರಡು ಜಿಬಿಯ ಸಿನಿಮಾ ಡೌನ್‌ಲೋಡ್ ಮಾಡಲು ಬರೀ ಒಂದೇ ಸೆಕೆಂಡ್ ಸಾಕು. 4G ತಂತ್ರಜ್ಞಾನದಲ್ಲಿ ಲಭ್ಯವಾಗುವ ವಿವಿಧ ವೇಗದ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!! Read More »

ತಂತ್ರಜ್ಞಾನ
Scroll to Top