News Kadaba

ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮುಳುವಾಗಲಿದೆಯೇ ಸರಕಾರದ‌ ನೂತನ ಕಾನೂನು…? ► ಮಂತ್ರಿಗಳ, ಸರ್ಕಾರಿ ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವುದು ಕಡ್ಡಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಬೀದಿ ಬೀದಿಗಳಲ್ಲಿ ಖಾಸಗಿ ಶಾಲೆಗಳು ತಲೆಯೆತ್ತುತ್ತಿದ್ದು, ಇವುಗಳ ಅಭಿವೃದ್ಧಿಯ ಮುಂದೆ ಸರಕಾರಿ ಶಾಲೆಗಳು ಇಂದೋ ನಾಳೆಯೋ ಬಾಗಿಲು ಮುಚ್ಚುವ ಭೀತಿಯಲ್ಲಿ ಕಾರ್ಯಾಚರಿಸುತ್ತಿದೆ. ಒಂದೆಡೆ ಸರಕಾರಿ ಶಾಲೆಯಲ್ಲಿನ ಸೌಲಭ್ಯಗಳ ಕೊರತೆ, ಇನ್ನೊಂದೆಡೆ ಖಾಸಗಿ ಶಾಲೆಗಳ ದೌಲತ್ತಿನ ನಡುವೆ ಇದೀಗ ಚಳಿಗಾಲದ ಅಧಿವೇಶನದಲ್ಲಿ ಹೊಸದೊಂದು ಮಸೂದೆಯು ಮಂಡನೆಯಾಗುವ ಸಾಧ್ಯತೆಯಿದೆ. ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವುಳ್ಳ ಶಿಕ್ಷಣವನ್ನು ಪಡೆಯುತ್ತಿದ್ದರೆ, ಇನ್ನೊಂದೆಡೆ ಬಡಮಕ್ಕಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅಧಿಕಾರಿಗಳ […]

ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮುಳುವಾಗಲಿದೆಯೇ ಸರಕಾರದ‌ ನೂತನ ಕಾನೂನು…? ► ಮಂತ್ರಿಗಳ, ಸರ್ಕಾರಿ ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವುದು ಕಡ್ಡಾಯ..! Read More »

ಕರಾವಳಿ

ವಿಟ್ಲ: ಚರಂಡಿಗಿಳಿದ ಟಾಟಾ ಮ್ಯಾಜಿಕ್ ಐರಿಸ್ ► ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ.22. ಪ್ರಯಾಣಿಕರನ್ನು ಕುಳ್ಳಿರಿಸಿ ಚಾಲಕ ಕೆಳಗಿಳಿದಾಗ ಹಠಾತ್ ಚಲಿಸಿದ ಟಾಟಾ ಮ್ಯಾಜಿಕ್ ಐರಿಸ್ ವಾಹನವೊಂದು ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಕಲ್ಲಡ್ಕ ಸಮೀಪದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ. ಟಾಟಾ ಮ್ಯಾಜಿಕ್ ಐರಿಸ್ ವಾಹನದಲ್ಲಿದ್ದ ಪ್ರಯಾಣಿಕ ಮಹಿಳೆಯೋರ್ವರು ಪಡಿಬಾಗಿಲು ಜಂಕ್ಷನ್ ನಲ್ಲಿ ಅಂಗಡಿಯಿಂದ ಸಾಮಾನು ಖರೀದಿಸಲೆಂದು ತೆರಳಿದ್ದು, ಆ ಸಂದರ್ಭದಲ್ಲಿ ಚಾಲಕನೂ ವಾಹನದಿಂದ ಇಳಿದು ಹೋಗಿದ್ದಾರೆ ಎನ್ನಲಾಗಿದೆ. ಆ ಸಮಯದಲ್ಲಿ ಇದ್ದಕ್ಕಿಂದಂತೆ ಚಲಿಸಿದ ಟಾಟಾ ಮ್ಯಾಜಿಕ್ ಸುಮಾರು ೨೦ ಅಡಿ ಆಳದ ಕಂದಕಕ್ಕೆ

ವಿಟ್ಲ: ಚರಂಡಿಗಿಳಿದ ಟಾಟಾ ಮ್ಯಾಜಿಕ್ ಐರಿಸ್ ► ನಾಲ್ವರಿಗೆ ಗಾಯ Read More »

ಕರಾವಳಿ

ಸುಳ್ಯ: ಡಬಲ್‌ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ.21. 2013ರಲ್ಲಿ ಸುಳ್ಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಅಪರಾಧಿಗೆ 10 ವರ್ಷ ಕಠಿಣ ಸಜೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯ ಕಸಬಾ ಗ್ರಾಮದ ನಾರಾಜೆ ನಿವಾಸಿ ಹರೀಶ್ ನಾಯ್ಕ ಎಂಬವರ ಪತ್ನಿ ಪದ್ಮಾವತಿ ಮತ್ತು ಮನೆಗೆಲಸಕ್ಕೆಂದು ಬಂದಿದ್ದ ಟಿಪ್ಪರ್ ಚಾಲಕ ಹಿತೇಶ್ ಅವರನ್ನು ಬರ್ಬರವಾಗಿ ಕೊಲೆಗೈದಿದ್ದ ಅಜ್ಜಾವರ ಗ್ರಾಮದ ಮುಳಿಯ ನಿವಾಸಿ ವಸಂತ ಶೇರಿಗಾರ್

ಸುಳ್ಯ: ಡಬಲ್‌ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು Read More »

ಕರಾವಳಿ

ಬಂಟ್ವಾಳ: ಮದುವೆಯಾಗುವಂತೆ ಯುವತಿಗೆ ಪೀಡನೆ ► ಯುವಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ.21. ಯುವತಿಯೋರ್ವಳನ್ನು ಮದುವೆಯಾಗುವಂತೆ ನಿರಂತರವಾಗಿ ಪೀಡಿಸುತ್ತಿದ್ದ ಯುವಕನೊಬ್ಬನನ್ನು ಬಂಟ್ವಾಳ ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಮಂಗಳವಾರದಂದು ನಡೆದಿದೆ.   ಪೊಲೀಸರ ವಶದಲ್ಲಿರುವ ಯುವಕನನ್ನು ಬಂಟ್ವಾಳ ಅಮ್ಟಾಡಿ‌ ನಿವಾಸಿ ಅನಿಲ್ ಪಿಂಟೋ‌ ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಯುವತಿಯನ್ನು ದಾರಿಯಲ್ಲಿ ತಡೆದು ನಿಲ್ಲಿಸಿ ತನ್ನನ್ನು ಮದುವೆ ಆಗುವಂತೆ ನಿತ್ಯವೂ ಪೀಡಿಸುತ್ತಿದ್ದನೆನ್ನಲಾಗಿದ್ದು, ಇದನ್ನು ಪ್ರಶ್ನಿಸಿದ ಆಕೆಗೆ ಹಾಗೂ ಆಕೆಯ ಮನೆಯವರಿಗೂ ಕೊಲೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ. ಯುವತಿಯ ಮನೆಯವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿರುವ

ಬಂಟ್ವಾಳ: ಮದುವೆಯಾಗುವಂತೆ ಯುವತಿಗೆ ಪೀಡನೆ ► ಯುವಕ ಪೊಲೀಸ್ ವಶಕ್ಕೆ Read More »

ಕರಾವಳಿ

ಕ್ರೀಂ ಪಾರ್ಲರ್ ನಲ್ಲಿ ನಡೆಯಿತು ಪ್ರೇಮಿಗಳ ಲವ್ವಿಡವ್ವಿ ► ವೈರಲಾಯ್ತು ಮಂಗಳೂರು ಜೋಡಿಯ ಕಿಸ್ಸಿಂಗ್ ಸೀನ್

(ನ್ಯೂಸ್ ಕಡಬ) newskadaba.com ಮಂಗಳೂರು, ನ.21. ನಗರದ ಕ್ರೀಂ ಪಾರ್ಲರ್ ಒಂದರಲ್ಲಿ ಯುವಕನೊಬ್ಬ ಕಾಲೇಜು ಯುವತಿಗೆ ಮುತ್ತಿಟ್ಟ ದೃಶ್ಯದ ವಿಡಿಯೋವೊಂದು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಕೆಫೆಯಲ್ಲಿ ಏನೋ ಮಾತನಾಡುತ್ತಾ ಕೂತಿದ್ದು, ಯುವಕ ಯುವತಿಯನ್ನು ಹತ್ತಿರಕ್ಕೆಳೆದುಕೊಂಡು ಮುತ್ತಿಡುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಮೇಲ್ನೋಟಕ್ಕೆ ಇವರಿಬ್ಬರು ಪ್ರೇಮಿಗಳಂತೆ ಕಂಡುಬರುತ್ತಿದ್ದು, ಯುವತಿ ಕಾಲೇಜಿನ ಸಮವಸ್ತ್ರ ಧರಿಸಿದ್ದು, ಯಾವ ಕಾಲೇಜಿನ ವಿದ್ಯಾರ್ಥಿನಿ ಎನ್ನುವುದು ಬಹಿರಂಗವಾಗಿಲ್ಲ. ವೀಡಿಯೋದಲ್ಲಿ ವಿದ್ಯಾರ್ಥಿನಿಯ ಮುಖಚಹರೆ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಮಂಗಳೂರಿನ ಯಾವುದೋ ಕ್ರೀಂ ಪಾರ್ಲರ್

ಕ್ರೀಂ ಪಾರ್ಲರ್ ನಲ್ಲಿ ನಡೆಯಿತು ಪ್ರೇಮಿಗಳ ಲವ್ವಿಡವ್ವಿ ► ವೈರಲಾಯ್ತು ಮಂಗಳೂರು ಜೋಡಿಯ ಕಿಸ್ಸಿಂಗ್ ಸೀನ್ Read More »

ಕರಾವಳಿ

ಕೇಂದ್ರ ಸರಕಾರದ BIS ಗವರ್ನಿಂಗ್ ಬೋರ್ಡ್ ಸದಸ್ಯರಾಗಿ ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ನವದೆಹಲಿ, ನ.21. ರಾಷ್ಟ್ರ ಮಟ್ಟದ ಗುಣಮಟ್ಟ ಮಾಪನ ಸಂಸ್ಥೆಯಾದ ಪ್ರತಿಷ್ಠಿತ BIS (Beauro of Indian Standard) ರಾಷ್ಟ್ರೀಯ ಗವರ್ನಿಂಗ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್ ಅವರನ್ನು ಕೇಂದ್ರ ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ರಾಷ್ಟ್ರಮಟ್ಟದಲ್ಲಿ ಅಧ್ಯಕ್ಷರು ಸೇರಿ ಒಟ್ಟು 6 ಮಂದಿ ಸದಸ್ಯರಿರುವ ಬಿಐಎಸ್ ಸಂಸ್ಥೆಗೆ ದಕ್ಷಿಣ ಭಾರತದಿಂದ ಯು.ಟಿ.ಖಾದರ್ ನೇಮಕರಾಗಿದ್ದಾರೆ. ಕೇಂದ್ರ ಆಹಾರ ಸಚಿವರು ಇದರ ಅಧ್ಯಕ್ಷರಾಗಿದ್ದು, ಉಳಿದಂತೆ ಉತ್ತರ ಭಾರತದ

ಕೇಂದ್ರ ಸರಕಾರದ BIS ಗವರ್ನಿಂಗ್ ಬೋರ್ಡ್ ಸದಸ್ಯರಾಗಿ ಯು.ಟಿ.ಖಾದರ್ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ವಾಕಿಂಗ್ ಹೋಗುತ್ತಿದ್ದಾಗ ಬೈಕ್ ಢಿಕ್ಕಿ ► ಗಂಭೀರ ಗಾಯಗೊಂಡಿದ್ದ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ.21. ಬೆಳಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದ ಸಂದರ್ಭ ಬೈಕೊಂದು ಢಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಪಾದಚಾರಿಯು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಪುತ್ತೂರಿನ ಕೆಮ್ಮಾಯಿ ನೀರ್ಪಾಜೆ ನಿವಾಸಿ ರಾಮಚಂದ್ರ ಶಾಸ್ತ್ರಿ(78ವ) ಎಂದು ಗುರುತಿಸಲಾಗಿದೆ. ರಾಮಚಂದ್ರ ಶಾಸ್ತ್ರಿಯವರು ಇತ್ತೀಚೆಗೆ ಎಂದಿನಂತೆ ಬೆಳಿಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡಿದ್ದ ರಾಮಚಂದ್ರ ಶಾಸ್ತ್ರಿಯವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ಪುತ್ತೂರು: ವಾಕಿಂಗ್ ಹೋಗುತ್ತಿದ್ದಾಗ ಬೈಕ್ ಢಿಕ್ಕಿ ► ಗಂಭೀರ ಗಾಯಗೊಂಡಿದ್ದ ಪಾದಚಾರಿ ಮೃತ್ಯು Read More »

ಕರಾವಳಿ

ಪುತ್ತೂರು: ನಿವೃತ್ತ ಎಎಸ್ಐ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.21. ನಿವೃತ್ತ ಎಎಸ್ಐ ಓರ್ವರು ರಕ್ಷಿತಾರಣ್ಯದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಪುತ್ತೂರು ನಗರ ಠಾಣೆಯಲ್ಲಿ ಎಎಸ್ಐ ಯಾಗಿ ನಿವೃತ್ತಿ ಹೊಂದಿದ್ದ ಕುಂಜೂರು ಪಂಜ ನಿವಾಸಿ ಪರ್ಲಡ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶೇಷಪ್ಪ ಪೂಜಾರಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಸೋಮವಾರದಂದು ತನ್ನ ಕುಂಜೂರು ಪಂಜದ ಮನೆಗೆ ಬಂದಿದ್ದು, ಮಂಗಳವಾರದಂದು ತನ್ನ ಪಂಚೆಯಿಂದ ನೇಣು ಬಿಗಿದ‌ ಘಟನೆ ಬೆಳಕಿಗೆ ಬಂದಿದೆ. 1986 ರಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಕಾನ್ ಸ್ಟೇಬಲ್

ಪುತ್ತೂರು: ನಿವೃತ್ತ ಎಎಸ್ಐ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ಕಡಬ ಸೇರಿದಂತೆ 49 ಹೊಸ ತಾಲೂಕುಗಳು ಜನವರಿ 01 ರಿಂದ ಅಸ್ತಿತ್ವಕ್ಕೆ ► ಕಂದಾಯ ಸಚಿವ ಕಾಗೋಡು ತಿಮ್ಮಪ್ಪ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.21. ಈಗಾಗಲೇ ಘೋಷಣೆ ಮಾಡಿರುವ 49 ಹೊಸ ತಾಲ್ಲೂಕುಗಳು ಜನವರಿ 1 ರಿಂದ ಅಸ್ತಿತ್ವಕ್ಕೆ ಬರಲಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆ ಮುಂದುವರಿದಿದೆ’ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ಸಿನ ರಘುಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಹೊಸ ತಾಲ್ಲೂಕುಗಳ ರಚನೆಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಹಣಕಾಸನ್ನು ಒದಗಿಸಲಾಗಿದೆ ಎಂದರು. ಇದರೊಂದಿಗೆ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹೋಬಳಿಯನ್ನು ಹೊಸ ತಾಲೂಕಾಗಿ ಘೋಷಿಸಬೇಕೆಂಬ ಬೇಡಿಕೆಯನ್ನು ಪರಿಶೀಲನೆ ನಡೆಸಲಾಗುವುದು ಎಂದು

ಕಡಬ ಸೇರಿದಂತೆ 49 ಹೊಸ ತಾಲೂಕುಗಳು ಜನವರಿ 01 ರಿಂದ ಅಸ್ತಿತ್ವಕ್ಕೆ ► ಕಂದಾಯ ಸಚಿವ ಕಾಗೋಡು ತಿಮ್ಮಪ್ಪ Read More »

ಕರ್ನಾಟಕ

ಬುಡೋಳಿ: ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಟ್ಯಾಂಕರ್ ► ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ.20. ಟ್ಯಾಂಕರೊಂದು ಆಟೊ ರಿಕ್ಷಾದ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ‌‌ ಸೋಮವಾರದಂದು‌ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ನಡೆದಿದೆ. ಗಾಯಾಳು ಆಟೋ ಚಾಲಕನನ್ನು ಬುಡೋಳಿ ನಿವಾಸಿ ಆದಂ ಎಂದು ಗುರುತಿಸಲಾಗಿದೆ. ಬುಡೋಳಿಯಿಂದ ಮಾಣಿ ಕಡೆಗೆ ತೆರಳಲು ತನ್ನ ಆಟೊದಲ್ಲಿ ಜನರನ್ನು ಹತ್ತಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಗಾಯಗೊಂಡಿದ್ದಾರೆ. ವಿಟ್ಲ ಠಾಣೆ ಪೊಲೀಸರು ಸ್ಥಳಕ್ಕೆ

ಬುಡೋಳಿ: ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಟ್ಯಾಂಕರ್ ► ಚಾಲಕನಿಗೆ ಗಾಯ Read More »

ಕರಾವಳಿ
Scroll to Top