News Kadaba

ವೈದ್ಯರ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿ ► ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ.17. ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ತಿದ್ದುಪಡಿ ವಿಧೇಯಕ (ಕೆಪಿಎಂಇ) ವಿರುದ್ಧ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ವಿದ್ಯಾರ್ಥಿನಿಯೋರ್ವರು ಮೊದಲ‌ ಬಲಿಯಾಗಿದ್ದಾರೆ. ಮೃತರನ್ನು ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಪೂಜಾ(19) ಎಂದು ಗುರುತಿಸಲಾಗಿದೆ. ಈಕೆ ತನ್ನ ಎರಡೂ ಕಿಡ್ನಿಗಳ ವೈಫಲ್ಯದಿಂದ ಬಳಲುತ್ತಿದ್ದು, ವಾರದಲ್ಲಿ ಎರಡು ಬಾರಿ ಡಯಾಲಿಸಿಸ್ ನಡೆಸಲಾಗುತ್ತಿತ್ತು. ಆದರೆ ವೈದ್ಯರ ಮುಷ್ಕರದಿಂದಾಗಿ ಡಯಾಲಿಸಿಸ್ ನಡೆಸಿರಲಿಲ್ಲವೆನ್ನಲಾಗಿದ್ದು, ಅನಾರೋಗ್ಯ ತೀವ್ರಗೊಂಡ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ […]

ವೈದ್ಯರ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿ ► ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಅಗಲ ಕಿರಿದಾದ ಕಡಬ – ಪಂಜ ರಸ್ತೆಯ ಅಭಿವೃದ್ಧಿಗೆ ಚಾಲನೆ ► 5 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣಗೊಳ್ಳುತ್ತಿದೆ ಜಿಲ್ಲಾ ಮುಖ್ಯರಸ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.18. ಸುಳ್ಯ ತಾಲೂಕಿನಿಂದ ಪ್ರಸ್ತಾವಿತ ಕಡಬ ತಾಲೂಕನ್ನು ಸಂಪಕರ್ಿಸುವ ಪ್ರಮುಖ ಜಿಲ್ಲಾ ರಸ್ತೆಯಾಗಿರುವ ಕಡಬ-ಪಂಜ ರಸ್ತೆಯನ್ನು ಆಗಲಗೊಳಿಸಿ ಉನ್ನತೀಕರಿಸುವ ಕಾಮಗಾರಿ ಆರಂಭಗೊಂಡಿದ್ದು, ಸುಳ್ಯ ಶಾಸಕ ಎಸ್.ಅಂಗಾರ ಅವರ ಮುತುವರ್ಜಿಯಿಂದಾಗಿ ಪರಿಸರದ ಜನರ ಬಹುಕಾಲದ ಬೇಡಿಕೆಯೊಂದು ಈಡೇರುತ್ತಿದೆ. ಕಡಬದಿಂದ ಪಂಜ, ನಿಂತಿಕಲ್, ಬೆಳ್ಳಾರೆ ಮೂಲಕ ಸುಳ್ಯಕ್ಕೆ ಪ್ರಯಾಣಿಸುವ ಜನರಿಗೆ ಕಡಬ-ಪಂಜ ನಡುವಿನ ಪ್ರಯಾಣ ಅತ್ಯಂತ ತ್ರಾಸದಾಯಕ ಪ್ರಯಾಣ ಎನ್ನುವ ಕಾರಣದಿಂದಾಗಿ ಸದ್ರಿ ರಸ್ತೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿಗಳನ್ನು ಸಲ್ಲಿಸಲಾಗಿತ್ತು. ಅಗಲ ಕಿರಿದಾದ

ಅಗಲ ಕಿರಿದಾದ ಕಡಬ – ಪಂಜ ರಸ್ತೆಯ ಅಭಿವೃದ್ಧಿಗೆ ಚಾಲನೆ ► 5 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣಗೊಳ್ಳುತ್ತಿದೆ ಜಿಲ್ಲಾ ಮುಖ್ಯರಸ್ತೆ Read More »

ಕರಾವಳಿ

ಯಡಿಯೂರಪ್ಪ, ಶೋಭಾ ಕರಂದ್ಲಾಜೆಯ‌ ವಿರುದ್ಧ ವಾಟ್ಸಪ್ ನಲ್ಲಿ ಅವಹೇಳನ ► ಬಿಜೆಪಿಯ ಮೂವರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ನ.17. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆಯ ಫೋಟೊಗಳನ್ನು ಅಶ್ಲೀಲವಾಗಿ ಚಿತ್ರಿಸಿ ವಾಟ್ಸ್ಆ್ಯಪ್ ನಲ್ಲಿ ರವಾನಿಸಿದ ಆರೋಪದಲ್ಲಿ ಕುಂದಾಪುರದ ಮೂವರು ಬಿಜೆಪಿ ಮುಖಂಡರ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ. ಕಿಶೋರ್ ಕುಮಾರ್, ಮುಖಂಡ ರಾಜು ಪೂಜಾರಿ ಹಾಗೂ ಇತರರ ವಿರುದ್ಧ ಕುಂದಾಪುರ ಬಿಜೆಪಿ

ಯಡಿಯೂರಪ್ಪ, ಶೋಭಾ ಕರಂದ್ಲಾಜೆಯ‌ ವಿರುದ್ಧ ವಾಟ್ಸಪ್ ನಲ್ಲಿ ಅವಹೇಳನ ► ಬಿಜೆಪಿಯ ಮೂವರ ವಿರುದ್ಧ ದೂರು ದಾಖಲು Read More »

ಕರ್ನಾಟಕ

ಕಡಬ: ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ ಅಧಿಕಾರಿ ► ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಕಡಬ, ನ.16. ಸರಕಾರದಿಂದ ದೊರೆಯಲ್ಪಡುವ ಸಹಾಯಧನ ಬಿಡುಗಡೆಗಾಗಿ ಕಡಬದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ ಅಧಿಕಾರಿಗೆ ಲೋಕಾಯುಕ್ತ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಕಡಬದ ವ್ಯಾಪಾರಿಯಾಗಿದ್ದ ಜೋನ್ಸನ್ ಪಿ.ಜೆ. ಎಂಬವರಿಂದ 2009 ಜೂನ್‌ 26 ರಂದು ಲಂಚಕ್ಕೆ ಬೇಡಿಕೆ ಇಟ್ಟು, ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ‌ ಸಿಕ್ಕಿ ಬಿದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಖಾದಿ ಗ್ರಾಮೋದ್ಯೋಗ ಇಲಾಖೆಯ ಅಧಿಕಾರಿ ಭಾಸ್ಕರ ಪ್ರಭು ಎಂಬವರ

ಕಡಬ: ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ ಅಧಿಕಾರಿ ► ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ

ಕಡಬದ ವಿವಿಧ ಸಂಘಸಂಸ್ಥೆಗಳ ಹಾಗೂ ಸಾರ್ವಜನಿಕರ ಪರವಾಗಿ ► ಸಾಹಿತಿ ಗೋಪಾಲ್ ರಾವ್‌ರಿಗೆ ಸಾರ್ವಜನಿಕ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಕಡಬ, ನ.16. ಗೋಪಾಲ ರಾವ್ ರವರು ಕಡಬ ಕಂಡ ಅತ್ಯಂತ ಶ್ರೇಷ್ಠ ಹಾಗೂ ಚಿಂತನಾ ಶೀಲ ಸಾಹಿತಿಯಾಗಿ ಕಡಬಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್ ರೈ ಪೆರ್ಲ ಹೇಳಿದರು. ಅವರು ಇತ್ತೀಚೆಗೆ ನಮ್ಮಿಂದ ಅಗಲಿದ ಕಡಬದ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ವಿಜೇತ ಧಾರ್ಮಿಕ ಮುಂದಾಳು, ಸಾಮಾಜಿಕ ಹಿತಚಿಂತಕ, ನಿವೃತ್ತ ಮುಖ್ಯ ಶಿಕ್ಷಕ ದಿ| ಗೋಪಾಲ್ ರಾವ್ ರವರಿಗೆ ಗುರುವಾರದಂದು ಕಡಬದ ಅನುಗ್ರಹ ಮಿನಿ

ಕಡಬದ ವಿವಿಧ ಸಂಘಸಂಸ್ಥೆಗಳ ಹಾಗೂ ಸಾರ್ವಜನಿಕರ ಪರವಾಗಿ ► ಸಾಹಿತಿ ಗೋಪಾಲ್ ರಾವ್‌ರಿಗೆ ಸಾರ್ವಜನಿಕ ಶ್ರದ್ಧಾಂಜಲಿ Read More »

ಕರಾವಳಿ

ಡಿ.16 ರಂದು ಕಡಬದಲ್ಲಿ ನಡೆಯಲಿರುವ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸರ್ವಾಧ್ಯಕ್ಷರಾಗಿ ಅಂಕಣಕಾರ ನಾ. ಕಾರಂತ ಪೆರಾಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.16. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ವತಿಯಿಂದ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಡಿ.16. ರಂದು ನಡೆಯಲಿರುವ 17 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಂಕಣಕಾರ, ಯಕ್ಷಗಾನ ಕಲಾವಿದ, ಪತ್ರಕರ್ತ ನಾ. ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ. Len ಯಕ್ಷಗಾನ ಕಲಾವಿದರಾಗಿ, ಪತ್ರಕರ್ತರಾಗಿ ಪರಿಚಿತವಾಗಿರುವ ನಾ.ಕಾರಂತ ಪೆರಾಜೆ ಅವರು ಕೃಷಿ ಪತ್ರಕರ್ತರಾಗಿ ರಾಜ್ಯಾದ್ಯಂತ ಗುರುತಿಸಿಕೊಂಡಿದ್ದಾರೆ. ಗ್ರಾಮೀಣ ಪತ್ರಿಕೋದ್ಯಮದಲ್ಲಿ ಪ್ರಶಸ್ತಿಯೂ ಲಭಿಸಿದೆ. ಇದೀಗ ತಾಲೂಕು ಸಾಹಿತ್ಯ

ಡಿ.16 ರಂದು ಕಡಬದಲ್ಲಿ ನಡೆಯಲಿರುವ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸರ್ವಾಧ್ಯಕ್ಷರಾಗಿ ಅಂಕಣಕಾರ ನಾ. ಕಾರಂತ ಪೆರಾಜೆ ಆಯ್ಕೆ Read More »

ಕರಾವಳಿ

ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ತಾರಕಕ್ಕೇರಿದ ವೈದ್ಯರ ಮುಷ್ಕರ ► ನಾಳೆಯಿಂದ OPD ಬಂದ್

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.15. ರಾಜ್ಯದಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರ ನಾಳೆಯಿಂದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ ತಿದ್ದುಪಡಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಐಎಂಎ, ಪಾನಾ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಐದು ಸಂಘಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ನಾಳೆಯಿಂದ ಓಪಿಡಿ ವ್ಯವಸ್ಥೆ ಕೂಡ ಸ್ಥಗಿತಗೊಳ್ಳಲಿದೆ ಎಂಬ ಮಾಹಿತಿ ನೀಡಿದೆ. ಇದರಿಂದ ರಾಜ್ಯದಾದ್ಯಂತ ರೋಗಿಗಳು ಇನ್ನಷ್ಟು ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ. PHANA ಚುನಾಯಿತ ಅಧ್ಯಕ್ಷ ಡಾ.ಜಯಣ್ಣ ಮಾತನಾಡಿದ್ದು, ಕಾಯಿದೆ ತಿದ್ದುಪಡಿ ಮಾಡದಂತೆ

ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ತಾರಕಕ್ಕೇರಿದ ವೈದ್ಯರ ಮುಷ್ಕರ ► ನಾಳೆಯಿಂದ OPD ಬಂದ್ Read More »

ಕರಾವಳಿ

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.15. ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೆ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಠಿಸಲಾಗಿದ್ದು, ಮಂಗಳೂರು ತಾಲೂಕಿನ 55 ಗ್ರಾಮ ಪಂಚಾಯತ್‍ಗಳಿಗೆ ತಲಾ ಒಂದರಂತೆ ಡಾಟಾ ಎಂಟ್ರಿ ಆಪರೇಟರುಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯಾವ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಲು ಬಯಸಿರುವರೋ ಆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಯವರಿಗೆ ಅರ್ಜಿಯನ್ನು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು,

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಬಿಜೆಪಿಯನ್ನು ಗೆಲ್ಲಿಸುವಂತೆ ಯಡಿಯೂರಪ್ಪರಿಂದ ಕರೆ ► ಬಿಜೆಪಿ ಅಧಿಕಾರಕ್ಕೆ ಬಂದರೆ ಕರಾವಳಿಯ ಭಯೋತ್ಪಾದನೆಗೆ ಕ್ರಮ

(ನ್ಯೂಸ್ ಕಡಬ) newskadaba.com ಮುರುಡೇಶ್ವರ, ನ.15. ಬಿಜೆಪಿ ಅಧಿಕಾರ ವಹಿಸಿಕೊಂಡ ಮರುದಿನವೇ ಕರಾವಳಿಯಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುರುಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಸುಮಾರು ನೂರಕ್ಕೂ‌ ಅಧಿಕ ಜನರು ಭಯೋತ್ಪಾದಕ ಸಂಘಟನೆಯಾದ ಐಸಿಸ್ ಸೇರಿದ್ದು‌, ಇದರ ಪರಿಣಾಮವು ಕರಾವಳಿ ಭಾಗದಲ್ಲೂ ಕಂಡು ಬಂದಿದೆ. ರಾಜ್ಯದಲ್ಲಿ ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆ ಸಕ್ರಿಯವಾಗಿದ್ದು ಇದಕ್ಕೆ ಸಿದ್ದರಾಮಯ್ಯನವರೇ ಹೊಣೆಯಾಗಿದ್ದಾರೆ ಅಂತ ಆರೋಪಿಸಿದರು. ರಾಜ್ಯದಲ್ಲಿ ಸುಮಾರು 42 ಸಾವಿರ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ತಕ್ಷಣ ವೈದ್ಯರ

ಬಿಜೆಪಿಯನ್ನು ಗೆಲ್ಲಿಸುವಂತೆ ಯಡಿಯೂರಪ್ಪರಿಂದ ಕರೆ ► ಬಿಜೆಪಿ ಅಧಿಕಾರಕ್ಕೆ ಬಂದರೆ ಕರಾವಳಿಯ ಭಯೋತ್ಪಾದನೆಗೆ ಕ್ರಮ Read More »

ಕರ್ನಾಟಕ

ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ರಿಯಾದ್‌, ನ.15. ಭಾರತೀಯ ಮೂಲದ ಯೋಗಕ್ಕೆ ಸೌದಿ ಅರೇಬಿಯಾ ಸರಕಾರವು ವಿಶೇಷ ಮಾನ್ಯತೆ ನೀಡಿದ್ದು ಕ್ರೀಡೆಯನ್ನಾಗಿ ಪರಿಗಣಿಸಿ ದೇಶದಲ್ಲಿ ಯೋಗ ಕಲಿಕೆಗೆ ಅನುಮತಿ ನೀಡಿದೆ. ಇದರೊಂದಿಗೆ ಭಾರತೀಯ ಮೂಲದ ಯೋಗಕ್ಕೆ ಮಾನ್ಯತೆ ನೀಡಿದ ಮೊದಲ ಮುಸ್ಲಿಂ ರಾಷ್ಟ್ರವೆಂಬ ಹೆಗ್ಗಳಿಕೆಗೂ ಸೌದಿ ಅರೇಬಿಯಾ ಪಾತ್ರವಾಗಿದೆ. ಈ ಹಿಂದೆ ಜೂನ್‌ 21 ರಂದು ನಡೆಸಲಾಗುವ ವಿಶ್ವ ಯೋಗ ದಿನದ ಸಹಭಾಗಿತ್ವವನ್ನು ಸೌದಿ ಅರೇಬಿಯಾ ಪಡೆದಿರಲಿಲ್ಲ. ಆದರೆ ಈಗ ಕೈಗೊಂಡಿರುವ ನಿರ್ಧಾರ ಐತಿಹಾಸಿಕವಾಗಿದ್ದು, ಬದಲಾವಣೆಯ ಸೂಚನೆ ಎನ್ನಲಾಗಿದೆ.

ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top