News Kadaba

ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟ ► ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಉಡುಪಿ, ನ.12. ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟನಾಗಿದ್ದಾನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳೀನ್ ಕುಮಾರ್ ಕಟೀಲ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಅವರು ಉಡುಪಿಯ ಕಾಪು ಪೇಟೆಯಲ್ಲಿ ಭಾನುವಾರ ನಡೆದ ಪರಿವರ್ತನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ರಾವಣ ಸೀತೆಯ ಅಪಹರಣ ಮಾತ್ರ ಮಾಡಿದ್ದ ಆದರೆ ಸಿದ್ದರಾಮಯ್ಯ ಹಿಂದೂ ಸಮಾಜ ಒಡೆದು ಗೋ ಹತ್ಯೆಗೆ ಬೆಂಬಲವಾಗಿ ನಿಲ್ಲುತ್ತಿದ್ದಾನೆ. ಹಿಂದೂ ಸಂಸ್ಕೃತಿ ನಾಶ ಮಾಡಲು ಸಿದ್ದರಾಮಯ್ಯ ಹೊರಟಿದ್ದು, ರೈತರ ಆತ್ಮಹತ್ಯೆಗೆ ಕಾರಣವಾಗುತ್ತಿದ್ದಾನೆ  ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯನ ಅಧಿಕಾರ […]

ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟ ► ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರ್ನಾಟಕ

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ

(ನ್ಯೂಸ್ ಕಡಬ) newskadaba.com ಕಡಬ, ನ.12. ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿ ದಿನೇ ದಿನೇ ಜನ ಸಂಚಾರ ಹೆಚ್ಚಾಗುತ್ತಿದ್ದು, ಪ್ರಸ್ತಾವಿತ ಸುಮಾರು 35 ಗ್ರಾಮಗಳಿಂದ ಕಛೇರಿ ಕೆಲಸಗಳಿಗಾಗಿ ಕಡಬಕ್ಕೆ ಬರುವುದು ಅನಿವಾರ್ಯ. ಕಡಬ ಪೇಟೆಯಿಂದ ಕೇವಲ ಮೂರು ಕಿಮೀ ದೂರದಲ್ಲಿರುವ ಕಾಯರಡ್ಕದಿಂದ ಪೇರಡ್ಕದ ವರೆಗಿನ ಎರಡು ಕಿಮೀ ರಸ್ತೆಯು ಇಲ್ಲಿನ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜಾಣ ಕುರುಡುತನದಿಂದಾಗಿ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದೆ. ಈ ರಸ್ತೆಯು ಕಡಬದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದು, ಈ ರಸ್ತೆಯ ಮೂಲಕ

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ Read More »

ಕರಾವಳಿ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.12.‌ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಭಾನುವಾರದಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕರಾವಳಿಗೆ ಆಗಮಿಸಲಿದ್ದಾರೆ. ಇಂದು ಸಂಜೆ 5.15 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಬೆಳ್ತಂಗಡಿಗೆ ತೆರಳಿ ಖಾಸಗಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ರಾತ್ರಿ 9.20 ಕ್ಕೆ ಬಜ್ಪೆ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ Read More »

ಕರ್ನಾಟಕ

ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.11. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಬಂಟ್ವಾಳದಲ್ಲಿ ಬೃಹತ್ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಸಚಿವ ರಮಾನಾಥ ರೈ ವಿರುದ್ದ ಹರಿಹಾಯ್ದ ಶೋಭಾ ಕರಂದ್ಲಾಜೆ, ಬಂಟ್ವಾಳದಲ್ಲಿ ರಮಾನಾಥ ರೈಯವರು ಹಿಂದೂಗಳ ವಿರುದ್ಧ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಬಂಧನಕ್ಕೆ ರಮಾನಾಥ ರೈಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಲು

ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ Read More »

ಕರಾವಳಿ

ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ಮೋದಿಯವರಿಗೆ ನಾಚಿಗೆಯಾಗಬೇಕು ► ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ.11. ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ನರೇಂದ್ರ ಮೋದಿಯವರಿಗೆ ನಾಚಿಗೆಯಾಗಬೇಕು ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳುವ ಮೂಲಕ ಪಕ್ಷದಲ್ಲಿ ಮುಜುಗರವನ್ನುಂಟುಮಾಡಿದ್ದಾರೆ. ಬಿಜೆಪಿ ಪರಿವರ್ತನಾ ಯಾತ್ರೆಯ ಬಂಟ್ವಾಳದಲ್ಲಿ ನಡೆದ ಸಮಾವೇಶದಲ್ಲಿ ಮಾತಣಾಡಿದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ನರೇಂದ್ರ ಮೋದಿಯವರಿಗೆ ನಾಚಿಗೆಯಾಗಬೇಕು ಎಂದು ಹೇಳಿದರು. ಶುಕ್ರವಾರದಂದು ಸುಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಡಿ.ವಿ.ಸದಾನಂದ ಗೌಡ

ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ಮೋದಿಯವರಿಗೆ ನಾಚಿಗೆಯಾಗಬೇಕು ► ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ Read More »

ಕರ್ನಾಟಕ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11. ಇಲ್ಲಿನ ಕೊಯಿಲ ಗ್ರಾಮದ ಏಣಿತಡ್ಕದಲ್ಲಿ ಶಾಸಕರ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಸುಳ್ಯ ಶಾಸಕ ಎಸ್.ಅಂಗಾರ ವೀಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಏಣಿತಡ್ಕದ ನೂತನ ಸೇತುವೆ ಬಳಿಯಿಂದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ತನಕ ಸುಮಾರು 97 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಡಾಮಾರೀಕರಣ ನಡೆಯುತ್ತಿದೆ. ಇತ್ತೀಚೆಗೆ ಇದರ ಗುದ್ದಲಿ ಪೂಜೆ ನೇರವೇರಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಯಲ್ಲಿ ಶಾಸಕರು ಕಾಮಗಾರಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ Read More »

ಕರಾವಳಿ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »

ಕರಾವಳಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.11. ಪತ್ರಕರ್ತೆ ಗೌರಿ ಲಂಕೆಶ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್’ಐಟಿ ಬಲೆಗೆ ಶಂಕಿತ ಮೂವರು ಹಂತಕರು ಸಿಕ್ಕಿದ್ದಾರೆ ಎನ್ನಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಶಂಕಿತ ಹಂತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಗೋಪ್ಯ ಸ್ಥಳದಲ್ಲಿ ಕಳೆದ ಒಂದು ವಾರದಿಂದ ನಿರಂತರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ರೇಖಾಚಿತ್ರ ಹೋಲಿಕೆಯ ಮೇಲೆ ಶಂಕಿತರ ಮೂವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಳೆದ ವಾರ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ. ಭಾವಚಿತ್ರ ಹೋಲಿಕೆಯಿದ್ದ ಈ

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ Read More »

ಕರ್ನಾಟಕ

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.11. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲೆಂದು ಬರುತ್ತಿದ್ದ 108 ಆಂಬುಲೆನ್ಸ್ ಪಲ್ಟಿಯಾದ ಘಟನೆ  ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಮತ್ತು ಅರಟಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆಂಬುಲೆನ್ಸ್ ಅರಟಾಳ ಗ್ರಾಮದ ಗರ್ಭಿಣಿ ಮಹಿಳೆಯನ್ನು ಕರೆತರಲು ಬರುತ್ತಿದ್ದ ಸಂದರ್ಭದಲ್ಲಿ ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಮಧ್ಯೆ ಆಂಬುಲೆನ್ಸ್ ಪಲ್ಟಿಯಾಗಿದೆ. ಗರ್ಭಿಣಿಯನ್ನು ಕರೆತರಲು ಬರುತ್ತಿದ್ದಾಗ ಈ ಘಟನೆ ನಡೆದದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆಂಬುಲೆನ್ಸ್

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ನ.11. ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರುನಗರದಲ್ಲಿ ಇತ್ತೀಚೆಗೆ ನಡೆದ ಕನಸುಗಳು ಎಂಬ ಕಾರ್ಯಕ್ರಮದಲ್ಲಿ ಸರಸ್ವತೀ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ದೀಪಕ್.ಕೆ ಇವರು ಭಾಗವಹಿಸಿ ವರ್ಣ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಇವರು ಕಲ್ಲುಗುಡ್ಡೆ ನಿವಾಸಿ ಕಿಟ್ಟು ಅಜಿಲ ಮತ್ತು ವೆಂಕಮ್ಮ ದಂಪತಿಯ ಸುಪುತ್ರ.

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ Read More »

ಕರಾವಳಿ
Scroll to Top