News Kadaba

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಕಡಬ, ನ.8. ► ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳನ್ನು ತಯಾರಿಸುವ ಬಗ್ಗೆ ” ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಸರೋಳಿ ಹಾಗೂ ಸುಮಂತ್.ಕೆ ಸಂಶೋಧನೆ ನಡೆಸಿ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆಯಲ್ಲಿ ನಡೆದ “INSEF”- ಪ್ರಾದೇಶಿಕ ಮಟ್ಟದ ವಿಜ್ಙಾನಮೇಳದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ವಿಜ್ಞಾನ ಶಿಕ್ಷಕಿಯರಾದ ಪವಿತ್ರ ಹಾಗೂ ರಶ್ಮಿ ಸಹಕರಿಸಿದ್ದಾರೆ ಹಾಗೂ ಶಾಲಾ ಮುಖ್ಯಗುರು ಸತೀಶ್ ಭಟ್ […]

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ Read More »

ಕರಾವಳಿ

ನೆಟ್ಟಣ: ಪಾದಚಾರಿಗೆ ಬೈಕ್ ಢಿಕ್ಕಿ ► ಸವಾರರಿಬ್ಬರು ಸೇರಿ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.08. ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ನೆಟ್ಟಣ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಪಾದಚಾರಿ ಕಲ್ಲಾಜೆ 72 ಕಾಲನಿ ನಿವಾಸಿ ಮುತ್ತುವೀರನ್(72), ಬೈಕ್ ಸವಾರ ಬಾಲಸುಬ್ರಹ್ಮಣ್ಯ(36) ಹಿಂಬದಿ ಸವಾರೆ ಮಂಗಳಾದೇವಿ(34) ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿನ ಚೇತನಾ‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಟ್ಟಣ: ಪಾದಚಾರಿಗೆ ಬೈಕ್ ಢಿಕ್ಕಿ ► ಸವಾರರಿಬ್ಬರು ಸೇರಿ ಮೂವರಿಗೆ ಗಾಯ Read More »

ಕರಾವಳಿ

► ನಾಳೆ(ನ.09) ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ನವೆಂಬರ್ 09 ಗುರುವಾರದಂದು ನಗರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 8.55 ಗಂಟೆಗೆ ವಿಮಾನದ ಮೂಲಕ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ವಿವಿಧ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಗಂಟೆ 6.50 ಕ್ಕೆ ವಿಮಾನದ ಮೂಲಕ ಮುಂಬೈಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

► ನಾಳೆ(ನ.09) ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಂಗಳೂರಿಗೆ Read More »

ರಾಷ್ಟ್ರೀಯ ನ್ಯೂಸ್

ನೈರುತ್ಯ ಕ್ಷೇತ್ರದ ಮತದಾರರ ಕರಡು ಪಟ್ಟಿ ನ.21ರಂದು ಪ್ರಕಟ: ಅಪರ ಜಿಲ್ಲಾಧಿಕಾರಿ ► ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯು ನವೆಂಬರ್ 21ರಂದು ಪ್ರಕಟವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಮುಂದಿನ ವರ್ಷ ಜೂನ್‍ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ತಯಾರಿಸಲಾಗುತ್ತಿದೆ. ಈ ಹಿಂದಿನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ

ನೈರುತ್ಯ ಕ್ಷೇತ್ರದ ಮತದಾರರ ಕರಡು ಪಟ್ಟಿ ನ.21ರಂದು ಪ್ರಕಟ: ಅಪರ ಜಿಲ್ಲಾಧಿಕಾರಿ ► ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ Read More »

ಕರಾವಳಿ

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.08. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಪಾಣೆಮಂಗಳೂರಿನಿಂದ ಬೋಳಂಗಡಿಯ ನರಹರಿ ಪರ್ವತದವರೆಗೆ ಸಂಪೂರ್ಣ ಹದಗೆಟ್ಟ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿದ್ದು, ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪಾಣೆಮಂಗಳೂರು ಸಾರ್ವಜನಿಕ ಹಿತಾಸಕ್ತಿ ವೇದಿಕೆಯ ವತಿಯಿಂದ ದ.ಕ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ರವರಿಗೆ ಮಂಗಳವಾರದಂದು ಮನವಿ ಸಲ್ಲಿಸಲಾಯಿತು. ರಸ್ತೆಯ ಅಗಲೀಕರಣದ ಹಿನ್ನೆಲೆಯಲ್ಲಿ ರಸ್ತೆಯ ಬದಿಯಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದ್ದರೂ, ಸಂಪೂರ್ಣವಾಗಿ ಇನ್ನೂ ತೆರವು ಮಾಡಿಲ್ಲ. ಅಲ್ಲದೇ,

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ Read More »

ಕರಾವಳಿ

ಭಾರತ – ನ್ಯೂಝಿಲೆಂಡ್ ಟ್ವೆಂಟಿ-20 ಸರಣಿ ಪಂದ್ಯ ► 6 ರನ್‌ಗಳ ಜಯದೊಂದಿಗೆ ಸರಣಿ ಗೆದ್ದ ಭಾರತ

(ನ್ಯೂಸ್ ಕಡಬ) newskadaba.com ತಿರುವನಂತಪುರ, ನ.07. ನ್ಯೂಝಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಭಾರತ 6 ರನ್‌ಗಳ ಜಯ ಗಳಿಸಿದ್ದು, 2-1 ಅಂತರದಲ್ಲಿ ವಿಜಯದ ನಗೆ ಬೀರಿದೆ. ಇಲ್ಲಿನ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಇಂದು ನಡೆದ ಟ್ವೆಂಟಿ-20 ಪಂದ್ಯವನ್ನು ಭಾರೀ ಮಳೆಯಿಂದಾಗಿ ತಲಾ 8 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು. ಟಾಸ್ ಜಯಿಸಿದ ನ್ಯೂಝಿಲೆಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡು ಗೆಲುವಿಗೆ 68 ರನ್ ಗಳ ಸವಾಲನ್ನು ಪಡೆದು ನಿಗದಿತ 8 ಓವರ್ ಗಳಲ್ಲಿ 6 ವಿಕೆಟ್

ಭಾರತ – ನ್ಯೂಝಿಲೆಂಡ್ ಟ್ವೆಂಟಿ-20 ಸರಣಿ ಪಂದ್ಯ ► 6 ರನ್‌ಗಳ ಜಯದೊಂದಿಗೆ ಸರಣಿ ಗೆದ್ದ ಭಾರತ Read More »

ಕ್ರೀಡಾ ನ್ಯೂಸ್

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07, ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರ ಅನುಮಾನಾಸ್ಪದ ಸಾವಿಗೆ ಕಾರ್ಬನ್‌ ಮಾನಾಕ್ಸೈಡ್ ಕಾರಣ ಎಂದು ತಿಳಿದುಬಂದಿದೆ. ಕೋಟೆಕಾರು ಶಾಖೆಯ ಭದ್ರತಾ ಸಿಬ್ಬಂದಿಗಳಾದ ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂಬವರು ಸೋಮವಾರದಂದು ಗುಡುಗು ಮಳೆ ಇದ್ದ ಹಿನ್ನೆಲೆಯಲ್ಲಿ ಜನರೇಟರ್ ಚಾಲನೆ ಮಾಡಿ ಫ್ಯಾನ್ ಹಾಕಿ‌ ಶಾಖೆಯ ಒಳಗಡೆ ಮಲಗಿದ್ದು, ಜನರೇಟರ್ ನ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ‌. ಈ ಬಗ್ಗೆ ಶಾಖೆಯ ಸಿಸಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ Read More »

ಕರಾವಳಿ

Oppo F3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ ► ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.7.  ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ. ದರದಲ್ಲಿ ಮಾರಾಟವಾಗುತ್ತಿದೆ. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ದರ ಕಡಿತ ಮಾರಾಟವಿದ್ದು, ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ ಇರಲಿದೆ. 6 ಇಂಚಿನ ಸ್ಕ್ರೀನ್

Oppo F3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ ► ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ Read More »

ತಂತ್ರಜ್ಞಾನ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.6. ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು ಜಿಲ್ಲೆಯಾದ್ಯಂತ ಜಾತ್ಯಾತೀತ ಜನತಾದಳ ಪ್ರಬಲವಾಗಿ ಬಲವರ್ಧನೆಯಾಗುತ್ತಿದೆ. ಬಿಜೆಪಿ ಕಾಂಗ್ರೆಸ್ನಲ್ಲಿ ಭ್ರಮನಿರಸನಗೊಂಡಿರುವ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಹೇಳಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಆದಿತ್ಯವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯದ್ ಮೀರಾ ಸಾಹೇಬ್, ಬೇರೆ ಬೇರೆ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ Read More »

ಕರಾವಳಿ

ಕಾರ್ಕಳ: ಆವರಣವಿಲ್ಲದ 20 ಅಡಿ ಆಳದ ಬಾವಿಗೆ ಬಿದ್ದ ಕಾಡುಕೋಣ ► ಸ್ಥಳೀಯರಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ನ.7. ಆವರಣ ಇಲ್ಲದ ಬಾವಿಯೊಂದಕ್ಕೆ ಕಾಡು ಕೋಣವೊಂದು ಬಿದ್ದ ಘಟನೆ ಈದು ಗ್ರಾಮದಲ್ಲಿ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ಈದು ಪರಿಸರದ ಮಲಂಜ ಆನಂದ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಸುಮಾರು 20 ಅಡಿ ಆಳದ ಬಾವಿಯೊಳಗಿನಿಂದ ಪ್ರಾಣಿಯೊಂದರ ಕೂಗು ಕೇಳಿ ಬಂದ ಹಿನ್ನಲೆಯಲ್ಲಿ  ಹೋಗಿ ನೋಡಿದಾಗ ಕಾಡುಕೋಣ ಬಾವಿಯಲ್ಲಿರುವುದು ಬೆಳಕಿಗೆ ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿ ಜೆಸಿಬಿ ಮೂಲಕ ಬಾವಿಗೆ ಕಣಿ ತೋಡಿ ಕಾಡು ಕೋಣವನ್ನು ರಕ್ಷಿಸಿದರು.

ಕಾರ್ಕಳ: ಆವರಣವಿಲ್ಲದ 20 ಅಡಿ ಆಳದ ಬಾವಿಗೆ ಬಿದ್ದ ಕಾಡುಕೋಣ ► ಸ್ಥಳೀಯರಿಂದ ರಕ್ಷಣೆ Read More »

ಕರಾವಳಿ
Scroll to Top