News Kadaba

ಕ್ಯಾನ್ಸರ್ ಪೀಡಿತ ಕಡಬದ ಬಾಲೆ ► ಬೇಕಿದೆ ದಾನಿಗಳ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಅ. 23. ಹೃದ್ರೋಗ ಮತ್ತು ಕ್ಯಾನ್ಸರ್‌ನಿಂದ ಬಳಲುತ್ತಿರುವ 11 ವರ್ಷದ ಬಾಲಕಿ ಶಹನಾಝ್ ಳ ಚಿಕಿತ್ಸೆಗೆ ಇದೀಗ ದಾನಿಗಳ ಸಹಾಯಹಸ್ತ ಬೇಕಾಗಿದೆ‌. ಪುತ್ತೂರು ತಾಲೂಕಿನ ಕೋಡಿಂಬಾಳ ಗ್ರಾಮದ ಕಡಬ ಸಮೀಪದ ಕಲ್ಲಂತಡ್ಕ ಕುತ್ಯಾಡಿ ಎಂಬಲ್ಲಿ ವಾಸವಿರುವ ಇಸಾಕ್ ಹಾಗೂ ತಾಜುನ್ನಬಿ ದಂಪತಿಯ ಪುತ್ರಿ ಶಹನಾಝ್ ಹೃದ್ರೋಗ ಮತ್ತು ರಕ್ತದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಈ ಬಾಲಕಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಹನಾಝ್ ಪೆರ್ಲದ ಶಾಲೆಯಲ್ಲಿ 5ನೆ ತರಗತಿಯಲ್ಲಿ […]

ಕ್ಯಾನ್ಸರ್ ಪೀಡಿತ ಕಡಬದ ಬಾಲೆ ► ಬೇಕಿದೆ ದಾನಿಗಳ ಸಹಾಯಹಸ್ತ Read More »

ಕರಾವಳಿ

ಕರಾವಳಿ ಕಾಂಗ್ರೆಸ್ ನಾಯಕರ ಕಚ್ಚಾಟ ಮುಖ್ಯಮಂತ್ರಿಯ ಸಮ್ಮುಖದಲ್ಲಿ ಸ್ಪೋಟ ► ನೂಕಾಟ ತಳ್ಳಾಟಕ್ಕೆ ಸುಸ್ತಾದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.22. ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಕಾಂಗ್ರೆಸ್ ನಾಯಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ಐವನ್ ಡಿಸೋಜಾ ಮತ್ತು ಅಭಯಚಂದ್ರ ಜೈನ್ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಿನಲ್ಲೇ ತಳ್ಳಾಟ ನಡೆದಿದೆ. ಮುಖ್ಯಮಂತ್ರಿಯವರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿ ಪಕ್ಕ ನಿಲ್ಲಲು ಇಬ್ಬರು ನಾಯಕರು ಪೈಪೋಟಿ ನಡೆಸಿದರು. ಈ ಸಂದರ್ಭದಲ್ಲಿ ಐವನ್ ಡಿ ಸೋಜಾ ಅವರನ್ನು ಅಭಯಚಂದ್ರ ಜೈನ್ ತಳ್ಳಿದ್ದಾರೆ. ಮೂಡಬಿದ್ರೆ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯ ಟಿಕೆಟ್

ಕರಾವಳಿ ಕಾಂಗ್ರೆಸ್ ನಾಯಕರ ಕಚ್ಚಾಟ ಮುಖ್ಯಮಂತ್ರಿಯ ಸಮ್ಮುಖದಲ್ಲಿ ಸ್ಪೋಟ ► ನೂಕಾಟ ತಳ್ಳಾಟಕ್ಕೆ ಸುಸ್ತಾದ ಪೊಲೀಸರು Read More »

ಕರಾವಳಿ

ಸುಬ್ರಹ್ಮಣ್ಯ: ಟೆಂಪೊ ಟ್ರಾವೆಲ್ಲರ್ – ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ► ಮೂವರಿಗೆ ಗಾಯ, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.22. ಟೆಂಪೊ ಟ್ರಾವೆಲ್ಲರ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ಯಲಹಂಕದ ಸೌಮ್ಯ(36), ಗಂಗಮ್ಮ(84) ಗಂಭೀರ ಗಾಯಗೊಂಡಿದ್ದು, ಪೂರ್ಣಿಮಾ(34) ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಸುಬ್ರಹ್ಮಣ್ಯ: ಟೆಂಪೊ ಟ್ರಾವೆಲ್ಲರ್ – ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ► ಮೂವರಿಗೆ ಗಾಯ, ಇಬ್ಬರು ಗಂಭೀರ Read More »

ಕರಾವಳಿ

ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಶನಿವಾರದಂದು ನಡೆದಿದೆ. ಬೆಂಗಳೂರು ವಿಘ್ನೇಶ್ವರ ನಗರ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಎನ್ನುವವರು ಮೃತಪಟ್ಟು,

ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು Read More »

ಕರಾವಳಿ

ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು

(ನ್ಯೂಸ್ ಕಡಬ) newskadaba.com ಕಡಬ, ಅ.21. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ನಡೆಸಲಾಗಿದೆಯೆಂದು ಆರೋಪಿಸಿ ಕಡಬದ ಪಂಚಾಯತ್ ಬಿಲ್ಡಿಂಗ್ ನಲ್ಲಿರುವ ಗಣೇಶ್ ಮೊಬೈಲ್ ಸೆಂಟರ್‌ನ ನೌಕರ ಪ್ರದೀಪ್ ಎಂಬವರ ಮೇಲೆ ಕಡಬದ ವಿವಿಧ ಮುಸ್ಲಿಂ ಸಂಘಟನೆಗಳ ವತಿಯಿಂದ ಕಡಬ ಪೊಲೀಸ್‌ ಠಾಣೆಗೆ ದೂರು ನೀಡಲಾಯಿತು. ಕಡಬ ಪರಿಸರದ ಎಲ್ಲಾ ಮಸೀದಿಗಳು, ಎಸ್ಕೆಎಸ್ಸೆಸ್ಸೆಫ್, ಎಸ್ಸೆಸ್ಸೆಫ್, ಪಿಎಫ್ಐ ಕಡಬ ವಲಯ ಮೊದಲಾದವುಗಳಿಂದ ಹಲವು ದೂರುಗಳನ್ನು ನೀಡಲಾಯಿತು. ಪ್ರದೀಪ್ ಕಾಬಾದ ಫೊಟೋವನ್ನು

ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು Read More »

ಕರಾವಳಿ

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ ► ವಾಹನ ಸಹಿತ ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.21. ಸುಮಾರು 300 ಕೆ.ಜಿ. ಗೋಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇನ್ನೋರ್ವ ಪರಾರಿಯಾದ ಘಟನೆ ಶನಿವಾರದಂದು ನಡೆದಿದೆ. ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದಾಗ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹೊಳೆನರಸೀಪುರದ ಆನಂದ ಎಂಬಾತನನ್ನು ಬಂಧಿಸಿ ವಾಹನ ಸಹಿತ ಗೋಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನೋರ್ವ ಆರೋಪಿ ಹಾಸನದ ನಾಗರಾಜ್ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ ► ವಾಹನ ಸಹಿತ ಓರ್ವ ವಶಕ್ಕೆ Read More »

ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸಿದ ಪ್ರಕರಣ ► ಕಡಬದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಕಡಬ, ಅ.21. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ನಡೆಸಲಾಗಿದೆಯೆಂದು ಕಡಬದ ಪಂಚಾಯತ್ ಬಿಲ್ಡಿಂಗ್ ನಲ್ಲಿರುವ ಗಣೇಶ್ ಮೊಬೈಲ್ ಅಂಗಡಿಯ ನೌಕರ ಪ್ರದೀಪ್ ಎಂಬವರ ಮೇಲೆ ಎಸ್ಕೆಎಸ್ಸೆಸ್ಸೆಫ್ ಕಡಬ ವಲಯದ ವತಿಯಿಂದ ಕಡಬ ಪೊಲೀಸ್‌ ಠಾಣೆಗೆ ದೂರು ನೀಡಲಾಯಿತು. ಪ್ರದೀಪ್ ಕಾಬಾದ ಫೊಟೋವನ್ನು ತಿರುಚಿ ತನ್ನ 9741469893 ಸಂಖ್ಯೆಯ ವಾಟ್ಸಪ್ ಪ್ರೊಫೈಲ್ ಫೊಟೊವನ್ನಾಗಿ ಉಪಯೋಗಿಸಿ ಮಕ್ಕಾವನ್ನು ಅವಮಾನಿಸುವ ಕೃತ್ಯವನ್ನು ಮಾಡಿದ್ದಲ್ಲದೆ ಮುಸ್ಲಿಮರ ಭಾವನೆಯನ್ನು ಕೆರಳಿಸುವಂತಹ

ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸಿದ ಪ್ರಕರಣ ► ಕಡಬದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಅ.21. ಟೈಲ್ಸ್ ಲಾರಿ ಪಲ್ಟಿಯಾಗಿ 11 ಜನ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದ ಹೊರವಲಯದ ಸಾಂಗ್ಲಿಯ ಟಸ್ಗಾನ್-ಕವಾಥೆ ಮಹನ್ಕಾಲ್ ರಸ್ತೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮೃತ ದುರ್ದೈವಿಗಳನ್ನು ಮೂಲತಃ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಇಂದಿರಾಬಾಯಿ ನಿಂಬಾಳಕರ (30), ಪರಶುರಾಮ ಪೂಜಾರಿ (30), ಬಸಮ್ಮ ಪೂಜಾರಿ (25), ರೂಪೇಶ್ (25), ಸಂತೋಷ (19), ಅಶೋಕ್ ಬಿರಾದಾರ (50), ಲಕ್ಷ್ಮಿ ಬಾಯಿ ಮಾದರ (30), ಲಕ್ಷ್ಮಣ ಮಾದರ

ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ Read More »

ಕರ್ನಾಟಕ

ವಿಟ್ಲದಲ್ಲೊಂದು ಹನಿಟ್ರ್ಯಾಪ್ ಪ್ರಕರಣ ► ಯುವಕನಿಗೆ ಹಲ್ಲೆಗೈದು ಕಾರು, ನಗದು, ಚಿನ್ನಾಭರಣ ದರೋಡೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ.21. ಯುವಕನೋರ್ವನ ಮೇಲೆ ಹಲ್ಲೆ‌ ನಡೆಸಿ ಸ್ವತ್ತುಗಳನ್ನು ದರೋಡೆಗೈದ ಘಟನೆ ಶನಿವಾರ ಮುಂಜಾನೆ ವಿಟ್ಲ ಸಮೀಪದ ಕುಡ್ತಮೊಗೇರು ಎಂಬಲ್ಲಿ ನಡೆದಿದೆ. ಹನೀಫ್ ಎಂಬಾತನೇ ತಂಡದಿಂದ ಹಲ್ಲೆಗೊಳಗಾದ ಯುವಕ. ಕುಡ್ತಮೊಗೇರು ಫ್ಲ್ಯಾಟ್ ನಲ್ಲಿ ಮುಂಜಾನೆ ಮೂರು ಗಂಟೆ ಸುಮಾರಿಗೆ ತಂಡವೊಂದು ಹಲ್ಲೆ ನಡೆಸಿ ಹನೀಫ್ ಬಳಿಯಿದ್ದ ಸ್ವಿಫ್ಟ್ ಕಾರು, ಐದು ಪವನ್ ಚಿನ್ನಾಭರಣ ಹಾಗೂ ನಗದು ಹಣದೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾಗಿರುವ ಹನೀಫ್ ನನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲದಲ್ಲೊಂದು ಹನಿಟ್ರ್ಯಾಪ್ ಪ್ರಕರಣ ► ಯುವಕನಿಗೆ ಹಲ್ಲೆಗೈದು ಕಾರು, ನಗದು, ಚಿನ್ನಾಭರಣ ದರೋಡೆ Read More »

ಕರಾವಳಿ

ಕೊಂಬಾರು: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರು ಸುಂಕದಕಟ್ಟೆ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು

ಕೊಂಬಾರು: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಇಬ್ಬರು ಗಂಭೀರ Read More »

ಕರಾವಳಿ
Scroll to Top