ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ
(ನ್ಯೂಸ್ ಕಡಬ) newskadaba.com ಕಡಬ, ಅ.17. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತ ಕಡೆಗಣನೆ ನಡೆಯುತ್ತಿದೆ. ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದ್ದಾರೆ. ಅವರು ಅಲಂಕಾರು ರೈತ ಭವನದಲ್ಲಿ ಭಾನುವಾರ ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. […]








