News Kadaba

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!!

(ನ್ಯೂಸ್ ಕಡಬ) newskadaba.com ಉಳ್ಳಾಲ ,ಅ.12. ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ  ದ್ವಿಚಕ್ರ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕಟಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಯುವಕನ್ನು ಬೆಳ್ತಂಗಡಿ ಮೂಲದ ಸಲೀಂ(30) ಕೇ.ಸಿ.ರೋಡ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದ ಸ್ಟಾಂಡ್ ಹಾಕಿ ವಾಹನ ಚಲಿಸಿದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ. ಮೃತನ ದ್ವಿಚಕ್ರ ವಾಹನದಲ್ಲಿ ಎರಡು ಪ್ಯಾಕೆಟ್ ಗಾಂಜ ಪತ್ತೆಯಾಗಿದ್ದು ಈತ ಗಾಂಜ ಸೇವಿಸಿ ವಾಹನ ಚಲಾಯಿಸಿದ್ದಾನೆಯೇ ಎಂಬುದು ಇನ್ನು ನಿಖರವಾಗಿ ತಿಳಿದು ಬಂದಿಲ್ಲ. […]

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!! Read More »

ಕರಾವಳಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.12. ಇತ್ತಿಫಾಕ್ ಮೀಲಾದ್ ಕಮಿಟಿ ಜೋಗಿಬೆಟ್ಟು, ಗಡಿಯಾರ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್, ಮಂಗಳೂರು ಇದರ ಸಹಯೋಗದೊಂದಿಗೆ  ಉಚಿತ ವೈದ್ಯಕೀಯ ಶಿಬಿರವು ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ  ಇತ್ತೀಚೆಗೆ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಾಜದಲ್ಲಿನ ಬಡ-ನಿರ್ಗತಿಕರ ಆರೋಗ್ಯವನ್ನು ಕಾಪಾಡುವಲ್ಲಿ ಯುವಕರು ಸಂಘಟಿತರಾಗಿ ಉಚಿತ ವೈದ್ಯಕೀಯ ಶಿಬಿರ ನಡೆಸುವುದರೊಂದಿಗೆ, ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ Read More »

ಕರಾವಳಿ

ಜನವರಿ 1 ರಿಂದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ► ನೂತನವಾಗಿ ಆರಂಭವಾಗಲಿದೆ 246 ಕ್ಯಾಂಟೀನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳು ಮಾತ್ರವಲ್ಲದೆ, ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣ ಪ್ರದೇಶಗಳಲ್ಲೂ ಬೆಂಗಳೂರು ಮಾದರಿಯಲ್ಲಿಯೇ 2018 ರ ಜ.1 ರಿಂದ ‘ಇಂದಿರಾ ಕ್ಯಾಂಟೀನ್’ ಪ್ರಾರಂಭಿಸಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಬಡ-ಕೂಲಿ ಕಾರ್ಮಿಕರಿಗೆ ರಿಯಾಯಿತಿ ದರದಲ್ಲಿ ಆಹಾರ ಒದಗಿಸುವ ಮಹತ್ವದ ಈ ಯೋಜನೆಯ ಅನುಷ್ಠಾನಕ್ಕೆ ನವೆಂಬರ್

ಜನವರಿ 1 ರಿಂದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ► ನೂತನವಾಗಿ ಆರಂಭವಾಗಲಿದೆ 246 ಕ್ಯಾಂಟೀನ್ Read More »

ಕರ್ನಾಟಕ

ಕಲ್ಲಂತ್ತಡ್ಕ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ► ಉತ್ತಮ ಪೌಷ್ಟಿಕ ಆಹಾರಕ್ಕೆ ಬಹುಮಾನ

(ನ್ಯೂಸ್ ಕಡಬ) newskadaba.com ಕಡಬ,ಅ.12. ಇಲ್ಲಿನ  ಕಲ್ಲಂತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕಾ ಆಹಾರ ಸಪ್ತಾಹ ಹಾಗೂ ಮಾತೃಪೂರ್ಣ ಯೋಜನೆ ಇತ್ತೀಚೆಗೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮಾರಾಮದಾಸ್ ಮಾತೃಪೂರ್ಣ ಯೋಜನೆ ಹಾಗೂ ಪೌಷ್ಟಿಕಾ ಆಹಾರದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ, ಕಿ.ಆರೋಗ್ಯ ಸಹಾಯಕಿ ಬಿ.ಬಿ.ಅನ್ನಮ್ಮ, ಆಶಾಕಾರ್ಯಕರ್ತೆ ನಿತ್ಯಾಲತಾ ಹಾಗೂ ಹಿರಿಯ ನಾಗರಿಕ ಮಹಿಳೆ ಅರುಣಾ ಸೇರಿದಂತೆ ಸ್ರೀಶಕ್ತಿ ಸದಸ್ಯೆಯರು. ಗರ್ಭಿಣಿಯರು , ಬಾಣಂತಿಯರು, ಕಿಶೋರಿಯರು,

ಕಲ್ಲಂತ್ತಡ್ಕ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ► ಉತ್ತಮ ಪೌಷ್ಟಿಕ ಆಹಾರಕ್ಕೆ ಬಹುಮಾನ Read More »

ಕರಾವಳಿ

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 102ನೇ ನೆಕ್ಕಿಲಾಡಿ ಗ್ರಾಮದ ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆಯ ಕಾಂಕ್ರಿಟಿಕರಣವನ್ನು ಮಂಗಳವಾರ ಉದ್ಘಾಟಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಗ್ರಾ.ಪಂ.ಸದಸ್ಯ ಸುಲೈಮಾನ್ ಪಿ., ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ದಾಮೋದರ

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ Read More »

ಕರಾವಳಿ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ,ಅ.11.  ಆನ್‍ಲೈನ್ ನಲ್ಲಿ ದುಬಾರಿ ಬೆಲೆಯ ಮೊಬೈಲ್ ಫೋನ್ ಬುಕ್ ಮಾಡಿ, ಬಳಿಕ ತನಗೆ ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ  ಚೋಪ್ರಾ  ( 21) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, ಬೇರೆಯವರಿಗೆ ಮಾರಾಟ ಮಾಡಿ, ಬಳಿಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!! Read More »

ರಾಷ್ಟ್ರೀಯ ನ್ಯೂಸ್

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ,ಅ.11. ಹಿಂದೂ ಜಾಗರಣಾ ವೇದಿಕೆ ಹಾಗೂ ವಿಶ್ವಹಿಂದು ಪರಿಷತ್ ಬಜರಂಗದಳವು ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ತಾಲೂಕಿನಾದ್ಯಂತ ಬುಧವಾರ ಪ್ರತಿಭಟನೆ ನಡೆಸಿತು. ಕಡಬ ಬಸ್ ನಿಲ್ದಾನದ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ರಾವ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುಗಳ ಮೇಲಿನ ದಬ್ಬಾಳಿಕೆ ಹೆಚ್ಚಾಗಿದೆ. ಹಿಂದು ಸಂಘಟನೆಯ ನಾಯಕರ, ಕಾರ್ಯಕರ್ತರ ಮೇಲೆ ಕೊಲೆ ಕೇಸುಗಳನ್ನು ಹಾಕಿಸಿ ಹಿಂದು ಚಳುವಳಿಗಳನ್ನು ಹತ್ತಿಕ್ಕುವ

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಮರ್ದಾಳ: ಶ್ರೀಮಹಾಲಿಂಗೇಶ್ವರ ದೇವಸ್ಥಾನ ► ಹುಂಡಿ ಅಕ್ಕಿ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಹುಂಡಿ ಅಕ್ಕಿ ಸಮರ್ಪಣೆ ಹಾಗೂ ಜೀರ್ಣೋದ್ಧಾರದ ಕುರಿತ ಭಕ್ತಾಧಿಗಳ ಸಭೆ ನಡೆಯಿತು. ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪ್ರತಿ ಮನೆಯಲ್ಲಿ ಪ್ರತಿ ದಿನ ಒಂದು ಹುಂಡಿ ಅಕ್ಕಿ ಸಂಗ್ರಹಿಸಿ ತಿಂಗಳ ಹುಣ್ಣಿಮೆಯಂದು ದೇವಸ್ಥಾನಕ್ಕೆ ಸಮರ್ಪಿಸಲು ತಿರ್ಮಾನಿಸಲಾಗಿದ್ದು ಅದರಂತೆ ಮೊದಲ ತಿಂಗಳ ಹುಂಡಿ ಅಕ್ಕಿಯನ್ನು ಜೀರ್ಣೋದ್ಧಾರದ ಕುರಿತ ಭಕ್ತಾಧಿಗಳ ಸಭೆಯಲ್ಲಿ ಸಮರ್ಪಣೆ ಮಾಡಲಾಯಿತು. ಬಳಿಕ ನಡೆದ ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೋಕ್ತೆಸರರಾದ ಸನತ್ ಕುಮಾರ್

ಮರ್ದಾಳ: ಶ್ರೀಮಹಾಲಿಂಗೇಶ್ವರ ದೇವಸ್ಥಾನ ► ಹುಂಡಿ ಅಕ್ಕಿ ಸಮರ್ಪಣೆ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪರ್ಯಾಯದಲ್ಲಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಫಲ,ಪುಷ್ಪ ಕಾಣಿಕೆಗಳನ್ನು ಸಮರ್ಪಿಸಿ ಆಶೀರ್ವಾದ ಪಡೆದುಕೊಳ್ಳಲಾಯಿತು. ಒಕ್ಕಲಿಗ ಗೌಡ ಸೇವಾ ಸಂಘದ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಪ್ಪ ಗೌಡ ಕೆದಂಬಾಡಿ, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಾ ವಳೆಂಜ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಒಕ್ಕೂಟದ ಅಧ್ಯಕ್ಷ ಜನಾರ್ದನ ಗೌಡ ಬಾಂತೊಟ್ಟು, ಕುಂಡಾಜೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ,

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ Read More »

ಕರಾವಳಿ

ಜಿಲ್ಲಾ ಮಟ್ಟದ ಕ್ರೀಡಾಕೂಟ ► ಗುಂಡು ಎಸೆತದಲ್ಲಿ ಮರ್ದಾಳದ ಬ್ಯೂಲ ತೋಮಸ್ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿದ ಮರ್ದಾಳದ ಬ್ಯೂಲ ತೋಮಸ್ ದ್ವೀತಿಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮೂಡಬಿದ್ರೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ಮರ್ದಾಳ ತುಂಬ್ಯ ಪಾರಶೇರಿಲ್ ತೋಮಸ್ ಮತ್ತು ಗ್ರೇಸಿ ತೋಮಸ್ರವರ ಪುತ್ರಿ.

ಜಿಲ್ಲಾ ಮಟ್ಟದ ಕ್ರೀಡಾಕೂಟ ► ಗುಂಡು ಎಸೆತದಲ್ಲಿ ಮರ್ದಾಳದ ಬ್ಯೂಲ ತೋಮಸ್ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್
Scroll to Top