News Kadaba

ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಅ.9. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಕ್ಟೋಬರ್.18 ರಂದು ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ, ಹಾಗೂ ಧಾರ್ಮಿಕ  ಸಭೆಯು ನಡೆಯಲಿದೆ. ಬೆಳಿಗ್ಗೆ ಸಾಮೂಹಿಕ ಗೋಪೂಜೆ ಬಳಿಕ ನಡೆಯುವ ಕ್ರೀಡಾಕೂಟಕ್ಕೆ ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರಿ ಸಂಘದ ಮಹಾ ಪ್ರಬಂಧಕ ಪ್ರಶಾಂತ್ ಕುಮಾರ್ ರೈ ಬುಡಲೂರು ಚಾಲನೆ ನೀಡಲಿದ್ದಾರೆ. ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ […]

ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ Read More »

ಕರಾವಳಿ

ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!!

(ನ್ಯೂಸ್ ಕಡಬ) newskadaba.com ಭೋಪಾಲ್, ಅ.9. 45ಕ್ಕಿಂತ ಕಡಿಮೆ ವಯಸ್ಸಿನ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುವ ಹೊಸ ಯೋಜನೆಯೊಂದನ್ನು ಮಧ್ಯ ಪ್ರದೇಶ ಸರ್ಕಾರ ರೂಪಿಸಿದೆ. ವಿಧವೆಯರ ಬಾಳು ಬಂಗಾರವಾಗಲಿ ಎಂಬ ಉದ್ಧೇಶದೊಂದಿಗೆ ಈ ಯೋಜನೆಯನ್ನು ತರಲಾಗಿದೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದ್ದು, ಈ ಯೋಜನೆ ಅನುಷ್ಠಾನಗೊಂಡು ಬಳಿಕ ಪ್ರತಿ ವರ್ಷ ಒಂದು ಸಾವಿರ ವಿಧವೆಯರ ಬಾಳು ಬೆಳಗಲಿದೆ ಎಂದು ಸರಕಾರ ವಿಶ್ವಾಸ ವ್ಯಕ್ತಪಡಿಸಿದೆ. ವಿಧವಾ ಪುನರ್‌ ವಿವಾಹ ಪ್ರೋತ್ಸಾಹಿಸುವ ನೀತಿಯನ್ನು ರಚಿಸುವಂತೆ ಜುಲೈ ತಿಂಗಳಲ್ಲಿ

ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!! Read More »

ಕರ್ನಾಟಕ

ಮಂಗಳೂರು: ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ತಂಡಗಳ ಮಧ್ಯೆ ಮಾರಾಮಾರಿ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.9. ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಬಜಾಲ್ ಪರಿಸರದ ಪಕ್ಕಲಡ್ಕ ಎಂಬಲ್ಲಿ ಆದಿತ್ಯವಾರ ಸಂಜೆ ನಡೆದಿದೆ. ಡಿವೈಎಫ್‍ಐ ವತಿಯಿಂದ ಭಾನುವಾರ ಸೀಮಿತ ತಂಡಗಳ ವಾಲಿಬಾಲ್ ಪಂದ್ಯ ನಡೆಯುತ್ತಿತ್ತು. ಸಂಜೆ ಹೊತ್ತಿಗೆ ಫೈನಲ್ ಪಂದ್ಯ ನಡೆಯುತ್ತಿದ್ದಾಗ ಒಮ್ಮಿಂದೊಮ್ಮೆಲೆ ಹೊಡೆದಾಟ ನಡೆದಿದೆ. ವಾಲಿಬಾಲ್ ನೋಡಲು ಬಂದಿದ್ದ ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ವಾಲಿಬಾಲ್ ತಂಡಕ್ಕೂ ಇದಕ್ಕೂ ಸಂಬಂಧವಿಲ್ಲ, ವೈಯಕ್ತಿಕ ದ್ವೇಷದಿಂದ ಈ ಹೊಡೆದಾಟ ನಡೆದಿದೆ

ಮಂಗಳೂರು: ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ತಂಡಗಳ ಮಧ್ಯೆ ಮಾರಾಮಾರಿ Read More »

ಕರಾವಳಿ

ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.09. ಒಂಟಿ ವೃದ್ಧರನ್ನು ತನ್ನ ಮಾತಿನ ಮೋಡಿಯಿಂದ ವಂಚಿಸಿ ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯೋರ್ವನನ್ನು ಪುತ್ತೂರು ನಗರ ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮರಾಠಿಮೂಲೆ ನಿವಾಸಿ ಸುರೇಶ್ ನಾಯ್ಕ(51) ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಸುಮಾರು 1.70 ಲಕ್ಷ ರೂ.ವೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ‌. ಆರೋಪಿಯು ವೃದ್ಧರನ್ನೇ ಗುರಿಯಾಗಿರಿಸಿ ಅವರೊಂದಿಗೆ ಪರಿಚಯಸ್ಥನಂತೆ ನಟಿಸಿ, ನಂಬಿಕೆ ಹುಟ್ಟಿಸಿ ಬಳಿಕ ಅವರಿಂದ ಬೆಲೆ ಬಾಳುವ ಸೊತ್ತುಗಳನ್ನು ಎಗರಿಸುತ್ತಿದ್ದನೆನ್ನಲಾಗಿದೆ. ಪುತ್ತೂರು ಹಾಗೂ ಉಪ್ಪಿನಂಗಡಿ ಬಸ್ಸು

ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೆಡಿಎಸ್ ಪಕ್ಷದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯು ಒಕ್ಕಲಿಗ ಗೌಡ ಸಭಾ ಭವನದಲ್ಲಿ ಆದಿತ್ಯವಾರ ನಡೆಯಿತು. ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಆಡಳಿತದಿಂದ ಜನರು ನಿರಸನಗೊಂಡಿದ್ದು ಕೇವಲ ಅಧಿಕಾರಕ್ಕಾಗಿ 2ಪಕ್ಷಗಳು ರಾಜಕೀಯ ಮೇಲಾಟ ನಡೆಸುವುದನ್ನು ಬಿಟ್ಟಾರೆ ರೈತರ, ಜನಸಾಮಾನ್ಯರ, ಸಂಕಷ್ಟಗಳಿಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಜಿಲ್ಲೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು ಸೇರಿದಂತೆ ಹಲವಾರು ಜನರ ಕಗ್ಗೊಲೆ ನಡೆದರು ಉಸ್ತುವಾರಿ ಮಂತ್ರಿಗಳಿಂದ ಹಾಗೂ ಸಚಿವರಿಂದ ಜಿಲ್ಲೆಯ ಶಾಂತಿ ಕಾಪಾಡಲು

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ Read More »

ಕರಾವಳಿ

ಕಲ್ಲುಗುಡ್ಡೆ: ಮದ್ಯದಂಗಡಿ ಪುನರಾರಂಭ ► ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಕಡಬ, ಅ.08. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಮದ್ಯದಂಗಡಿಯನ್ನು ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ದ.ಕ. ಜಿಲ್ಲಾಧಿಕಾರಿ ಕಟ್ಟಡ ತೆರವಿಗೆ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಆರು ವಾರಗಳ ಕಾಲ ತಡೆಯಾಜ್ಞೆ ನೀಡಿದೆ. ಅದರಂತೆ ಭಾನುವಾರದಂದು ಮದ್ಯದಂಗಡಿ ತೆರೆಯಲಾಗಿದೆ‌. ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಹಲವು ದಿನಗಳ

ಕಲ್ಲುಗುಡ್ಡೆ: ಮದ್ಯದಂಗಡಿ ಪುನರಾರಂಭ ► ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ Read More »

ಕರಾವಳಿ

ಇಂದು ರಾತ್ರಿ ಕಡಬ ಅನುಗ್ರಹ ಸಭಾ ಭವನದಲ್ಲಿ ನೃತ್ಯ ವೈವಿಧ್ಯ ಕಾರ್ಯಕ್ರಮ ► ಹಿರಿಯ ಉದ್ಯಮಿ ಸಿ.ಫಿಲಿಪ್ ರವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ, ಅ.07. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೇಸಿ ಸಪ್ತಾಹ ಕಾರ್ಯಕ್ರಮ ಕದಂಬೋತ್ಸವ – 2017 ಸಮಾರೋಪ ಸಮಾರಂಭವು ಇಂದು ಸಂಜೆ ಕಡಬದ ಅನುಗ್ರಹ ಸಭಾ ಭವನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಹಿರಿಯ ಉದ್ಯಮಿ, ಕಡಬ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷರಾದ ಶ್ರೀ ಸಿ.ಫಿಲಿಪ್ ರವರಿಗೆ ಕದಂಬಶ್ರೀ – 2017 ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಂತರ ಆಲಂಕಾರು ದೇವಿ ನಗರದ ನಕ್ಷತ್ರ ಕಲಾ

ಇಂದು ರಾತ್ರಿ ಕಡಬ ಅನುಗ್ರಹ ಸಭಾ ಭವನದಲ್ಲಿ ನೃತ್ಯ ವೈವಿಧ್ಯ ಕಾರ್ಯಕ್ರಮ ► ಹಿರಿಯ ಉದ್ಯಮಿ ಸಿ.ಫಿಲಿಪ್ ರವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ Read More »

ಕರಾವಳಿ

ಖಾಸಗಿ ಶಾಲೆಗಳ ದುಬಾರಿ ಶುಲ್ಕ ಖಂಡಿಸಿ ► ತನ್ವೀರ್ ಸೇಠ್ ನಿವಾಸದ ಮೇಲೆ ಕರವೇ ಯುವ ಸೇನೆಯಿಂದ ಮುತ್ತಿಗೆ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ.7. ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಖಂಡಿಸಿ ಕರವೇ ಯುವ ಸೇನೆ ವತಿಯಿಂದ ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ನಿವಾಸದ ಬಳಿ  ಶನಿವಾರ ಪ್ರತಿಭಟನಾ ಧರಣಿ ನಡೆಸಿದರು.  ಈ ವೇಳೆ ಸಚಿವ ತನ್ವೀರ್ ಸೇಠ್ ನಿವಾಸದ ಮೇಲೆ ಮುತ್ತಿಗೆ ಹಾಕಿದ ಕರವೇ ಯುವ ಸೇನೆ ಕಾರ್ಯಕರ್ತರು ಅವರ ಮನೆಯಲ್ಲಿರುವ ಪಾಟ್ ಮತ್ತು ಕಿಟಕಿ ಗಾಜುಗಳನ್ನ ಒಡೆದಿದ್ದಾರೆ. ಪ್ರತಿಭಟನೆ ನಡೆಯುತ್ತಿದ್ದಂತೆಯೇ ಮನೆಯಿಂದ ಹೊರಬಂದ ಸಚಿವರು ಪ್ರತಿಭಟನಾಕಾರರ ಜೊತೆ ಮಾತನಾಡಿ, ಏಕಾಏಕಿ ಮನಗೆ ನುಗ್ಗೋದು ಪ್ರವೃತ್ತಿ

ಖಾಸಗಿ ಶಾಲೆಗಳ ದುಬಾರಿ ಶುಲ್ಕ ಖಂಡಿಸಿ ► ತನ್ವೀರ್ ಸೇಠ್ ನಿವಾಸದ ಮೇಲೆ ಕರವೇ ಯುವ ಸೇನೆಯಿಂದ ಮುತ್ತಿಗೆ Read More »

ಕರ್ನಾಟಕ

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ,ಅ.7. ಕಡಬ ಹೋಬಳಿ ಮಟ್ಟದ ಮಾಸಿಕ ಜನಸಂಪರ್ಕ ಸಭೆ ಸುಳ್ಯ ಶಾಸಕ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆಯಿತು. ನೂಜಿಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯನ್ನು ಮದ್ಯಮುಕ್ತ ಗ್ರಾಮವನ್ನಾಗಿಸಲು ಗ್ರಾ.ಪಂ.ಮೂಲಕ ನೀಡಿದ ಮನವಿಯನ್ನು ಪುರಸ್ಕರಿಸಿ ಮದ್ಯಮುಕ್ತ ಗ್ರಾಮವನ್ನಾಗಿಸಲು ನಿರ್ಣಯಿಸಿದ ಘಟನೆ, ಐತ್ತೂರು ಗ್ರಾಮದ ಕೇನ್ಯ ಎಂಬಲ್ಲಿ ಸುಂದರ ನಾಯ್ಕರಿಗೆ 94ಸಿಯಲ್ಲಿ ಹಕ್ಕುಪತ್ರ ನೀಡುವಂತೆ ಆಗ್ರಹ, ಕುಟ್ರುಪ್ಪಾಡಿ ಗ್ರಾಮಸಹಾಯಕ ಹೊನ್ನಪ್ಪ ಗೌಡರನ್ನು ವರ್ಗಾಯಿಸುವಂತೆ ಹಾಗೂ ವರ್ಗಾಯಿಸದಂತೆ ಪರವಿರೋಧ ಚರ್ಚೆ ನಡೆಯಿತಲ್ಲದೆ 94ಸಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ Read More »

ಕರಾವಳಿ

ಮರ್ದಾಳ: ಜೇಸಿಐ ವತಿಯಿಂದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ,ಅ.7. ಜೇಸಿಐ ಕಡಬ ಕದಂಬ ಇದರ ಕದಂಬೋತ್ಸವ 2017ರ ಪ್ರಯುಕ್ತ ಮರ್ದಾಳದಲ್ಲಿ ಸಾರ್ವಜನಿಕರಿಗೆ ಹಗ್ಗ ಜಗ್ಗಾಟ ಹಾಗೂ ಸ್ಲೋ ಬೈಕ್ ರೇಸ್ ಶುಕ್ರವಾರ ನಡೆಯಿತು. ಹರೀಶ್ ಕೋಡಿಬೈಲ್, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ಕ್ರೀಡಾಕೂಟಕ್ಕೆ ನೀಡಿದರು. ಈ ಸಂದರ್ಭದಲ್ಲಿ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಎಪಿಎಂಸಿ ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಸದಸ್ಯ ದಾಮೋದರ ಗೌಡ ಡೆಪ್ಪುಣಿ, ಪ್ರಮುಖರಾದ ಮೋಹನ ಗೌಡ ಪಂಜೋಡಿ, ಜೇಸಿಐ ಕಡಬ ಕದಂಬ ಇದರ

ಮರ್ದಾಳ: ಜೇಸಿಐ ವತಿಯಿಂದ ಕ್ರೀಡಾಕೂಟ Read More »

ಕರಾವಳಿ
Scroll to Top