News Kadaba

ಮಹಾಮಳೆಗೆ ಕೆರೆಯಂತಾದ ಬೆಂಗಳೂರು ರಸ್ತೆಗಳು ► ಮನೆಗಳಿಗೆ ನುಗ್ಗಿದ ನೀರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.02, ರಾತ್ರಿಯಿಡೀ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಯಶವಂತಪುರ, ಪೀಣ್ಯ, ಮಲ್ಲೇಶ್ವರಂ, ಮೆಜೆಸ್ಟಿಕ್, ಎಂಜಿ ರೋಡ್, ಶಾಂತಿನಗರ, ವಿಲ್ಸನ್ ಗಾರ್ಡನ್, ಕೋರಮಂಗಲ ಸೇರಿದಂತೆ ರಾಜ್ಯ ರಾಜಧಾನಿಯ ಹಲವೆಡೆ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯ ತುಂಬೆಲ್ಲಾ ಮೊಣಕಾಲುವರೆಗೂ ನೀರು ತುಂಬಿ ಜನ ಜೀವನ ಅಸ್ತವ್ಯಸ್ತ ಗೊಂಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮೆಜೆಸ್ಟಿಕ್‌ ಬಳಿಯ ರೈಲ್ವೆ ಸೇತುವೆಗಳಲ್ಲಿ 4ರಿಂದ 6 ಅಡಿಯಷ್ಟು ನೀರು ನಿಂತುಕೊಂಡಿತ್ತು. ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು […]

ಮಹಾಮಳೆಗೆ ಕೆರೆಯಂತಾದ ಬೆಂಗಳೂರು ರಸ್ತೆಗಳು ► ಮನೆಗಳಿಗೆ ನುಗ್ಗಿದ ನೀರು Read More »

ಕರ್ನಾಟಕ

ವಳಕಡಮದಲ್ಲಿ ಅಕ್ರಮ ಮದ್ಯಮಾರಾಟ ► ಅಂಗಡಿ ಮಾಲಿಕನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಠಾಣಾ ವ್ಯಾಪ್ತಿಯ ಪುತ್ತೂರು ತಾಲೂಕಿನ ಕೊೖಲ ಗ್ರಾಮದ ವಳಕಡಮ ಮೂರಾಜೆ ಎಂಬಲ್ಲಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಧ್ಯಪಾನಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಯಲ್ಲಿ ಅಂಗಡಿ ಮಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಕಡಬ ಎಸ್.ಐ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿ ವರ್ಗ ವಳಕಡಮದಲ್ಲಿ ಅಕ್ರಮ ಮದ್ಯಮಾರಾಟವಾಗುತ್ತಿದೆ ಎನ್ನುವ ಖಚಿತ ಮಾಹಿತಿ ಆಧಾರದಲ್ಲಿ ಮೇಲೆ ಧಾಳಿ ನಡೆಸಲು ಹೋದ ಸಂದರ್ಭದಲ್ಲಿ ಊರಾಜೆ ಗಣೇಶ ಎಂಬವರ ಅಂಗಡಿಯಲ್ಲಿ ವ್ಯಕ್ತಿಯೊಬ್ಬರು ಮದ್ಯಪಾನ ಮಾಡುತ್ತಿರುವುದು ಕಂಡು ಬಂದಿದೆ. ಪೋಲೀಸರು ದಾಳಿ ನಡೆಸುತ್ತಿದ್ದಂತೆ

ವಳಕಡಮದಲ್ಲಿ ಅಕ್ರಮ ಮದ್ಯಮಾರಾಟ ► ಅಂಗಡಿ ಮಾಲಿಕನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಅದೇ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಥಳಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಣಾಜೆ ಗ್ರಾಮದ ಮುಚ್ಚುರೋಡಿ ಗಿರೀಶ್ ಎಂಬವರ ಪುತ್ರ ಚೇತನ್ ಎಂಬ ಏಳನೇ ತರಗತಿಯ ವಿದ್ಯಾರ್ಥಿಗೆ ಅದೇ ಶಾಲಾ ಶಿಕ್ಷಕ ಅಜಿತ್ ಕುಮಾರ್ ಜೈನ್ ಎಂಬವರು ಗುರುವಾರ ಮರದ ಅಡಿಕೋಲು ಹಾಗೂ ಕೈಯಿಂದ ಥಳಿಸಿರುವುದಾಗಿ ಹೇಳಲಾಗಿದೆ. ಅಡಿಕೋಲಿನಿಂದ ತಲೆಗೆ ಎರಡು ಮೂರು ಕಡೆ ಹಲ್ಲೆ ನಡೆಸಿದ್ದು

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು Read More »

ಕರಾವಳಿ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ದೋಳ್ಪಾಡಿ ಗ್ರಾಮದ ಇಡ್ಯಡ್ಕ ಎಂಬಲ್ಲಿ ರಬ್ಬರ್ ಕಾರ್ಮಿಕನೋರ್ವ ಶೌಚಾಲಯದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕಂದಡ್ಕ ಪೆರಿಯಾಲ್ ಎಂಬವರ ಪುತ್ರ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಇಡ್ಯಡ್ಕ ತಿಮ್ಮಪ್ಪ ಗೌಡರ ರಬ್ಬರ ತೋಟದಲ್ಲಿ ಟ್ಯಾಪರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೆಲ್ವರಾಜ್ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿದ್ದರು. ಹತ್ತು ದಿನಗಳ ಹಿಂದೆ ಮನೆಗೆ ಹೋಗಿ ಬಂದಿದ್ದರು. ಎರಡು ದಿನಗಳ ಹಿಂದೆ ತನ್ನ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು Read More »

ಕರಾವಳಿ

ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ”

(ನ್ಯೂಸ್ ಕಡಬ) newskadaba.com ಕಡಬ,ಸೆ.02, ವಿಶ್ವಮಾನ್ಯ ಪೇಜಾವರ ಶ್ರೀಗಳ ಹುಟ್ಟೂರಾದ ರಾಮಕುಂಜದ ಗ್ರಾಮ ಪಂಚಾಯತಿಗೆ ರಾಜ್ಯ ಸರಕಾರದಿಂದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಗ್ರಾಮಗಳ ನೈರ್ಮಲ್ಯ ಮತ್ತು ಸಮಗ್ರ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವ ಮೂಲಕ ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಕರ್ನಾಟಕ ಸರಕಾರದಿಂದ ಗಾಂಧಿ ಜಯಂತಿ ಪ್ರಯುಕ್ತ ನೀಡುವ 2016-17 ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ಕ್ಕೆ ಕಳೆದ ವರ್ಷದಂತೆ ಈ ಬಾರಿ ಕೂಡ ಜಿಲ್ಲೆಯ ಪ್ರತಿ ತಾಲೂಕಿನ ಒಂದು ಗ್ರಾ.ಪಂ ಗೆ ಗಾಂಧಿ ಪುರಸ್ಕಾರ

ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ” Read More »

ಕರಾವಳಿ

ಗೃಹ ಸಚಿವರಾಗಿ ರಾಮಲಿಂಗರೆಡ್ಡಿ ನೇಮಕ ► ರಮಾನಾಥ ರೈಗೆ ತಪ್ಪಿದ ಗೃಹ ಖಾತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.01. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ಗೃಹ ಸಚಿವ ಸ್ಥಾನಕ್ಕೆ ಕೊನೆಗೂ ಅಂತಿಮ ಮುದ್ರೆ ಬಿದ್ದಿದೆ. ಗೃಹ ಸಚಿವ ಸ್ಥಾನಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರನ್ನು ವಹಿಸಲಾಗಿದ್ದು, ರಮಾನಾಥ ರೈಯವರು ಗೃಹ ಸಚಿವರಾಗುತ್ತಾರೆ ಎನ್ನುವ ಹಲವು ದಿನಗಳ ಊಹಾಪೋಹಗಳಿಗೆ ತೆರೆಬಿದ್ದಿದೆ. ನೂತನವಾಗಿ ಸಂಪುಟಕ್ಕೆ ಸೇರ್ಪಡೆಗೊಂಡ ಎಚ್.ಎಂ.ರೇವಣ್ಣ ಅವರಿಗೆ ಸಾರಿಗೆ ಖಾತೆ, ಆರ್.ಬಿ.ತಿಮ್ಮಾಪೂರ್ ಅವರಿಗೆ ಅಬಕಾರಿ ಖಾತೆ, ಗೀತಾ ಮಹದೇವ ಪ್ರಸಾದ್ ಅವರಿಗೆ ಸಕ್ಕರೆ, ಸಣ್ಣ ಕೈಗಾರಿಕೆ ರಾಜ್ಯ ಖಾತೆ

ಗೃಹ ಸಚಿವರಾಗಿ ರಾಮಲಿಂಗರೆಡ್ಡಿ ನೇಮಕ ► ರಮಾನಾಥ ರೈಗೆ ತಪ್ಪಿದ ಗೃಹ ಖಾತೆ Read More »

ಕರಾವಳಿ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಡಬ,ಸೆ.01, ಬೆಂಗಳೂರು: ಸ್ಕಾರ್ಪಿಯೋ ಹಾಗೂ ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಏರ್‍ ಪೋರ್ಟ್ ಬಳಿ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ. ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು. ಬೆಂಗಳೂರು ಏರ್‍ ಪೋರ್ಟ್ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋ ಹುಣಸಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೊಂದು ರಸ್ತೆಗೆ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ Read More »

ಕರ್ನಾಟಕ

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಇನ್ನು ಮುಂದೆ ತೀರ್ಥ ಯಾತ್ರೆಗೆ ತೆರಳುವ ಯಾತ್ರಿಗಳಿಗೆ ಕರ್ನಾಟಕ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಉತ್ತರಾಖಂಡ್‍ನ ಬದ್ರಿನಾಥ್, ಕೇದಾರ್‍ನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ತೀರ್ಥ ಯಾತ್ರೆಗೆ ಹೋಗುವ ಯಾತ್ರಿಗಳಿಗೆ ನೀಡಲಾಗುವ 20,000 ರೂ. ಸಹಾಯಧನದ ದುರ್ಬಳಕೆಯನ್ನು ತಡೆಗಟ್ಟುವ ಉದ್ದೇಶದೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆಗಸ್ಟ್ 17 ರಂದು ಚಾರ್ ಧಾಮ್ ಯಾತ್ರಿಗಳಿಗೆ ನೀಡಲಾಗುವ ಸಬ್ಸಿಡಿ ಬಗ್ಗೆ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಮಾರ್ಗಸೂಚಿಯಲ್ಲಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಅಂಶವನ್ನು ಸೇರಿಸಲಾಗಿದೆ. ಪ್ರತಿ

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…??? Read More »

ಕರಾವಳಿ

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.01, ರೈತರೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ರೈತನನ್ನು ಚಿಕ್ಕತಿಮ್ಮಯ್ಯ (45) ಎಂದು ಗುರುತಿಸಲಾಗಿದೆ. ಚಿಕ್ಕತಿಮ್ಮಯ್ಯ ಎಂದಿನಂತೆ ಗುರುವಾರ ಕೂಡ ತನ್ನ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ Read More »

ಕರಾವಳಿ

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01,  7 ವರ್ಷಗಳ ಹಿಂದೆ ಸಿಎಂ ಆಗಿದ್ದ ಕಾಲದಲ್ಲಿ ಬಾಲಕನೊಬ್ಬನನ್ನು ದತ್ತು ಪಡೆದು ಕೊನೆವರೆಗೂ ವಿದ್ಯಾಭ್ಯಾಸ ಕೊಡಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರವರು ಇದೀಗ ದತ್ತು ಬಾಲಕನ ಕೈ ಬಿಟ್ಟಿದ್ದಾರೆ. ಯಾದಗಿರಿ ಮೂಲದ ಬಸವರಾಜು ಮತ್ತು ಶಿವಮ್ಮ ದಂಪತಿಯ 10 ವರ್ಷದ ಮಗನನಾದ ವಿಶ್ವನಾಥ್ ನನ್ನು ಬಿಎಸ್‍ವೈ ದತ್ತು ಪಡೆದು ಬಾಲಕನ ಹೆಸರಿನಲ್ಲಿ ಒಂದು ಲಕ್ಷ ರೂಪಾಯಿ ಬ್ಯಾಂಕಿನಲ್ಲಿ ಡೆಪಾಸಿಟ್ ಮಾಡ್ತೀನಿ ಅಂತಾ ದೇವರ ಮುಂದೆ ಆಣೆ ಪ್ರಮಾಣ ಕೂಡ ಮಾಡಿದ್ದರು.

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..??? Read More »

ಕರ್ನಾಟಕ
Scroll to Top