News Kadaba

200, 50 ರೂ. ಹೊಸ ನೋಟು ಪಡೆಯಲು ಮುಗಿಬಿದ್ದ ಜನ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.28, ಗಣೇಶ ಹಬ್ಬದಂದು ಆರ್`ಬಿಐ ಬಿಡುಗಡೆಗೊಳಿಸಿದ 200, 50 ರೂ. ಹೊಸ ನೋಟು ಸೋಮವಾರದಿಂದ ಬೆಂಗಳೂರಿನಲ್ಲಿ ಲಭ್ಯವಾಗುತ್ತಿದೆ. ಹೊಸ ನೋಟು ಪಡೆಯಲು ಜನ ನೃಪತುಂಗ ರಸ್ತೆಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಕ್ಯೂ ನಿಂತಿದ್ಧಾರೆ. ಆಗಸ್ಟ್ 25ರಂದು ಹೊಸ ನೋಟುಗಳು ಬಿಡುಗಡೆಯಾದರೂ ಅಂದು ಭ್ಯಾಂಕ್ ರಜೆ ಇದ್ದ ಕಾರಣ ಬೆಂಗಳೂರಿಗೆ ನೋಟುಗಳ ರವಾನೆ ಆಗಿರಲಿಲ್ಲ. ಇದೀಗ, ಬೆಂಗಳೂರು ರಿಸರ್ವ್ ಬ್ಯಾಂಕ್ ಶಾಖೆಗೆ ಹೊಸ ನೋಟುಗಳ ಆಗಮನವಾಗಿದೆ. ಇಂದಿನಿಂದ ಇತರೆ ಬ್ಯಾಂಕ್ ಗಳಿಗೂ ನೋಟುಗಳ […]

200, 50 ರೂ. ಹೊಸ ನೋಟು ಪಡೆಯಲು ಮುಗಿಬಿದ್ದ ಜನ…!!! Read More »

ಕರ್ನಾಟಕ

ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಆ.28, 2016-17ನೇ ಸಾಲಿನಲ್ಲಿ ನಡೆದ ರಾಷ್ಟ್ರಮಟ್ಟದ “ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ” ಪರೀಕ್ಷೆಯಲ್ಲಿ ಸಮರ್ಥ ಚೂಂತಾರು ರವರು 15ನೇ  ರ್ಯಾಂಕ್ ಗಳಿಸಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ನೀಡುವುದಕ್ಕಾಗಿ ಈ ಪರೀಕ್ಷೆಯನ್ನು ರಾಷ್ಟ್ರಾದ್ಯಾಂತ ನಡೆಸಲಾಗಿದ್ದು, ಕಳೆದ ನವೆಂಬರ್ನಲ್ಲಿ ನಡೆದ ರಾಜ್ಯಮಟ್ಟದ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 85,000 ವಿದ್ಯಾರ್ಥಿಗಳು ಪೈಪೋಟಿ ನಡೆಸಿದ್ದರು. ಮಂಗಳೂರಿನಿಂದ ಸುಮಾರು 15 ಮಂದಿ ಈ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ್ದರು ಮತ್ತು ರಾಷ್ಟ್ರಮಟ್ಟದ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿದ್ದರು.

ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು Read More »

ಕರ್ನಾಟಕ

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.28, ಭಾರತ, ಚೀನಾ ಮತ್ತು ಭೂತಾನ್ ದೇಶಗಳ ಗಡಿಭಾಗದಲ್ಲಿರುವ ವಿವಾದಿತ ಡೋಕ್ಲಾಮ್ ಪ್ರದೇಶದಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಚೀನಾ ಸರಕಾರ ನಿರ್ಧರಿಸಿದೆ. ಹೀಗಾಗಿ ಈ ವಿವಾದ ಬಗೆಹರಿಯುವ ಸಾಧ್ಯತೆ ಗೋಚರಿಸಿದೆ. ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಡೋಕ್ಲಾಂ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನೆಗಳು ಕಾದಾಟ ನಡೆಸುತಿತ್ತು. ಆಗಸ್ಟ್ 15 ರಂದೇ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ನಡುವೆ ಚೀನಾದ ಸರ್ಕಾರಿ ಸ್ವಾಮ್ಯದ ‘ಗ್ಲೋಬಲ್ ಟೈಮ್ಸ್’ ಭಾರತೀಯ ಸೇನೆ ಮತ್ತು ಸರ್ಕಾರದ ವಿರುದ್ಧ ಸುದ್ದಿಗಳನ್ನು

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ Read More »

ರಾಷ್ಟ್ರೀಯ ನ್ಯೂಸ್

ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.28, ವಿವಾಹಿತ ವ್ಯಕ್ತಿಯೊಬ್ಬ 20 ವರ್ಷದ ಯುವತಿಯನ್ನು ಅಪಹರಿಸಿ ಆಕೆಗೆ ತಾಳಿ ಕಟ್ಟಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾನೆ. ಅಗ್ರಹಾರ ದಾಸರಹಳ್ಳಿಯ ನಿವಾಸಿ ಸಂತೋಷ್‌ (32) ಜೈಲು ಪಾಲಾದ ವ್ಯಕ್ತಿ. ಪತ್ನಿ ಮತ್ತು ಮಕ್ಕಳನ್ನು ತೊರೆದು ಒಂಟಿಯಾಗಿದ್ದ ಈತ ಮನೆ ಸಮೀಪವೇ ಇಸ್ತ್ರಿ ಅಂಗಡಿ ಇಟ್ಟುಕೊಂಡಿದ್ದ. ತನ್ನ ಅಂಗಡಿಗೆ ಆಗಾಗ ಇಸ್ತ್ರಿಗೆ ಬಟ್ಟೆ ತೆಗೆದುಕೊಂಡು ಬರುತ್ತಿದ್ದ ಯುವತಿಯನ್ನು ಮದುವೆಯಾಗಲು ಇಚ್ಛಿಸಿದ್ದ ಇದಕ್ಕೆ ಯುವತಿ ನಿರಾಕರಿಸಿ ಪೋಷಕರಿಗೆ ಆತನ ವರ್ತನೆ

ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ Read More »

ಕರ್ನಾಟಕ

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.28, ಆತೂರು ಬದ್ರಿಯಾ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆಂಗ್ಲಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರಾದ ಫಾ| ರೊನಾಲ್ಡ್‌ ಲೋಬೋ ಅಭಿನಂದನೆ ಸಲ್ಲಿಸಿದ್ದಾರೆ.

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »

ಕರಾವಳಿ

ಬಚ್ಚಲು ಕೋಣೆಯಲ್ಲಿ ಚಿರತೆ ಪ್ರತ್ಯಕ್ಷ ► ಅರಣ್ಯ ಸಿಬ್ಬಂದಿಗಳಿಂದ ಸೆರೆ

(ನ್ಯೂಸ್ ಕಡಬ) newskadaba.com ತುಮಕೂರು, ಆ.28, ಇಲ್ಲಿಯ ಗುಬ್ಬಿ ತಾಲೂಕಿನ ನಾಗಸಂದ್ರ ಗ್ರಾಮದ ಅಶೋಕ್ ಎಂಬವರ  ಮನೆಯ ಸ್ನಾನದ ಕೋಣೆಯಲ್ಲಿ ಸೋಮವಾರ ಬೆಳ್ಳಂ ಬೆಳಗ್ಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಅಶೋಕ್ ಎಂಬವರ ಮನೆಯ ಹಿಂಭಾಗದ ಸ್ನಾನದ ಕೋಣೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಬೆಳಗಿನ ಜಾವ ಸುಮಾರು 5 ಗಂಟೆಗೆ ಮನೆಯವರು ಸ್ನಾನದ ಕೋಣೆಗೆ ಹೋಗಿದ್ದಾಗ ಚಿರತೆ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿಯ ಗ್ರಾಮಸ್ಥರ ಸಹಾಯದಿಂದ ಆ ಚಿರತೆಯನ್ನು ಸ್ನಾನದ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ. ಬಳಿಕ ಸ್ಥಳಕ್ಕೆ ಗುಬ್ಬಿ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಸದ್ಯ ಅದಕ್ಕೆ

ಬಚ್ಚಲು ಕೋಣೆಯಲ್ಲಿ ಚಿರತೆ ಪ್ರತ್ಯಕ್ಷ ► ಅರಣ್ಯ ಸಿಬ್ಬಂದಿಗಳಿಂದ ಸೆರೆ Read More »

ಕರ್ನಾಟಕ

ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು!

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಡಿ.17. ಹೆಚ್ಚಿನವರಿಗೆ ದೇಹ ತೂಕ ಕಡಿಮೆ ಮಾಡುವುದೇ ಚಿಂತೆ. ಅದಕ್ಕೆ ಏನೇನೋ ಡಯಟ್ ಮಾಡುತ್ತಾರೆ. ಆದರೆ ಅದಕ್ಕಿಂತ ಮೊದಲು ಈ ಆಹಾರಗಳ ಸೇವನೆಯನ್ನು ಬಿಡುವುದು ಒಳ್ಳೆಯದು. ತಂಪು ಪಾನೀಯಗಳು: ಶಾಪಿಂಗ್ ಮಾಲ್ ಗೆ ಹೋದರೆ ರೆಫ್ರಿಜರೇಟರ್ ಒಳಗಿರುವ ಬಣ್ಣ ಬಣ್ಣದ ಜ್ಯೂಸ್ ನಮ್ಮನ್ನು ಆಕರ್ಷಿಸುತ್ತವೆ. ಆದರೆ ಈ ಜ್ಯೂಸ್ ನಿಮ್ಮಲ್ಲಿ ಬೊಜ್ಜು ಬೆಳೆಯಲು ಕಾರಣವಾಗಬಹುದು. ಇದರಲ್ಲಿ ಸುದೀರ್ಘ ಕಾಲ ಬಾಳಿಕೆ ಬರಲು ಹಾಕುವ ರಾಸಾಯನಿಕಗಳು ನಮ್ಮ ದೇಹದಲ್ಲಿ ಬೇಡದ ಕೊಬ್ಬು ಸಂಗ್ರಹವಾಗಲು ಕಾರಣವಾಗುತ್ತವೆ. ಸೋಯಾ

ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು! Read More »

ಆರೋಗ್ಯ ಮಾಹಿತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 28, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ಹತ್ತಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ಸಂಭವಿಸಿದ್ದು, ಬೇಕರಿ, ಮೊಬೈಲ್ ಶಾಪ್ ಸೇರಿದಂತೆ ಐದು ಅಂಗಡಿಗಳಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದು, ಈ ಕುರಿತು ನೆಲೋಗಿ ಪೊಲೀಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ Read More »

ಕರ್ನಾಟಕ

ಮೂರೇ ದಿನಗಳಲ್ಲಿ ಬುಕ್ಕಿಂಗ್ ಸ್ಥಗಿತಗೊಳಿಸಿದ ರಿಲಯನ್ಸ್ ಜಿಯೋ…..!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.28. ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನವನ್ನು ಉಂಟುಮಾಡಿದ್ದ ಬಹುನಿರೀಕ್ಷಿತ 4 ಜಿ ಸೌಲಭ್ಯದ ಉಚಿತ ಜಿಯೋಫೋನ್ ಬುಕ್ಕಿಂಗ್ ನ್ನು ಕೇವಲ ಮೂರೇ ದಿನಗಳಲ್ಲಿ ಕಂಪೆನಿಯು ದಿಢೀರ್ ಸ್ಥಗಿತಗೊಳಿಸಿದೆ. ನಿರೀಕ್ಷೆಗಿಂತ ಅಧಿಕ ಬುಕ್ಕಿಂಗ್ ಆಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕಂಪೆನಿಯು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಬುಕ್ಕಿಂಗ್ ಆದ ಫೋನ್‌ಗಳನ್ನು ಸೆಪ್ಟೆಂಬರ್‌ನಲ್ಲಿ ಸಾರ್ವಜನಿಕರಿಗೆ ವಿತರಿಸಲಿದೆ. ಈಗಾಗಲೇ ಲಕ್ಷಾಂತರ ಮಂದಿ ಜಿಯೋಫೋನ್ ಬುಕ್ಕಿಂಗ್ ಮಾಡಿದ್ದು, ಮುಂದಿನ ಬುಕ್ಕಿಂಗ್ ಯಾವಾಗ ಆರಂಭವಾಗುತ್ತದೆ ಎಂಬ ಮಾಹಿತಿಯನ್ನು ಶೀಘ್ರದಲ್ಲೇ ನೀಡಲಾಗುವುದು

ಮೂರೇ ದಿನಗಳಲ್ಲಿ ಬುಕ್ಕಿಂಗ್ ಸ್ಥಗಿತಗೊಳಿಸಿದ ರಿಲಯನ್ಸ್ ಜಿಯೋ…..!!! Read More »

ರಾಷ್ಟ್ರೀಯ ನ್ಯೂಸ್

ಗಣೇಶ ವಿಸರ್ಜನೆ ವೇಳೆ ಅವಘಢ ► ಇಬ್ಬರು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಂಡ್ಯ, ಆ.28, : ಗಣೇಶ ವಿಸರ್ಜನೆಯ ವೇಳೆ ಸಂಭವಿಸಿದ ಅವಘಡದಿಂದ ಇಬ್ಬರು ಬಲಿಯಾದ ಘಟನೆ ಬೆಂಗಳೂರು ಮತ್ತು ಮಂಡ್ಯದಲ್ಲಿ ಆದಿತ್ಯವಾರ ನಡೆದಿದೆ. ಅವಘಡಕ್ಕೆ ಬೆಂಗಳೂರಿನಲ್ಲಿ 15 ವರ್ಷದ ವೆಂಕಟೇಶ ಹಾಗೂ ಮಂಡ್ಯದಲ್ಲಿ 25 ವರ್ಷದ ವಿಜಯಕುಮಾರ್ ಬಲಿಯಾದ ದುರ್ದೈವಿಗಳು. ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಮೂರನೇ ದಿನ ಮೂರ್ತಿ ವಿಸರ್ಜನೆ ಮಾಡಲು ಹೊರಟ ಟೆಂಪೋವೊಂದು ಬಾಲಕ ವೆಂಕಟೇಶ್ ಮೇಲೆ ಹರಿದಿದೆ. ಪರಿಣಾಮ ಗಣೇಶ ವಿಸರ್ಜನೆ ನೋಡಲು ಬಂದಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದನು. ಗಣೇಶ ಹೊತ್ತ ಟೆಂಪೋ

ಗಣೇಶ ವಿಸರ್ಜನೆ ವೇಳೆ ಅವಘಢ ► ಇಬ್ಬರು ಬಲಿ Read More »

ಕರ್ನಾಟಕ
Scroll to Top