News Kadaba

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಆ .22, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ಶಾಲೆಗೆ ಕೊಲ್ಲೂರು ದೇವಾಲಯದ ದತ್ತು ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಶಾಲೆಗೆ ಮಂಗಳವಾರ ಭೇಟಿ ನೀಡಿದ್ದಾರೆ. ಈ ಶಾಲೆಗೆ ಸರ್ಕಾರ ಅನುದಾನ ಕೊಡದಿದ್ದರೂ ಪರವಾಗಿಲ್ಲ, ಅವರ ಶಾಲೆಯನ್ನ ಉಳಿಸಲು ನಾನು ಮತ್ತು ನನ್ನ ಗೆಳೆಯರು ಸೇರಿ ಶಾಲೆಗೆ 26 ಲಕ್ಷ ನೀಡುವುದರ ಮೂಲಕ ಭಿಕ್ಷಾಂದೇಹಿ ಆಂದೋಲನಕ್ಕೆ ಬೆಂಬಲಿಸುತ್ತೇವೆ  ಎಂದು ಹೇಳಿದ್ದಾರೆ. ಬೆಳಗ್ಗೆ ಶಾಲಾ ಪ್ರಾರ್ಥನ ಸಮಯದಲ್ಲಿ ಕಲ್ಲಡ್ಕ […]

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ .22,  ಕೇಪು ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ವರ್ಷಂಪ್ರತಿ ನಡೆಸಲ್ಪಡುವ  11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮ ಆದಿತ್ಯವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಫ್ರೆಂಡ್ಸ್‌ ಕ್ಲಬ್ ನ ಅಧ್ಯಕ್ಷರಾದ ಮಹೇಶ್ ಕುಂಟೋಡಿ ಅಧ್ಯಕ್ಷತೆ ವಹಿಸಿದ್ದರು. ಕಡಬ ಸಿಎ ಬ್ಯಾಂಕಿನ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಹಾಗು ವಿವಿಧ ಸ್ಪರ್ಧೆಗಳಲ್ಲಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ Read More »

ಕರಾವಳಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

(ನ್ಯೂಸ್ ಕಡಬ) newskadaba.com ಕಡಬ, ಆ .22, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ನೂಜಿಬಾಳ್ತಿಲ ಶಾಲಾಭಿವೃದ್ದಿ ಸಮಿತಿ, ಶಾಲಾ ಮೇಲುಸ್ತುವಾರಿ ಸಮಿತಿ ವತಿಯಿಂದ ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2017-18 ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲೆಯಲ್ಲಿ ಸೋಮವಾರ ನಡೆಯಿತು. ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ದೀಪ ಪ್ರಜ್ವಲನಗೊಳಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಇಂದು ಇಲ್ಲಿ ಬೆಳಗಿಸಿದ ಜ್ಯೋತಿಯಂತೆ ಈ ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಬೆಳಕಾಗಲಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.22. ಕೆಲವು ತಿಂಗಳ ಹಿಂದೆ ಭಾರೀ ವಿವಾದ ಎಬ್ಬಿಸಿದ್ದ ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ನ ಸಾಂವಿಧಾನಿಕ ಸಿಂಧುತ್ವವನ್ನು ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ಎತ್ತಿ ಹಿಡಿಯುವ ಮೂಲಕ, ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ತಲಾಖ್ ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನಗಳ ಕಾಲ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ತ್ರಿವಳಿ ತಲಾಖ್

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ Read More »

ಕರಾವಳಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .22, ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆಗೈದ ಘಟನೆ ಶ್ರೀರಾಂಪುರದಲ್ಲಿ ಮಂಗಳವಾರ ಮುಂಜಾನೆ ಬೆಳಕಿಗೆ ಬಂದಿದೆ. 45 ವರ್ಷದ ಜಾನಕಿ ತನ್ನ ಪತಿ ಚಂದ್ರಶೇಖರ್ ಎಂಬಾತನಿಂದಲೇ ಕೊಲೆಯಾಗಿದ್ದಾರೆ. ಈ ದಂಪತಿಗೆ 2 ಹೆಣ್ಣು, 4 ಗಂಡು ಮಕ್ಕಳಿದ್ದಾರೆ. ಮಂಗಳವಾರ ಮುಂಜಾನೆ  4 ಗಂಟೆ ಸುಮಾರಿಗೆ ಹಸಿವಿನಿಂದ ಎದ್ದ ಮಗು ತಾಯಿಯ ಬಳಿ ತೆರಳಿ ಕರೆದು ಎಬ್ಬಿಸತೊಡಗಿದೆ. ಆದ್ರೆ ತಾಯಿ ಯಾವುದೇ ಪ್ರತಿಕ್ರೀಯೆ ನೀಡದ ಹಿನ್ನಲೆಯಲ್ಲಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ Read More »

ಕರ್ನಾಟಕ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com ಕೊಪ್ಪಳ, ಆ .22, ನೀರು ತುಂಬಿದ್ದ ಬಕೆಟ್‍ನಲ್ಲಿ ಮಗು ಬಿದ್ದು ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ನಗರದ ಶರಣಬಸವೇಶ್ವರ ಕ್ಯಾಂಪಿನ ನಿವಾಸಿಗಳಾದ ಹಸೀನಾ ಹಾಗೂ ಆಟೋ ಚಾಲಕ ಮೌಲಹುಸೇನ್ ಎಂಬುವರ ಒಂದು ವರ್ಷದ ರೀಯಾನ್ ಮೃತ ಮಗು. ಮನೆಯವರೆಲ್ಲಾ ಹೊರಗೆ ಕುಳಿತ ಸಂದರ್ಭದಲ್ಲಿ ಮಗು ಆಟವಾಡುತ್ತಾ ಮನೆಯೊಳಗೆ ಹೋಗಿತ್ತು. ಆಟ ಆಡುತ್ತಿರಬಹುದು ಎಂದು ಪಾಲಕರು ಸುಮ್ಮನಿದ್ದಾರೆ. ಆದರೆ ತುಂಬ ಹೊತ್ತಾದರೂ ಮಗು ಬಾರದ್ದರಿಂದ ಅನುಮಾನಗೊಂಡ ತಾಯಿ ಮನೆಯೊಳಗೆ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು Read More »

ಕರಾವಳಿ

ಮೊಟ್ಟೆ ಒಡೆದು, ನಿಂಬೆಹಣ್ಣು ಕುಯ್ದು ► ಸರ್ಕಾರಿ ಆಸ್ಪತ್ರೆಯಲ್ಲೇ ವಾಮಾಚಾರ

(ನ್ಯೂಸ್ ಕಡಬ) newskadaba.com ಮೈಸೂರು, ಆ .21, ಮೂರು ಕಡೆ ಕೂಡುವ ರಸ್ತೆಯಲ್ಲಿ, ಮನೆ ಹಾಗೂ ಕಚೇರಿ ಮುಂಭಾಗದ ರಸ್ತೆಗಳಲ್ಲಿ ವಾಮಾಚಾರ ಮಾಡುವುದನ್ನು ನೋಡಿದ್ದೇವೆ… ಆದರೆ ಪ್ರಾಥಮಿಕ ಆರೋಗ್ಯ ಕೇಂದ್ರ ಕಚೇರಿಯಲ್ಲಿ ವಾಮಾಚಾರ ನಡೆದಿರುವುದು ವೈದ್ಯರೂ ಸೇರಿದಂತೆ ಎಲ್ಲರಿಗೂ ಶಾಕ್ ನೀಡಿದೆ. ಇಂತಹದೊಂದು ಘಟನೆ ಮೈಸೂರಿನ ಕೆ.ಆರ್. ನಗರದಲ್ಲಿ ಸೋಮವಾರ ನಡೆದಿದೆ‌‌. ಕೆ.ಆರ್.ನಗರ ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಯ೯ಗ್ರಹಣ ಹಾಗೂ ಅಮವಾಸ್ಯೆ ಇರುವ ದಿನದಂದು ವಾಮಾಚಾರ ಮಾಡಿರುವುದರಿಂದ ಇಲ್ಲಿನ ಸಿಬ್ಬಂದಿ ಹಾಗೂ ವೈದ್ಯರು ಶಾಕ್ ಆಗಿದ್ದಾರೆ.

ಮೊಟ್ಟೆ ಒಡೆದು, ನಿಂಬೆಹಣ್ಣು ಕುಯ್ದು ► ಸರ್ಕಾರಿ ಆಸ್ಪತ್ರೆಯಲ್ಲೇ ವಾಮಾಚಾರ Read More »

ಕರ್ನಾಟಕ

ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ.21, ವಿದ್ಯಾರ್ಥಿನಿಯೊಬ್ಬಳು ಮೊಬೈಲ್‍ನಲ್ಲಿ ಮಾತನಾಡುತ್ತ ಹಾಸ್ಟೆಲ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಬಿಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಕೇರಳ ಮೂಲದವಳಾದ ಮೃದುಲಗ, ಚಿತ್ರದುರ್ಗದ ಬಿಡಿ ರಸ್ತೆಯಲ್ಲಿರುವ ಹಾಸ್ಟೆಲ್‍ನಲ್ಲಿದ್ದುಕೊಂಡು ಜೆಎಂಐಡಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಎಂದಿನಂತೆ ಆದಿತ್ಯವಾರ ರಾತ್ರಿ ಹಾಸ್ಟೆಲ್‍ನ 2ನೇ ಮಹಡಿಯಲ್ಲಿ ಮೊಬೈಲ್‍ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ Read More »

ಕರಾವಳಿ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಯಶವಂತಪುರದ ತ್ರಿವೇಣಿ ನಗರದಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಹೆಬ್ಬಾಳದ ನಿವಾಸಿಗಳಾದ ಸುನಂದ ಮತ್ತು ಶಂಕರ್ ದಂಪತಿಯ ಮಗಳು ಚಂದ್ರಿಕಾ ಎಂಬಾಕೆಯನ್ನು ರಾಜೇಶ್ ಎಂಬಾತನ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆ ಆದಾಗಿನಿಂದಲೂ ರಾಜೇಶ್ ವರದಕ್ಷಿಣೆ ತರುವಂತೆ ಪತ್ನಿಗೆ ನಿತ್ಯವೂ ಚಿತ್ರ ಹಿಂಸೆ ನೀಡುತ್ತಿದ್ದನು. ಭಾನುವಾರ ರಾತ್ರಿಯು ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ… Read More »

ಕರ್ನಾಟಕ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಆ .21, ಅಮಾವಾಸ್ಯೆ ಪ್ರಯುಕ್ತ ಪೂಜೆ ಸಲ್ಲಿಸಲು ಬೆಳ್ಳಂಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ, ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿಯಾದ ನಿವೃತ್ತ ಶಿಕ್ಷಕ ತಿಮ್ಮಯ್ಯ ಅವರ ಪತ್ನಿ (54) ಸುಧಾ ಎಂದು ಗುರುತಿಸಲಾಗಿದೆ. ಸುಧಾರವರು ಅಮವಾಸ್ಯೆ ಪೂಜೆ ಸಲ್ಲಿಸಲು ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮದ್ದೂರಮ್ಮ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು Read More »

ಕರಾವಳಿ
Scroll to Top