News Kadaba

‘ಅಡಚಣೆಗಾಗಿ ಕ್ಷಮಿಸಿ’ ಸಿರಿಯಲ್ ಖ್ಯಾತಿಯ ನಟ ಗುರುಮೂರ್ತಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ . 19,: ತೀವ್ರ ಹೃದಯಾಘಾತದಿಂದ ಹಿರಿಯ ನಟ ಗುರುಮೂರ್ತಿ(70) ಕಳೆದ ರಾತ್ರಿ ನಗರದ ಕನಕಪುರ ರಸ್ತೆ ಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ತೀವ್ರ ಹೃದಯಾಘಾತವಾಗಿದೆ. ಕೊಡಲೇ ಅವರನ್ನು ರಾಜಶೇಖರ್ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗುರುಮೂರ್ತಿಯವರು ಪತ್ನಿ ಪೂರ್ಣಿಮಾ, ಮಕ್ಕಳಾದ ಜಯಂತ್, ನಿಶಾಂತ್ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕಿರಿಯ ಪುತ್ರ ಯೂರೋಪ್ ಪ್ರವಾಸದಲ್ಲಿರುವುದರಿಂದ ವಾಪಸ್ ಬಂದ ನಂತರ ಅಂತ್ಯಕ್ರಿಯೆ […]

‘ಅಡಚಣೆಗಾಗಿ ಕ್ಷಮಿಸಿ’ ಸಿರಿಯಲ್ ಖ್ಯಾತಿಯ ನಟ ಗುರುಮೂರ್ತಿ ನಿಧನ Read More »

ಕರ್ನಾಟಕ

ಕುಂಡಾಜೆ ಶಾಲೆಗೆ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ .18, ರಾಮಕುಂಜ ಗ್ರಾಮದ ಕುಂಡಾಜೆ ಶಾಲೆಗೆ ಸೋಲಾರ್ ದೀಪದ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜನ ಶಿಕ್ಷಣ ಟ್ರಸ್ಟ್‌ ಮಂಗಳೂರು, ಸೆಲ್ಕೊಸೋಲಾರ್ ಪೌಂಡೇಶನ್ ಪುತ್ತೂರು, ಕೃಷಿ ಪತ್ತಿನ ಸಹಕಾರಿ ಸಂಘ ಆಲಂಕಾರು, ಒಡಿಯೂರು ಘಟಕ ಸಮಿತಿ ಕುಂಡಾಜೆ, ವಿದ್ಯಾರ್ಥಿ ಪೋಷಕರು, ಎಸ್.ಡಿ.ಎಮ್.ಸಿ ಸದಸ್ಯರು ಮತ್ತು ದಾನಿಗಳ ನೆರವಿನಿಂದ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪವನ್ನು ಶಾಲೆಗೆ ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಜ್ರಮಹೋತ್ಸವ ಸಮಿತಿ ಅಧ್ಯಕ್ಷ, ರಾಮಕುಂಜ ಗ್ರಾ.ಪಂ.ಸದಸ್ಯರಾದ ಯತೀಶ್ ಬಾನಡ್ಕ, ರಾಮಕುಂಜ

ಕುಂಡಾಜೆ ಶಾಲೆಗೆ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪ ಹಸ್ತಾಂತರ Read More »

ಕರಾವಳಿ

ಸುಂಕದಕಟ್ಟೆ ಎಸ್.ಕೆ.ಎಸ್.ಬಿ.ವಿ; ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .18, ಸುಂಕದಕಟ್ಟೆ ಹಯಾತುಲ್ ಇಸ್ಲಾಂ ಮದ್ರಸದ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷರಾಗಿ ಮುಹಮ್ಮದ್ ರಾಫಿಹ್ , ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಸಿನಾನ್ ಆಯ್ಕೆಯಾಗಿದ್ದಾರೆ. ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಸುಹೈಲ್, ಉಪಾಧ್ಯಕ್ಷರಾಗಿ ಮುಹಮ್ಮದ್ ಆಜ್ಮಲ್, ಕೋಶಾಧಿಕಾರಿಯಾಗಿ ಮಹಮ್ಮದ್ ಶಫೀಕ್ ಆಯ್ಕೆಯಾದರು. ಪದಾಧಿಕಾರಿಗಳ ಆಯ್ಕೆಯು ಮತದಾನದ ಮೂಲಕ ಮದ್ರಸ ಸಭಾಂಗಣದಲ್ಲಿ ನಡೆಯಿತು. ಚುನಾವಣಾ ವೀಕ್ಷಕರಾಗಿ ಅನ್ಸಾರುಲ್ ಇಸ್ಲಾಂ ಯಂಗ್ಮೆನ್ಸ್‌ ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್ ಜಲೀಲ್, ಯುವ ಮುಂದಾಳು ಅಬ್ದುಲ್ ಅಝೀಝ್ ಸಹಕರಿಸಿದರು. ಖತಿಬರಾದ ಮಹಮ್ಮದ್ ಹನೀಫ್ ಫೈಝಿ,

ಸುಂಕದಕಟ್ಟೆ ಎಸ್.ಕೆ.ಎಸ್.ಬಿ.ವಿ; ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…!

(ನ್ಯೂಸ್ ಕಡಬ) newskadaba.com ಕಡಬ, ಆ.18, ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಎಂಬಲ್ಲಿ ಅಪಾಯಕಾರಿ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು ಅನಾಹುತವನ್ನು ಆಹ್ವಾನಿಸುತ್ತಿದೆ. ರಾಜ್ಯ ರಸ್ತೆಯಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಿರುಗುವಲ್ಲಿ ಧರೆಯ ಅಂಚಿನಲ್ಲಿ ರಸ್ತೆಗೆ ಬಾಗಿ ನಿಂತಿದೆ. ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಯಾತ್ರಾರ್ಥಿಗಳ ವಾಹನಗಳಲ್ಲದೆ, ಶಾಲಾ  – ಕಾಲೇಜು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಅನೇಕ ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಕಳೆದ ಮರ್ದಾಳ ಗ್ರಾಮ ಸಭೆಯಲ್ಲಿ ಈ ಮರ ತೆರವಿನ ಕುರಿತು ಗ್ರಾಮಸ್ಥರು

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…! Read More »

ಕರಾವಳಿ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .18,  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6 ವರ್ಷದ ಕಂದಮ್ಮ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಬೆಳಿಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!!

(ನ್ಯೂಸ್ ಕಡಬ) newskadaba.com ಮುಂಬೈ, ಆ .18, ಮಗನ ದೌರ್ಜನ್ಯದಿಂದ ಬೇಸತ್ತ ತಾಯಿಯೊಬ್ಬಳು ಸೊಸೆಯನ್ನು ಕಾಪಾಡುವ ಸಲುವಾಗಿ ತನ್ನ ಸ್ವಂತ ಮಗನನ್ನೇ ಉಸಿರುಗಟ್ಟಿ ಸಾಯಿಸಿದ ಘಟನೆ ನಗರದ ಮಂಖುರ್ಡ್ ಪ್ರದೇಶದಿಂದ ವರದಿಯಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಗನನ್ನು ಕೊಂದು ಮಹಿಳೆ ಅನ್ವರಿ ಇದ್ರೀಸಿ ಆತನ ಕಳೇಬರದೊಂದಿಗೆ ಇಡೀ ರಾತ್ರಿ ಕಳೆದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ತಾಯಿಯ ಕೈಯಿಂದಲೇ ಕೊಲೆಗೀಡಾದ ನದೀಂ ನೈಮ್ (25) ತನ್ನ ಪತ್ನಿ, ತಾಯಿ, ಇಬ್ಬರು ಹಿರಿಯ ಸೋದರರು ಮತ್ತವರ ಪತ್ನಿಯಂದಿರ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!! Read More »

ಕರಾವಳಿ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ .16, ಇಬ್ಬರು ಸ್ನೇಹಿತರೊಂದಿಗೆ ಬೈಕ್ ರೇಸಿಂಗ್ ನಡೆಸಿದ 24ರ ಹರೆಯದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್ ರೇಸ್‌ನಲ್ಲಿ ಪ್ರಾಣ ಕಳೆದುಕೊಂಡ ಯುವಕನನ್ನು ದೆಹಲಿಯ ಉದ್ಯಮಿ ವಿವೇಕ್‌ ವಿಹಾರ್‌ ಮಗ ಹಿಮಾಂಶು ಬನ್ಸಾಲ್ ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ವಿವರ ದೆಹಲಿಯ ಮಂಡಿ ಹೌಸ್‌ ಮೆಟ್ರೋ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸಿನೀಮಿಯ ರೀತಿಯಲ್ಲಿ ಘಟನೆ ಸೆರೆಯಾಗಿದೆ. ಮೂವರು ಬೈಕ್‌ ರೈಡರ್‌ಗಳು ಪಾರ್ಟಿ ಮುಗಿಸಿಕೊಂಡು ಹಿಂದಿರುಗುವಾಗ ದೆಹಲಿ ಮಧ್ಯಭಾಗದ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಮೂಡುಬಿದಿರೆ: ಬ್ಲಡ್‌ ಬ್ಯಾಂಕ್ ಗ್ರೂಪ್‍ನಿಂದ ರೋಗಿಗಳಿಗೆ ಹಣ್ಣು, ಪಾನೀಯ ವಿತರಣೆ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಆ .16,  ಬ್ಲಡ್ ಬ್ಯಾಂಕ್ ರಕ್ತದಾನಿಗಳ ಗ್ರೂಪ್‍ನಿಂದ 71ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮೂಡುಬಿದಿರೆಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಅವರ ಬಂಧುಗಳಿಗೆ ಹಣ್ಣುಹಂಪಲು – ಪಾನೀಯ ನೀಡಲಾಯಿತು. ಈ ಸಂದರ್ಭ ರಕ್ತದಾನಿ ಹಾಗೂ ರಾಜ್ಯಸರಕಾರದಿಂದ ಜೀವರಕ್ಷಕ ಪ್ರಶಸ್ತಿ ವಿಜೇತ ಉದ್ಯಮಿ ಸಿ.ಹೆಚ್. ಅಬ್ದುಲ್ ಗಫೂರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ರಕ್ತದಾನ ಒಂದು ಮಹತ್ವಪೂರ್ಣ ಸಾಮಾಜಿಕ ಜವಾಬ್ದಾರಿಯಾಗಿದ್ದು ಅದನ್ನು ನಿರ್ವಹಿಸುವಲ್ಲಿ ಯುವಜನತೆ ಮುಂದಾಗಿರುವುದು ಸಂತಸ ತಂದಿದೆ. ಇಂತಹ ಬಲಿಷ್ಠ ಯುವಪಡೆ ಯಾವುದೇ ಸಮಯದಲ್ಲಿ

ಮೂಡುಬಿದಿರೆ: ಬ್ಲಡ್‌ ಬ್ಯಾಂಕ್ ಗ್ರೂಪ್‍ನಿಂದ ರೋಗಿಗಳಿಗೆ ಹಣ್ಣು, ಪಾನೀಯ ವಿತರಣೆ Read More »

ಕರಾವಳಿ

ನೆಲ್ಯಾಡಿ: ಉಳಿತೊಟ್ಟು ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ .15,  ಇಲ್ಲಿನ ಸಮೀಪದ ಉಳಿತೊಟ್ಟು ಬಿಲಾಲ್ ಜುಮ್ಮಾ ಮಸೀದಿಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಪಡುಬೆಟ್ಟು ಸರಕಾರಿ ಪ್ರೌಡ ಶಾಲೆಯ ಅಧ್ಯಾಪಕರಾದ ಎಂ.ಡಿ. ಮಜೀದ್ ಅಲಿ ಇವರು ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷರಾದ ಹಾಜಿ ಯು.ಉಮರಬ್ಬ ಅಧ್ಯಕ್ಷತೆ ವಹಿಸಿದ್ದರು. ಜಮಾಅತ್ ಖತೀಬ್ ಸಿದ್ದೀಕ್ ಸಖಾಫಿ ದುಆ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ಅಧ್ಯಾಪಕರಾದ ಎಂ.ಡಿ. ಮಜೀದ್ ಅಲಿ ಸಂದೇಶ ಭಾಷಣ ಮಾಡಿದರು.

ನೆಲ್ಯಾಡಿ: ಉಳಿತೊಟ್ಟು ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ .15,  ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬಲ್ಯ ಸರಕಾರಿ ಶಾಲೆಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ನಡೆಯಿತು.

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ Read More »

ಕರಾವಳಿ
Scroll to Top