News Kadaba

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡನ ಮೇಲಿನ ಹಲ್ಲೆಗೆ ಸಂಬಂಧಿಸಿ ಕಡಬ ಪೇಟೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸೋಮವಾರದಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಕಡಬ ಬಂದ್ ಗೆ ಕರೆ ಕೊಟ್ಟಿದ್ದು, SDPI ಪಕ್ಷವು ಬಂದ್ ನಡೆಸದಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಡಬ ಪರಿಸರದಲ್ಲಿ ಅನಾಹುತ ನಡೆಯದಂತೆ ತಡೆಯಲು ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು Read More »

ಕರಾವಳಿ

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿದ್ದು, ಕಡಬ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನೊಂದೆಡೆ SDPI ಪಕ್ಷದ ಪ್ರಮುಖರು ಸೋಮವಾರದಂದು ಕಡಬ ಪೇಟೆಯನ್ನು ಬಂದ್ ಮಾಡದಂತೆ ಅಂಗಡಿ ಮಾಲೀಕರಲ್ಲಿ ವಿನಂತಿಸಿಕೊಂಡಿದ್ದು ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಪೊಲೀಸ್

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ Read More »

ಕರಾವಳಿ

ಪುತ್ತೂರು: 50 ಲಕ್ಷ ನಿಷೇಧಿತ ಹಳೆನೋಟು ವಶ ► ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.16. ದಾಖಲೆ ರಹಿತವಾಗಿ 50 ಲಕ್ಷ ರೂ. ನಿಷೇಧಿತ ಹಳೆನೋಟುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ನಗರ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಆರೋಪಿಗಳಾದ ಻ಬ್ದುಲ್ ನಿಸಾರ್, ಮಹಮ್ಮದ್ ಸಿರಾಜ್ ಹಾಗೂ ಅಬ್ದುಲ್ ಹಾರೀಸ್ ಎಂಬವರು ಮಡಿಕೇರಿಯಿಂದ ಮಾಣಿ ಕಡೆಗೆ ಕಾರಿನಲ್ಲಿ ಹಳೆನೋಟುಗಳನ್ನು ಸಾಗಿಸುತ್ತಿದ್ದಾಗ ಪುತ್ತೂರು ಬೈಪಾಸ್ ಉರ್ಲಾಂಡಿ ಸಮೀಪ ತಪಾಸಣೆ ನಡೆಸಿದ ಪೊಲೀಸರು ಾರೋಪಗಳ ಸಹಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ

ಪುತ್ತೂರು: 50 ಲಕ್ಷ ನಿಷೇಧಿತ ಹಳೆನೋಟು ವಶ ► ಮೂವರು ಆರೋಪಿಗಳ ಬಂಧನ Read More »

ಕರಾವಳಿ

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ಇತ್ತೀಚೆಗೆ ಬಿ.ಸಿ.ರೋಡ್‍ನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ನೇತೃತ್ವದಲ್ಲಿ ಆರು ತನಿಖಾ ತಂಡಗಳನ್ನು ರಚಿಸಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಿಗೆ ತಲುಪಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ Read More »

ಕರಾವಳಿ

ಕಡಬ ಟೌನ್ ಜುಮಾ ಮಸೀದಿ ಮುದರ್ರಿಸ್‍ಗೆ ಸನ್ಮಾನ, ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜು.14. ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಕಡಬ ರಹ್ಮಾನಿಯಾ ಟೌನ್ ಜುಮ್ಮಾ ಮಸೀದಿಯ ಮುದರ್ರಿಸ್ ಪಿ.ಎಂ.ಇಬ್ರಾಹಿಂ ದಾರಿಮಿಯವರನ್ನು ಜಮಾಅತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮ್ಮಾ ಮಸೀದಿಯ ಅಧ್ಯಕ್ಷ ಹಾಜಿ ಎಸ್. ಅಬ್ದುಲ್ ಖಾದರ್ ವಹಿಸಿದ್ದರು. ಉಪಾಧ್ಯಕ್ಷರಾದ ಮಹಮ್ಮದ್ ಮುಸ್ಲಿಯಾರ್, ಹಾಜಿ ಸಯ್ಯದ್ ಸಾಹೇಬ್ ಕಳಾರ, ಪ್ರಧಾನ ಕಾರ್ಯದರ್ಶಿ ಹಾಜಿ ಕೆ.ಎಸ್.ಅಬ್ದುಲ್ ಹಮೀದ್, ಕೋಶಾಧಿಕಾರಿ ಹಾಜಿ ಕೆ.ಅಬ್ದುಲ್ ಖಾದರ್, ಜೊತೆ ಕಾರ್ಯದರ್ಶಿ ಕೆ.ಎಂ.ಫಾರೂಕ್ ಮೊದಲಾದವರು ಶುಭಹಾರೈಸಿದರು. ಕಾರ್ಯದರ್ಶಿ ಅಶ್ರಫ್ ಶೇಡಿಗುಂಡಿ ಸ್ವಾಗತಿಸಿ, ಹಾಜಿ

ಕಡಬ ಟೌನ್ ಜುಮಾ ಮಸೀದಿ ಮುದರ್ರಿಸ್‍ಗೆ ಸನ್ಮಾನ, ಬೀಳ್ಕೊಡುಗೆ Read More »

ಕರಾವಳಿ

ಕಡಬ: ಬಿಜೆಪಿ ವಿಸ್ತಾರಕರಿಂದ ಮನೆ ಮನೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜು.14. ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳು ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದ ವೇಳೆ ಜಾರಿಗೊಳಿಸಿದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗೆ ತೆರಳಿ ಪ್ರಚಾರಪಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಕೊಡಗಿನ ಮನು ಮುತ್ತಪ್ಪ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ವಿಸ್ತಾರಕರಾಗಿ ಶುಕ್ರವಾರದಂದು ಮನೆ ಮನೆ ಭೇಟಿ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಡಬ ಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಕಾರ್ಯದರ್ಶಿ ಪ್ರಕಾಶ್

ಕಡಬ: ಬಿಜೆಪಿ ವಿಸ್ತಾರಕರಿಂದ ಮನೆ ಮನೆ ಭೇಟಿ Read More »

ಕರಾವಳಿ

ಕೋಮು ಭಂಗವುಂಟುಮಾಡುವವರಿಗೆ ಕಾದಿದೆ ಗಡಿಪಾರು ಶಿಕ್ಷೆ ► ಗೂಂಡಾ, ಕೋಕಾ ಕಾಯ್ದೆ ಹಾಕಲು ಸಿದ್ಧರಾಮಯ್ಯರಿಂದ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.10. ಕೋಮು ಸೌಹಾರ್ದತೆ ಹಾಳು ಮಾಡುವಂತಹ ಮತೀಯವಾದಿಗಳ ವಿರುದ್ಧ ಗೂಂಡಾ ಕಾಯ್ದೆ ಮತ್ತು ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿ ಗಡಿಪಾರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಮತೀಯ ಭಾವನೆ ಕೆರಳಿಸಿ ಶಾಂತಿಗೆ ಭಂಗ ಉಂಟುಮಾಡುವವರು ಯಾರೇ ಆದರೂ, ಅವರು ಯಾವುದೇ ಸಂಘಟನೆಗೆ ಸೇರಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ

ಕೋಮು ಭಂಗವುಂಟುಮಾಡುವವರಿಗೆ ಕಾದಿದೆ ಗಡಿಪಾರು ಶಿಕ್ಷೆ ► ಗೂಂಡಾ, ಕೋಕಾ ಕಾಯ್ದೆ ಹಾಕಲು ಸಿದ್ಧರಾಮಯ್ಯರಿಂದ ಸೂಚನೆ Read More »

ಕರ್ನಾಟಕ

ಅನಾರೋಗ್ಯದಿಂದಿದ್ದ ಕಡಬದ ಮಹಿಳೆ ವಿದೇಶದಲ್ಲಿ ಮೃತ್ಯು ► ಬಹ್ರೇನ್‌ನ ಸಲ್ಮಾನಿಯಾ ಆಸ್ಪತ್ರೆಯಿಂದ ಮೃತದೇಹ ನಾಳೆ ಹುಟ್ಟೂರಿಗೆ…

(ನ್ಯೂಸ್ ಕಡಬ) newskadaba.com ಕಡಬ, ಜು.10. ಇಲ್ಲಿಗೆ ಸಮೀಪದ ಮರ್ಧಾಳ ಪಾಲೆತ್ತಡ್ಕ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಎಂಬವರ ಪತ್ನಿ ಸಮೀರಾ (24) ಎಂಬವರು ಅಲ್ಪಕಾಲದ ಅನಾರೋಗ್ಯದಿಂದ ಬಹರೈನಿನ ಸಲ್ಮಾನಿಯ ಆಸ್ಪತ್ರೆಯಲ್ಲಿ ಸೋಮವಾರದಂದು ಮೃತಪಟ್ಟಿದ್ದಾರೆ‌. ವರ್ಷದ ಹಿಂದೆ ಮದುವೆಯಾಗಿ ತನ್ನ ಗಂಡನೊಂದಿಗೆ ಬಹ್ರೇನ್ ಗೆ ತೆರಳಿದ್ದ ಸೆಮೀರಾ, ಜಾಂಡೀಸ್ ಕಾಯಿಲೆಗೆ ತುತ್ತಾಗಿ ಸುಮಾರು ದಿನಗಳ ಹಿಂದೆ ಭಾರತಕ್ಕೆ ಮರಳುವ ಉದ್ದೇಶದಿಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರೆನ್ನಲಾಗಿದೆ. ವಿಮಾನಕ್ಕೆ‌ ಹತ್ತಲು 5 ನಿಮಿಷಗಳು ಬಾಕಿ ಇರುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದಾಗಿ ತಕ್ಷಣವೇ

ಅನಾರೋಗ್ಯದಿಂದಿದ್ದ ಕಡಬದ ಮಹಿಳೆ ವಿದೇಶದಲ್ಲಿ ಮೃತ್ಯು ► ಬಹ್ರೇನ್‌ನ ಸಲ್ಮಾನಿಯಾ ಆಸ್ಪತ್ರೆಯಿಂದ ಮೃತದೇಹ ನಾಳೆ ಹುಟ್ಟೂರಿಗೆ… Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.10. ಕರಾವಳಿಯು ಕಳೆದ ಒಂದು ತಿಂಗಳಿನಿಂದ ಕೋಮು ದಳ್ಳುರಿಯಿಂದ ಹೊತ್ತಿ ಉರಿಯುತ್ತಿದ್ದು, ಕೋಮು ಸಂಘರ್ಷಕ್ಕೆ ಎರಡು ಹೆಣಗಳು ಉರುಳಿವೆ. ಎರಡೂ ಧರ್ಮಗಳ ನಡುವೆ ಸರಿಪಡಿಸಲಾಗದಷ್ಟು ದೊಡ್ಡ ಕಂದಕ ನಿರ್ಮಾಣವಾಗಿದೆ. ದಿನಂಪ್ರತಿ ಕೋಮು ಪ್ರಚೋದಿತ ಹಿಂಸಾಚಾರಗಳ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳು ಜಿಲ್ಲೆಯ ಶಾಂತಿಪ್ರಿಯ ನಾಗರೀಕರನ್ನು ಆತಂಕಕ್ಕೀಡುಮಾಡಿದೆ. ಇವೆಲ್ಲದರ ಮಧ್ಯೆ 5 ದಿನಗಳ ಹಿಂದೆ ಪುತ್ತೂರಿನ ಅರಿಯಡ್ಕದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಗಾಯಾಳು ಯುವಕರನ್ನು ಹಿಂದೂ ಸಂಘಟನೆಯ ಪ್ರಮುಖರೊಬ್ಬರು ಆಸ್ಪತ್ರೆಗೆ

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ Read More »

ಕರಾವಳಿ

ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ

(ನ್ಯೂಸ್ ಕಡಬ) newskadaba.com ರಾಮಕುಂಜ ಜು.10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ದ.ಕ. ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊೖಲ, ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಸಂಘ ಇದರ ಸಹಯೋಗದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯು ರಾಮಕುಂಜ ಪಂಚಾಯತ್ ಸಭಾಭವನದಲ್ಲಿ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವಿಚಂದ್ರ ಯು ಸ್ವಚ್ಛತೆ, ಆರೋಗ್ಯ

ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ Read More »

ಕರಾವಳಿ
Scroll to Top