ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು
ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡನ ಮೇಲಿನ ಹಲ್ಲೆಗೆ ಸಂಬಂಧಿಸಿ ಕಡಬ ಪೇಟೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸೋಮವಾರದಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಕಡಬ ಬಂದ್ ಗೆ ಕರೆ ಕೊಟ್ಟಿದ್ದು, SDPI ಪಕ್ಷವು ಬಂದ್ ನಡೆಸದಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಡಬ ಪರಿಸರದಲ್ಲಿ ಅನಾಹುತ ನಡೆಯದಂತೆ ತಡೆಯಲು ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು Read More »
ಕರಾವಳಿ









