News Kadaba

ಮತ್ತೆ ಸುದ್ದಿಯಾದ ಕಡಬದ MSIL ಮದ್ಯದಂಗಡಿ ► ಅಂಗಡಿಯ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಜು.06. ಸುಪ್ರೀಂ ಕೋರ್ಟ್ ಹೆದ್ದಾರಿ ಬದಿಯ ಮದ್ಯದಂಗಡಿಗಳನ್ನು ಮುಚ್ಚಿ ಆದೇಶ ಹೊರಡಿಸಿದ್ದೇ ಕಡಬದ MSIL ಮದ್ಯದಂಗಡಿಯಲ್ಲಿ ಸರತಿ ಸಾಲಿನಲ್ಲಿ ನಿಂತು ಮದ್ಯದ ಭರ್ಜರಿ ವ್ಯಾಪಾರದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದೀಗ ಅದೇ ಮದ್ಯದಂಗಡಿಯ ಬೀಗ ಮುರಿದು ಕಳ್ಳತನ ನಡೆಸಲು ವಿಫಲ ಯತ್ನ ನಡೆದಿದ್ದು, ಕಡಬದ ಮದ್ಯದಂಗಡಿ ಮತ್ತೆ ಸುದ್ದಿಯಲ್ಲಿದೆ. ಗುರುವಾರ ಬೆಳಿಗ್ಗೆ ನೌಕರರು ಅಂಗಡಿಗೆ ಆಗಮಿಸಿದಾಗ ಶಟರ್ ನ ಬೀಗ ಮುರಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಈ […]

ಮತ್ತೆ ಸುದ್ದಿಯಾದ ಕಡಬದ MSIL ಮದ್ಯದಂಗಡಿ ► ಅಂಗಡಿಯ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ Read More »

ಕರಾವಳಿ

ಆಲಂಕಾರು: ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವ

(ನ್ಯೂಸ್ ಕಡಬ) newskadaba.com ಆಲಂಕಾರು, ಜು.06. ಒಡಿಯೂರು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್‌, ಒಡಿಯೂರು ಗ್ರಾಮ ವಿಕಾಸ ಯೋಜನೆ ಘಟ ಸಮಿತಿ ಕುಂಡಾಜೆ ರಾಮಕುಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವದ(ಗ್ರಾಮೋತ್ಸವ) ಪ್ರಯುಕ್ತವಾಗಿ ಸಂಘದ ಸದಸ್ಯರಿಂದ ಸ್ವಚ್ಚತಾ ಕಾರ್ಯಕ್ರಮ ಮತ್ತು ಒಂದು ದಿನದ ಶ್ರಮದಾನವು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು. ಶಾಲಾ ಆವರಣವನ್ನು ಸ್ವಚ್ಚತೆ ಮಾಡುವ ಮೂಲಕ ಶ್ರಮದಾನವನ್ನು ಪ್ರಾರಂಭಿಸಲಾಯಿತು. ಬಳಿಕ ಶಾಲೆಗೆ ಕೈತೋಟ ರಚನೆ ಮತ್ತು ಶಾಲಾ ಆವರಣದಲ್ಲಿ ತರಕಾರಿ

ಆಲಂಕಾರು: ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವ Read More »

ಕರಾವಳಿ

ಪಾಲ್ತಾಡಿ: ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ

(ನ್ಯೂಸ್ ಕಡಬ) newskadaba.com ಸವಣೂರು, ಜು.06. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ ಮತ್ತು ದಾನಿಗಳಿಂದ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಸಮಾರಂಭ ಇತ್ತೀಚೆಗೆ ನಡೆಯಿತು. ಶಾಲಾಭಿವೃದ್ದಿ ಸಮಿತಿ ಸದಸ್ಯ ಉಚಿತ ಸಮವಸ್ತ್ರ ವಿತರಿಸಿದರು. ಇದೇ ಸಂದರ್ಭದಲ್ಲಿ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿ ಕೆಯ್ಯೂರು ಸ.ಪ್ರೌ.ಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಮತ್ತು ಮಂಜುನಾಥನಗರ ಹಿ.ಪ್ರಾ.ಶಾಲಾ ಶಿಕ್ಷಕಿ ನಂದಿನಿ ಆರ್. ದೇವಾಡಿಗ ದಂಪತಿ ನೀಡಿದ ಶಾಲಾ ಬ್ಯಾಗನ್ನು ವಿತರಿಸಲಾಯಿತು.

ಪಾಲ್ತಾಡಿ: ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ Read More »

ಕರಾವಳಿ

ಕಲ್ಲಡ್ಕ: ಬೈಕ್ ಅಪಘಾತ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.06. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕೆ.ಸಿ.ರೋಡ್ ಎಂಬಲ್ಲಿ ಸ್ಕಾರ್ಪಿಯೋ ಕಾರೋದು ಬೈಕಿಗೆ ಢಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕೆಎ.19.ಇವಿ.497 ಸಂಖ್ಯೆಯ ಬಜಾಜ್ ಪಲ್ಸರ್ ಬೈಕ್ ಗೆ ಸ್ಕಾರ್ಪಿಯೋ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರನನ್ನು ನಂದರಬೆಟ್ಟು ನಿವಾಸಿ ಉವೈಸ್ (21) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್

ಕಲ್ಲಡ್ಕ: ಬೈಕ್ ಅಪಘಾತ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಅರಿಯಡ್ಕ: ಕಾರು – ಲಾರಿ ಮುಖಾಮುಖಿ ►ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.5. ಲಾರಿ ಮತ್ತು ಕಾರು ಮಧ್ಯೆ ಢಿಕ್ಕಿ ಸಂಭವಿಸಿ, ವಿದೇಶ ಪ್ರಯಾಣಕ್ಕಾಗಿ ಬಜ್ಪೆ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಇಬ್ಬರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುಗಳನ್ನು ಕೊಡಗು ಜಿಲ್ಲೆಯ ನಾಪೊಕ್ಲು ನಿವಾಸಿಗಳಾದ ಖಾಸಿಂ (40), ಹಾರೀಸ್ (28) ಮತ್ತು ಅಶ್ಫಾಕ್ (40) ಮತ್ತು ಕಾರು ಚಾಲಕ ಅರ್ಷದ್ (27) ಎಂದು ಗುರುತಿಸಲಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ

ಅರಿಯಡ್ಕ: ಕಾರು – ಲಾರಿ ಮುಖಾಮುಖಿ ►ನಾಲ್ವರು ಗಂಭೀರ Read More »

ಕರ್ನಾಟಕ

ಅಕ್ರಮ ಗೋಸಾಗಾಟ ಪತ್ತೆ ►14 ಗೋವುಗಳನ್ನು ವಶಪಡಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ) newskadaba.com ವಿಟ್ಲ, ಜು.05. ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಘಟನೆಯನ್ನು ಪತ್ತೆಹಚ್ಚಿರುವ ವಿಟ್ಲ ಪೊಲೀಸರು 14 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದಿಂದ ಜಾನುವಾರುಗಳನ್ನು ಕೇರಳದ ಗೋಶಾಲೆಯ ನೆಪದಲ್ಲಿ ದಾಖಲಿ ಸೃಷ್ಟಿಸಿ ಕಸಾಯಿಖಾನೆಗಳಿಗೆ ಸಾಗಿಸಲಾಗುತ್ತಿದೆ ಎಂಬ ಆರೋಪ ಅನೇಕ ಸಮಯಗಳಿಂದ ಕೇಳಿಬರುತ್ತಿತ್ತು. ಅದರಂತೆ ಇಂದು ಕೇರಳ ನೋಂದಣಿಯ ಈಚರ್ ಲಾರಿಯೊಂದರಲ್ಲಿ 14 ಗೋವುಗಳನ್ನು ಸಾಗಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿರುವ ವಿಟ್ಲ ಪೊಲೀಸರು ಲಾರಿ ಸಹಿತ ಗೋವುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಕ್ರಮ ಗೋಸಾಗಾಟ ಪತ್ತೆ ►14 ಗೋವುಗಳನ್ನು ವಶಪಡಿಸಿದ ವಿಟ್ಲ ಪೊಲೀಸರು Read More »

ಕರಾವಳಿ

ರಾಜ್ಯಕ್ಕೆ ಕಾಲಿಟ್ಟ ಕುಖ್ಯಾತ ವಂಚಕರ ಮೂರು ತಂಡ ► ಆಣೆ, ಪ್ರಮಾಣದ ನೆಪದಲ್ಲಿ ಚಿನ್ನಾಭರಣ ಲೂಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.04. ಆಧುನಿಕ ಯುಗದಲ್ಲಿ ನಾವೆಷ್ಟೇ ಜಾಗೃತರಾಗಿದ್ದರೂ ಸಾಕಾಗುವುದಿಲ್ಲ. ನಮ್ಮ ಪಾಡಿಗೆ ನಾವು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರೆ ಯಾವುದೇ ಕ್ಷಣದಲ್ಲಿ ಮಹಿಳೆಯೊಬ್ಬಳು ಎದುರಾಗಬಹುದು. ಎಹುರಿಗೆ ಸಿಕ್ಕವಳು ನಿಮ್ಮ ಪರ್ಸ್ ಬಿದ್ದಿದೆ. ತೆಗೆದುಕೊಳ್ಳಿ ಎಂದು ಪರ್ಸನ್ನು ನೆಲದಿಂದ ಎತ್ತಿ ಕೊಡಬಹುದು. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಇನ್ನೋರ್ವ ಮಹಿಳೆ ಎದುರಾಗಿ ನನ್ನ ಪರ್ಸನ್ನು ನೀನು ಕದ್ದಿದ್ದೀಯಾ… ಇಲ್ಲಾಂದ್ರೆ ನನ್ನ ಪರ್ಸ್ ನಿನ್ನ ಕೈಗೆ ಹೇಗೆ ಬಂತು ಎಂದು ನಮ್ಮನ್ನೇ ಇಕ್ಕಟ್ಟಿಗೆ ಸಿಲುಕಿಸುತ್ತಾಳೆ. ಆ ಸಂದರ್ಭದಲ್ಲಿ ಮತ್ತೆ

ರಾಜ್ಯಕ್ಕೆ ಕಾಲಿಟ್ಟ ಕುಖ್ಯಾತ ವಂಚಕರ ಮೂರು ತಂಡ ► ಆಣೆ, ಪ್ರಮಾಣದ ನೆಪದಲ್ಲಿ ಚಿನ್ನಾಭರಣ ಲೂಟಿ Read More »

ಕರ್ನಾಟಕ

11 ವರ್ಷಗಳ ನಂತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸ್ನೇಹ ಸಮ್ಮಿಲನ

(ನ್ಯೂಸ್ ಕಡಬ) newskadaba.com ಕಡಬ, ಜು.03. ನಮ್ಮ ಜೀವನದ ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಬದುಕಿ ಸಮಾಜದ ಉತ್ತಮ ಪ್ರಜೆಯನ್ನಾಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ನಮ್ಮೆಲ್ಲಾ ಶಿಕ್ಷಕರನ್ನು ನಾವು ನೆನಪಿಸುವುದೇ ಇಲ್ಲ. ಅದರಲ್ಲೂ ಸುಮಾರು 10 ವರ್ಷಗಳಿಗೂ ಹಿಂದೆ ಅಕ್ಷರ ಜ್ಞಾನವನ್ನು ಕಲಿಸಿದ ಶಿಕ್ಷಕರನ್ನು ಕರೆದು ಅವರನ್ನು ಸನ್ಮಾನಿಸಿದರೆ ಅವರಿಗಾಗುವ ಆನಂದ ಹೇಗಿರಬಹುದು…? ಅದಕ್ಕೆ ಉದಾಹರಣೆಯೆಂಬಂತೆ ಕಡಬದ ಕ್ನಾನಾಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 2006ನೇ ಸಾಲಿನಲ್ಲಿ ಹತ್ತನೇ ತರಗತಿ ಉತ್ತೀರ್ಣರಾಗಿ ಇದೀಗ ವಿವಿಧ

11 ವರ್ಷಗಳ ನಂತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸ್ನೇಹ ಸಮ್ಮಿಲನ Read More »

ಕರಾವಳಿ

ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ► ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.03. ಕಳೆದ ಕೆಲವು ವರ್ಷಗಳಿಂದ ಪ್ರಾಣಿದಯಾ ಸಂಘದವರ ಕೆಂಗಣ್ಣಿಗೆ ಗುರಿಯಾಗಿ ಕೋರ್ಟು ಮೆಟ್ಟಿಲು ಹತ್ತಿದ್ದ ಕರಾವಳಿಯ ಕ್ರೀಡೆಯಾದ ಕಂಬಳಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಂಬಳ ವಿಶೇಷ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಅಂತಿಮ ಮುದ್ರೆ ಹಾಕಿರುವುದರಿಂದಾಗಿ ಕಂಬಳವನ್ನು ಮುಂದುವರಿಸಲು ಅನುಮತಿ ಸಿಕ್ಕಂತಾಗಿದೆ. ಕಂಬಳವನ್ನು ಉಳಿಸಬೇಕೆಂಬ ಕೂಗು ಕರಾವಳಿಯಲ್ಲಿ ಜೋರಾಗಿತ್ತಾದರೂ, ರಾಜ್ಯದಲ್ಲೆಡೆ ಸಂಪೂರ್ಣ ಬೆಂಬಲ ವ್ಯಕ್ತವಾಗಿತ್ತು. ಅಲ್ಲದೆ ಈ ಬಗ್ಗೆ ರಾಜ್ಯ ವಿಧಾನಮಂಡಲದಲ್ಲೂ ವಿಧೇಯಕವನ್ನು ಮಂಡಿಸಲಾಗಿತ್ತು. ಕಂಬಳವನ್ನು ಉಳಿಸುವ ನಿಟ್ಟಿನಲ್ಲಿ ಪುತ್ತೂರು

ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ► ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ Read More »

ರಾಷ್ಟ್ರೀಯ ನ್ಯೂಸ್

ಕುಟ್ರುಪ್ಪಾಡಿ: ಪಂಚಾಯತ್ ಅಧ್ಯಕ್ಷೆ ಹಾಗೂ ಹಿಂದಿನ PDO ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜು.03. ಕಾಂಪೋಸ್ಟ್‌ ಪೈಪ್ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪದಲ್ಲಿ ಇಲ್ಲಿನ ಕುಟ್ರುಪ್ಪಾಡಿ ಗ್ರಾ.ಪಂ. ಅಧ್ಯಕ್ಷರು ಹಾಗೂ ಈ ಹಿಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿಕೊಂಡಿದೆ. ನಿರ್ಮಲ ಗ್ರಾಮ ಪುರಸ್ಕಾರ ಯೋಜನೆಯಡಿ 2015-16ನೇ ಸಾಲಿನಲ್ಲಿ ಪೈಪ್ ಕಾಂಪೋಸ್ಟ್‌ ಘಟಕ ಆರಂಭಿಸಲು ಗ್ರಾಮದ ವ್ಯಾಪ್ತಿಗೊಳಪಟ್ಟ ಆಯ್ದ ಫಲಾನುಭವಿಗಳಿಗೆ ವಿತರಿಸುವುದಕ್ಕಾಗಿ ಖರೀದಿ ಮಾಡಲಾಗಿದ್ದ ಸಿಮೆಂಟ್ ಕಾಂಪೋಸ್ಟ್‌ ಪೈಪ್ ಗಳಲ್ಲಿ ಆರ್ಥಿಕ ಅವ್ಯವಹಾರ ನಡೆದಿದೆಯೆಂದು ಗ್ರಾ.ಪಂ. ಮಾಜಿ ಸದಸ್ಯ ಕ್ಸೇವಿಯರ್ ಬೇಬಿಯವರು

ಕುಟ್ರುಪ್ಪಾಡಿ: ಪಂಚಾಯತ್ ಅಧ್ಯಕ್ಷೆ ಹಾಗೂ ಹಿಂದಿನ PDO ವಿರುದ್ಧ ಕೇಸು ದಾಖಲು Read More »

ಕರಾವಳಿ
Scroll to Top