News Kadaba

ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.14.  ಇಲ್ಲಿಗೆ ಸಮೀಪದ ಕೋಣಾಲು ಗ್ರಾಮದ ಮುಡಿಪಿನಡ್ಕ ಎಂಬಲ್ಲಿ ವೃದ್ದರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಬುಧವಾರದಂದು ನಡೆದಿದೆ. ಮುಡಿಪಿನಡ್ಕ ನಿವಾಸಿ ಕರಿಯಪ್ಪ ಗೌಡ (80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇಂದು ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ ಇವರನ್ನು ಹುಡುಕಿದಾಗ ಮನೆ ಸಮೀಪದ ಬಾವಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಮದ್ಯವ್ಯಸನಿಯಾಗಿದ್ದ ಇವರು ಅದೇ ಕಾರಣಕ್ಕೆ ಕರುಳ ಬೇನೆಗೆ ಸಿಲುಕಿದ್ದರು. ಇದರಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು […]

ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ

ಜಿಲ್ಲೆಯಾದ್ಯಂತ ಜೂ.21 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಕಳೆದ ಹಲವಾರು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕ ಪರಿಸರದಲ್ಲಿ ಮಂಗಳವಾರದಂದು ಸಂಜೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.13 ನೇ ಮಂಗಳವಾರ ಮಧ್ಯರಾತ್ರಿಯಿಂದ ಜೂ.14 ನೇ ಬುಧವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರ ಪ್ರಸ್ತಾವನೆಯಂತೆ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜೂ.21 ರವೆರೆಗೆ

ಜಿಲ್ಲೆಯಾದ್ಯಂತ ಜೂ.21 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

ಕೆಸರು ಗದ್ದೆಯಾದ ಮರ್ಧಾಳ-ಕೆರ್ಮಾಯಿ ರಸ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಇಲ್ಲಿನ ಮರ್ಧಾಳದಿಂದ ಬಜಕೆರೆಯ ಮೂಲಕ ಕೋಡಿಂಬಾಳವನ್ನು ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯು ಸಂಪುರ್ಣ ಕೆಸರುಗದ್ದೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಬಂಟ್ರ, 102 ನೆಕ್ಕಿಲಾಡಿ ಮತ್ತು ಐತ್ತೂರು ಸೇರಿದಂತೆ 3 ಗ್ರಾಮಗಳ ಸಂಪರ್ಕ ಕೊಂಡಿಯಾಗಿರುವ ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಜನರು ಸಂಚರಿಸುತ್ತಿದ್ದಾರೆ. ಸುಮಾರು 1000 ಮನೆಗಳಿಗೆ ಸಂಪರ್ಕವಿರುವ ಈ ರಸ್ತೆಯಲ್ಲಿ ಬಜಕೆರೆ ರೈಲ್ವೇ ಸ್ಟೇಷನ್, ಕೆರ್ಮಾಯಿ ಸರಕಾರಿ ಪ್ರಾಥಮಿಕ ಶಾಲೆ, ಗುಡ್ ಶೆಫರ್ಡ್ ಆಂಗ್ಲ ಮಾಧ್ಯಮ ಶಾಲೆ, 4 ಚರ್ಚುಗಳು, 1

ಕೆಸರು ಗದ್ದೆಯಾದ ಮರ್ಧಾಳ-ಕೆರ್ಮಾಯಿ ರಸ್ತೆ Read More »

ಕರಾವಳಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.14. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ 2017-18ರ ಸಾಲಿಗೆ ಸ್ವಉದ್ಯೋಗಕ್ಕಾಗಿ ವಿವಿಧ ಯೋಜನೆಗಳಲ್ಲಿ ಅಲ್ಪಸಂಖ್ಯಾತ ವರ್ಗಗಳ ಹಾಗೂ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಶೇಕಡಾ 33%ರಷ್ಟು ಮತ್ತು ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ ಶೇಕಡಾ 3%ರಷ್ಟು ಆದ್ಯತೆ ಮೀಸಲಿರಿಸಲಾಗಿದೆ.    ಅರ್ಜಿದಾರರು ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಪಾರ್ಸಿ, ಸಿಖ್ಖರು, ಬೌದ್ಧ) ವರ್ಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಸಮುದಾಯ ಆರೋಗ್ಯ ಕೇಂದ್ರ ಕಡಬ, ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‌ ಮತ್ತು ಗ್ರಾಮ ಪಂಚಾಯತ್ ಮರ್ಧಾಳ ಹಾಗೂ ಸೈಂಟ್ ಮೇರಿಸ್ ಪ್ರೌಢ ಶಾಲೆ ಮರ್ಧಾಳ ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಜನಜಾಗೃತಿ ಜಾಥಾವು ಮರ್ಧಾಳದಲ್ಲಿ ನಡೆಯಿತು. ಮರ್ಧಾಳ ಸೈಂಟ್ ಮೇರಿಸ್ ಪ್ರೌಢ ಶಾಲೆಯಲ್ಲಿ ಆರೋಗ್ಯ ಮಾಹಿತಿಯ ಕರಪತ್ರ ಬಿಡುಗಡೆ ಮಾಡುವ ಮೂಲಕ ಐತ್ತೂರು ತಾ.ಪಂ. ಸದಸ್ಯರಾದ ಪಿ.ವೈ. ಕುಸುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ಸಮುದಾಯ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ Read More »

ಕರಾವಳಿ

ಕಲ್ಲಡ್ಕ ಗಲಭೆ ಹಿನ್ನೆಲೆ: ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಕಳೆದ ಹಲವಾರು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕ ಪರಿಸರದಲ್ಲಿ ಮಂಗಳವಾರದಂದು ಸಂಜೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.13 ನೇ ಮಂಗಳವಾರ ಮಧ್ಯರಾತ್ರಿಯಿಂದ ಜೂ.14 ನೇ ಬುಧವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರ ಪ್ರಸ್ತಾವನೆಯಂತೆ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶಿಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ

ಕಲ್ಲಡ್ಕ ಗಲಭೆ ಹಿನ್ನೆಲೆ: ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಕರಾವಳಿ

ಮೆಲ್ಕಾರ್: ಯುವಕನಿಗೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.14. ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೋರ್ವನಿಗೆ ದುಷ್ಕರ್ಮಿಗಳಿಬ್ಬರ ತಂಡ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಮೆಲ್ಕಾರ್ ಆರ್.ಆರ್. ಮಿಲ್ ಬಳಿ ನಡೆದಿದೆ. ಮೆಲ್ಕಾರ್ ಪೆಟ್ರೋಲ್ ಬಂಕ್ ಮಾಲಕನ ಪುತ್ರ ಪವನ್ (28) ದುಷ್ಕರ್ಮಿಗಳ ದಾಳಿಗೊಳಗಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪವನ್ ಪೆಟ್ರೋಲ್ ಬಂಕ್‌ನಿಂದ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮೆಲ್ಕಾರ್ ಆರ್.ಆರ್. ಮಿಲ್ ಬಳಿ ಪೊದೆಯಲ್ಲಿ ಅವಿತು ಕುಳಿತಿದ್ದ ಇಬ್ಬರು ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ತಲವಾರಿನಿಂದ ದಾಳಿ

ಮೆಲ್ಕಾರ್: ಯುವಕನಿಗೆ ತಲವಾರು ದಾಳಿ Read More »

ಕರಾವಳಿ

ಜೂನ್ 14 – “ಇಂದು ವಿಶ್ವ ರಕ್ತದಾನಿಗಳ ದಿನ” ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜೂ.14. ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು. ರಕ್ತಕ್ಕೆ

ಜೂನ್ 14 – “ಇಂದು ವಿಶ್ವ ರಕ್ತದಾನಿಗಳ ದಿನ” ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಬಲ್ಯ: ಸೋಲಾರ್ ಪ್ಯಾನೆಲ್ ಕಳವು

(ನ್ಯೂಸ್ ಕಡಬ) newskadaba.com ಕಡಬ, ಜೂ.13. ಇಲ್ಲಿಗೆ ಸಮೀಪದ ಬಲ್ಯ ಗ್ರಾಮದ ಗೋವಿಂದಕಟ್ಟೆಯಲ್ಲಿ ಪಂಚಾಯಿತಿ ವತಿಯಿಂದ ಅಳವಡಿಸಲಾಗಿದ್ದ ಸೋಲಾರ್ ದೀಪದ ಪ್ಯಾನೆಲ್ಗಳನ್ನು ಕಿಡಿಗೇಡಿಗಳು ಸೋಮವಾರ ಕಳವುಗೈದಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕುಟ್ರುಪ್ಪಾಡಿ ಗ್ರಾ.ಪಂ. ಹಾಗೂ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೇ ಭಾಗದಲ್ಲಿ ಈ ಹಿಂದೆ ಕಳ್ಳರು ಸೋಲಾರ್ ಪ್ಯಾನೆಲ್ ಹಾಗೂ ಬ್ಯಾಟರಿಗಳನ್ನು ಕಳವು ಮಾಡಿದ್ದರು. ಈ ಬಾರಿ ಮತ್ತೆ ಕಳವಾಗಿದ್ದು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ದೂರುದಾರ ಗ್ರಾಮಸ್ಥರಾದ ಶಿಜೋ ಜಾರ್ಜ್, ಜೋಯಲ್, ಭರತ್

ಬಲ್ಯ: ಸೋಲಾರ್ ಪ್ಯಾನೆಲ್ ಕಳವು Read More »

ಕರಾವಳಿ

ಯುವಕನಿಗೆ ಚೂರಿ ಇರಿತ: ಕಲ್ಲಡ್ಕ ಮತ್ತೆ ಉದ್ವಿಘ್ನ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಜೂ.13. ಮನೆಗೆ ಹಣ್ಣುಹಂಪಲು ತೆಗೆದುಕೊಂಡು ಹೋಗುತ್ತಿದ್ದ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಕಲ್ಲಡ್ಕದಲ್ಲಿ ಮಂಗಳವಾರ ಸಂಜೆ ನಡೆದಿದೆ. ಕಲ್ಲಡ್ಕ ನಿವಾಸಿ ಅಬೂಸಾಲಿ ಎಂಬವರ ಪುತ್ರ ಖಲೀಲ್ ಚೂರಿ ಇರಿತಕ್ಕೊಳಗಾಗಿ ಗಾಯಗೊಂಡು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರತ್ನಾಕರ್ ಶೆಟ್ಟಿ ಹಾಗೂ ರವಿಭಂಡಾರಿ ಎಂಬವರು ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದುಬಂದಿದೆ. ರತ್ನಾಕರ ಶೆಟ್ಟಿಯ ಕೈಗಳಿಗೂ ಗಾಯಗಳಾಗಿದ್ದು, ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಕಂಡುಬಂದಿದ್ದು,

ಯುವಕನಿಗೆ ಚೂರಿ ಇರಿತ: ಕಲ್ಲಡ್ಕ ಮತ್ತೆ ಉದ್ವಿಘ್ನ Read More »

ಕರಾವಳಿ
Scroll to Top