News Kadaba

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ಕಡಬ: ಬಿಳಿನೆಲೆ ಗ್ರಾಮದ ನೆಟ್ಟಣ ರೈಲ್ವೇ ಓವರ್ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು,ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ತಮಿಳುನಾಡು ಮೂಲದ ನೀಲಗಿರೀಸ್ ಇಂದ್ರಾ ನಗರ ನಿವಾಸಿ ಷಣ್ಮುಗನಾಥನ್(65)ಎಂದು ಗುರುತಿಸಲಾಗಿದೆ. ತಮಿಳನಾಡಿನಿಂದ ಬಿಳಿನೆಲೆ ಗ್ರಾಮದ ವಾಲ್ತಾಜೆಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಇವರು ಊರಿಗೆ ವಾಪಸ್ ಹೋಗದೆ ನೆಟ್ಟಣ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು..ರಾತ್ರಿ ಮದ್ಯ ಸೇವಿಸಿ ಅಲ್ಲೇಅಂಗಡಿಯ ಬದಿಯಲ್ಲಿ ಮಲಗುತ್ತಿದ್ದರು ಎನ್ನಲಾಗಿದೆ…

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲದ ಚರಂಡಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ವಿಟ್ಲ:ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.. ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ… ಸ್ಥಳಕ್ಕೆ ವಿಟ್ಲ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.

ವಿಟ್ಲದ ಚರಂಡಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು

(ನ್ಯೂಸ್‌ ಕಡಬ) newskadaba.com,  ನ.08: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಕೈದಿಗಳಿಗೆ ಸಿಗುತ್ತಿರುವ ರಾಜಾತಿಥ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಮೂರು ಎನ್​ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಹಾಯಕ ಅಧೀಕ್ಷಕ ಇಮಾಮಾಸಾಬ್ ಮೈಗೇರಿ ಅವರು ಜೈಲರ್ ಗೋಪಿನಾಥ್ ಡಿ ಮೂಲಕ ದೂರು ಸಲ್ಲಿಸಿದ್ದು, ದೂರಿನಲ್ಲಿ ವೈರಲ್ ಆಗಿರುವ ವೀಡಿಯೊಗಳಲ್ಲಿ ನಾಲ್ವರು ವಿಚಾರಣಾಧೀನ ಕೈದಿಗಳು – ಕಾರ್ತಿಕ್, ಧನಂಜಯ, ಮಂಜುನಾಥ್ ವಿ, ಮತ್ತು ಚರಣ್ ರಾವ್ ಬಿ – ಜೈಲಿನ ಬ್ಯಾರಕ್ ಸಂಖ್ಯೆ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ: SDPI ನಾಯಕರ ಭೇಟಿ

(ನ್ಯೂಸ್‌ ಕಡಬ) newskadaba.com,  ನ.11  ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿದಿದೆ. ಕಳೆದ ವರ್ಷ ತಡೆಗೋಡೆ ಅರ್ಧ ಕುಸಿದಿತ್ತು,ಆದರೆ ಮರು ನಿರ್ಮಾಣ ಅಥವಾ ದುರಸ್ತಿ ಕಾರ್ಯ ಮಾಡಿರಲಿಲ್ಲ. ಹಾಗಾಗಿ ಅದರ ಉಳಿದ ಸ್ವಲ್ಪ ಬಾಗ ಇಂದು ಕುಸಿದು ಬಿದ್ದಿದೆ. ಸಣ್ಣ ಮಕ್ಕಳು ಅಂಗನವಾಡಿಯಲ್ಲಿರುದರಿಂದ ಮುಂದಿನ ಬಾರಿ ವೈಜ್ಞಾನಿಕವಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು  ತಪ್ಪಿಸಲು ಸಂಭಂದ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಎಸ್ ಡಿ ಪಿ ಐ

ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ: SDPI ನಾಯಕರ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ನಿಧನ ಸುದ್ದಿ ಸುಳ್ಳು ಎಂದ ಕುಟುಂಬ

(ನ್ಯೂಸ್‌ ಕಡಬ) newskadaba.com,  ನ.08: ಬಾಲಿವುಡ್‌ನ ಹೀಮ್ಯಾನ್‌ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ನಟ ಧರ್ಮೇಂದ್ರ ತಮ್ಮ 89ನೇ ವಯಸ್ಸಿನಲ್ಲಿ ಮಂಗಳವಾರ ನಿಧನರಾಗಿದ್ದಾರೆ ಅನ್ನೋ ಸುದ್ದಿ ಮಂಗಳವಾರ ವ್ಯಾಪಕವಾಗಿ ಹಬ್ಬಿತ್ತು. ಆದರೆ, ಅವರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿದೆ. ಪುತ್ರಿ ಇಶಾ ಡಿಯೋಲ್‌ ಹಾಗೂ ಪತ್ನಿ ಹೇಮಾ ಮಾಲಿನಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಧರ್ಮೇಂದ್ರ ನಿಧನದ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು

ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ನಿಧನ ಸುದ್ದಿ ಸುಳ್ಳು ಎಂದ ಕುಟುಂಬ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಕಾಂತಾರ’, ‘ಕೆಜಿಎಫ್’ಗಾಯಕಿ ಅನನ್ಯ ಭಟ್

(ನ್ಯೂಸ್‌ ಕಡಬ) newskadaba.com,  ನ.11  ʻಸೋಜುಗಾದ ಸೂಜಿ ಮಲ್ಲಿಗೆʼ  ಹಾಡಿನಿಂದ ಜನಪ್ರಿಯರಾದ ಅನನ್ಯ ಭಟ್‌  ಹಸೆಮಣೆ ಏರಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಮ್ಯೂಜಿಷಿಯನ್ ಮತ್ತು ಡ್ರಮ್ಮರ್ ಮಂಜು ಅವರೊಂದಿಗೆ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ಇದೀಗ ಗಾಯಕಿಯ ಫ್ಯಾನ್ಸ್‌ ಸೋಷಿಯಲ್‌ ಮೀಡಿಯಾ ಮೂಲಕ ವಿಶಸ್‌ ತಿಳಿಸುತ್ತಿದ್ದಾರೆ. ಅನನ್ಯ ಭಟ್ ಕನ್ನಡದ ಜೊತೆಗೆ ತಮಿಳು, ತೆಲುಗು ಚಿತ್ರರಂಗದಲ್ಲೂ ಗಾಯನದ ಮೂಲಕ ಗುರುತಿಸಿಕೊಂಡವರು. ಕಂಚಿನ ಕಂಠ ಎಂದೇ ಅವರಿಗೆ ಫ್ಯಾನ್ಸ್‌ ಬಿರುದು ನೀಡಿದ್ದರು ಈ ಜೋಡಿ ಹಲವಾರು ಬಾರಿ ಒಟ್ಟಿಗೆ ಕಾಣಿಸಿಕೊಂಡಿತ್ತು. ಹೀಗಾಗಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಕಾಂತಾರ’, ‘ಕೆಜಿಎಫ್’ಗಾಯಕಿ ಅನನ್ಯ ಭಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ದೆಹಲಿ ಸ್ಫೋಟ ಪ್ರಕರಣ : ಯುಎಪಿಎ ಕಾಯ್ದೆಯಡಿ ಎಫ್ಐಆರ್

(ನ್ಯೂಸ್‌ ಕಡಬ) newskadaba.com,  ನ.08: ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಬಗ್ಗೆ ದೆಹಲಿ ಪೊಲೀಸರು ಇಂದು ಯುಎಪಿಎ ಕಾಯ್ದೆ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ, ಪ್ರಾಥಮಿಕ ಸಂಶೋಧನೆಗಳು ಫರಿದಾಬಾದ್‌ನಲ್ಲಿ ಪತ್ತೆಯಾದ ಆರ್‌ಡಿಎಕ್ಸ್ ಭಯೋತ್ಪಾದಕ ಘಟಕಕ್ಕೆ ಸಂಬಂಧವಿದೆ ಎಂದು ಸೂಚಿಸಿವೆ. ನಿನ್ನೆ ಸಂಭಿಸಿದ ಕಾರು ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿ 20 ಜನರು ಗಾಯಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಇಂದು ಬೆಳಿಗ್ಗೆ 11

ದೆಹಲಿ ಸ್ಫೋಟ ಪ್ರಕರಣ : ಯುಎಪಿಎ ಕಾಯ್ದೆಯಡಿ ಎಫ್ಐಆರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಬಾಬುರಾವ ಯಡ್ರಾಮಿ ಪುನರಾಯ್ಕೆ

(ನ್ಯೂಸ್‌ ಕಡಬ) newskadaba.com,  ನ.11  ಕಲಬುರಗಿ:ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪತ್ರಕರ್ತ ಬಾಬುರಾವ ಯಡ್ರಾಮಿ ಅವರು ಪುನರಾಯ್ಕೆಯಾಗಿದ್ದಾರೆ. ಆ ಮೂಲಕ ಯಡ್ರಾಮಿ ಅವರು 4ನೇ ಬಾರಿಗೆ ಜಿಲ್ಲಾಧ್ಯಕ್ಷರಾದಂತಾಗಿದೆ. ನಗರದ ಪತ್ರಿಕಾ ಭವನದಲ್ಲಿ ಸಂಘದ ಜಿಲ್ಲಾ ಘಟಕದ ಪ್ರಯುಕ್ತ ಭಾನುವಾರ ಮತದಾನ ನಡೆಯಿತು. ಬಾಬುರಾವ ಯಡ್ರಾಮಿ 170 ಮತ ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಚಂದ್ರಶೇಖರ ಕೌಲಗಾ 120 ಮತಗಳನ್ನು ಪಡೆದು ಪರಾಭವಗೊಂಡರು. 185 ಮತ ಗಳಿಸಿದ ಭೀಮಾಶಂಕರ

ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಬಾಬುರಾವ ಯಡ್ರಾಮಿ ಪುನರಾಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ ನಿಗೂಢ ಸ್ಫೋಟ: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ

(ನ್ಯೂಸ್‌ ಕಡಬ) newskadaba.com,  ನ.08: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ. ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್ ಮಾಡಲಾಗಿತ್ತು. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.

ದೆಹಲಿ ನಿಗೂಢ ಸ್ಫೋಟ: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಾಯಂದಿರ ಮರಣ ಪ್ರಮಾಣ ಇಳಿಕೆಗೆ ‘Mission Zero’ ಪ್ರಾರಂಭ; ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.08: ರಾಜ್ಯದಲ್ಲಿ ತಾಯಂದಿರ ಮರಣವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಮಿಷನ್ ಝೀರೋ’ನ್ನು ಪ್ರಾರಂಭಿಸಿದ್ದು, ಇದರ ಅಡಿಯಲ್ಲಿ ಹಲವಾರು ಹೊಸ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು. ವಿಕಾಸಸೌಧಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದ ತಾಯಂದಿರ ಮರಣ ಅನುಪಾತ (MMR) ರಾಷ್ಟ್ರೀಯ ಸರಾಸರಿಗಿಂತ ಉತ್ತಮವಾಗಿದ್ದರೂ, ಕೇರಳ, ತಮಿಳುನಾಡು ಮತ್ತು ತೆಲಂಗಾಣದಂತಹ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯವು ಸುಧಾರಣೆಯ ಅಗತ್ಯವಿದೆ ಎಂದು ಹೇಳಿದರು.

ತಾಯಂದಿರ ಮರಣ ಪ್ರಮಾಣ ಇಳಿಕೆಗೆ ‘Mission Zero’ ಪ್ರಾರಂಭ; ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top