News Kadaba

ರಾಜ್ಯದ ಪಂಚ ಗ್ಯಾರಂಟಿಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ ₹10,000 ಪ್ರಯೋಜನ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು:  ‘ರಾಜ್ಯದಲ್ಲಿ ಪಂಚ ಗ್ಯಾರಂಟಿಗಳಿಂದ ನಾಲ್ಕು ಜನರ ಕುಟುಂಬ ಕನಿಷ್ಠ ಸರಾಸರಿ ತಿಂಗಳಿಗೆ 10 ಸಾವಿರ ರು. ಪ್ರಯೋಜನ ಪಡೆಯುತ್ತಿದೆ. ತನ್ಮೂಲಕ ಕರ್ನಾಟಕ ಗ್ಯಾರಂಟಿ ಮಾದರಿ ಸಾಮಾಜಿಕ, ಆರ್ಥಿಕ ಕ್ರಾಂತಿಗೆ ಕಾರಣವಾಗಿದ್ದು, ಇದನ್ನು ರಾಷ್ಟ್ರೀಯ ಮಾದರಿಯಾಗಿ ಗುರುತಿಸಿ ಎಲ್ಲಾ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಆರ್ಥಿಕ ಬೆಂಬಲ ನೀಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಗ್ಯಾರಂಟಿ ಮಾದರಿಯನ್ನು ಗುರುತಿಸಿ ರಾಜ್ಯಗಳಿಗೆ ಹೆಚ್ಚುವರಿ ಹಾಗೂ ನ್ಯಾಯಬದ್ಧ ಆರ್ಥಿಕ ಬೆಂಬಲ […]

ರಾಜ್ಯದ ಪಂಚ ಗ್ಯಾರಂಟಿಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ ₹10,000 ಪ್ರಯೋಜನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಿಲಿಪೈನ್ಸ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ : ಚಂಡಮಾರುತಕ್ಕೆ 241 ಜನ ಬಲಿ

(ನ್ಯೂಸ್‌ ಕಡಬ) newskadaba.com,  ನ.05:  ಫಿಲಿಪೈನ್ಸ್‌ನಲ್ಲಿ ಈ ವರ್ಷ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪದಲ್ಲಿ ಕಲೇಗಿ ಚಂಡಮಾರುತವು ಮಧ್ಯ ಪ್ರಾಂತ್ಯಗಳಲ್ಲಿ ಕನಿಷ್ಠ 241 ಜನರನ್ನು ಬಲಿ ತೆಗೆದುಕೊಂಡು ಕಾಣೆಯಾಗಿದೆ.ಇದರ ನಡುವೆ ಫಿಲಿಪೈನ್‌್ಸನ ಅಧ್ಯಕ್ಷ ಫರ್ಡಿನಾಂಡ್‌ ಮಾರ್ಕೋಸ್‌‍ ಜೂನಿಯರ್‌ ಇಂದು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಉಷ್ಣವಲಯದ ಚಂಡಮಾರುತವು ದಕ್ಷಿಣ ಚೀನಾ ಸಮುದ್ರಕ್ಕೆ ಬೀಸುವ ಮೊದಲು ಕಲೇಗಿ ಕನಿಷ್ಠ 114 ಜನರನ್ನು ಬಲಿ ತೆಗೆದುಕೊಂಡಿತು, ಅವರಲ್ಲಿ ಹೆಚ್ಚಿನವರು ಹಠಾತ್‌ ಪ್ರವಾಹದಲ್ಲಿ ಮುಳುಗಿ ಸಾವನ್ನಪ್ಪಿದರು ಮತ್ತು 127

ಫಿಲಿಪೈನ್ಸ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ : ಚಂಡಮಾರುತಕ್ಕೆ 241 ಜನ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶುಭ ಸುದ್ದಿ, ಇನ್ನು ಮುಂದೆ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಸರಕಾರ ಚಿಂತನೆ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು : ಇದುವರೆಗೂ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ನೀಡಲಾಗುತ್ತಿದೆ. ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಯೋಜನೆ ರೂಪಿಸಿದೆ. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಸರಕಾರ ಚಿಂತನೆ ನಡೆಸಿದೆ.

ಶುಭ ಸುದ್ದಿ, ಇನ್ನು ಮುಂದೆ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಸರಕಾರ ಚಿಂತನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ ಕಂತೆ ಹಣ..!

(ನ್ಯೂಸ್‌ ಕಡಬ) newskadaba.com,  ನ.05:  ಕೊಪ್ಪ ಪಟ್ಟಣದಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಸೀಜ್ ಮಾಡಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದ್ದು, ಪೊಲೀಸ್ ಇಲಾಖೆಯಲ್ಲೇ ಚರ್ಚೆಗೆ ಗ್ರಾಸವಾಗಿದೆ. ಕಳೆದ ಒಂದು ತಿಂಗಳಿಂದ ಪೊಲೀಸ್ ಠಾಣೆಯ ಆವರಣದಲ್ಲಿ ನಿಂತಿದ್ದ ಕಾರನ್ನು ಪರಿಶೀಲಿಸಿದಾಗ ಈ ಆಘಾತಕಾರಿ ಮಾಹಿತಿ ಹೊರಬಂದಿದೆ. ಈ ಕಾರು ಮಾಜಿ ಶಿಕ್ಷಣ ಸಚಿವ ದಿ. ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟದ್ದು. ನೇಪಾಳಿ ಗ್ಯಾಂಗ್ ವಿರುದ್ಧ ನಡೆದ ತನಿಖೆಯಲ್ಲಿ

ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ ಕಂತೆ ಹಣ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.05:  ಮುಂದಿನ ಎರಡು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ. ನ.6ರಂದು ಕರಾವಳಿ ಜಿಲ್ಲೆಗಳು, ಉತ್ತರ

ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನಗಣಮನ ಗೀತೆ ರಚನೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ನ.06 ಕಾರವಾರ: ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆಯಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದು, ಈ ಹೇಳಿಕೆ ವಿವಾದ ಸೃಷ್ಟಿಸಿದೆ.ಹೊನ್ನಾವರದಲ್ಲಿ ಬುಧವಾರ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಏಕತೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಗೇರಿಯವರು ಮಾತನಾಡಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಜನ ಗಣ ಮನಕ್ಕೆ ಸಮನಾಗಿದೆ. ವಂದೇ ಮಾತರಂ ಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಸಾಕಷ್ಟು ಒತ್ತಡವಿತ್ತು.

ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನಗಣಮನ ಗೀತೆ ರಚನೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ; ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: 2025ರ ಅಕ್ಟೋಬರ್‌ನಲ್ಲಿ ಜಿಎಸ್‌ಟಿ ಸಂಗ್ರಹ ಬೆಳವಣಿಗೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ. ದಸರಾ ಹಬ್ಬದ ಸಮಯದಲ್ಲಿ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಹೆಚ್ಚಿನ ಸಂಗ್ರಹ ಮಾಡಿದ್ದು, ಸೆಪ್ಟೆಂಬರ್‌ನಿಂದ ತೆರಿಗೆ ಆದಾಯದಲ್ಲಿ 10% ಬೆಳವಣಿಗೆ ದಾಖಲಾಗಿದೆ.2024ರ ಅಕ್ಟೋಬರ್​ಗೆ ಹೋಲಿಸಿದರೆ 2025ರ ಅಕ್ಟೋಬರ್​ ಆಂತರಿಕ ಜಿಎಸ್​​ಟಿ 1,45,052 ಕೋಟಿ ರೂ. ಸಂಗ್ರಹವಾಗಿದೆ. ಅಂದರೆ ಶೇ.2ರಷ್ಟು ಬೆಳವಣಿಗೆ ಹೊಂದಿದೆ. ಹಣಕಾಸು ಸಚಿವಾಲಯ ರಾಜ್ಯಗಳ ಜಿಎಸ್​​ಟಿ ಆದಾಯದ ಸಂಗ್ರಹ ಮತ್ತು ಬೆಳವಣಿಗೆ ದರ ಮಾಹಿತಿ ಬಿಡುಗಡೆ ಮಾಡಿದ್ದು, ಆ

ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ; ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ರೈಲ್ವೆ, ಬೆಂಗಳೂರಿನಿಂದ ಬಿಹಾರಕ್ಕೆ ವಿಶೇಷ ರೈಲುಗಳನ್ನು ಸಂಚರಿಸಲಿದೆ. ಬಿಹಾರದಿಂದ ಹೊರಡುವ ರೈಲು ರೈಲು ಸಂಖ್ಯೆ 03403 ನಾಳೆ ನವೆಂಬರ್ 7 ರಂದು ರಾತ್ರಿ 10.30 ಕ್ಕೆ ಭಾಗಲ್ಪುರದಿಂದ ಹೊರಟು ನವೆಂಬರ್ 9 ರಂದು ಕೆಆರ್ ಪುರಂ ಮತ್ತು ಎಸ್‌ಎಂವಿಟಿ ಬೆಂಗಳೂರು ಮೂಲಕ ರಾತ್ರಿ 11.50 ಕ್ಕೆ ಯಶವಂತಪುರ ತಲುಪಲಿದೆ. ಬೆಂಗಳೂರಿನಿಂದ ಹೊರಡುವ ರೈಲು ರೈಲು ಸಂಖ್ಯೆ 03404 ನವೆಂಬರ್

ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.05:  ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ (SSLC, 2nd PUC Exam 2026 TimeTable) ಪ್ರಕಟಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಮನೆಯಲ್ಲಿ ಮಹಿಳೆ ಕತ್ತು ಹಿಸುಕಿ ಕೊಲೆ

(ನ್ಯೂಸ್‌ ಕಡಬ) newskadaba.com,  ನ.05:  ಬೆಂಗಳೂರಿನಲ್ಲಿ ಬುಧವಾರ 65 ವರ್ಷದ ಮಹಿಳೆಯೊಬ್ಬರನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಲಾಗಿದ್ದು, ಅವರ ಚಿನ್ನದ ಮಂಗಳಸೂತ್ರ ಕಾಣೆಯಾಗಿದ್ದರಿಂದ ಇದು ಕಳ್ಳರ ಕೃತ್ಯ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಹಳ್ಳಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಶ್ರೀಲಕ್ಷ್ಮಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕೆಲಸದಲ್ಲಿದ್ದ ಆಕೆಯ ಪತಿ ಅಶ್ವಥ್ ನಾರಾಯಣ್ ಅವರು ದೂರವಾಣಿ ಮೂಲಕ ಪತ್ನಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು: ಮನೆಯಲ್ಲಿ ಮಹಿಳೆ ಕತ್ತು ಹಿಸುಕಿ ಕೊಲೆ Read More »

ಕರಾವಳಿ
Scroll to Top