News Kadaba

ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ

(ನ್ಯೂಸ್‌ ಕಡಬ) newskadaba.com,  ಅ.05: ಕಳೆದ ಎರಡು ತಿಂಗಳಲ್ಲಿ 13 ಬಾರಿ ಭೂಮಿ ಕಂಪಿಸಿದ್ದರೂ, ಇಂದು 7.45ರ ಸುಮಾರಿಗೆ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ವಿಜಯಪುರ ಸೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆತಂಕ ಮೂಡಿಸಿದೆ. ರಿಕ್ಟರ್ ಸ್ಕೇಲ್‌ನಲ್ಲಿ 3.1 ತೀವ್ರತೆಯ ಈ ಭೂಕಂಪನವು ವಿಜಯಪುರ ನಗರ ಹೊರತಾಗಿ ತಿಕೋಟ, ಕಳ್ಳಕವಟಗಿ, ತೊರವಿ, ಶಿವಗಿರಿ ಮತ್ತು ಹೊನ್ನೂಟಗಿ ಸೇರಿದಂತೆ ವಿಜಯಪುರ ಮತ್ತು ತಿಕೋಟ ತಾಲೂಕುಗಳಲ್ಲಿ ತೀವ್ರವಾಗಿ ಅನುಭವಕ್ಕೆ ಬಂದಿದೆ. ಭೂಮಿ ನಡುಗುತ್ತಿದ್ದಂತೆ ಮನೆಯಿಂದ ಭಯಭೀತರಾಗಿ […]

ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಿಷ್ಕೃತ ವೇತನ ರಚನೆಯು ಜನವರಿ 1, 2025 ರಿಂದ ಜಾರಿ

(ನ್ಯೂಸ್‌ ಕಡಬ) newskadaba.com,  ಅ.04: ವಿವಿಧ ಸರ್ಕಾರಿ ಇಲಾಖೆಗಳು, ಮಂಡಳಿಗಳು, ನಿಗಮಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅರೆಕಾಲಿಕ ಮತ್ತು ದಿನಗೂಲಿ ನೌಕರರ ವೇತನ ರಚನೆಯನ್ನು ಪರಿಷ್ಕರಿಸಿದೆ. ಪರಿಷ್ಕೃತ ವೇತನ ರಚನೆಯು ಜನವರಿ 1, 2025 ರಿಂದ ಜಾರಿಗೆ ಬರಲಿದೆ. ಈ ಬದಲಾವಣೆಯನ್ನು ಇಂದು ಜಾರಿಗೆ ತರುವುದಾಗಿ ಹೇಳಿಕೊಳ್ಳುತ್ತಿದ್ದರೂ, ಪಾವತಿಗಳನ್ನು ಜನವರಿಯಿಂದ ಮಾತ್ರ ಮಾಡಲಾಗುತ್ತದೆ. ಹರಿಯಾಣದ ಮುಖ್ಯ ಕಾರ್ಯದರ್ಶಿ ಅನುರಾಗ್ ರಸ್ತೋಗಿ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ಕಾರ್ಮಿಕರ ಸಂಭಾವನೆಯನ್ನು ಹೆಚ್ಚಿಸುವಂತೆ ಕೋರಿ ವಿವಿಧ ಇಲಾಖೆಗಳು ಮತ್ತು

ಪರಿಷ್ಕೃತ ವೇತನ ರಚನೆಯು ಜನವರಿ 1, 2025 ರಿಂದ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಮತಧರ್ಮ ಮರೆತು ಹಸುಗೂಸಿಗೆ ಆಸರೆಯಾದ ಮಹಾತಾಯಿ ಚಂದ್ರಪ್ರಭಾ ಗೌಡ!

(ನ್ಯೂಸ್‌ ಕಡಬ) newskadaba.com,  ಅ.04 ಪುತ್ತೂರು: ನಗರದಲ್ಲೊಂದು ಭೀಕರ ಅಪಘಾತ, ನಜ್ಜುಗುಜ್ಜಾದ ಆಟೋ ರಿಕ್ಷಾ, ಗಂಭೀರ ಗಾಯಗೊಂಡ ಆರು ಜನ. ಒಂದು ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ್ರೆ, ಮತ್ತೊಂದು ಜೀವ ಆಸ್ಪತ್ರೆಯಲ್ಲಿ ನರಳಾಡಿ ಜೀವ ಬಿಟ್ಟಿತ್ತು. ಕಾರಿನ ದಾಳಿಗೆ ಸಿಲುಕಿದ ರಿಕ್ಷಾ ನಜ್ಜುಗುಜ್ಜಾಗಿ ಒಳಗಿದ್ದ ಕೆಲವರು ಗಾಯಗೊಂಡು ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದಾರೆ. ಇವೆಲ್ಲದರ ನಡುವೆ, ಮಾತೃಹೃದಯದ ಮಹಾತ್ಕಾರ್ಯಕ್ಕೆ ಜನರು ಶಾಭಾಶ್‌ ಎನ್ನುತ್ತಿದ್ದಾರೆ.. ಘಟನೆ : ಅ.31ರಂದು ಶುಕ್ರವಾರ ಸಂಜೆ 4.30ಕ್ಕೆ ಪುತ್ತೂರು ಹೊರವಲಯದ ಪರ್ಪುಂಜ ಬಳಿ ರಿಕ್ಷಾ-

ಪುತ್ತೂರಿನಲ್ಲಿ ಮತಧರ್ಮ ಮರೆತು ಹಸುಗೂಸಿಗೆ ಆಸರೆಯಾದ ಮಹಾತಾಯಿ ಚಂದ್ರಪ್ರಭಾ ಗೌಡ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್.05 ರಂದು ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು: ನಾಳೆಯಿಂದ ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದೀಪಾವಳಿ ಹಬ್ಬದ ಬಳಿಕ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಆದರೆ ನವೆಂಬರ್ 5ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ…. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ

ನವೆಂಬರ್.05 ರಂದು ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಲ್ಕಿ ಬಳಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು

(ನ್ಯೂಸ್‌ ಕಡಬ) newskadaba.com,  ನ.03: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ-ಎಸ್.ಕೋಡಿ ಬಳಿಯ ರೋಹನ್ ಎಸ್ಟೇಟ್ ಮುಂಭಾಗ ನಡೆದಿದೆ. ಘಟನೆಯಿಂದ ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ರವಿವಾರ ಸಂಜೆ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ. ಗಾಯಾಳುಗಳು ಎಸ್. ಕೋಡಿಯಾಗಿ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ

ಮುಲ್ಕಿ ಬಳಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ

(ನ್ಯೂಸ್‌ ಕಡಬ) newskadaba.com,  ನ.03: ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ (Devisha Shetty) ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತುಅಭಿವೃದ್ಧಿ ಸಮಿತಿ ವತಿಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು. ದೇವಸ್ಥಾನದ ಪ್ರಾಂಗಣದ ಮುಂದಿರುವ ಬೃಹತ್ ಕಲ್ಲಿನ ಕಂಬವನ್ನು ಸೇವೆ ರೂಪದಲ್ಲಿ ಸೂರ್ಯಕುಮಾರ್ ದಂಪತಿ ಕೊಟ್ಟಿದ್ದರು. ಆ ಕಂಬದ ಮುಂದೆ ದೇವಿಶಾ

ಉಡುಪಿ: ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ Read More »

ಕರಾವಳಿ, ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com,  ನ.03: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್‌ 10ಕ್ಕೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 57ನೇ ಸೆಷನ್ ಕೋರ್ಟ್ ಹಾಜರಾದರು. ಖುದ್ದು ಹಾಜರಾಗಲು ಕೋರ್ಟ್ ಸೂಚಿಸಿತ್ತು. ಇದರಂತೆ ಭಾರಿ ಬಿಗಿ ಭದ್ರತೆಯೊಂದಿಗೆ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಸೆಷನ್ ಕೋರ್ಟ್‌ಗೆ ಹಾಜರಾದರು. ಇದೀಗ ದರ್ಶನ್‌ ಸೇರಿದಂತೆ

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಬಾಣಲೆ ಧರಿಸಿದ ಚಾಲಕ

(ನ್ಯೂಸ್‌ ಕಡಬ) newskadaba.com,  ನ.03: ಹೈಲ್ಮೆಟ್ ಧರಿಸದಿದ್ರೆ, ಸೀಟ್ ಬೆಲ್ಟ್ ಧರಿಸದಿದ್ರೆ ಹಾಗೇ ಟ್ರಾಫಿಕ್ ರೂಲ್ಸ್‌ಗಳನ್ನು ಬ್ರೇಕ್ ಮಾಡಿದ್ರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುವುದು ಸಾಮಾನ್ಯ. ಹೀಗೆ ಬೈಕ್‌ನಲ್ಲಿ ಕುಳಿತಿರುವ ಹಿಂಬದಿ ಸವಾರ ದಂಡ ತಪ್ಪಿಸಲು ಹೆಲ್ಮೆಟ್ ಬದಲಿಗೆ ಬಾಣಲೆ ಹಿಡಿದು ಸವಾರಿ ಮಾಡಿರುವುದು ಕಂಡುಬಂದಿದೆ. ನವೆಂಬರ್ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದುವರೆಗೆ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಇದು ಬೇಜವಾಬ್ದಾರಿತನದ

ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಬಾಣಲೆ ಧರಿಸಿದ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಬಿದ್ದು: 20 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.03 ಹೈದರಾಬಾದ್:  ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ ೨೦ ಮಂದಿ ಪ್ರಯಾಣಿಕರು ಸಾವನ್ನಪ್ಪಿ ಹಲವರು ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಮಿರಾಜಗುಡಾ ಬಳಿ ಆರ್‌ಟಿಸಿ ಬಸ್ ಮೇಲೆ ಟಿಪ್ಪರ್‌ನಲ್ಲಿದ್ದ ಜಲ್ಲಿಕಲ್ಲು ಬಿದ್ದ ಪರಿಣಾಮ ೨೦ ಮಂದಿ ಪ್ರಯಾಣಿಕರು ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರು ಜಲ್ಲಿಕಲ್ಲಿನ ಅಡಿ

ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಬಿದ್ದು: 20 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ₹51 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

(ನ್ಯೂಸ್‌ ಕಡಬ) newskadaba.com,  ನ.03: 2025 ರ ಮಹಿಳಾ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮಹಿಳೆಯರ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ಬರೆದ ಹರ್ಮನ್‌ಪ್ರೀತ್‌ ಕೌರ್‌ಸಾರಥ್ಯದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ(BCCI) (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನಗದು ಬಹುಮಾನವನ್ನು ಘೋಷಿಸಿದೆ. ಭಾರತೀಯ ತಂಡ, ಸಹಾಯಕ ಸಿಬ್ಬಂದಿ ಮತ್ತು ತರಬೇತುದಾರರಿಗೆ 51 ಕೋಟಿ ರೂ. ನಗದು ಬಹುಮಾನವನ್ನು ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಈ ನಗದು ಬಹುಮಾನವನ್ನು ಘೋಷಿಸಿದರು. “ಜಯ್ ಶಾ ಬಿಸಿಸಿಐನ ಮುಖ್ಯಸ್ಥರಾದಾಗಿನಿಂದ,

ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ₹51 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ Read More »

ಕ್ರೀಡಾ ನ್ಯೂಸ್
Scroll to Top