News Kadaba

ಮೆಕ್ಸಿಕೋ ಸೂಪರ್ ಮಾರ್ಕೆಟ್‌ನಲ್ಲಿ ಭೀಕರ ಬೆಂಕಿ ಅವಘಡ – 23 ಜನ ಸಾವು

(ನ್ಯೂಸ್‌ ಕಡಬ) newskadaba.com,  ನ.03 ಮೆಕ್ಸಿಕೋ: ಮೆಕ್ಸಿಕೋದ ಸೊನಾರಾ ರಾಜ್ಯದಲ್ಲಿರುವ ಒಂದು ಸೂಪರ್ ಮಾರ್ಕೆಟ್‌ನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 23 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಸಂಭವಿಸಿದ ಸಮಯದಲ್ಲಿ ಮಾರ್ಕೆಟ್ ಒಳಗೆ ಗ್ರಾಹಕರು ಹಾಗೂ ಸಿಬ್ಬಂದಿ ಇದ್ದರೆಂದು ವರದಿಯಾಗಿದೆ. ಬೆಂಕಿ ಅಷ್ಟರ ಮಟ್ಟಿಗೆ ಉಗ್ರವಾಗಿ ಹೊತ್ತಿಕೊಂಡಿತ್ತು ಎಂಬುದಾಗಿ ಪ್ರತ್ಯಕ್ಷ ಸಾಕ್ಷಿಗಳು ತಿಳಿಸಿದ್ದಾರೆ. ಮಾರ್ಕೆಟ್ ಹೊರಗೆ ನಿಲ್ಲಿಸಿದ್ದ ಹಲವು ಕಾರುಗಳಿಗೂ ಬೆಂಕಿ ತಗುಲಿ ಅವು ಸಂಪೂರ್ಣ […]

ಮೆಕ್ಸಿಕೋ ಸೂಪರ್ ಮಾರ್ಕೆಟ್‌ನಲ್ಲಿ ಭೀಕರ ಬೆಂಕಿ ಅವಘಡ – 23 ಜನ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶುದ್ಧ ನೀರಿನ ಘಟಕದಲ್ಲಿ ಏಕರೂಪ ದರ

(ನ್ಯೂಸ್‌ ಕಡಬ) newskadaba.com,  ನ.03: ಬೆಂಗಳೂರು ಜಲಮಂಡಳಿಯು ನಗರದಲ್ಲಿರುವ ಶುದ್ಧ ನೀರಿನ ಘಟಕಗಳಿಂದ ಕ್ಯೂ ಆರ್‌ಕೋಡ್ ಸ್ಕ್ಯಾನಿಂಗ್ ಮೂಲಕ ಅಥವಾ ಪ್ರೀಪೇಯ್ಡ್‌ ಕಾರ್ಡ್ ಮೂಲಕ ನೀರು ಪಡೆಯುವ ಹಾಗೂ ಏಕರೂಪ ದರ ನಿಗದಿ ಸಂಬಂಧ ಯೋಜನೆಯನ್ನು ರೂಪಿಸಿದೆ ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ಸಂಪೂರ್ಣ ತಂತ್ರಜ್ಞಾನ ಆಧಾರಿತವಾಗಿ ನಿರ್ವಹಿಸಲು ಜಲಮಂಡಳಿ ಮುಂದಾಗಿದ್ದು, ವರ್ಷದ ಹಿಂದೆಯೇ ಬಿಬಿಎಂಪಿಯಿಂದ ವಶಕ್ಕೆ ಪಡೆದಂತಹ ಶುದ್ದ ನೀರಿನ ಘಟಕಗಳ ನಿರ್ವಹಣಾ ಸ್ವರೂಪವನ್ನೇ ಬದಲಾಯಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಟೆಂಡರ್

ಶುದ್ಧ ನೀರಿನ ಘಟಕದಲ್ಲಿ ಏಕರೂಪ ದರ Read More »

ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ ಚೆಕ್ ಮಾಡಿ

(ನ್ಯೂಸ್‌ ಕಡಬ) newskadaba.com,  ನ.03: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ . ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆ ಕಂಡು ಬಂದಿದ್ದು, 11,290 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 17 ರೂ. ಏರಿಕೆಯಾಗಿ, 12,317 ರೂ ಆಗಿದೆ.   22 ಕ್ಯಾರಟ್‌ನ 8 ಗ್ರಾಂ ಚಿನ್ನ 90,320 ರೂ. ಬಾಳಿದರೆ, 10 ಗ್ರಾಂಗೆ ನೀವು 1,12,900 ಹಾಗೂ

ಇಂದಿನ ಚಿನ್ನದ ದರ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗು;ಕೊನೆಗೂ ಮಗು ತಾಯಿಯ ಮಡಿಲಿಗೆ…!

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗುವನ್ನು ಸುರಕ್ಷಿತವಾಗಿ ಪತ್ತೆ ತಾಯಿಯ ಮಡಿಲಿಗೆ ಸೇರಿಸುವ ಘಟನೆಯೊಂದು ಶನಿವಾರ ನಡೆದಿದೆ. ನ.1ರಂದು ಮಧ್ಯಾಹ್ನ ಸುಮಾರು 12.30ಕ್ಕೆ ಮೆಜೆಸ್ಟಿಕ್ ನಿಲ್ದಾಣದಲ್ಲಿ 6 ವರ್ಷದ ಹೆಣ್ಣು ಮಗು, ತಾಯಿಯಿಂದ ಬೇರ್ಪಟ್ಟಿದ್ದಳು. ಪ್ರಯಾಣಿಕರೊಬ್ಬರು ಮಗುವನ್ನು ಗುರುತಿಸಿ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದ್ದರು. ಸಿಬ್ಬಂದಿ ಮೆಜೆಸ್ಟಿಕ್ ನಿಲ್ದಾಣದಲ್ಲಿಯೇ ಮಗುವನ್ನು ಕೂರಿಸಿ, ಎಲ್ಲಾ ನಿಲ್ದಾಣಗಳ ನಿಯಂತ್ರಕರಿಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ನಿಲ್ದಾಣದ ನಿಯಂತ್ರಕರು

ಬೆಂಗಳೂರಿನ ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ತಾಯಿಯಿಂದ ತಪ್ಪಿ ಹೋದ 6 ವರ್ಷದ ಮಗು;ಕೊನೆಗೂ ಮಗು ತಾಯಿಯ ಮಡಿಲಿಗೆ…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ ಆರ್ಭಟ ಕಡಿಮೆ; ಇಂದಿನ ಹವಾಮಾನ ಇಲಾಖೆ ವರದಿ

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು:ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯಿರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ ಆರ್ಭಟ ಕಡಿಮೆ; ಇಂದಿನ ಹವಾಮಾನ ಇಲಾಖೆ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು| ಕಾರು-ಆಟೋ ನಡುವೆ ಭೀಕರ ಅಪಘಾತ: ನಾಲ್ಕೂವರೆ ವರ್ಷದ ಮಗು ಸಹಿತ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com,  ನ.03 ಪುತ್ತೂರು : ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗರು ಗ್ರಾಮದ ಪರ್ಪುಂಜ ಅಬ್ರಾಡ್ ಹಾಲ್ ಬಳಿಯಲ್ಲಿ ಶನಿವಾರ(ನ.01)  ಸಂಜೆ ಕಾರು ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ರಾತ್ರಿ ಮಗುವಿನ ಅಜ್ಜಿ ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬನ್ನೂರು ನಿವಾಸಿ ಹನೀಫ್ ಅವರ ಮಗಳು ಶಾಝ್ವಾ ಫಾತಿಮಾ (4 ವರ್ಷ 6 ತಿಂಗಳು) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು

ಪುತ್ತೂರು| ಕಾರು-ಆಟೋ ನಡುವೆ ಭೀಕರ ಅಪಘಾತ: ನಾಲ್ಕೂವರೆ ವರ್ಷದ ಮಗು ಸಹಿತ ಇಬ್ಬರು ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್‌ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು:- ಪದವಿ ಕಾಲೇಜುಗಳ ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್‌ ಪರೀಕ್ಷೆಯು ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದು ನಡೆಯಿತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡು, ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿತ್ತು. ಒಟ್ಟು 33 ವಿಷಯಗಳಿಗೆ ನಡೆದ ಕೆ-ಸೆಟ್‌ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದರು. ಬೆಂಗಳೂರು ಸೇರಿದಂತೆ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆಯನ್ನು ಪ್ರಾಧಿಕಾರ ನಡೆಸಿದೆ. ಬೆಂಗಳೂರಿನಲ್ಲಿ ಎಲ್ಲ

11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್‌ ಪರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ನ.03 : ಬೆಂಗಳೂರು: ಅಂತರರಾಷ್ಟ್ರೀಯ ಪದಕ ವಿಜೇತರಿಗೆ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿವಾರ ಹೇಳಿದರು.ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದರು. ಈ ಸಮಯದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಕೇರಳ ಕಡುಬಡತನ ಮುಕ್ತ ರಾಜ್ಯ

(ನ್ಯೂಸ್‌ ಕಡಬ) newskadaba.com,  ನ..01: ಕೇರಳ ರಾಜ್ಯವನ್ನು ಕಡು ಬಡತನ ಮುಕ್ತ ರಾಜ್ಯವೆಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದು ಕೇರಳ ಸರ್ಕಾರ ಅನುಷ್ಠಾನಗೊಳಿಸಿರುವ ತೀವ್ರ ಬಡತನ ನಿರ್ಮೂಲನಾ ಯೋಜನೆಯ ಫಲಶ್ರುತಿ ಎಂದೇ ಪರಿಗಣಿಸಲಾಗುತ್ತದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ರಾಜ್ಯದ ಸಂಸ್ಥಾಪನಾ ದಿನವಾದ ನವೆಂಬರ್ 1ರಂದು ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳವನ್ನು ಅತ್ಯಂತ ಹೆಚ್ಚಿನ ಬಡತನದಿಂದ ಸಂಪೂರ್ಣವಾಗಿ ಮುಕ್ತಗೊಳಿಸಿದ ಭಾರತದ ಮೊದಲ ರಾಜ್ಯವೆಂದು ಔಪಚಾರಿಕವಾಗಿ ಘೋಷಿಸಿದರು. ಈ ಮೂಲಕ ಕೇರಳ ರಾಜ್ಯ ರಾಷ್ಟ್ರ ಮತ್ತು

ಇನ್ಮುಂದೆ ಕೇರಳ ಕಡುಬಡತನ ಮುಕ್ತ ರಾಜ್ಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತ್ತೊಂದು ಕಾಲ್ತುಳಿತ ಪ್ರಕರಣ: 10 ಭಕ್ತರ ಸಾವು, ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದುರಂತ!

(ನ್ಯೂಸ್‌ ಕಡಬ) newskadaba.com,  ನ..01: ದೇಶದಲ್ಲಿ ಮತ್ತೊಂದು ಕಾಲ್ತುಳಿತ ಪ್ರಕರಣ ವರದಿಯಾಗಿದ್ದು, ಆಂಧ್ರಪ್ರದೇಶದ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ ಶ್ರೀಕಾಕುಳನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು ದುರಂತದಲ್ಲಿ ಕನಿಷ್ಛ 10 ಮಂದಿ ಭಕ್ತರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ, ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ಈ ಸಮಯದಲ್ಲಿ, ಜನಸಂದಣಿ ಹೆಚ್ಚಾದ ಕಾರಣ

ಮತ್ತೊಂದು ಕಾಲ್ತುಳಿತ ಪ್ರಕರಣ: 10 ಭಕ್ತರ ಸಾವು, ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದುರಂತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top