News Kadaba

ಆಧಾರ್, ಬ್ಯಾಂಕ್, ಪಿಂಚಣಿ ಸೇರಿ ಬದಲಾಗಿವೆ 7 ಹಣಕಾಸು ನಿಯಮಗಳು!

(ನ್ಯೂಸ್‌ ಕಡಬ) newskadaba.com,  ನ..01: ನವೆಂಬರ್ ತಿಂಗಳ ಆರಂಭದೊಂದಿಗೆ ಭಾರತದಾದ್ಯಂತ ಹಲವು ಪ್ರಮುಖ ಹಣಕಾಸು ಮತ್ತು ಬ್ಯಾಂಕಿಂಗ್ ನಿಯಮಗಳು ಬದಲಾಗಿವೆ. ಆಧಾರ್ ಕಾರ್ಡ್ ಅಪ್‌ಡೇಟ್ ಶುಲ್ಕದಿಂದ ಹಿಡಿದು ಬ್ಯಾಂಕ್ ನಾಮಿನೇಷನ್ ನಿಯಮ, ಜಿಎಸ್ಟಿ ಸ್ಲ್ಯಾಬ್‌ಗಳು, ಪಿಂಚಣಿ ಮತ್ತು ಕ್ರೆಡಿಟ್ ಕಾರ್ಡ್ ಶುಲ್ಕಗಳವರೆಗೂ ಹಲವು ಹೊಸ ನಿಯಮಗಳು ಇಂದಿನಿಂದ ಜಾರಿಗೆ ಬಂದಿವೆ. ಈ ಬದಲಾವಣೆಗಳು ಜನಸಾಮಾನ್ಯರ ದಿನನಿತ್ಯದ ಹಣಕಾಸು ವ್ಯವಹಾರಗಳ ಮೇಲೆ ನೇರ ಪರಿಣಾಮ ಬೀರುವಂತಿವೆ. ಆಧಾರ್ ಕಾರ್ಡ್ ಅಪ್‌ಡೇಟ್ ಶುಲ್ಕದಲ್ಲಿ ಪರಿಷ್ಕರಣೆ ನಡೆದಿದೆ. ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ […]

ಆಧಾರ್, ಬ್ಯಾಂಕ್, ಪಿಂಚಣಿ ಸೇರಿ ಬದಲಾಗಿವೆ 7 ಹಣಕಾಸು ನಿಯಮಗಳು! Read More »

ಬ್ರೇಕಿಂಗ್ ನ್ಯೂಸ್

ಕನ್ನಡ ಭಾಷೆ ಮೇಲ್ದರ್ಜೆಗೆ ಹೊಸ ನೀತಿ : ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ನ..01: ಕೃತಕಬುದ್ಧಿಮತ್ತೆಯ ತಂತ್ರಜ್ಞಾನ ಇಡೀ ಜಗತ್ತನ್ನು ಆಕ್ರಮಿಸುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗುವ ಆತಂಕವಿದೆ. ಹೊಸ ಸವಾಲಿಗೆ ತಕ್ಕ ಹಾಗೆ ಭಾಷೆಯನ್ನು ಸಜ್ಜುಗೊಳಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆಗೆ ಅನುಗುಣವಾಗಿ ಭಾಷೆಯನ್ನು ಮೇಲ್ದರ್ಜೆಗೆರಿಸಲು ತಂತ್ರಜ್ಞರು ಹಾಗೂ ವಿದ್ವಾಂಸರು ಒಗ್ಗೂಡಿ ಕೆಲಸ ಮಾಡಬೇಕು. ಸರ್ಕಾರ ಕೂಡ ಕನ್ನಡ ಭಾಷೆ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟಕ್ಕೇರಿಸಲು ಹೊಸ ನೀತಿ ರೂಪಿಸಲಿದೆ ಎಂದು

ಕನ್ನಡ ಭಾಷೆ ಮೇಲ್ದರ್ಜೆಗೆ ಹೊಸ ನೀತಿ : ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ

(ನ್ಯೂಸ್‌ ಕಡಬ) newskadaba.com,  ನ.01 ಚಿಕ್ಕಮಗಳೂರು: ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ ನಡೆಯುತ್ತಿದೆ. ಏಕಲವ್ಯನ ನೇತೃತ್ವದಲ್ಲಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಯಲಿದೆ. ಇಂದು ಸಹ ಕಾಡಾನೆಗಳು ತೋಟದ ಮೇಲೆ ದಾಳಿ ನಡೆಸಿ, ಅಡಿಕೆ ಹಾಗೂ ಬಾಳೆಗಿಡಗಳನ್ನು ನಾಶ ಮಾಡಿವೆ. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಸಚಿವ ಕೆ.ಜೆ ಜಾರ್ಜ್ ಅವರಿಗೂ

ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯೋಗಾವಕಾಶಗಳ ಕೊರತೆ ಸೇರಿ ಹಲವು ಕಾರಣಗಳಿಗಾಗಿ ಕನ್ನಡ M.A ದಾಖಲಾತಿಯಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ..01: ಕಳೆದ ಕೆಲವು ವರ್ಷಗಳಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕನ್ನಡ ಪ್ರಾಧ್ಯಾಪಕರು ಅಭಿಪ್ರಾಯ ಪಟ್ಟಿದ್ದಾರೆ. ಈ ಕುಸಿತಕ್ಕೆ ಹಲವಾರು ಕಾರಣಗಳಿವೆ, ಅವುಗಳಲ್ಲಿ ಪ್ರಮುಖವಾದವು, ಸೀಮಿತ ಕೆಲಸದ ಅವಕಾಶಗಳು, ಕನ್ನಡ ವಿಭಾಗಗಳಲ್ಲಿ ಶಾಶ್ವತ ಉಪನ್ಯಾಸಕರ ಕೊರತೆ ಮತ್ತು ಮಾನವಿಕ ವಿಷಯಗಳಲ್ಲಿ ಕೋರ್ಸ್‌ಗಳನ್ನು ಕಲಿಸಲು ಹೊಸ ಕಾಲೇಜುಗಳ ಕೊರತೆ ಸೇರಿವೆ. ಕನ್ನಡದಲ್ಲಿ ಎಂಎ ಮುಗಿದ ನಂತರ ಉದ್ಯೋಗಾವಕಾಶಗಳು ಸೀಮಿತವಾಗಿವೆ. ಸಂಶೋಧನೆ ಮತ್ತು ಬೋಧನೆಯ

ಉದ್ಯೋಗಾವಕಾಶಗಳ ಕೊರತೆ ಸೇರಿ ಹಲವು ಕಾರಣಗಳಿಗಾಗಿ ಕನ್ನಡ M.A ದಾಖಲಾತಿಯಲ್ಲಿ ಇಳಿಕೆ Read More »

ಕರ್ನಾಟಕ

‘ಕನ್ನಡ ಅತ್ಯಂತ ಪ್ರಾಚೀನ ಭಾಷೆ’-ಶೋಭಾ ಕರಂದ್ಲಾಜೆ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ಅರಸಿನ, ಕುಂಕುಮ ಬಣ್ಣವುಳ್ಳ ಕನ್ನಡಾಂಬೆಯ ಧ್ವಜವನ್ನು ನಮ್ಮ ಹಿರಿಯರು ಶುಭದ ಸಂಕೇತವಾಗಿ ಸ್ವೀಕರಿಸಿದ್ದಾರೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ವಿಶ್ಲೇಷಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಕುರಿತ ಸಂದೇಶ ನೀಡಿದರು. ಕನ್ನಡ, ಕರ್ನಾಟಕದ ಏಕೀಕರಣಕ್ಕಾಗಿ ಲಕ್ಷಾಂತರ ಜನರು ಹೋರಾಟ ಮಾಡಿದ್ದಾರೆ.

‘ಕನ್ನಡ ಅತ್ಯಂತ ಪ್ರಾಚೀನ ಭಾಷೆ’-ಶೋಭಾ ಕರಂದ್ಲಾಜೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೀಘ್ರದಲ್ಲೇ ಆಹಾರ ನಿಗಮದ 386 ನೂತನ ಸಿಬ್ಬಂದಿ ನೇಮಕಾತಿ ಪತ್ರ ವಿತರಣೆ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ಆಹಾರ ನಿಗಮದಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಶೀಘ್ರದಲ್ಲೇ ಆಹಾರ ನಿಗಮದ 386 ನೂತನ ಸಿಬ್ಬಂದಿಯ ನೇಮಕಾತಿ ಪತ್ರ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ವಸಂತನಗರದ ಅಬ್ದುಲ್‌ಕಲಾಂ ಭವನದಲ್ಲಿ ನಡೆದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ 52ನೇ ವರ್ಷದ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಮೊದಲು ನಿಮಗದಲ್ಲಿ 1500 ಸಾವಿರ ಸಿಬ್ಬಂದಿ ಇದ್ದರು. 200ರಿಂದ 250ಕ್ಕೆ ಇಳಿದಿದೆ. ನೇಮಕಾತಿ ಪ್ರಕ್ರಿಯೆ ನಡೆದಿದೆ.

ಶೀಘ್ರದಲ್ಲೇ ಆಹಾರ ನಿಗಮದ 386 ನೂತನ ಸಿಬ್ಬಂದಿ ನೇಮಕಾತಿ ಪತ್ರ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಯೋತ್ಪಾದನೆಗೆ ಹಣಕಾಸು ನೆರವು: ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರ ಬಂಧನ

(ನ್ಯೂಸ್‌ ಕಡಬ) newskadaba.com,  ನ..01: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇರೆಗೆ 3 ಮೌಲ್ವಿಗಳು ಸೇರಿದಂತೆ ಐವರು ಶಂಕಿತ ಭಯೋತ್ಪಾದಕರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ. ಅಯೂಬ್, ಮಸೂದ್ ಮತ್ತು ಉಸ್ಮಾನ್ ಬಂಧಿತ ಮೌಲ್ವಿಗಳು. ಇನ್ನೂ ಕರೌಲ್‌ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಬಂಧಿತರಲ್ಲಿ ಒಬ್ಬನಾದ ಜೋಧ್‌ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್‌ನಿಂದ ಕೆಲವು ದಾಖಲೆಗಳನ್ನು ಎಟಿಎಸ್ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ ಮಾಡುತ್ತಿದ್ದ. ಇನ್ನೂ ಮದರಸಾದ

ಭಯೋತ್ಪಾದನೆಗೆ ಹಣಕಾಸು ನೆರವು: ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ’- ಸಹೋದರಿ ಶ್ವೇತಾಸಿಂಗ್ ಆರೋಪ

(ನ್ಯೂಸ್‌ ಕಡಬ) newskadaba.com,  ನ..01: ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ ಎಂದು ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾಸಿಂಗ್ ತಿಳಿಸಿದ್ದಾರೆ. ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಅಮೆರಿಕ ಮತ್ತು ಮುಂಬೈನ ಇಬ್ಬರು ಮನಶಾಸ್ತ್ರಜ್ಞರು ನನ್ನನ್ನು ಸಂಪರ್ಕಿಸಿ, ಸುಶಾಂತ್ ಅವರ ಸಾವಿನ ಹಿಂದೆ ಸಂಚು ಇದೆ ಎಂದು ಹೇಳಿದ್ದಾರೆ. ಅವನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎನ್ನುವುದಕ್ಕೆ ಹಲವು ಸಾಕ್ಷ್ಯಗಳಿವೆ. ಅವನು ನೇಣು ಹಾಕಿಕೊಳ್ಳಲು ಫ್ಯಾನ್ ಮತ್ತು ಹಾಸಿಗೆಯ ಮಧ್ಯೆ ಅಷ್ಟು ಅಂತರವೇ ಇರಲಿಲ್ಲ. ಅಲ್ಲಿ

‘ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ’- ಸಹೋದರಿ ಶ್ವೇತಾಸಿಂಗ್ ಆರೋಪ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿಗೆ ಕೋಟಿ ಭಾಗ್ಯ: ಪ್ರೀಯಾಂಕ್ ಖರ್ಗೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.01 ಕಲಬುರಗಿ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರವು ನಾಡಿನ ಸಾಹಿತ್ಯ ಮತ್ತು ರಾಷ್ಟ್ರಕ್ಕೆ ಮಹತ್ತರ ಕೊಡುಗೆ ನೀಡಿದ ಮಹನೀಯರ ಹುಟ್ಟೂರಿಗೆ ವಿಶೇಷ ನೆರವು ಘೋಷಿಸಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹಾಗೂ ಭಾರತ ರತ್ನ ಗೌರವ ಪಡೆದ ಕನ್ನಡಿಗರ ಹುಟ್ಟೂರುಗಳ ಸರ್ವತೋಮುಖ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿಯಲ್ಲಿ ಶನಿವಾರ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿಗೆ ಕೋಟಿ ಭಾಗ್ಯ: ಪ್ರೀಯಾಂಕ್ ಖರ್ಗೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ

(ನ್ಯೂಸ್‌ ಕಡಬ) newskadaba.com,  ನ..01: ಚೀನಾ ತನ್ನ ಶೆನ್‌ಝೌ 21 ಬಾಹ್ಯಾಕಾಶ ನೌಕೆಯನ್ನು ತನ್ನ ಯಶಸ್ವಿ ಉಡಾವಣೆಯ ನಂತರ ದಾಖಲೆಯ ವೇಗದಲ್ಲಿ ಚೀನಾದ ಬಾಹ್ಯಾಕಾಶ ನಿಲ್ದಾಣದೊಂದಿಗೆ ಡಾಕ್‌ ಮಾಡಿದೆ ಎಂದು ಘೋಷಿಸಿದೆ. ಇಡೀ ಡಾಕಿಂಗ್‌ ಪ್ರಕ್ರಿಯೆಯು ಸುಮಾರು 3.5 ಗಂಟೆಗಳ ಕಾಲ ನಡೆಯಿತು ಇದು ಹಿಂದಿನ ಕಾರ್ಯಾಚರಣೆಗಳಿಗಿಂತ ಮೂರು ಗಂಟೆಗಳು ಕಡಿಮೆ ಎಂದು ಚೀನಾ ಮ್ಯಾನ್‌್ಡ ಸ್ಪೇಸ್‌‍ ಏಜೆನ್ಸಿ ತಿಳಿಸಿದೆ.

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್
Scroll to Top