News Kadaba

ಮತ್ತೆ ಏರಿದ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಅ.29 ಬೆಂಗಳೂರು: ಚಿನ್ನಾಭರಣ ದರ ನಿರಂತರವಾಗಿ 10 ದಿನ ಇಳಿಕೆ ಆಗಿತ್ತು. ಆದರೆ ಇಂದು ಮತ್ತೆ ಹೆಚ್ಚಾಗುವ ಮೂಲಕ ಚಿನ್ನದ ದರ ಇಳಿಕೆಯ ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆ ತರಿಸಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಅಕ್ಟೋಬರ್ 29 ರಂದು ಬುಧವಾರದಂದು, ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,158 ರೂಪಾಯಿ ಇದ್ದು, ಇಂದು 76 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,21,580 ರೂಪಾಯಿ […]

ಮತ್ತೆ ಏರಿದ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಅ.29 ಮಂಗಳೂರು: ಬಂಟ್ವಾಳ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರಕಾರವು ನಿರ್ಧರಿಸಿದ್ದು, ಅರ್ಹ ಆಸಕ್ತರಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯವರ ಕಛೇರಿಯ ಆಡಳಿತ ಶಾಖೆಯಲ್ಲಿ ಲಭ್ಯವಿರುತ್ತದೆ. ಅರ್ಜಿಯೊಂದಿಗೆ ಅರ್ಜಿದಾರರ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ. ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ,

ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆರಿಟ್‌ ಪಡೆದ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ

(ನ್ಯೂಸ್‌ ಕಡಬ) newskadaba.com,  ಅ.29 ಬೆಂಗಳೂರು: ಪ್ರತಿಭಾನ್ವಿತ 500 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸಹಿತ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪಡೆದುಕೊಳ್ಳುವ ಅವಕಾಶವನ್ನು ಅಶೋಕ ವಿಶ್ವವಿದ್ಯಾಲಯದ ನೀಡಿದೆ.ಹೌದು, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಅಶೋಕ ವಿಶ್ವವಿದ್ಯಾಲಯವು ತನ್ನ ಮುಂದಿನ ಶೈಕ್ಷಣಿಕ ವರ್ಷದ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಅಕ್ಟೋಬರ್‌ ತಿಂಗಳಿನಿಂದ ಆರಂಬಿಸಿದ್ದು, ಮೆರಿಟ್‌ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಹಿತ ಪ್ರವೇಶ ಪಡೆದುಕೊಳ್ಳಬಹುದು. ಕೇವಲ ಅಂಕದಲ್ಲಷ್ಟೇ ಅಲ್ಲದೆ, ಇತರೆ ವಿಭಾಗದಲ್ಲಿ ಮೆರಿಟ್‌ ಪಡೆದ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನದ ಸೌಲಭ್ಯ

ಮೆರಿಟ್‌ ಪಡೆದ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ: ಕಟ್ಟಡಗಳು ಧರಾಶಾಹಿ

(ನ್ಯೂಸ್‌ ಕಡಬ) newskadaba.com,  ಅ..24: ಪಶ್ಚಿಮ ಟರ್ಕಿಯ ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮ ಕಟ್ಟಡಗಳು ಧರೆಗುರುಳಿವೆ. ಸೋಮವಾರ (ಅ.27) ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ್ದ ಭೂಕಂಪದಿಂದಾಗಿ ಮೂರು ಕಟ್ಟಡಗಳು ನೆಲಸಮಗೊಂಡಿದೆ. ಜನರು ಭಯದಿಂದ ಮನೆಯಿಂದಾಚೆ ಓಡಿಹೋಗಿದ್ದಾರೆ. ಕಳೆದ ಬಾರಿ ಸಂಭವಿಸಿದ್ದ ಭೂಕಂಪದಿಂದಾಗಿ ದುರ್ಬಲಗೊಂಡಿದ್ದ ಮೂರು ಕಟ್ಟಡಗಳು ಹಾಗೂ ಎರಡು ಅಂತಸ್ತಿನ ಅಂಗಡಿ ನೆಲಸಮಗೊಂಡಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ ಭೂಕಂಪದ ಕೇಂದ್ರ

ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ: ಕಟ್ಟಡಗಳು ಧರಾಶಾಹಿ Read More »

ಬ್ರೇಕಿಂಗ್ ನ್ಯೂಸ್

ಅಪಘಾತದಲ್ಲಿ ಇಬ್ಬರು ಯುವಕರ ಸಾವು

(ನ್ಯೂಸ್‌ ಕಡಬ) newskadaba.com,  ಅ..24: ತಾಲೂಕಿನ ರಾಮಯ್ಯನಪಾಳ್ಯದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮೃತರನ್ನು ಚಿಕ್ಕತಿಮನಹಳ್ಳಿ ಗ್ರಾಮದ ನಂದನ್‌ಕುಮಾರ್‌ (22), ರವಿಕುಮಾರ್‌ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರೂ ಕೆಲಸದ ನಿಮಿತ್ತ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ವೇಳೆ, ರಾಮಯ್ಯನಪಾಳ್ಯದ ಬಳಿ ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ. ಈ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಆಟೋವೊಂದು ಕೆಳಗೆ ಬಿದ್ದಿದ್ದ ಇವರ ಮೇಲೆ ಹರಿದು ಈ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ

ಅಪಘಾತದಲ್ಲಿ ಇಬ್ಬರು ಯುವಕರ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಂಧ್ರ ಬಸ್‌ ದುರಂತ ಬೆನ್ನಲ್ಲೇ ಭಾರತದಲ್ಲಿ ಸ್ಲೀಪರ್ ಬಸ್‌ ಬ್ಯಾನ್!

(ನ್ಯೂಸ್‌ ಕಡಬ) newskadaba.com,  ಅ.28 ಕರ್ನೂಲ್ ಬಸ್ ಅಪಘಾತವನ್ನು ಮರೆಯುವ ಮುನ್ನವೇ, ಟ್ರಾವೆಲ್ಸ್‌ನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ರಾಜಸ್ಥಾನದ ಜೈಪುರ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಅಪಘಾತದಲ್ಲಿ ಮೂವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.. 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉತ್ತಮ ಚಿಕಿತ್ಸೆಗಾಗಿ ಜೈಪುರಕ್ಕೆ ಕರೆದೊಯ್ಯಲಾಯಿತು. ಉತ್ತರ ಪ್ರದೇಶದಿಂದ ಇಟ್ಟಿಗೆ ಗೂಡು ಕಾರ್ಮಿಕರನ್ನು ಸ್ಥಳಾಂತರಿಸುತ್ತಿದ್ದಾಗ ಜೈಪುರ ಬಳಿ ಅಪಘಾತ ಸಂಭವಿಸಿದೆ. ಬಸ್ ಆಕಸ್ಮಿಕವಾಗಿ ಹೈಟೆನ್ಷನ್ ತಂತಿಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು..

ಆಂಧ್ರ ಬಸ್‌ ದುರಂತ ಬೆನ್ನಲ್ಲೇ ಭಾರತದಲ್ಲಿ ಸ್ಲೀಪರ್ ಬಸ್‌ ಬ್ಯಾನ್! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರೀನ್ ಹೋಗಿ ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಪಾಕ್ ಆಟಗಾರರು

(ನ್ಯೂಸ್‌ ಕಡಬ) newskadaba.com,  ಅ..24: ಪಾಕಿಸ್ತಾನ್ ಮತ್ತು ಸೌತ್ ಆಫ್ರಿಕಾ ನಡುವಣ ಟಿ೨೦ ಸರಣಿಯು ಇಂದಿನಿಂದ ಪ್ರಾರಂಭವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್‌ನಲ್ಲಿ ಪಾಕಿಸ್ತಾನ್ ತಂಡವು ಪಿಂಕ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಸಾಮಾನ್ಯವಾಗಿ ಗ್ರೀನ್ ಜೆರ್ಸಿ ಧರಿಸುವ ಪಾಕ್ ಪಡೆ ಈ ಬಾರಿ ಗುಲಾಬಿ ಬಣ್ಣದೊಂದಿಗೆ ಕಾಣಿಸಿಕೊಳ್ಳಲು ಮುಖ್ಯ ಕಾರಣ #PINKtober ಅಭಿಯಾನ. ಅಂದರೆ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪಾಕಿಸ್ತಾನ್ ಆಟಗಾರರು ತನ್ನ ಜೆರ್ಸಿ ಬಣ್ಣ ಬದಲಿಸಿದೆ. #PINKtober ಅಭಿಯಾನದ ಭಾಗವಾಗಿ, ಪಾಕಿಸ್ತಾನ್

ಗ್ರೀನ್ ಹೋಗಿ ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಪಾಕ್ ಆಟಗಾರರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರಾಠಿ ಚಿತ್ರರಂಗದ ಯುವ ನಟ ಸಚಿನ್‌ ಚಂದ್ವಾಡೆ ಆತಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.28 ಮುಂಬೈ: ಮರಾಠಿ  ನಟ ಸಚಿನ್‌ ಚಂದ್ವಾಡೆ ಆತಹತ್ಯೆ ಮಾಡಿಕೊಂಡಿದ್ದಾರೆ. ಜನಪ್ರಿಯ ಹಿಂದಿಯ ಜಮ್ತಾರಾ 2 ನಲ್ಲಿ ಕಾಣಿಸಿಕೊಂಡಿದ್ದ ಅವರು ಮಹಾರಾಷ್ಟ್ರದ ಜಲಗಾಂವ್‌ ಜಿಲ್ಲೆಯ ಪರೋಲಾ ಪ್ರದೇಶದಲ್ಲಿರುವ ಉಂಡಿರ್ಖೇಡಾ ಗ್ರಾಮದಲ್ಲಿರುವ ತಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್‌‍ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬ ಸದಸ್ಯರು ಅವರನ್ನು ಧುಲೆ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ವೇಳೆ ನಿಧನರಾದರು. ಆತಹತ್ಯೆಮುನ್ನ ಚಂದ್ವಾಡೆ ಅವರು ಮುಂಬರುವ ಮರಾಠಿ ಚಿತ್ರ ಅಸುರ್ವಾನ್‌‍ ನ ಪೋಸ್ಟರ್‌

ಮರಾಠಿ ಚಿತ್ರರಂಗದ ಯುವ ನಟ ಸಚಿನ್‌ ಚಂದ್ವಾಡೆ ಆತಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಸ್ಪೀಕರ್ ಮೇಲಿನ ಆರೋಪಗಳ ನ್ಯಾಯಾಂಗ ತನಿಖೆ’- ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ

(ನ್ಯೂಸ್‌ ಕಡಬ) newskadaba.com,  ಅ..24: ಸ್ಪೀಕರ್ ಯು.ಟಿ.ಖಾದರ್ ಅವರ ಅವಧಿಯಲ್ಲಿ ವಿವಾದ, ಗೊಂದಲ, ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಸಂಸದ ಮತ್ತು ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ ಆ ಸ್ಥಾನವು ಮುಕ್ತವಾಗಬೇಕು. ಇದಕ್ಕಾಗಿ ಕಾರ್ಯನಿರತ ನ್ಯಾಯಮೂರ್ತಿಗಳಿಂದ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಸ್ಪೀಕರ್ ಕಾರ್ಯಾಲಯದ ಟೆಂಡರ್ ಮಂಗಳೂರು

‘ಸ್ಪೀಕರ್ ಮೇಲಿನ ಆರೋಪಗಳ ನ್ಯಾಯಾಂಗ ತನಿಖೆ’- ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ Read More »

ಕರ್ನಾಟಕ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ

(ನ್ಯೂಸ್‌ ಕಡಬ) newskadaba.com,  ಅ. 28 ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.DySP ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ2 ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ3 ಕ್ಕೆ ಹೆಚ್ವಿಸಿದ್ದೇವೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top