News Kadaba

ಡಿಜಿಟಲ್ ಬಂಧನ ಪ್ರಕರಣ; ಎಫ್‌ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್‌ ಕಡಬ) newskadaba.com,  ಅ. 28 ನವದೆಹಲಿ: ಡಿಜಿಟಲ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಎಫ್‌ಐಆರ್ ಮಾಹಿತಿಯನ್ನು ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ..ಜಿ.ಪರಮೇಶ್ವರ್‌ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಪ್ರಕರಣಗಳ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸುವ ಬಗ್ಗೆಯೂ ನ್ಯಾಯಾಲಯ ಚಿಂತನೆ ನಡೆಸಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದಾದ್ಯಂತ ಎಲ್ಲಾ ಪ್ರಕರಣಗಳನ್ನು ನಿರ್ವಹಿಸಲು ತನ್ನ ಬಳಿ ಸಂಪನ್ಮೂಲಗಳಿವೆಯೇ ಎಂದು ಉತ್ತರಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಪ್ರಶ್ನಿಸಿದೆ. ಡಿಜಿಟಲ್ ಅರೆಸ್ಟ್ ಪ್ರಕರಣಗಳು ಮ್ಯಾನ್ಮಾರ್ […]

ಡಿಜಿಟಲ್ ಬಂಧನ ಪ್ರಕರಣ; ಎಫ್‌ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸ

(ನ್ಯೂಸ್‌ ಕಡಬ) newskadaba.com,  ಅ. 28 ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳು ಇಂದಿನಿಂದ ತೆಲಂಗಾಣ ಮಾದರಿಯ ನೇವಿ ಬ್ಲೂ ಬಣ್ಣದ ಹೊಸ ‘ಪಿ ಕ್ಯಾಪ್’ಧರಿಸಲಿದ್ದಾರೆ. ಈ ಮೂಲಕ ದಶಕಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಲೌಚ್ ಕ್ಯಾಪ್‌ಗೆ ಪೊಲೀಸ್‌ ಇಲಾಖೆ ಅಂತಿಮ ವಿದಾಯ ಹೇಳಲಿದೆ. ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸಗೊಳಿಸಲಾಗಿದೆ. ಆದರೆ ರಾಜ್ಯ ಪೊಲೀಸ್ ಲಾಂಛನ ಆ ಕ್ಯಾಪ್‌ನ ಮಧ್ಯದಲ್ಲಿ ಅಚ್ಚೊತ್ತಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ

ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಜಿಟಲ್ ಬಂಧನ ಪ್ರಕರಣ; ಎಫ್ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್‌ ಕಡಬ) newskadaba.com,  ಅ..24: ಡಿಜಿಟಲ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಎಫ್‌ಐಆರ್ ಮಾಹಿತಿಯನ್ನು ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಎಲ್ಲಾ ಪ್ರಕರಣಗಳ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸುವ ಬಗ್ಗೆಯೂ ನ್ಯಾಯಾಲಯ ಚಿಂತನೆ ನಡೆಸಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದಾದ್ಯಂತ ಎಲ್ಲಾ ಪ್ರಕರಣಗಳನ್ನು ನಿರ್ವಹಿಸಲು ತನ್ನ ಬಳಿ ಸಂಪನ್ಮೂಲಗಳಿವೆಯೇ ಎಂದು ಉತ್ತರಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಪ್ರಶ್ನಿಸಿದೆ. ಡಿಜಿಟಲ್ ಅರೆಸ್ಟ್ ಪ್ರಕರಣಗಳು ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್‌ನಿಂದ ನಿರ್ವಹಿಸಲಾಗುತ್ತಿದೆ. ಹೀಗಾಗಿ ಎಲ್ಲಾ ರಾಜ್ಯಗಳಲ್ಲಿ ದಾಖಲಾಗಿರುವ ಇಂತಹ ವಂಚನೆ ಪ್ರಕರಣಗಳನ್ನು

ಡಿಜಿಟಲ್ ಬಂಧನ ಪ್ರಕರಣ; ಎಫ್ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್

ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ..24: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಪ್ರಯತ್ನದ ವೇಳೆ ಅಯ್ಯರ್ ತೀವ್ರವಾಗಿ ಗಾಯಗೊಂಡಿದ್ದು, ಇದೀಗ ಅವರನ್ನು ಐಸಿಯುನಲ್ಲಿ ಚಿಕಿತ್ಸೆಗಾಗಿ ಇರಿಸಲಾಗಿದೆ ಎಂದು ವರದಿಯಾಗಿದೆ. ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಇದರಿಂದ ಹೊಟ್ಟೆಯ ಮೇಲ್ಭಾಗದ ಅಂಗಗಳಲ್ಲಿ ಆಂತರಿಕ ರಕ್ತಸ್ರಾವ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆ

ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಿ.ಪುನೀತ್ ರಾಜ್ಕುಮಾರ್ ಕನಸಿನ ‘ಅಪ್ಪು ಫ್ಯಾನ್ ಡಮ್’ ಆ್ಯಪ್ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba.com,  ಅ..24: ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಉದ್ದೇಶದೊಂದಿಗೆ ನೂತನ ಆ್ಯಪ್ ‘ಅಪ್ಪು ಫ್ಯಾನ್ ಡಮ್’ ಅನಾವರಣಗೊಳಿಸಲಾಗಿದೆ. ಆ್ಯಪ್, ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಉದ್ದೇಶದೊಂದಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ನೇತೃತ್ವದಲ್ಲಿ ಸಿದ್ಧವಾಗಿರುವ ಆ್ಯಪ್‌ನ್ನು ಶನಿವಾರ ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದರು. ಆ್ಯಪ್ ಲೋಕಾರ್ಪಣೆ ವೇಳೆ ಮಾತನಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್, “ನಿಮಗೆ ಗೊತ್ತಿರುವಂತೆ ಅಪ್ಪು ಯಾವಾಗಲೂ ಹೊಸತನದ ಕಡೆಗೆ ಹುಡುಕಾಟ ನಡೆಸುತ್ತಿದ್ದರು. ಹೊಸತನದ ಹುಡುಕಾಟದಿಂದಲೇ ಹೊಸಬರಿಗೆ ಅವಕಾಶ ಕೊಡಲೆಂದೇ

ದಿ.ಪುನೀತ್ ರಾಜ್ಕುಮಾರ್ ಕನಸಿನ ‘ಅಪ್ಪು ಫ್ಯಾನ್ ಡಮ್’ ಆ್ಯಪ್ ಲೋಕಾರ್ಪಣೆ Read More »

ಕರ್ನಾಟಕ

ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ

(ನ್ಯೂಸ್‌ ಕಡಬ) newskadaba.com,  ಅ..24:  ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ರಾಜ್ಯ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ.. ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯ ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ. ಅಲ್ಲದೆ, ನವೆಂಬರ್ 3ರಂದು ನಡೆಯಲಿರುವ ಮುಂದಿನ ವಿಚಾರಣೆಗೆ ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ​ಎಚ್ಚರಿಕೆಯನ್ನು ಕೋರ್ಟ್

ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ

(ನ್ಯೂಸ್ ಕಡಬ) newskadaba.com, ಅ..24: ಶಂಶಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಭಾರಿ ಮೌಲ್ಯದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ. ಬ್ಯಾಂಕಾಕ್ನಿಂದ ಹೈದರಾಬಾದ್ಗೆ ಆಗಮಿಸುತ್ತಿದ್ದ ಪ್ರಯಾಣಿಕನಿಂದ ಸುಮಾರು ರೂ. 4.15 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಆ ಪ್ರಯಾಣಿಕನು ತನ್ನ ಸೂಟ್ಕೇಸ್ನ ತಳಭಾಗದಲ್ಲಿ ವಿಶೇಷ ರೀತಿಯಲ್ಲಿ ಗಾಂಜಾವನ್ನು ಅಡಗಿಸಿ ತರಲು ಪ್ರಯತ್ನಿಸಿದ್ದಾನೆ. ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಅಧಿಕಾರಿಗಳು ಸೂಟ್ಕೇಸ್ ಪರಿಶೀಲಿಸಿದ ವೇಳೆ, ಪ್ಲಾಸ್ಟಿಕ್ ಪ್ಯಾಕೆಟ್ಗಳಲ್ಲಿ ಸೀಲ್ ಮಾಡಲಾಗಿದ್ದ

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಾರ್ಮಾಡಿ ಘಾಟಿನಲ್ಲಿ ಅಡ್ಡಲಾಗಿ ನಿಂತ ಟ್ಯಾಂಕರ್, ಸಂಚಾರಕ್ಕೆ ಅಡಚಣೆ

(ನ್ಯೂಸ್‌ ಕಡಬ) newskadaba.com,  ಅ..24:  ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಟ್ಯಾಂಕರ್‌ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಪರಿಣಾಮ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್‌ ವಾಹನ ಚಾರ್ಮಾಡಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತಿತ್ತು. ಇದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಘಾಟಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು.

ಚಾರ್ಮಾಡಿ ಘಾಟಿನಲ್ಲಿ ಅಡ್ಡಲಾಗಿ ನಿಂತ ಟ್ಯಾಂಕರ್, ಸಂಚಾರಕ್ಕೆ ಅಡಚಣೆ Read More »

ಕರ್ನಾಟಕ

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ನಾಳೆ ಬೆಳಿಗ್ಗೆ ವೇಳೆಗೆ ಮೊಂತಾ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ಹವಾಮಾನ ವ್ಯವಸ್ಥೆಯು ಕಳೆದ ಆರು ಗಂಟೆಗಳಲ್ಲಿ ಗಂಟೆಗೆ 15 ಕಿಮೀ ವೇಗದಲ್ಲಿ ವಾಯುವ್ಯ ದಿಕ್ಕಿಗೆ ಚಲಿಸಿತು ಮತ್ತು ಇಂದು ಬೆಳಿಗ್ಗೆ 5.30 ಕ್ಕೆ ಪಶ್ಚಿಮ ಮಧ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ನೈಋತ್ಯ ಮತ್ತು ಪಕ್ಕದ ಪ್ರದೇಶಗಳ ಮೇಲೆ ಕೇಂದ್ರೀಕೃತವಾಗಿತ್ತು. ಇದು ಮುಂದಿನ 12

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಇದೆ . ಅಕ್ಟೋಬರ್‌ 27ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ Read More »

ಕರ್ನಾಟಕ
Scroll to Top