News Kadaba

ಗುಜರಾತ್ ಸಂಪುಟ ಪುನರಚನೆ – ಸಿಎಂ ಭೂಪೇಂದ್ರ ಪಟೇಲ್ ಹೊರತುಪಡಿಸಿ 16 ಸಚಿವರು ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ಅ.17: ಗುಜರಾತ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಹೊರತುಪಡಿಸಿ ಅವರ ಸಂಪುಟದಲ್ಲಿದ್ದ ಎಲ್ಲಾ 16 ಸಚಿವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ಮಧ್ಯಾಹ್ನ 12.39ಕ್ಕೆ ಹೊಸ ಸಚಿವ ಸಂಪುಟದ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ. ಹೊಸ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸುಮಾರು 10 ಹೊಸ ಮುಖಗಳು ಸಚಿವ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಪ್ರಸ್ತುತ ಸಂಪುಟದಲ್ಲಿದ್ದ ಕೆಲವು […]

ಗುಜರಾತ್ ಸಂಪುಟ ಪುನರಚನೆ – ಸಿಎಂ ಭೂಪೇಂದ್ರ ಪಟೇಲ್ ಹೊರತುಪಡಿಸಿ 16 ಸಚಿವರು ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್

ಭಾವಿ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.17 ಶಿಕ್ಷಕರ ಅರ್ಹತಾ ಪರೀಕ್ಷೆ ಅಂದರೆ ಟಿಇಟಿ ಇನ್ನು ಮುಂದೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಆಫ್‌ಲೈನ್ ಪರೀಕ್ಷೆಗೆ ವಿದಾಯ ಹೇಳಿ, ಪಾರದರ್ಶಕತೆ ಮತ್ತು ವೇಗಕ್ಕಾಗಿ ಈ ಬದಲಾವಣೆಯನ್ನು ಮಾಡಲಾಗುತ್ತಿದೆ. ಕಂಪ್ಯೂಟರ್ ಆಧರಿತ ಪರೀಕ್ಷೆಗೆ ಸರಕಾರ ಈಗಾಗಲೇ ಒಪ್ಪಿಗೆ ನೀಡಿದ್ದು, ಟೆಂಡರ್ ಪ್ರಕ್ರಿಯೆ ಬಳಿಕ ಪರೀಕ್ಷೆ ನಡೆಸುವ ಏಜೆನ್ಸಿಯನ್ನು ಅಂತಿಮಗೊಳಿಸಲಾಗುತ್ತದೆ. ಇದರಿಂದ ಅರ್ಹ ಪ್ರತಿಭಾವಂತರು ಆಯ್ಕೆಯಾಗಲು ಅನುಕೂಲ ಆಗಲಿದೆ.   ಬಿ.ಎಡ್‌ ಪದವೀಧರರು ಇನ್ಮುಂದೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕಿದೆ. ಆಫ್‌ಲೈನ್‌

ಭಾವಿ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಅ.17 ಮಂಗಳೂರು: ಮೀನುಗಾರರು ಅತ್ಯಧಿಕ ಸಂಖ್ಯೆಯಲ್ಲಿ ಇರುವ ಬಂದರು ಪ್ರದೇಶದಲ್ಲಿ ನಿರ್ಮಿಸಿಕೊಡಬೇಕಿದ್ದ ಇಂದಿರಾ ಕ್ಯಾಂಟೀನನ್ನು ತೆರೆಯದೆ ನಿರ್ಲಕ್ಷ್ಯ ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ, ಕೂಡಲೇ ಇಂದಿರಾ ಕ್ಯಾಂಟೀನ್ ಸೇವೆ ಆರಂಭಿಸಲು ಒತ್ತಾಯಿಸಿ ಹಳೆ ಬಂದರು ಹಳೆ ಮುನ್ಸಿಪಲ್ ಕಚೇರಿ ಬಳಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಎದುರು ಬಂದರು ಶ್ರಮಿಕರ ಸಂಘ ಮತ್ತು ಡಿವೈಎಫ್ಐ ಬಂದರು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಡಿವೈಎಫ್ಐ ಜಿಲ್ಲಾಧ್ಯಕ್ಷರೂ, ಬಂದರು ಶ್ರಮಿಕರ ಸಂಘದ ಅಧ್ಯಕ್ಷರೂ ಆಗಿರುವ ಬಿ.ಕೆ ಇಮ್ತಿಯಾಜ್

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಲಿ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್‌ ಕಡಬ) newskadaba.com,  ಅ.17 ಬಳ್ಳಾರಿ :  ರೈತರು ಉತ್ಪಾದನೆ ಜೊತೆಗೆ, ಹೆಚ್ಚು ಲಾಭ ಗಳಿಸಲು ಕೃಷಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ಒತ್ತು ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಿರುಗುಪ್ಪ ತಾಲೂಕಿನ ಕೊಂಚಗೇರಿ ಗ್ರಾಮದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ವತಿಯಿಂದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ  ಯಡಿ ₹2.54 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕೃಷಿ ಸಂಸ್ಕರಣೆಗಾಗಿ ರೈತರಿಗೆ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ರೈತರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಲಿ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಕಿಟ್ ನೀಡಲು ಸರ್ಕಾರ ಮುಂದು..!

(ನ್ಯೂಸ್‌ ಕಡಬ) newskadaba.com,  ಅ.17 ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ 5 ಕೆ.ಜಿ ಅಕ್ಕಿಯ ಬದಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ 5-6 ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಮುಂದಾಗಿದೆ.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯೋಜಿಸಿದ್ದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಪ್ರತಿ ವರ್ಷ ಸುಮಾರು 360 ಕೋಟಿ ರೂ. ಮೌಲ್ಯದ ಸುಮಾರು 943 ಟನ್ ಆಹಾರ ವ್ಯರ್ಥವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು. ಹಸಿವಿನ ನೋವು,

ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಕಿಟ್ ನೀಡಲು ಸರ್ಕಾರ ಮುಂದು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.17 ಬಂಟ್ವಾಳ : ಪಾಣೆಮಂಗಳೂರು ಸ್ಮಶಾನ ರಸ್ತೆಯ ಬಳಿ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಎಂಡಿಎಂಎ ಹೊಂದಿದ್ದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಮೇರೆಗೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಮತ್ತು ಅವರ ತಂಡ ಸ್ಥಳಕ್ಕೆ ತಲುಪಿದಾಗ ಸ್ಮಶಾನದ ಸಮೀಪ ನಿಲ್ಲಿಸಿದ್ದ ಆಟೋರಿಕ್ಷಾ (ಕೆಎ-19-ಡಿ-1806) ಪತ್ತೆಯಾಗಿದೆ. ಅವರನ್ನು ಬಂಟ್ವಾಳ ತಾಲೂಕಿನ ಮೊಹಮ್ಮದ್ ಇಮ್ತಿಯಾಜ್ (40) ಎಂದು ಗುರುತಿಸಲಾಗಿದೆ. ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.17 ಮಂಗಳೂರು: ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ತಿಮ್ಮಪ್ಪ ಆಳ್ವ(85) ಗುರುವಾರ(ಅ.16) ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಅವರ ಅನುಭವ ಕಥನ ಗರೋಡಿ ಮನೆಯಿಂದ ಸೇನಾ ಗರಡಿಗೆ ಪ್ರಕಟವಾಗಿತ್ತು. ತುಳುನಾಡಿನ ಕ್ರಷಿ ಕುಟುಂಬವೊಂದರಲ್ಲಿ ಜನಿಸಿದ ಯುವಕ ದೇಶಕಾಯುವ ಸೈನಿಕನಾಗಿ 1971ರ ಯುದ್ಧದಲ್ಲಿ ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ

1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೊರಲವಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ

(ನ್ಯೂಸ್‌ ಕಡಬ) newskadaba.com,  ಅ.17  ಮಂಗಳೂರು :  ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ. ಡಿ ವೈ ಎಸ್ ಪಿ ಡಾ. ಗಾನ ಪಿ ಕುಮಾರ್ ನೇತೃತ್ವದ ತಂಡವು ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಿದೆ. ಅಮುದಾನ ದುರುಪಯೋಗ, ಆದಾಯ ಮತ್ತು ವೆಚ್ಚದ ಬಗ್ಗೆ ಪರಿಶೀಲನೆ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ, ಮೃಗಾಲಯದ ಪ್ರಾಣಿಗಳ ಆಹಾರ

ಮಂಗಳೂರು: ಹೊರಲವಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀಶೈಲದ ಮಲ್ಲಿಕಾರ್ಜುನ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ಅ.16- ನಂದ್ಯಾಲ್ ಜಿಲ್ಲೆಯ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರಾರ್ಥನೆ ಸಲ್ಲಿಸಿದರು. “ಪ್ರಧಾನಿ ಮೋದಿ ಪಂಚಮುರಳು (ಹಸುವಿನ ಹಾಲು, ಹಸುವಿನ ಮೊಸರು, ಹಸುವಿನ ತುಪ್ಪ, ಜೇನುತುಪ್ಪ ಮತ್ತು ಸಕ್ಕರೆ ಎಂಬ ಐದು ಪದಾರ್ಥಗಳಿಂದ ಮಾಡಿದ ಪವಿತ್ರ ಮಿಶ್ರಣ) ರುದ್ರಾಭಿಷೇಕವನ್ನು ಮಾಡಿದರು” ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ಇದ್ದರು. ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವು

ಶ್ರೀಶೈಲದ ಮಲ್ಲಿಕಾರ್ಜುನ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ Read More »

ಕರ್ನಾಟಕ

ನಿಮಿಷಾ ಪ್ರಿಯಾ ಪ್ರಕರಣ : ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ – ಹೊಸ ಮಧ್ಯವರ್ತಿ ಪ್ರವೇಶ

(ನ್ಯೂಸ್‌ ಕಡಬ) newskadaba.com,  ಅ.16- ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಗುರಿಯಾಗಿರುವ ಭಾರತೀಯ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆಗೊಳಿಸುವ ಕುರಿತು ನಡೆಯುತ್ತಿರುವ ಮಾತುಕತೆಗಾಗಿ ಹೊಸ ಮಧ್ಯವರ್ತಿಯೊಬ್ಬರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ. ಈ ಮೊದಲು, ಅರ್ಜಿ ಸಲ್ಲಿಸಿದ್ದ ಕೆ.ಎ. ಪೌಲ್ ಅವರೇ ಮಧ್ಯವರ್ತಿಯೇ? ಎಂಬ ನ್ಯಾಯಾಲಯದ ಪ್ರಶ್ನೆಗೆ, ಕೇಂದ್ರ ಸರ್ಕಾರ “ಅವರು ನೇಮಕಗೊಂಡವರಲ್ಲ” ಎಂಬ ಸ್ಪಷ್ಟನೆ ನೀಡಿದೆ. ಈ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಕೇಂದ್ರ

ನಿಮಿಷಾ ಪ್ರಿಯಾ ಪ್ರಕರಣ : ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ – ಹೊಸ ಮಧ್ಯವರ್ತಿ ಪ್ರವೇಶ Read More »

ಕರಾವಳಿ
Scroll to Top