News Kadaba

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ.16- ಕಲಬುರಗಿ: ಆರ್‌ಎಸ್​ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪ​ನನ್ನು ಲಾತೂರ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ […]

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ Read More »

ಕರ್ನಾಟಕ

ಬೆಳ್ತಂಗಡಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.16 ಬೆಳ್ತಂಗಡಿ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾನ್ವಿ(17) ಎಂಬಾಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ ಪುತ್ರಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸಾನ್ವಿ ಶೆಟ್ಟಿ ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಈಕೆ ತಾಯಿ ರೇಖಾ, ಸಹೋದರ ಸುಹಾನ್ ಅವರನ್ನು ಅಗಲಿದ್ದಾರೆ  

ಬೆಳ್ತಂಗಡಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ಯುವಜನತೆಗೆ ಬಿಎಫ್ಎಸ್ಐ ಉದ್ಯೋಗ ಕೌಶಲ್ಯ ಒದಗಿಸಲು ‘ಅಹಾನ್ ವೊಕೇಶನಲ್ ಸೆಂಟರ್

(ನ್ಯೂಸ್‌ ಕಡಬ) newskadaba.com,  ಅ.16- ಅಪೆಕ್ಸಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ದಿ ಮಾ ಫಾಯ್ ಫೌಂಡೇಶನ್‌ ನೇತೃತ್ವದಲ್ಲಿ ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ವರ್ಗದ ತರುಣ, ತರುಣಿಯರ ವೃತ್ತಿ ಜೀವನಕ್ಕೆ ನೆರವಾಗುವ ಬಿಎಫ್ಎಸ್ಐ (ಬ್ಯಾಂಕಿಂಗ್, ಫೈನಾನ್ಸ್ ಸರ್ವೀಸಸ್ ಮತ್ತು ಇನ್ಶೂ ರೆನ್ಸ್) ಕೌಶಲ್ಯಗಳನ್ನು ಕಲಿಸುವ ಸಲುವಾಗಿ ಕೆ.ಆರ್. ಪುರಂನ ಡಾನ್ ಬಾಸ್ಕೋ ಕಾಲೇಜಿನಲ್ಲಿ ‘ಅಹಾನ್ ವೊಕೇಶನಲ್ ಸೆಂಟರ್: ಬಿಎಫ್ಎಸ್ಐ’ ಅನ್ನು ಆರಂಭಿಸಿದೆ. ಬೆಂಗಳೂರಿನ ವಿದ್ಯಾರ್ಥಿಗಳಿಗೆ ಉದ್ಯಮ ಸಂಬಂಧಿ ತರಬೇತಿ, ಜೀವನ ಕೌಶಲಗಳು ಮತ್ತು ಬಿಎಫ್ಎಸ್ಐಕ್ಷೇತ್ರದಲ್ಲಿ ವೃತ್ತಿ ಹೊಂದಲು

ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ಯುವಜನತೆಗೆ ಬಿಎಫ್ಎಸ್ಐ ಉದ್ಯೋಗ ಕೌಶಲ್ಯ ಒದಗಿಸಲು ‘ಅಹಾನ್ ವೊಕೇಶನಲ್ ಸೆಂಟರ್ Read More »

ಉದ್ಯೋಗ

ಮೆಡಿಕಲ್ ಎಮರ್ಜೆನ್ಸಿ: ಬೆಂಗಳೂರಿನಲ್ಲಿ ಡ್ರೋನ್ ಸೇವೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ವೈದ್ಯಕೀಯ ಅಗತ್ಯ ವಸ್ತುಗಳು, ಔಷಧ , ಪರಿಕರಗಳನ್ನು ಡ್ರೋನ್‌ ಮೂಲಕ ವಿತರಣೆ ಮಾಡುವ ವಿಶೇಷ “ಪೈಲೆಟ್‌ ಪ್ರಾಜೆಕ್ಟ್‌”ಗೆ ಏರ್‌ಬೌಂಡ್‌ ಸಂಸೈಯು ನಾರಾಯಣ ಹೆಲ್ತ್‌ನೊಂದಿಗೆ ಪಾಲುದಾರಿಗೆ ಘೋಷಿಸಿದೆ. ಏರ್‌ಬೌಂಡ್‌ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಏರ್‌ಬೌಂಡ್‌ನ ಸಂಸ್ಥಾಪಕ ಮತ್ತು ಸಿಇಒ ನಮನ್ ಪುಷ್ಪ್, ವೈದ್ಯಕೀಯ ಅಗತ್ಯ ವಸ್ತುಗಳನ್ನು ಪೂರೈಸುವ ಸಮಯ ಅತಿ ಪ್ರಾಮುಖ್ಯವಾದದ್ದು. ಈ ಸಂಚಾರ ದಟ್ಟಣೆಯಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯಕೀಯ ಅಗತ್ಯವಸ್ತುಗಳನ್ನು ತಲುಪಿಸುವುದು ಕಷ್ಟಕರ. ಮಾನವರಹಿತ ವೈಮಾನಿಕ ವಾಹನ

ಮೆಡಿಕಲ್ ಎಮರ್ಜೆನ್ಸಿ: ಬೆಂಗಳೂರಿನಲ್ಲಿ ಡ್ರೋನ್ ಸೇವೆ ಪ್ರಾರಂಭ Read More »

ಕರಾವಳಿ

ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ ನಿರಾಕರಣೆ

(ನ್ಯೂಸ್‌ ಕಡಬ) newskadaba.com,  ಅ.16- ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್‌‍ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಅಕ್ಟೋಬರ್‌ 10ರಂದು ಸುಧಾಮೂರ್ತಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ

ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ ನಿರಾಕರಣೆ Read More »

ಕರಾವಳಿ

ನಟಿ ಡ್ಯಾನ್ಸರ್‌ ಮಧುಮತಿ ನಿಧನ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು ಹಿರಿಯ ನಟಿ, ಡ್ಯಾನ್ಸರ್‌ ಮಧುಮತಿ ಅವರು 87ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 60, 70 ಮತ್ತು 80ರ ದಶಕದ ಬಾಲಿವುಡ್ ಸಿನಿಮಾಗಳಲ್ಲಿ ಅದ್ಭುತವಾಗಿ ಡ್ಯಾನ್ಸ್‌ ಮಾಡಿ ಹೆಸರು ಗಳಿಸಿದ್ದರು. ಅವರ ನಿಧನಕ್ಕೆ ಬಾಲಿವುಡ್‌ ಸಂತಾಪ ಸೂಚಿಸಿದೆ. ಆ ಕಾಲದಲ್ಲಿ ಅವರನ್ನು ಹೆಚ್ಚಾಗಿ ಡ್ಯಾನ್ಸರ್ ಹೆಲೆನ್‌ಗೆ ಹೋಲಿಸಲಾಗುತ್ತಿತ್ತು. ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ನಟಿ ಡ್ಯಾನ್ಸರ್‌ ಮಧುಮತಿ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ ‘-ಸಿಎಂ

(ನ್ಯೂಸ್‌ ಕಡಬ) newskadaba.com,  ಅ.16- ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ

‘ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ ‘-ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ಪ್ರಮುಖ ಬದಲಾವಣೆಯಾಗಿ, ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ತೇರ್ಗಡೆ ಅಂಕಗಳನ್ನು ಕಡಿತಗೊಳಿಸಿದೆ. ಎಸ್ ಎಸ್ ಎಲ್ ಸಿಯಲ್ಲಿ ಉತ್ತೀರ್ಣ ಅಂಕಗಳನ್ನು 35 ರಿಂದ 33 ಕ್ಕೆ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು 35 ರಿಂದ 30 ಕ್ಕೆ ಇಳಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ,

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com,  ಅ.16- ಇಪ್ಪತೈದಕ್ಕೂ ಹೆಚ್ಚು ಮಂಗಳಮುಖಿಯರು ಫೆನಾಯಿಲ್‌ ಕುಡಿದು ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನಲ್ಲಿ ಟ್ರಾನ್ಸ್ ಜೆಂಡರ್‌ ಸಮುದಾಯದ ಸುಮಾರು 25 ಜನರು ಫಿನೈಲ್‌ ಸೇವಿಸಿದ್ದಾರೆಂದು ಹೇಳಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಮಹಾರಾಜ ಯಶವಂತರಾವ್‌ ಆಸ್ಪತ್ರೆಯ ಉಸ್ತುವಾರಿ ವೈದ್ಯ ಡಾ. ಬಸಂತ್‌ ಕುಮಾರ್‌ ನಿಂಗ್ವಾಲ್‌ ಪಿಟಿಐಗೆ ತಿಳಿಸಿದ್ದಾರೆ. ಟ್ರಾನ್‌್ಸಜೆಂಡರ್‌ ಸಮುದಾಯದ ಸುಮಾರು 25 ಜನರನ್ನು

ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

(ನ್ಯೂಸ್‌ ಕಡಬ) newskadaba.com,  ಅ.16 ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top