News Kadaba

ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುವ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು:  ರಾಜ್ಯದಲ್ಲಿರುವ 800  ಶಾಲೆಗಳನ್ನು ಕೆಪಿಎಸ್ ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, ಈ ಯೋಜನೆಯಡಿ, ಪ್ರತಿ ಶಾಲೆಯನ್ನು 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ. ಬುಧವಾರ(ಅ.15)  ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ, ಏಷ್ಯನ್ […]

ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುವ ಯೋಜನೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ

(ನ್ಯೂಸ್‌ ಕಡಬ) newskadaba.com,  ಅ.15: ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಲು ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಔಪಚಾರಿಕೀಕರಣ(PMFME) ಮತ್ತು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ(PMDDKY) ಗಳನ್ನು ರೈತರು ಸಂಪೂರ್ಣವಾಗಿ ಬಳಸಿಕೊಳ್ಳಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರೈತರಿಗೆ ಕರೆ ನೀಡಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯಲ್ಲಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವೆ, ಹೊಸ ಪೀಳಿಗೆಯ GST ಸುಧಾರಣೆ ರೈತರಿಗೂ ಹೆಚ್ಚು

ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ Read More »

ಕರ್ನಾಟಕ

‘KGF Chapter 3 ಡ್ರಾಫ್ಟ್ ರೆಡಿ

(ನ್ಯೂಸ್‌ ಕಡಬ) newskadaba.com,  ಅ.15: ರಾಕಿಂಗ್ ಸ್ಟಾರ್ ಯಶ್ ರನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್ 3 ಕುರಿತು ಕೊನೆಗೂ ದೊಡ್ಡ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ಹೌದು.. ಕನ್ನಡ ಸಿನಿಮಾರಂಗವನ್ನು ಭಾರತೀಯ ಸಿನಿರಂಗದಲ್ಲಿ ಮತ್ತೊಂದು ಹಂತಕ್ಕೇರಿಸಿದ್ದ ಕೆಜಿಎಫ್ ಚಿತ್ರದ ಮೂರನೇ ಭಾಗದ ಕುರಿತು ಮಹತ್ವದ ಮಾಹಿತಿ ದೊರೆತಿದ್ದು, ನಿರ್ದೇಶಕ ಪ್ರಶಾಂತ್ ನೀಲ್ ಕೊನೆಗೂ ಕೆಜಿಎಫ್ ಭಾಗ 3ರ ಕುರಿತು ದೊಡ್ಡ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ‘ಕೆಜಿಎಫ್ 2’

‘KGF Chapter 3 ಡ್ರಾಫ್ಟ್ ರೆಡಿ Read More »

ಸಿನಿಮಾ

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ

(ನ್ಯೂಸ್‌ ಕಡಬ) newskadaba.com,  ಅ.15  ಮಂಗಳೂರು :  ನವೆಂಬರ್ 1 ,2 ರಂದು ಸೇಂಟ್ ಆಗ್ನೆಸ್ ಕಾಲೇಜಿನ ಪಕ್ಕದಲ್ಲಿರುವ ಬೆಂದೂರ್‌ವೆಲ್‌ನಲ್ಲಿರುವ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ಎರಡು ದಿನಗಳ ಮಿಲ್ಲೆಟ್ಸ್ ಉತ್ಸವವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮವನ್ನು ಹನಿಜೆನಿಕ್ಸ್ ಬೀ ಫಾರ್ಮ್ಸ್, ರೋ ಇಂಟರ್ನ್ಯಾಷನಲ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಪರಿವರ್ತನೆ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಉತ್ಸವದಲ್ಲಿ ಕರ್ನಾಟಕದಾದ್ಯಂತದ ವಿವಿಧ ಆರೋಗ್ಯಕರ ಭಕ್ಷ್ಯಗಳನ್ನು ನೀಡುವ ರಾಗಿ ಆಧಾರಿತ ಆಹಾರ ಮಳಿಗೆಗಳು, ಸ್ಥಳೀಯ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ

ಮಂಗಳೂರಿನಲ್ಲಿ ನವೆಂಬರ್ 1 ಮತ್ತು 2 ರಂದು ನಗರದಲ್ಲಿ ಮಿಲ್ಲೆಟ್ಸ್ ಉತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಕಿ ಅನಾಹುತ; ಚಲಿಸುತ್ತಿದ್ದ ಬಸ್ ಗೆ ಬೆಂಕಿ ,20 ಜನ ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಅ.15  ಜೈಸಲೇರ್‌: ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌‍ ಹಠಾತ್ತನೆ ಹೊತ್ತಿ ಉರಿದು 20 ಜನರು ಸಜೀವ ದಹನವಾಗಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 57 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌‍ ಜೈಸಲ್ಮೇರ್‌ನಿಂದ ಜೋಧ್‌ಪುರ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ವಾಹನದ ಹಿಂಭಾಗದಿಂದ ಹೊಗೆ ಹೊರಬರಲು ಪ್ರಾರಂಭಿಸಿತು.ಇದನ್ನು ಗಮನಿಸಿದ ಚಾಲಕ ಬಸ್‌‍ ಅನ್ನು ನಿಲ್ಲಿಸಿದನು, ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡಿ ಬಸ್‌‍ಗೆ ಆವರಿಸಿತು. ಸ್ಥಳೀಯರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಗಳಿಗೆ

ಬೆಂಕಿ ಅನಾಹುತ; ಚಲಿಸುತ್ತಿದ್ದ ಬಸ್ ಗೆ ಬೆಂಕಿ ,20 ಜನ ಸಜೀವ ದಹನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.15: ರಾಜ್ಯಾದ್ಯಂತ ಇಂದು (ಅ.15) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶವು ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ  ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 21° C ಆಗಿರಬಹುದು. ಅ.15ರಂದು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್,

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ

(ನ್ಯೂಸ್‌ ಕಡಬ) newskadaba.com,  ಅ.15  ಬೆಂಗಳೂರು : ಈ ವರ್ಷದಿಂದ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಪಾಸ್ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15: ಬೆಂಗಳೂರಿನಲ್ಲಿ ಕುಳಿತು ಡಿಜಿಟಲ್ ಅರೆಸ್ಚ್ ಮೂಲಕ ಅಮೆರಿಕಾ ಹಾಗೂ ಕೆನಡಾ ಜನರನ್ನು ವಂಚಿಸುತ್ತಿದ್ದ ಜಾಲವೊಂದನ್ನು ನಗರ ಪೊಲೀಸರು ಬೇಧಿಸಿದ್ದು, ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಕಲಿ ಬಿಪಿಒ ಸಂಸ್ಥೆಯ ಇಬ್ಬರು ಮಹಿಳೆಯರು ಸೇರಿದಂತೆ 16 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ ಫ್ರಾನ್ಸಿಸ್ (29), ಆರ್ ಕಾರ್ತಿಕ್ ರಾಜ್ ವಾದ್ಯನಂ (25), ಆರ್ ಸುನಿಲ್ (30), ಎ ಅರವಿಂದ್ ಅಣ್ಣಿ ಪೂಜಾರಿ (31), ಎಲ್ ಇಂದರ್ ಲಾಲ್ಮಣಿ ಯಾದವ್ (31), ಪಿ ರೋಹನ್ (28),

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ Read More »

ಕರ್ನಾಟಕ

ಶೇ.10 ಕಮಿಷನ್‌ ಆಸೆಗೆ 22 ಮಕ್ಕಳನ್ನು ಕೊಂದ ವೈದ್ಯರು!

(ನ್ಯೂಸ್‌ ಕಡಬ) newskadaba.com,  ಅ.15  ಭೋಪಾಲ್‌: ಮಧ್ಯಪ್ರದೇಶದಲ್ಲಿ 22 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್‌ ಸಿರಫ್‌ ಅನ್ನು ಶಿಫಾರಸು ಮಾಡಲು ಡಾ. ಪ್ರವೀಣ್‌ ಸೋನಿ ಶೇ.10ರಷ್ಟು ಕಮಿಷನ್‌ ಪಡೆಯುತ್ತಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.ಮಕ್ಕಳ ಸಾವಿನ ಬೆನ್ನಲ್ಲೇ ಪೊಲೀಸರು, ಮಕ್ಕಳಿಗೆ ಸಿರಪ್‌ ಶಿಫಾರಸು ಮಾಡಿದ್ದ ಡಾ. ಪ್ರವೀಣ್‌ ಸೋನಿಯನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ವೇಳೆ, ಕೋಲ್ಡ್ರಿಫ್‌ ಸಿರಫ್‌ ಶಿಫಾರಸು ಮಾಡಲು ಶ್ರೀಶನ್‌ ಕಂಪನಿಯಿಂದ ಶೇ.10ರಷ್ಟು ಕಮಿಷನ್‌ ಪಡೆಯುತ್ತಿದ್ದೆ ಎಂಬುದನ್ನು ಡಾ.ಸೋನಿ ಒಪ್ಪಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ

ಶೇ.10 ಕಮಿಷನ್‌ ಆಸೆಗೆ 22 ಮಕ್ಕಳನ್ನು ಕೊಂದ ವೈದ್ಯರು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top