News Kadaba

ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿ ಭಾರತದ ಅಧಿಕಾರಿ ನಿಗೂಢ ಮೃತ್ಯು

(ನ್ಯೂಸ್‌ ಕಡಬ) newskadaba.com, ಮೇ.20 : ಭಾರತದ ಅಧಿಕಾರಿಯೊಬ್ಬರು ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.ನರೇಂದ್ರ ಧಾರ್(35) ಎಂಬ ಭಾರತೀಯ ಅಧಿಕಾರಿ ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನರೇಂದ್ರ ಧಾರ್ ಅವರು ಹರ್ಯಾಣ ಮೂಲದವರಾಗಿದ್ದು, ಚಟ್ಟೋಗ್ರಾಮಿನ ಖುಲ್ಶಿ ಪ್ರದೇಶದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್‌ನಲ್ಲಿ ಪ್ರೋಟೋಕಾಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಬೆಳಿಗ್ಗೆ ತಮ್ಮ ಕೊಠಡಿಯೊಳಗಿನಿಂದ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ ಮಿಷನ್ […]

ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿ ಭಾರತದ ಅಧಿಕಾರಿ ನಿಗೂಢ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.20: ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು ತೆರಳಿದ್ದ ವೇಳೆ, ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಈ ದುರ್ಘಟನೆ ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಇವರು ಉಜಿರೆಯ ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಇಂಜಿನಿಯರಿಂಗ್

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Meta: ಇಂದು 8,000 ಮೆಟಾ ಉದ್ಯೋಗಿಗಳಿಗೆ ಗೇಟ್‌ಪಾಸ್‌! AI ಗಾಗಿ ಭಾರಿ ಉದ್ಯೋಗ ಕಡಿತ!

(ನ್ಯೂಸ್‌ ಕಡಬ) newskadaba.com,  ಮೇ.20: ಟೆಕ್‌ ಲೋಕದಲ್ಲಿ ಮತ್ತೆ ಉದ್ಯೋಗ ಕಡಿತದ ವೇವ್ ಶುರುವಾಗಿದೆ. ಸಾಮಾಜಿಕ ಜಾಲತಾಣ ದಿಗ್ಗಜ ಮೆಟಾ, ಇಂದು ಸುಮಾರು 8 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ಮುಂದಾಗಿದೆ ಎಂಬ ವರದಿಗಳು ಭಾರೀ ಚರ್ಚೆಗೆ ಕಾರಣವಾಗಿವೆ. Meta 78 ಸಾವಿರ ಉದ್ಯೋಗಿಗಳಲ್ಲಿ ಶೇ.10ರಷ್ಟು ಹೊರಗೆ! ಮೆಟಾದ ಒಟ್ಟು 78 ಸಾವಿರ ಸಿಬ್ಬಂದಿಯಲ್ಲಿ ಸುಮಾರು ಶೇ.10ರಷ್ಟು ಜನರಿಗೆ ಗೇಟ್‌ಪಾಸ್‌ ನೀಡಲಾಗುತ್ತಿದೆ. ಕಂಪನಿಯ ಪುನರ್‌ವ್ಯವಸ್ಥೆ ಹಾಗೂ ವೆಚ್ಚ ಕಡಿತದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.  

Meta: ಇಂದು 8,000 ಮೆಟಾ ಉದ್ಯೋಗಿಗಳಿಗೆ ಗೇಟ್‌ಪಾಸ್‌! AI ಗಾಗಿ ಭಾರಿ ಉದ್ಯೋಗ ಕಡಿತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವಮಂಗಳೂರು ಬಂದರಿಗೆ ಐಷಾರಾಮಿ ಹಡಗು ಆಗಮನ

(ನ್ಯೂಸ್‌ ಕಡಬ) newskadaba.com,  ಮೇ.20: ಕ್ರೂಸ್ ಪ್ರವಾಸೋದ್ಯಮ ವರ್ಷದ ೫ನೇ ಹಾಗೂ ಅಂತಿಮ ಐಷಾರಾಮಿ ಹಡಗು ’ಎಂ.ಎಸ್. ಸೆವೆನ್ ಸೀಸ್ ನ್ಯಾವಿಗೇಟರ್ ಐಷಾರಾಮಿ ಹಡಗು ನವ ಮಂಗಳೂರು ಬಂದರಿಗೆ ಮಂಗಳವಾರಆಗಮಿಸಿದೆ. ಬಹಾಮಾಸ್ ಧ್ವಜ ಹೊಂದಿರುವ, ನಾರ್ವೇಜಿಯನ್ ಕ್ರೂಸ್ ಲೈನ್ ಸಂಸ್ಥೆಗೆ ಸೇರಿದ ಈ ಐಷಾರಾಮಿ ಹಡಗಿನಲ್ಲಿ ೪೨೭ ಪ್ರಯಾಣಿಕರು ಮತ್ತು ೩೭೨ ಸಿಬ್ಬಂದಿ ಇದ್ದರು. ಹಡಗಿನಲ್ಲಿ ಬಂದರಿಗೆ ಬಂದಿಳಿದ ಪ್ರವಾಸಿಗರಿಗೆ ಕರಾವಳಿಯ ಸಾಂಪ್ರದಾಯಿಕ ಶೈಲಿಯಲ್ಲಿ ಭವ್ಯ ಸ್ವಾಗತ ಕೋರ ಲಾಯಿತು. ಪ್ರವಾಸಿಗರಿಗಾಗಿ ನಗರದ ಪ್ರಮುಖ ತಾಣಗಳ ವೀಕ್ಷಣೆ,

ನವಮಂಗಳೂರು ಬಂದರಿಗೆ ಐಷಾರಾಮಿ ಹಡಗು ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು: ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.20: ಸ್ಕೂಟರ್ ವಾಹನವು ನೀರಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕಾಪು ಪಣಿಯೂರ್‌ನಲ್ಲಿ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಪಣಿಯೂರು ಕೇಂದ್ರದ ನಿವಾಸಿ ಕೃಷ್ಣ ಮೂಲ್ಯ (22) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಯುವಕ ಹಾಲು ಖರೀದಿಸಲು ಹೋಗಿ ತನ್ನ ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವನ ಮುಂದೆ ಚಲಿಸುತ್ತಿದ್ದ ನೀರಿನ ಟ್ಯಾಂಕರ್ ಕಂಚುಗರ ರಸ್ತೆಗೆ ಪ್ರವೇಶಿಸಲು ಬಲಕ್ಕೆ ತಿರುಗಿದಾಗ ಸ್ಕೂಟರ್ ಅದಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಕಾಪು: ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್

(ನ್ಯೂಸ್‌ ಕಡಬ) newskadaba.com,  ಮೇ.20: ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ. ಆನ್‌ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‌ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.. ಕರ್ನಾಟಕದಲ್ಲೂ ರಾಜ್ಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ಬಂದ್‌ಗೆ ಬೆಂಬಲ ನೀಡಿದ್ದು, ರಾಜ್ಯಾದ್ಯಂತ 26,000ಕ್ಕೂ ಅಧಿಕ ಮೆಡಿಕಲ್‌ಗಳು ಇಂದು ಬಂದ್ ಆಗಲಿವೆ. ಒಂದು ದಿನದ ಮಟ್ಟಿಗೆ

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ ಔಷಧಿ ಅಂಗಡಿ ಬಂದ್‌ : ಈಗಲೇ ಅಗತ್ಯ ಔಷಧಿ ಖರೀದಿಸಿಕೊಳ್ಳಿ

(ನ್ಯೂಸ್‌ ಕಡಬ) newskadaba.com, ಮೇ.19:  ನಿಮಗೆ ಅವಶ್ಯವಿರುವ ಔಷಧಿಗಳನ್ನು ಇಂದೇ ತೆಗೆದಿರಿಸಿ ಕೊಳ್ಳಿ, ಇಲ್ಲದಿದ್ದರೆ ಪಶ್ಚಾತಾಪಡುವ ಸಾಧ್ಯತೆಗಳಿವೆ. ಏಕೆ ಅಂತೀರಾ… ಇಂದು ಮಧ್ಯರಾತ್ರಿ ಯಿಂದ ರಾಜ್ಯದಲ್ಲಿರುವ ಎಲ್ಲ ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗುತ್ತಿವೆ.ದೇಶವ್ಯಾಪಿ ಕರೆ ನೀಡಿರುವ ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘದ ಬಂದ್‌ ನಿರ್ಧಾರಕ್ಕೆ ಕರ್ನಾಟಕದ ಔಷಧ ವ್ಯಾಪಾರಿಗಳ ಸಂಘಟನೆಗಳು ಸಹ ಬೆಂಬಲ ಸೂಚಿಸಿವೆ. ಹೀಗಾಗಿ ನಾಳೆಯಿಂದ ಮೆಡಿಕಲ್‌ ಸ್ಟೋರ್‌ಗಳನ್ನು ಬಂದ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಸುಮಾರು 26 ಸಾವಿರಕ್ಕೂ ಅಧಿಕ ಮೆಡಿಕಲ್‌ ಸ್ಟೋರ್‌ಗಳು ಹಾಗೂ ನಗರದಲ್ಲಿರುವ

ನಾಳೆ ಔಷಧಿ ಅಂಗಡಿ ಬಂದ್‌ : ಈಗಲೇ ಅಗತ್ಯ ಔಷಧಿ ಖರೀದಿಸಿಕೊಳ್ಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಸಮುದ್ರ ತೀರದಲ್ಲಿ ಅಪರಿಚಿತನ ಮೃತ ದೇಹ ಪತ್ತೆ

(ನ್ಯೂಸ್‌ ಕಡಬ) newskadaba.com, ಮೇ.19:ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾರಿಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ವ್ಯಕ್ತಿಯನ್ನು ಯಾರಾದರೂ ಗುರುತಿಸಿದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

ಉಳ್ಳಾಲ : ಸಮುದ್ರ ತೀರದಲ್ಲಿ ಅಪರಿಚಿತನ ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನಾಭರಣ ಪ್ರಿಯರಿಗೆ ಶಾಕ್: ಮತ್ತೆ ದುಬಾರಿಯಾದ ಗೋಲ್ಡ್ | ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಏರಿಕೆ; ಗ್ರಾಹಕರಿಗೆ ಬಿಸಿ ತಟ್ಟಿದ ಬೆಲೆ

(ನ್ಯೂಸ್‌ ಕಡಬ) newskadaba.com,ಮೇ.19:ಮಂಗಳೂರು/ಬೆಂಗಳೂರು: ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಗ್ರಾಹಕರಿಗೆ ಮತ್ತೊಮ್ಮೆ ಬಿಸಿ ತಟ್ಟಿದೆ. ಮದುವೆ ಸೀಸನ್ ಹಾಗೂ ಹೂಡಿಕೆ ಉದ್ದೇಶದ ಖರೀದಿ ಹೆಚ್ಚುತ್ತಿರುವ ಹಿನ್ನೆಲೆ ಮಾರುಕಟ್ಟೆಯಲ್ಲಿ ದರ ಏರಿಕೆ ದಾಖಲಾಗಿದೆ. ಇಂದಿನ ಮಾರುಕಟ್ಟೆ ದರದ ಪ್ರಕಾರ, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹14,395ಕ್ಕೆ ತಲುಪಿದೆ. 18 ಕ್ಯಾರೆಟ್ ಚಿನ್ನದ ದರ ₹11,778 ಆಗಿದೆ. ಇದೇ ವೇಳೆ ಬೆಳ್ಳಿ ದರವೂ ಏರಿಕೆಯಾಗಿದ್ದು, ಪ್ರತಿ ಗ್ರಾಂಗೆ ₹280 ಎಂದು ವರದಿಯಾಗಿದೆ.

ಚಿನ್ನಾಭರಣ ಪ್ರಿಯರಿಗೆ ಶಾಕ್: ಮತ್ತೆ ದುಬಾರಿಯಾದ ಗೋಲ್ಡ್ | ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಏರಿಕೆ; ಗ್ರಾಹಕರಿಗೆ ಬಿಸಿ ತಟ್ಟಿದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೊಂದು ದಾಖಲೆ ಬರೆದ ಯಶ್ ಅಭಿನಯದ ರಾಮಾಯಣ ಸಿನಿಮಾ

(ನ್ಯೂಸ್‌ ಕಡಬ) newskadaba.com,ಮೇ.19: ಬಾಲಿವುಡ್ ಸೂಪರ್ ಸ್ಟಾರ್ ರಣಬೀರ್ ಕಪೂರ್ ಹಾಗೂ ಕನ್ನಡ ಸೂಪರ್ ಸ್ಟಾರ್ ಯಶ್ ಅಭಿನಯದ ರಾಮಾಯಣ ಸಿನಿಮಾ ಸದ್ಯ ಸುದ್ದಿಯಲ್ಲಿದೆ. ಈ ಸಿನಿಮಾ ಬಗ್ಗೆ ದಿನಕ್ಕೊಂದು ಅಪ್ಡೇಟ್ ಬರ್ತಾನೇ ಇದೆ. ಈ ವರ್ಷ ಬಾಲಿವುಡ್ ನ ಬಹುನಿರೀಕ್ಷಿತ ಹಾಗೂ ದೊಡ್ಡ ಬಜೆಟ್ ಚಿತ್ರಗಳಲ್ಲಿ ರಾಮಾಯಣ ಒಂದಾಗಿದೆ. ರಾಮಾಯಣ ಸಿನಿಮಾ ವೀಕ್ಷಣೆಗೆ ಫ್ಯಾನ್ಸ್ ಕಾತರದಿಂದ ಕಾಯ್ತಿದ್ದು, ಈಗ ರಾಮಾಯಣ ಸಿನಿಮಾ ಬಗ್ಗೆ ಮತ್ತೊಂದು ಅಚ್ಚರಿ ವಿಷ್ಯ ಹೊರ ಬಿದ್ದಿದೆ. ರಾಮಾಯಣ ಸಿನಿಮಾ ಅಂತಿಂತ ಸಿನಿಮಾ

ಮತ್ತೊಂದು ದಾಖಲೆ ಬರೆದ ಯಶ್ ಅಭಿನಯದ ರಾಮಾಯಣ ಸಿನಿಮಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top