News Kadaba

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ: ಈಶ್ವರ ಖಂಡ್ರೆ

(ನ್ಯೂಸ್‌ ಕಡಬ) newskadaba.com,ಮೇ.19: ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ […]

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ: ಈಶ್ವರ ಖಂಡ್ರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಕ್ತಸಿಕ್ತವಾಗುತ್ತಿವೆ ಕರ್ನಾಟಕದ ರಸ್ತೆಗಳು – ಅಪಘಾತ ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ!

(ನ್ಯೂಸ್‌ ಕಡಬ) newskadaba.com,ಮೇ.19: ರಾಜ್ಯದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕರ್ನಾಟಕ ಇದೀಗ ದೇಶದಲ್ಲೇ ಅತಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ರಾಜ್ಯಗಳ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ “ಭಾರತದಲ್ಲಿ ಅಪಘಾತ ಮತ್ತು ಆತ್ಮಹತ್ಯಾ ಸಾವುಗಳು–2024” ವರದಿ ಆತಂಕಕಾರಿ ಚಿತ್ರಣವನ್ನು ಹೊರಹಾಕಿದೆ.2024ರಲ್ಲಿ ದೇಶಾದ್ಯಂತ ಒಟ್ಟು 4,67,967 ರಸ್ತೆ ಅಪಘಾತಗಳು ಸಂಭವಿಸಿದ್ದು, 1,75,142 ಮಂದಿ ಮೃತಪಟ್ಟಿದ್ದಾರೆ. ಅಂದರೆ ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಮಂದಿ ರಸ್ತೆ ಅಪಘಾತಗಳಲ್ಲಿ

ರಕ್ತಸಿಕ್ತವಾಗುತ್ತಿವೆ ಕರ್ನಾಟಕದ ರಸ್ತೆಗಳು – ಅಪಘಾತ ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 5 ದಿನಗಳಲ್ಲಿ ಎರಡನೇ ಬಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,ಮೇ.19: ಇರಾನ್ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ ಸರ್ಕಾರ ಹೆಚ್ಚಿಸಿದ್ದು, ಇಂದು ಮಂಗಳವಾರ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು 90 ಪೈಸೆಯಷ್ಟು ಏರಿಸಿವೆ.ದೆಹಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 97.77ರೂಪಾಯಿಯಿಂದ 98.64 ರೂಪಾಯಿಗೆ ಹೆಚ್ಚಿಸಲಾಗಿದ್ದು, ಡೀಸೆಲ್ ದರವು 90.67 ರೂಪಾಯಿಯಿಂದ 91.58 ರೂಪಾಯಿಗೆ ಏರಿಕೆಯಾಗಿದೆ. ಇದಕ್ಕೂ ಮೊದಲು ಮೇ 15ರಂದು ಲೀಟರ್‌ಗೆ 3ರೂಪಾಯಿ ದರ ಏರಿಕೆ ಮಾಡಲಾಗಿತ್ತು.ಮುಂಬೈನಲ್ಲಿ ಪೆಟ್ರೋಲ್

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 5 ದಿನಗಳಲ್ಲಿ ಎರಡನೇ ಬಾರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನೆ ದಾಳಿಗೆ ಬಲಿಯಾದ ಪತ್ನಿ; ಸಾವಿನಲ್ಲೂ ಸಾರ್ಥಕತೆ ಮೆರೆದು ಕಣ್ಣು ದಾನ ಮಾಡಿದ ಪತಿ!

(ನ್ಯೂಸ್‌ ಕಡಬ) newskadaba.com,ಮೇ.19: ದುಬಾರೆ ಸಾಕಾನೆಗಳ ಕಾದಾಟಕ್ಕೆ ಬಲಿಯಾದ ತುಳಸಿ ಅವರ ಅಂಗಾಂಗ ದಾನ ಮಾಡಲು ಪತಿ ಜೋಯೆಲ್ ಮುಂದಾಗಿದ್ದಾರೆ. ದೇಹ ನಜ್ಜುಗುಜ್ಜಾಗಿರುವುದರಿಂದ ಕಣ್ಣುಗಳನ್ನು ಮಾತ್ರ ದಾನ ಮಾಡಲು ವೈದ್ಯರು ಸೂಚಿಸಿದ್ದಾರೆ. ಬೇರೆಯವರ ಮೂಲಕ ನನ್ನ ಪತ್ನಿ ಬದುಕಿರಲಿ” ಎಂದು ಜೋಯೆಲ್ ಭಾವುಕರಾಗಿದ್ದಾರೆ. ಇದೇ ವೇಳೆ, ಸ್ಥಳದಲ್ಲಿ ಪ್ರವಾಸಿಗರಿಗೆ ಸುರಕ್ಷತೆ ಇಲ್ಲ ಹಾಗೂ ಸಮಯಕ್ಕೆ ಆಂಬ್ಯುಲೆನ್ಸ್ ಸಿಗಲಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನೆ ದಾಳಿಗೆ ಬಲಿಯಾದ ಪತ್ನಿ; ಸಾವಿನಲ್ಲೂ ಸಾರ್ಥಕತೆ ಮೆರೆದು ಕಣ್ಣು ದಾನ ಮಾಡಿದ ಪತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: :ಅಪ್ರಾಪ್ತ ಬಾಲಕರಿಂದ ದ್ವಿಚಕ್ರ ವಾಹನ ಚಾಲನೆ – ವಾಹನಗಳ ಮಾಲೀಕರಿಗೆ ತಲಾ 25 ಸಾವಿರ ದಂಡ!

(ನ್ಯೂಸ್‌ ಕಡಬ) newskadaba.com,ಮೇ.19: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ 2 ಪ್ರತ್ಯೇಕ ಪ್ರಕರಣದಲ್ಲಿ ವಾಹನಗಳ ಮಾಲೀಕರಿಗೆ ತಲಾ ರೂ 25,000 ದಂಡವನ್ನು ವಿಧಿಸಿ ನ್ಯಾಯಾಲಯವು ಆದೇಶಿಸಿದೆ. ಏಪ್ರಿಲ್‌ 06 2026 ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ ನಲ್ಲಿ KA-19-HT-9694 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಹಾಗೂ ಏಪ್ರಿಲ್‌ 28. 2026 ರಂದು ಬಿಸಿ ರೋಡ್‌ ನಲ್ಲಿ ಬಳಿ, KA05KG6785 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕರು ಚಾಲನೆ ಮಾಡಿರುವುದು

ಬಂಟ್ವಾಳ: :ಅಪ್ರಾಪ್ತ ಬಾಲಕರಿಂದ ದ್ವಿಚಕ್ರ ವಾಹನ ಚಾಲನೆ – ವಾಹನಗಳ ಮಾಲೀಕರಿಗೆ ತಲಾ 25 ಸಾವಿರ ದಂಡ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಇಟಿ – ಮೇ 21 ರವರೆಗೆ ಸರ್ಕಾರಿ ಪಿಯು ಕಾಲೇಜಿನಲ್ಲಿ ದಾಖಲೆ ಪರಿಶೀಲನೆ- ಕರ್ನಾಟಕ ಪರೀಕ್ಷಾ ಪ್ರಾಧಿಕಾರ

(ನ್ಯೂಸ್‌ ಕಡಬ) newskadaba.com,  ಮೇ.18: :ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿ, ಇನ್ನೂ ದಾಖಲೆ ಪರಿಶೀಲನೆ ಮಾಡಿಕೊಳ್ಳದ ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳ ಸಮೇತ ಹತ್ತಿರದ ಸರ್ಕಾರಿ ಪಿಯು ಕಾಲೇಜುಗಳಿಗೆ ಮೇ 21 ರ ಒಳಗೆ ಹೋಗಿ ಪರಿಶೀಲನೆ ಮಾಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. ಅಭ್ಯರ್ಥಿಗಳ ಕ್ಲೇಮ್ಸ್ ಸರ್ಟಿಫಿಕೇಟ್ ನಲ್ಲಿ ಕ್ಲೇಮ್ಸ್ ನಾಟ್ ವೆರಿಫೈಯ್ಡ್ ಎಂದು ಮುದ್ರಿತವಾಗಿದ್ದಲ್ಲಿ ಅಂತಹವರು ಮಾತ್ರ ಸರ್ಕಾರಿ ಪಿಯು ಕಾಲೇಜಿಗೆಹೋಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ

ಸಿಇಟಿ – ಮೇ 21 ರವರೆಗೆ ಸರ್ಕಾರಿ ಪಿಯು ಕಾಲೇಜಿನಲ್ಲಿ ದಾಖಲೆ ಪರಿಶೀಲನೆ- ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬಾರೆ ಸಾಕಾನೆ ಶಿಬಿರದಲ್ಲಿ ಭೀಕರ ದುರಂತ|ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಸಿಲುಕಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.18: ಸಾಕಾನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬಳು ಸಾವಿಗೀಡಾದ ದುರ್ಘಟನೆ ಕುಶಾಲನಗರ ತಾಲೂಕಿನ ದುಬಾರೆ ಶಿಬಿರದಲ್ಲಿ ನಡೆದಿದೆ‌. ಚೆನ್ನೈ  ಮೂಲದ ಜಿನ್ಮು (33) ಸಾವನ್ನಪ್ಪಿದ್ದ ಮಹಿಳೆ. ಮೇ 18ರ ಬೆಳಿಗ್ಗೆ ಮಹಿಳೆ ಹಾಗೂ ಅವರ ಪತಿ ಜೋಯಲ್ ದುಬಾರೆ ಸಾಕಾನೆ ಶಿಬಿರಕ್ಕೆ ಅಗಮಿಸಿದ್ದರು. ಕೆಲ ಸಮಯ ಸಾಕಾನೆಗಳೊಂದಿಗೆ ಫೋಟೋ ಸಹ ತೆಗೆಸಿಕೊಂಡಿದ್ದರು. ಬಳಿಕ ಸಾಕಾನೆಗಳಿಗೆ ಸ್ನಾನ ಮಾಡಿಸಿ ನೀರು ಕುಡಿಸಲು ಮಾವುತರು ಹಾಗೂ ಕಾವಾಡಿಗಳು ತೆರಳಿದ ಸಂದರ್ಭದಲ್ಲಿ, ಕೆಲ ಪ್ರವಾಸಿಗರು ಸಾಕಾನೆಗಳಿಗೆ ಸ್ನಾನ ಮಾಡಿಸಲು ಮುಂದಾಗಿದ್ದಾರೆ.

ದುಬಾರೆ ಸಾಕಾನೆ ಶಿಬಿರದಲ್ಲಿ ಭೀಕರ ದುರಂತ|ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಸಿಲುಕಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬಾರೆ ಸಾಕಾನೆ ಶಿಬಿರದಲ್ಲಿ ಭೀಕರ ದುರಂತ ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಸಿಲುಕಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.18: ಸಾಕಾನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬಳು ಸಾವಿಗೀಡಾದ ದುರ್ಘಟನೆ ಕುಶಾಲನಗರ ತಾಲೂಕಿನ ದುಬಾರೆ ಶಿಬಿರದಲ್ಲಿ ನಡೆದಿದೆ‌. ಚೆನ್ನೈ  ಮೂಲದ ಜಿನ್ಮು (33) ಸಾವನ್ನಪ್ಪಿದ್ದ ಮಹಿಳೆ. ಮೇ 18ರ ಬೆಳಿಗ್ಗೆ ಮಹಿಳೆ ಹಾಗೂ ಅವರ ಪತಿ ಜೋಯಲ್ ದುಬಾರೆ ಸಾಕಾನೆ ಶಿಬಿರಕ್ಕೆ ಅಗಮಿಸಿದ್ದರು. ಕೆಲ ಸಮಯ ಸಾಕಾನೆಗಳೊಂದಿಗೆ ಫೋಟೋ ಸಹ ತೆಗೆಸಿಕೊಂಡಿದ್ದರು. ಬಳಿಕ ಸಾಕಾನೆಗಳಿಗೆ ಸ್ನಾನ ಮಾಡಿಸಿ ನೀರು ಕುಡಿಸಲು ಮಾವುತರು ಹಾಗೂ ಕಾವಾಡಿಗಳು ತೆರಳಿದ ಸಂದರ್ಭದಲ್ಲಿ, ಕೆಲ ಪ್ರವಾಸಿಗರು ಸಾಕಾನೆಗಳಿಗೆ ಸ್ನಾನ ಮಾಡಿಸಲು ಮುಂದಾಗಿದ್ದಾರೆ.

ದುಬಾರೆ ಸಾಕಾನೆ ಶಿಬಿರದಲ್ಲಿ ಭೀಕರ ದುರಂತ ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಸಿಲುಕಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ : 3 ಕಾರುಗಳ ನಡುವೆ ಸರಣಿ ಅಪಘಾತ – ಕಾರುಗಳು ಜಖಂ

(ನ್ಯೂಸ್‌ ಕಡಬ) newskadaba.com,  ಮೇ.18: ದೇವರಕೊಲ್ಲಿ ಬಳಿ 3 ಕಾರುಗಳ ನಡುವೆ ಸರಣಿ ಅಪಘಾತ ಉಂಟಾಗಿ ಕಾರುಗಳು ಜಖಂಗೊಂಡಿರುವ ಘಟನೆ ಸಂಭವಿಸಿದೆ. ಸುಳ್ಯ ಕಡೆಯಿಂದ ಮಡಿಕೇರಿಯತ್ತ ಹೋಗುತ್ತಿದ್ದ ಕಾರಿಗೆ ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಈ ಸಂದರ್ಭದಲ್ಲಿ ಚಾಲಕ ಬ್ರೇಕ್ ಹಾಕಿದಾಗ ಅದರ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ಈ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೂರೂ ಕಾರುಗಳು ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ : 3 ಕಾರುಗಳ ನಡುವೆ ಸರಣಿ ಅಪಘಾತ – ಕಾರುಗಳು ಜಖಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಲಸ ಮಾಡದಿದ್ರೆ ವೇತನ ಇಲ್ಲ: ಮುಷ್ಕರಕ್ಕೆ ಸಿದ್ಧವಾಗಿರೋ ಸಾರಿಗೆ ನೌಕರರಿಗೆ KSRTC ವಾರ್ನಿಂಗ್‌

(ನ್ಯೂಸ್‌ ಕಡಬ) newskadaba.com,  ಮೇ.18:  ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರಕ್ಕೆ ಸಿದ್ಧವಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ (KSRTC) ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ. ನಾಡಿದ್ದು ಕೆಲಸ ಮಾಡದಿದ್ದರೆ ‘ನೋ ವರ್ಕ್‌, ನೋ ಪೇ’ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಮೇ 20 ರಂದು ಹೋರಾಟದಲ್ಲಿ ಭಾಗಿಯಾಗಲು ಸಿದ್ಧವಾಗಿರುವ ಸಾರಿಗೆ ನೌಕರರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್‌ ಪಾಷಾ ಎಚ್ಚರಿಸಿದ್ದಾರೆ. ಎಲ್ಲಾ ಸಾರಿಗೆ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಪ್ರತಿಭಟನೆಯಲ್ಲಿ ಭಾಗಿಯಾದರೆ ಸೇವಾ ನಿಯಮಗಳ ಅನ್ವಯ ಕಠಿಣ

ಕೆಲಸ ಮಾಡದಿದ್ರೆ ವೇತನ ಇಲ್ಲ: ಮುಷ್ಕರಕ್ಕೆ ಸಿದ್ಧವಾಗಿರೋ ಸಾರಿಗೆ ನೌಕರರಿಗೆ KSRTC ವಾರ್ನಿಂಗ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top