News Kadaba

ಹಿಟ್‌ & ರನ್‌ಗೆ ಪದವಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬಲಿ!

(ನ್ಯೂಸ್‌ ಕಡಬ) newskadaba.com,  ಸೆ.29 ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಘನಘೋರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದ್ದು, ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ಧನುಶ್ರೀ (22) ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ ಧನುಶ್ರೀ ರಸ್ತೆಯಲ್ಲಿ ಗುಂಡಿ ಇರುವುದರಿಂದ ಅದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗೆ ಕೆಳಗೆ ಬಿದ್ದಿದ್ದಾಳೆ. ಈ ವೇಳೆಯಲ್ಲಿ ಟಿಪ್ಪರ್ ಹರಿದಿದೆ. ಸದ್ಯ ಘಟನಾ ಸ್ಥಳಕ್ಕೆ ಕೆಆರ್ […]

ಹಿಟ್‌ & ರನ್‌ಗೆ ಪದವಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬಲಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮುಂಬೈ: ಚಿಕನ್ ಬೇಕೆಂದ ಮಕ್ಕಳಿಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ. ಬಾಲಕನು ತನ್ನ ಅಮ್ಮ ಪಲ್ಲವಿ ಧುಮ್ಡೆ (40) ಬಳಿ ಚಿಕನ್ ಬೇಕೆಂದು ಕೇಳಿದ್ದ. ಇದರಿಂದ ಕೋಪಗೊಂಡ ಆಕೆ ಆತನನ್ನು ಲಟ್ಟಣಿಗೆಯಿಂದ ಹೊಡೆದು ಕೊಂದಿದ್ದಾಳೆ. ಜೊತೆಗೆ ತನ್ನ 10 ವರ್ಷದ ಮಗಳ ಮೇಲೂ ಆಕೆ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಕಿರುಚಾಟ ಕೇಳಿ ಅಕ್ಕಪಕ್ಕದ

ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಖ್ಯಾತ ಕನ್ನಡ ರಂಗಭೂಮಿ ನಟ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ

(ನ್ಯೂಸ್‌ ಕಡಬ) newskadaba.com, ಸೆ.29 :  ಸರದೇಶಪಾಂಡೆರವರು, ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಜನಪ್ರಿಯರಾಗಿದ್ದ ಹುಬ್ಬಳ್ಳಿ ಮೂಲದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಅವರು ಪಾತ್ರವಹಿಸುತ್ತಿದ್ದರು. ‘ರಾಮ ಶ್ಯಾಮ ಭಾಮಾ’ ನಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಅವರ ನಿಧನಕ್ಕೆ ಕುಟುಂಬ ವರ್ಗ, ಅವರ ಅಭಿಮಾನಿಗಳು, ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.

ಖ್ಯಾತ ಕನ್ನಡ ರಂಗಭೂಮಿ ನಟ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.29 ಭೂಪಾಲ್‌ – ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ತೈ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶುಭಮ್‌ ಕರ್ದಾತೆ (25) ಮತ್ತು ಅವರ ಪತ್ನಿ ರೋಶ್ನಿ (24) ಆತಹತ್ಯೆ ಮಾಡಿಕೊಂಡಿರುವ ದಂಪತಿ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಬುಕಾಖೇಡಿ ಅಣೆಕಟ್ಟೆಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ. 4 ವರ್ಷಗಳ ಹಿಂದೆ ಇವರಿಬ್ಬರು ಪ್ರೇಮ ವಿವಾಹವಾಗಿದ್ದು, ಕೌಟುಂಬಿಕ ಕಲಹಗಳಿಂದ ಜಿಗುಪ್ಸೆಗೊಂಡಿದ್ದರು. ಬೆಳಗ್ಗೆ ಕೂಡ ಜಗಳವಾಡಿ ರೋಶ್ನಿ ಮಗುವಿನೊಂದಿಗೆ

ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಕದ್ರಿ ಪಾರ್ಕ್ ಬಳಿಯ ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಕದ್ರಿ ಠಾಣೆ ಪೊಲೀಸರು ಸೆ.27ರಂದು ಬಂಧಿಸಿದ್ದಾರೆ.ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ ಅಲಿಯಾಸ್ ಕುಂಟ ದೀಚು (22) ಬಂಧಿತ ಆರೋಪಿ. ಆರೋಪಿಯಿಂದ 1 ಕೆ.ಜಿ. 150 ಗ್ರಾಂ ತೂಕದ ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ಹಾಗೂ ಸ್ಕೂಟರ್ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕ

ಮಂಗಳೂರು : ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಷ್ಯಾಕಪ್ 2025 ಗೆದ್ದ ಭಾರತ ತಂಡಕ್ಕೆ 21 ಕೋಟಿ ನಗದು ಬಹುಮಾನ ಘೋಷಣೆ – ಬಿಸಿಸಿಐ

(ನ್ಯೂಸ್‌ ಕಡಬ) newskadaba.com,  ಸೆ.29 ದುಬೈ: ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ.. ಜೊತೆಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನಿಂದ ಚಾಂಪಿಯನ್ ತಂಡಕ್ಕೆ 2.6 ಕೋಟಿ ರೂ. ಟೂರ್ನಿಯ ಬಹುಮಾನ ಪಡೆದುಕೊಂಡಿದೆ. ರನ್ನರ್ ಅಪ್ ಪಾಕ್ ತಂಡ ಕೇವಲ 1.3 ಕೋಟಿ ರೂ. ಬಹುಮಾನ ತನ್ನದಾಗಿಸಿಕೊಂಡಿದೆ. ಈ ಬಾರಿ ಏಷ್ಯಾಕಪ್ ಪಂದ್ಯದಲ್ಲಿ ಭಾರತ ತಂಡವು ಪಾಕ್ ತಂಡಕ್ಕೆ 3 ಬಾರಿ ಸೋಲುಣಿಸಿದೆ. ಮೊದಲ ಸುತ್ತಿನ

ಏಷ್ಯಾಕಪ್ 2025 ಗೆದ್ದ ಭಾರತ ತಂಡಕ್ಕೆ 21 ಕೋಟಿ ನಗದು ಬಹುಮಾನ ಘೋಷಣೆ – ಬಿಸಿಸಿಐ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚೆನ್ನೈ: ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ದಳಪತಿ ವಿಜಯ್‌ಗೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಸೆ.29 ಚೆನ್ನೈ: ಕರೂರಿನ ರ‍್ಯಾಲಿ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನ ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿದ ಹಿನ್ನೆಲೆ ಸೆ.27ರ ಮಧ್ಯರಾತ್ರಿಯಿಂದಲೇ ವಿಜಯ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಚೆನ್ನೈ: ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ದಳಪತಿ ವಿಜಯ್‌ಗೆ ಬಾಂಬ್ ಬೆದರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಪುತ್ತೂರು: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಶಿರಾಡಿ ಸಮೀಪ ರವಿವಾರ ಸಂಜೆ ನಡೆದಿದೆ. ಶಿರಾಡಿ ಗ್ರಾಮದ ಗುಂಡ್ಯದ ಹತ್ತಿರ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ  ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸುಮಾರು 3 ಗಂಟೆಗಳ

ಪುತ್ತೂರಿನ ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

: ಕರಾವಳಿ ಕರ್ನಾಟಕದಲ್ಲಿ ಕ್ಯಾಟ್‌ಫಿಶ್ ಗೆ ಭಾರಿ ಬೇಡಿಕೆ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಇಂಗ್ಲಿಷ್‌ನಲ್ಲಿ ಕ್ಯಾಟ್‌ಫಿಶ್ ಎಂದು ಜನಪ್ರಿಯವಾಗಿರುವ ಮುಗುಡು ಮೀನಿಗೆ ಕರಾವಳಿ ಪ್ರದೇಶದಾದ್ಯಂತ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಇದು ಕ್ಯಾಟ್‌ಫಿಶ್ ಕುಟುಂಬಕ್ಕೆ ಸೇರಿದ್ದು, ಈ ವಿಶಿಷ್ಟ ಜಾತಿಯ ಮೀನು ಪ್ರಪಂಚದ ಹಲವು ಭಾಗಗಳಲ್ಲಿ ಕಂಡುಬಂದರೂ, ಕರ್ನಾಟಕದ ಹಿನ್ನೀರಿನಲ್ಲಿ ವಾಸಿಸುವ ಮುಗುಡು ಮೀನುಗಳು ವಿಶೇಷವಾಗಿ ಕುತೂಹಲಕಾರಿಯಾಗಿವೆ. ಈ ಮೀನುಗಳ ಒಂದು ವಿಚಿತ್ರ ಅಂಶವೆಂದರೆ ಅವು ಒಣ ಹವಾಮಾನದಲ್ಲಿ ಬದುಕುವ ರೀತಿ. ಮಳೆ ನಿಂತ ಬಳಿಕ ಈ ಪ್ರದೇಶದ ಹೊಳೆಗಳು ಮತ್ತು ಸಣ್ಣ ನದಿಗಳು ಸಾಮಾನ್ಯವಾಗಿ

: ಕರಾವಳಿ ಕರ್ನಾಟಕದಲ್ಲಿ ಕ್ಯಾಟ್‌ಫಿಶ್ ಗೆ ಭಾರಿ ಬೇಡಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬೈಯಲ್ಲಿ ಉದ್ಯಮಿಯಾಗಿದ್ದ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.29 ದುಬೈ : ಉಪ್ಪಿನಂಗಡಿಯಲ್ಲಿನ ಬಜತ್ತೂರು ಗ್ರಾಮದ ಅರ್ಬಿ ಮನೆ ನಿವಾಸಿ ತಿಲಕಾನಂದ ಪೂಜಾರಿ ಅಲಿಯಾಸ್‌ ಪ್ರಶಾಂತ್‌ ಪೂಜಾರಿ(33) ಅವರು ದುಬೈಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅವರ ಮೃತದೇಹ ಸೆ.27ರಂದು ಸ್ವಗ್ರಾಮಕ್ಕೆ ಆಗಮಿಸಿದೆ. ದುಬೈಯಲ್ಲಿ ಉದ್ಯಮಿಯಾಗಿದ್ದ ಪ್ರಶಾಂತ್‌ ವಾರದ ಹಿಂದೆ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಕಾನೂನಿನ ತೊಡಕುಂಟಾಗಿತ್ತು. ಈ ಬಗ್ಗೆ ಸ್ಪಂದನೆ ತೋರಿದ ದ.ಕ. ಮೂಲದ ಸಮದ್‌ ಬಿರಾಲಿ ಮತ್ತಿತರ ಯುವಕರ ತಂಡ ಅಗತ್ಯ ದಾಖಲೆಗಳನ್ನು ಸಿದ್ಧಗೊಳಿಸಿ ದುಬೈಯಲ್ಲಿ

ದುಬೈಯಲ್ಲಿ ಉದ್ಯಮಿಯಾಗಿದ್ದ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top