News Kadaba

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.20 ಬೆಳ್ತಂಗಡಿ : ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್‌ಸಿ ರಸ್ತೆಯ ಬಳಿ, ಕೆಎಸ್‌ಆರ್‌ಟಿಸಿ  ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಮೃತಪಟ್ಟದ್ದಾನೆ.. ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು […]

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಸೆ.20 ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೆರ್ಪೆಯಲ್ಲಿ ಅಸಮರ್ಪಕವಾಗಿ ನಡೆಯುತ್ತಿರುವ ನಗರ ಪಂಚಾಯತಿ ಕಸ ವಿಲೇವಾರಿ ಘಟಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಕಲ್ಚೆರ್ಪೆ ಸಮೀಪದ ಜನರು ಒತ್ತಾಯಿಸಿದ್ದಾರೆ. ಒಂದು ವೇಳೆ ತಪ್ಪಿದಲ್ಲಿ ಸುಳ್ಯ ನಗರ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಸ್ಥಳೀಯರು ಎಚ್ಚರಿ ನೀಡಿದ್ದಾರೆ. ಸುಮಾರು 6 ತಿಂಗಳ ಹಿಂದೆ ಶಾಸಕರ ಮತ್ತು ನಗರ ಪಂಚಾಯತ್ ಆಡಳಿತ ಮಂಡಳಿಯವರ

ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಸೆ.19 ಮಂಗಳೂರು : ನಗರದ ಸ್ಟೇಟ್‌ಬ್ಯಾಂಕ್ ಹತ್ತಿರ ವ್ಯಕ್ತಿಯೊಬ್ಬ ಟ್ರಾಫಿಕ್‌ನಲ್ಲಿ ಕರ್ತವ್ಯನಿರತ ಹೆಡ್‌ಕಾನ್‌ ಸ್ಟೇಬಲ್‌ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಟೇಟ್‌ಬ್ಯಾಂಕ್ ವೃತ್ತದ ಬಳಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಟ್ರಾಫಿಕ್ ಎಚ್‌ಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಸ್ಕೂಟರ್ ಸವಾರ ನಾಟೆಕಲ್‌ನ ಆಸಿಫ್ ಬಾವ ಎಂಬಾತ ಅದನ್ನು ಲೆಕ್ಕಿಸದೆ ಸ್ಕೂಟರ್ ಚಲಾಯಿಸಿದ್ದು, ಈ ಸಂದರ್ಭ ಎಚ್‌ಸಿ ಸ್ಕೂಟರ್ ಸವಾರನಿಗೆ ಏಯ್ ಅಂತ ಹೇಳಿ ಕೈಯಿಂದ

ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂತಾರ: ಚಾಪ್ಟರ್ 1 ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ; ಮೂಹೂರ್ತ ಫಿಕ್ಸ್‌

(ನ್ಯೂಸ್‌ ಕಡಬ) newskadaba.com,  ಸೆ. 19 ಕಾಂತಾರ: ಚಾಪ್ಟರ್ 1 ಸಿನಿಮಾದ ಟ್ರೈಲರ್ ಇದೇ ತಿಂಗಳು (ಸೆಪ್ಟೆಂಬರ್‌) 22 ನೇ ತಾರೀಖಿನಂದು, ಮಧ್ಯಾಹ್ನ 12:45ಕ್ಕೆ ಬಿಡುಗಡೆ ಆಗಲಿದೆ. ಹೊಂಬಾಳೆಯ ಅಧಿಕೃತ ಯೂಟ್ಯೂಬ್ ಚಾನೆಲ್​​​ನಲ್ಲಿ ಟ್ರೈಲರ್ ಬಿಡುಗಡೆ ಆಗಲಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಟ್ರೈಲರ್ ವೀಕ್ಷಿಸಬಹುದು. ಸಿನಿಮಾ ಕುರಿತು ರಿಷಬ್‌ ಶೆಟ್ಟಿ ಅಥವಾ ಚಿತ್ರ ತಂಡ ಯಾವುದೇ ಮಾಹಿತಿಯನ್ನು ಅಷ್ಟಾಗಿ ಹಂಚಿಕೊಳ್ಳುತ್ತಿಲ್ಲ. ಈ ವರೆಗೆ 2  ಪೋಸ್ಟರ್ ಹಾಗೂ ಒಂದು ಮೇಕಿಂಗ್

ಕಾಂತಾರ: ಚಾಪ್ಟರ್ 1 ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ; ಮೂಹೂರ್ತ ಫಿಕ್ಸ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಳ್ತಂಗಡಿ :  ಚಿಕ್ಕಮಗಳೂರು ಮತ್ತು ಕರಾವಳಿಯನ್ನು ಸಂಪರ್ಕಿಸುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ವಿಭಾಗದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ವಾಹನಗಳಿಗೆ ಹೊಸ ಸಂಚಾರ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ, ರಾತ್ರಿ ಪ್ರಯಾಣಿಸುವ ವಾಹನಗಳನ್ನು ಇನ್ನು ಮುಂದೆ ಪ್ರತ್ಯೇಕವಾಗಿ ಅಥವಾ ಜೋಡಿಯಾಗಿ ಸಾಗಲು ಬಿಡುವುದಿಲ್ಲ. ಕನಿಷ್ಠ 5 ವಾಹನಗಳು ಗುಂಪಾಗಿ ಬಂದ ನಂತರವೇ ಅವುಗಳಿಗೆ ಮುಂದುವರಿಯಲು ಅನುಮತಿ ನೀಡಲಾಗುತ್ತದೆ. ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ, ರಾತ್ರಿ ಸಮಯದಲ್ಲಿ

ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ; ಡಿಕೆಶಿ ಶಿವಕುಮಾರ್ ವಿರುದ್ಧ ಜೆಡಿಎಸ್‌ ಕಿಡಿ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮಲ್ಲೇನೋ ಮೂಲಭೂತ ಸಮಸ್ಯೆ ಇದೆ. ಬರೀ ಧಿಮಾಕು, ಎಲ್ಲವನ್ನೂ ಬಲ್ಲೆ ಎನ್ನುವ ಪೋಷಾಕು! ಅದಕ್ಕೆ ಏನೋ ಬೆಂಗಳೂರಿನ ಮೂಲಭೂತ ಸೌಕರ್ಯ ಎಕ್ಕುಟ್ಟಿ ಹೋಗಿದೆ ಎಂದು ಜೆಡಿಎಸ್‌ ಕಿಡಿಕಾರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಯಿಸಿರುವ ಜೆಡಿಎಸ್‌, ಬಹುಶಃ, ನಿಮಗೆ ನೆಟ್ ವರ್ಕ್ ಸಮಸ್ಯೆ ಕಾಡುತ್ತಿರಬಹುದು. ನಿಮ್ಮ ಮೆದುಳು, ನಾಲಿಗೆಯ ನಡುವೆ ಲೈನಪ್ ಸರಿ ಇದ್ದಂತೆ ಇಲ್ಲ! ಏಕೆಂದರೆ, ಇನ್ನೊಬ್ಬರ ಹೇಳಿಕೆಯನ್ನು ಅರ್ಥೈಸಿಕೊಳ್ಳುವ ಬೌದ್ಧಿಕ

ಬೆಂಗಳೂರು : ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ; ಡಿಕೆಶಿ ಶಿವಕುಮಾರ್ ವಿರುದ್ಧ ಜೆಡಿಎಸ್‌ ಕಿಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com,  ಸೆ. 19 ಮಾಸ್ಕೋ: ರಷ್ಯಾದಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್ ಆಗಿವೆ. ವೀಡಿಯೋದಲ್ಲಿ ಮನೆಗಳಲ್ಲಿನ ಪೀಠೋಪಕರಣಗಳು, ವಸ್ತುಗಳು ಅಲುಗಾಡುತ್ತಿರುವ ಹಾಗೂ ಪಾರ್ಕ್ ಮಾಡಿದ ಕಾರುಗಳು ಹಿಂದಕ್ಕೆ ಮತ್ತು ಮುಂದಕ್ಕೆ ತೂಗಾಡುತ್ತಿರುವ ದೃಶ್ಯಗಳನ್ನು ಕಾಣಬಹುದಾಗಿದೆ. ಪ್ರದೇಶದ ರಾಜಧಾನಿ ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಪೂರ್ವಕ್ಕೆ 128 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. 10 ಕಿಲೋಮೀಟರ್  ಆಳದಲ್ಲಿ ಭೂಕಂಪದ ಕೇಂದ್ರಬಿಂದು

ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಸೆ.24ರವರೆಗೆ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಂಗಳೂರು:  ನಿನ್ನೆ ಮಧ್ಯಾಹ್ನದಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆ ಪ್ರಾರಂಭವಾಗಿದ್ದು, ಜನರ ದೈನಂದಿನ ಕೆಲಸಕಾರ್ಯಗಳಿಗೆ ತೊಂದರೆಯಾಗಿತ್ತು. ಇಂದು ಬೆಳಗ್ಗೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಹಗುರ ಮಳೆ ಮುಂದುವರೆದಿತ್ತು. ಬಂಗಾಳಕೊಲ್ಲಿ ಹಾಗೂ ಒಳನಾಡಿನಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ

ಬೆಂಗಳೂರು : ಸೆ.24ರವರೆಗೆ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ – ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸೆರೆ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು :  ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಅಲಿ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ

ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ – ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

(ನ್ಯೂಸ್‌ ಕಡಬ) newskadaba.com,  ಸೆ. 19 : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆರಂಭವಾಗಲು ಕೆಲವೇ ದಿನಗಳು ಬಾಕಿಯಿರುವಂತೆಯೇ, ಮೈಸೂರಿನಲ್ಲಿ ಸಕಲ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಆದರೆ ಈ ಬಾರಿ ದಸರಾ ಉದ್ಘಾಟಕರ ಆಯ್ಕೆ ವಿವಾದದ ಕೇಂದ್ರಬಿಂದುವಾಗಿದ್ದು, ಸರ್ಕಾರದ ನಿರ್ಧಾನದ ವಿರುದ್ಧ ಕಾನೂನು ಹೋರಾಟವೇ ಪ್ರಾರಂಭವಾಗಿದೆ. ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದು ಕೆಲವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಆಯ್ಕೆ ಪ್ರಶ್ನಿಸಿ ಮೊದಲಿಗೆ ಮಾಜಿ

ಬೆಂಗಳೂರು : ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top