News Kadaba

ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ 2 ನೇ ಆವೃತ್ತಿಗೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಸಮುದಾಯವನ್ನೊಳಗೊಂಡ ಕ್ರಿಕೆಟ್ ಪ್ರೇರಿತ ಕ್ರೀಡಾ ಚಟುವಟಿಕೆ ಉತ್ತೇಜಿಸುವ ನಿಟ್ಟಿನಲ್ಲಿ ತೊಡಗಿಕೊಂಡಿರುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ರಾಜ್ಯದಲ್ಲಿ ಇದೀಗ 2ನೇ ಆವೃತ್ತಿಯ ಕ್ರೀಡಾ ಕೂಟಕ್ಕೆ ಸಜ್ಜಾಗಿದೆ. ನವೆಂಬರ್ 1 ರಿಂದ 29 ರ ವರೆಗೆ ಇಡೀ ತಿಂಗಳು ಕ್ರೀಡೆಯಲ್ಲಿ ಕನ್ನಡದ ಕಂಪನ್ನು ಪಸರಿಸಲು ಸಿದ್ಧತೆಗಳು ನಡೆಯುತ್ತಿವೆ.ನಗರದ ಎಪಿಎಸ್ ಕ್ರೀಡಾಂಗಣದಲ್ಲಿ ಪಂದ್ಯಗಳು ಆಯೋಜನೆಗೊಂಡಿದೆ. ಕೊಡಿಗೆಹಳ್ಳಿ ಗೇಟ್ ನ ಹಯಾತ್ ಹೋಟೆಲ್ ನಲ್ಲಿ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ಜರ್ಸಿಯನ್ನು ವಿಧಾನಪರಿಷತ್ ಶಾಸಕರಾದ […]

ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ 2 ನೇ ಆವೃತ್ತಿಗೆ ಸಜ್ಜು Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಬಾನು ಮುಷ್ತಾಕ್‌ ಆಯ್ಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಮಾಜಿ ಸಂಸದ ಪ್ರತಾಪ್​ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್‌ ಎಂಬವರು ಪಿಐಎಲ್‌ ಸಲ್ಲಿಸಿದ್ದರು. ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದಸರಾ ಉದ್ಘಾಟನೆ ವೇಳೆ

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಅಗ್ನಿ – 75 ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿರುತ್ತದೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ಬಸ್‌ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ  ಸರಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿರುತ್ತದೆ. ಬಸ್‌ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ರಮೇಣ ಹೆಚ್ಚಿನ ಪ್ರಮಾಣದ

ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಅಗ್ನಿ – 75 ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ಭಾನುವಾರ ಮತ್ತೆ ಭಾರತ-ಪಾಕ್‌ ಪಂದ್ಯ

(ನ್ಯೂಸ್‌ ಕಡಬ) newskadaba.com,  ಸೆ.15  ದುಬೈ: ಏಷ್ಯಾಕಪ್‌ ಟಿ20 ಟೂರ್ನಿಯ ಗುಂಪು ಹಂತದ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನವನ್ನು 7 ವಿಕೆಟ್‌ ಅಂತರದಿಂದ ಮಣಿಸಿದ ಭಾರತ ತಂಡ ಮತ್ತೊಮ್ಮೆ ಪಾಕ್‌ ವಿರುದ್ಧ ಕಣಕ್ಕಿಳಿಯಲಿದೆ. ಮುಂದಿನ ಭಾನುವಾರ ನಡೆಯುವ ಸೂಪರ್‌-4 ಹಂತದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಕೂಡ ದುಬೈನಲ್ಲಿಯೇ ನಡೆಯಲಿದೆ. ಆದರೆ ಪಾಕ್‌ ತನ್ನ ಕೊನೆಯ ಪಂದ್ಯದಲ್ಲಿ ಯುಎಇ ವಿರುದ್ಧ ಸೋತರೆ ಈ ಮುಖಾಮುಖಿ ತಪ್ಪಲಿದೆ. ಪ್ರತಿ ಗುಂಪಿನ ಅಗ್ರ 2 ತಂಡಗಳು ಸೂಪರ್​-4 ಹಂತಕ್ಕೇರಲಿವೆ. ಇಲ್ಲೂ ಎಲ್ಲ ತಂಡಗಳು

ಮುಂದಿನ ಭಾನುವಾರ ಮತ್ತೆ ಭಾರತ-ಪಾಕ್‌ ಪಂದ್ಯ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾಡ್ಮಿಂಟನ್ ಆಟಗಾರ್ತಿ ತಾರೆ ಜ್ವಾಲಾ ಗುಟ್ಟಾ 30 ಲೀಟರ್ ಎದೆ ಹಾಲು ದಾನ

(ನ್ಯೂಸ್‌ ಕಡಬ) newskadaba.com,  ಸೆ.15  ಮುಂಬೈ :  ಕಾಮನ್‌ವೆಲ್ತ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಭಾರತಕ್ಕಾಗಿ ಹಲವು ಪದಕಗಳನ್ನು ಗೆದ್ದಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಗುಟ್ಟಾ ಈಗ ನಿಸ್ವಾರ್ಥ ಸೇವೆಯ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ವಿಶಾಲ್ ಮತ್ತು ಜ್ವಾಲಾ ಗುಟ್ಟಾ ದಂಪತಿಗೆ ಮುದ್ದಾದ ಹೆಣ್ಣು ಮಗುವಿನ ಪೋಷಕರಾಗಿದ್ದು, ತನ್ನ ಮಗುವಿಗೆ ಹಾಲುಣಿಸಿದ ಬಳಿಕ, ಉಳಿದ ಎದೆ ಹಾಲನ್ನು ಗುಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳಿಗೆ ದಾನ ಮಾಡುತ್ತಿದ್ದಾರೆ. ಕಳೆದ 4 ತಿಂಗಳಿನಿಂದ, ಅವರು ಪ್ರತಿದಿನ ಸರ್ಕಾರಿ ಆಸ್ಪತ್ರೆಗಳಿಗೆ 600 ಮಿಲಿಲೀಟರ್

ಬ್ಯಾಡ್ಮಿಂಟನ್ ಆಟಗಾರ್ತಿ ತಾರೆ ಜ್ವಾಲಾ ಗುಟ್ಟಾ 30 ಲೀಟರ್ ಎದೆ ಹಾಲು ದಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.15  ಬಳ್ಳಾರಿ: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಆಸ್ಪತ್ರೆಯಿಂದ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಒಂದು ವಾರದೊಳಗೆ ಬಳ್ಳಾರಿಯಲ್ಲಿ ದಾಖಲಾಗಿರುವ 2ನೇ ಪ್ರಕರಣ ಇದಾಗಿದೆ. ನವಜಾತ ಶಿಶು ಅಪಹರಣ ಪ್ರಕರಣದಲ್ಲಿ ಈಗಾಗಲೇ ಶಿಕ್ಷೆಗೊಳಗಾಗಿದ್ದ 65 ವರ್ಷದ ವ್ಯಕ್ತಿ ಮತ್ತು ಇತರ ಮೂವರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಶಮಿನ್ ಇಸ್ಮಾಯಿಲ್ (25), ಇಸ್ಮಾಯಿಲ್ ಯಾಕೋಬ್ ಸಬ್ (65), ಬಾಷಾ ಸಾಬ್ (55) ಮತ್ತು ಬಸವರಾಜ

ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಂಡನ್ : ವಲಸೆ ವಿರೋಧಿ ಪ್ರತಿಭಟನೆ – ಪೊಲೀಸರ ಮೇಲೆ ಹಲ್ಲೆ

(ನ್ಯೂಸ್‌ ಕಡಬ) newskadaba.com,  ಸೆ.15  ಲಂಡನ್ : ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ಲಂಡನ್‌ನಲ್ಲಿ ನಡೆದ ವಲಸೆ ವಿರೋಧಿ ಬೃಹತ್ ಪ್ರತಿಭಟನೆಯಲ್ಲಿ 1.10 ಲಕ್ಷಗಿಂತ ಹೆಚ್ಚು ಜನರು ಭಾಗವಹಿಸಿದ್ದು, ಈ ಮೆರವಣಿಗೆ ಅಪಾಯಕಾರಿ ತಿರುವು ಪಡೆದಿದೆ. ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಪೊಲೀಸ್ ಇಲಾಖೆ ನೀಡಿದ ಮಾಹಿತಿಯಂತೆ, 26 ಅಧಿಕಾರಿಗಳು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಕೆಲವು ಅಧಿಕಾರಿಗಳಿಗೆ ಮೂಗು, ಮುಖ ಸೇರಿದಂತೆ ಹಲವು ಕಡೆ ತೀವ್ರ ಗಾಯಗಳಾಗಿವೆ ಮತ್ತು ಹಲವರಿಗೆ

ಲಂಡನ್ : ವಲಸೆ ವಿರೋಧಿ ಪ್ರತಿಭಟನೆ – ಪೊಲೀಸರ ಮೇಲೆ ಹಲ್ಲೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾಂಕಾಕ್ ನ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳ ಗುಂಪು

(ನ್ಯೂಸ್‌ ಕಡಬ) newskadaba.com,  ಸೆ.15  ಬ್ಯಾಂಕಾಕ್ : ಸಫಾರಿ ಜೀಪ್‌ನಿಂದ ಇಳಿದ ಸಿಬ್ಬಂದಿಯನ್ನೇ ಸಿಂಹಗಳ ಗುಂಪು ಎಳೆದೊಯ್ದು ಕೊಂದು ತಿಂದು ಹಾಕಿದ ದಾರುಣ ಘಟನೆ ಥಾಯ್ಲೆಂಡ್‌ನ ಮೃಗಾಲಯದಲ್ಲಿ ನಡೆದಿದೆ.. ಬ್ಯಾಂಕಾಕ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಈ ಭಯಾನಕ ಘಟನೆ ನಡೆದಿರುತ್ತದೆ . ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಸಿಬ್ಬಂದಿ ಜಿಯಾನ್ ರಂಗ್ಖರಸಾಮೀ ಎಂಬುವವರ ಮೇಲೆ ಸಿಂಹಗಳ ಹಿಂಡೊಂದು ದಾಳಿ ನಡೆಸಿ ಕೊಂದು ಹಾಕಿದೆ. ಈ ಭೀಕರ ಘಟನೆ

ಬ್ಯಾಂಕಾಕ್ ನ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳ ಗುಂಪು Read More »

ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್

(ನ್ಯೂಸ್‌ ಕಡಬ) newskadaba.com,  ಸೆ.15 ಬೆಂಗಳೂರು : ಸ್ಯಾಂಡಲ್‌ವುಡ್ಗೆ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೆ ಪೀಕಬೂ ಚಿತ್ರದ ಮೂಲಕ ಕಮ್‌ಬ್ಯಾಕ್ ಮಾಡಿದ ಅಮೂಲ್ಯ . ಮಂಜು ಸ್ವರಾಜ್ ನಿರ್ದೇಶನದ ಪೀಕಬೂ ಚಿತ್ರದಲ್ಲಿ ಅಮೂಲ್ಯ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಅಮೂಲ್ಯ ಅವರಿಗೆ ಸೆ.14ರಂದು ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಮಂಜು ಸ್ವರಾಜ್ ಅವರು ಅಮೂಲ್ಯಗೆ ನಿರ್ದೇಶಿಸುತ್ತಿರುವ 2ನೇ ಸಿನಿಮಾ ಇದಾಗಿದೆ. ಇದಕ್ಕೂ ಮುನ್ನ ‘ಗೋಲ್ಡನ್

ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com,  ಸೆ.15 ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ (ಸೆ.15 ಮತ್ತು 16) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದರಿಂದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ! Read More »

ಕರ್ನಾಟಕ
Scroll to Top