News Kadaba

ಬ್ರಹ್ಮಾವರ: ಯುವತಿಗೆ ಚಾಕು ಇರಿದ ಪ್ರಿಯಕರ

(ನ್ಯೂಸ್‌ ಕಡಬ) newskadaba.com,  ಸೆ.12 ಬ್ರಹ್ಮಾವರ : ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.. ಬಲಿಯಾದವರನ್ನು 20 ರಿಂದ 24 ವರ್ಷದೊಳಗಿನ ರಕ್ಷಿತಾ ಎಂದು ಗುರುತಿಸಲಾಗಿದ್ದು, ಕೊಕ್ಕರ್ಣೆಯ ಪೂಜಾರಿಬೆಟ್ಟು ನಿವಾಸಿಯಾಗಿದ್ದಾರೆ. ವರದಿಗಳ ಪ್ರಕಾರ, ಅವರು ತಮ್ಮ ಮನೆಯಿಂದ ಮಣಿಪಾಲಕ್ಕೆ ಕೆಲಸಕ್ಕೆ ಹೋಗುತ್ತಿದ್ದಾಗ, ಅವರ ನೆರೆಹೊರೆಯ ಕಾರ್ತಿಕ್ ಪೂಜಾರಿ ಎಂಬ ವ್ಯಕ್ತಿ ಬೈಕ್‌ನಲ್ಲಿ ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಆರಂಭಿಕ ವರದಿಗಳ ಪ್ರಕಾರ ರಕ್ಷಿತಾ ಸ್ಥಳದಲ್ಲೇ […]

ಬ್ರಹ್ಮಾವರ: ಯುವತಿಗೆ ಚಾಕು ಇರಿದ ಪ್ರಿಯಕರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com,  ಸೆ.12 ಉಡುಪಿ  : ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಸಾಸ್ತಾನ ಕೋಡಿತಲೆ ನಿವಾಸಿ ಸ್ಥಳೀಯ ಮೀನುಗಾರ ರಾಮ ಖಾರ್ವಿ ಸಾವನ್ನಪ್ಪಿದ  ಘಟನೆ ಬುಧವಾರ, ಸೆಪ್ಟೆಂಬರ್ 10, 2025 ರಂದು ಮಲ್ಪೆ ಲೈಟ್‌ಹೌಸ್ ಬಳಿ ಸಂಭವಿಸಿದೆ.. ಮೂಲಗಳ ಪ್ರಕಾರ, ದೋಣಿಯ ಮಾಲೀಕ ಖಾರ್ವಿ ಕಳೆದ 25 ರಿಂದ 30 ವರ್ಷಗಳಿಂದ ಒಬ್ಬರೇ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳುತ್ತಿದ್ದರು. ಎಂದಿನಂತೆ, ಅವರು ಬುಧವಾರ ಬೆಳಿಗ್ಗೆ ಸಮುದ್ರಕ್ಕೆ ತೆರಳಿದ್ದರು. ಆದರೆ,

ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡ ಮಾತನಾಡಿದ್ದಕ್ಕೆ ಖಾಸಗಿ ಶಾಲೆಯಲ್ಲಿ ದಂಡ, ಪ್ರಾಧಿಕಾರ ಅಸಮಾಧಾನ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು : ಬೆಂಗಳೂರಿನ  ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಕನ್ನಡ ಮಾತನಾಡಿದ ಕಾರಣಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ಕೇವಲ ಆಂಗ್ಲ ಭಾಷೆಯಲ್ಲಿ ಮಾತ್ರ ಸಂವಹನ ನಡೆಸುವಂತೆ ಒತ್ತಡ ಹೇರಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಈ ಆಘಾತಕಾರಿ ವಿಚಾರವನ್ನು ಖಚಿತಪಡಿಸಿದ್ದು, ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಸಿಎಂ ಅಧಿಕೃತ ನಿವಾಸ ಕೃಷ್ಣಾ ಬಳಿಯ ಕುಮಾರಕೃಪಾ ರಸ್ತೆಯಲ್ಲಿರುವ ಖಾಸಗಿ ಸಿಂಧಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ

ಕನ್ನಡ ಮಾತನಾಡಿದ್ದಕ್ಕೆ ಖಾಸಗಿ ಶಾಲೆಯಲ್ಲಿ ದಂಡ, ಪ್ರಾಧಿಕಾರ ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಸರಾ ಹಬ್ಬ ರಜೆ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಇನ್ನೊಂದು ವಾರದಲ್ಲಿ ನಾಡಹಬ್ಬ ದಸರಾ ಬರಲಿದೆ. ದಸರಾ ಹಬ್ಬದಲ್ಲಿ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಊರುಗಳಿಗೆ, ಪ್ರವಾಸಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ (South Western Railway) ಹಲವು ಭಾಗಗಳಿಗೆ ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಿದೆ. ಯಶವಂತಪುರ-ಮಡಗಾಂವ್-ಯಶವಂತಪುರ ಮತ್ತು ಬೆಂಗಳೂರು-ಬೀದರ್-ಬೆಂಗಳೂರಿಗೆ ಒಂದು ಟ್ರಿಪ್​​ನಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿವೆ. ರೈಲು ಸಂಖ್ಯೆ 06249/06250 ಯಶವಂತಪುರ-ಮಡಗಾಂವ್-ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು (1ಟ್ರಿಪ್) ರೈಲು ಸಂಖ್ಯೆ

ದಸರಾ ಹಬ್ಬ ರಜೆ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು : 15 ಲಕ್ಷ ಪರಿಹಾರ ಪಡೆಯಲು ಗಂಡನಿಗೆ ವಿಷ ಕುಡಿಸಿ ಕೊಂದು ಹುಲಿ ದಾಳಿ ಎಂದು ಬಿಂಬಿಸಿದ ಮಹಿಳೆ!

(ನ್ಯೂಸ್‌ ಕಡಬ) newskadaba.com,  ಸೆ.12 ಮೈಸೂರು : ಪರಿಹಾರ ಮೊತ್ತ ಪಡೆಯುವುದಕ್ಕಾಗಿ ಪತಿಯನ್ನು ಹುಲಿ ದಾಳಿ ನಡೆಸಿ ಕೊಂದಿದೆ ಎಂದು ಕಥೆ ಕಟ್ಟಿದ ಚಲಾಕಿ ಪತ್ನಿ ಸಿಕ್ಕಿಬಿದ್ದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದ ಮಹಿಳೆಯೊಬ್ಬರು ತನ್ನ ಗಂಡನನ್ನು ಕೊಲೆ ಮಾಡಿ, ಹುಲಿ ಅವನನ್ನು ಎಳೆದುಕೊಂಡು ಹೋಗಿದೆ ಎಂದು ಕಥೆ ಹೆಣೆದು, ಕಾಡು ಪ್ರಾಣಿಗಳ ದಾಳಿಗೆ ಬಲಿಯಾದ ಕುಟುಂಬಗಳಿಗೆ ಸರ್ಕಾರದಿಂದ ನೀಡಲಾದ 15 ಲಕ್ಷ ರೂ. ಪರಿಹಾರ ಪಡೆಯಲು ಪ್ರಯತ್ನಿಸಿದ್ದಾರೆ. ಮೈಸೂರಿನ

ಮೈಸೂರು : 15 ಲಕ್ಷ ಪರಿಹಾರ ಪಡೆಯಲು ಗಂಡನಿಗೆ ವಿಷ ಕುಡಿಸಿ ಕೊಂದು ಹುಲಿ ದಾಳಿ ಎಂದು ಬಿಂಬಿಸಿದ ಮಹಿಳೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 2ನೇ ಮಹಡಿಯಿಂದ ಬಿದ್ದು 19 ವರ್ಷದ ವಿದ್ಯಾರ್ಥಿನಿ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಪ್ರಿಯಾಂಕಾ ಮನೆಯ ಎರಡನೇ ಮಹಡಿಯಲ್ಲಿ ನಿಂತಿದ್ದಳು. ಆದರೆ ಏಕಾಏಕಿ ಆಯ ತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು: ಮಹಿಳೆ ಮೇಲೆ ಹಲ್ಲೆ; BMTC ಡ್ರೈವರ್ ತಾತ್ಕಾಲಿಕ ವಜಾ ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಚಾಲಕ ರವಿ ಎಂಬಾತನನ್ನು

ಬೆಂಗಳೂರು: 2ನೇ ಮಹಡಿಯಿಂದ ಬಿದ್ದು 19 ವರ್ಷದ ವಿದ್ಯಾರ್ಥಿನಿ ದುರ್ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ- ಜನಜೀವನ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com ಸೆ. 12. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರವೂ ಕೂಡ ಸಾಧಾರಣದಿಂದ ಭಾರೀ ಮಳೆಯಾಗಿದ್ದು, ಮುಂಬೈ ಕರ್ನಾಟಕದ ಹಲವು ಭಾಗಗಳು ಮೋಡ ಕವಿದ ವಾತಾವರಣದಿಂದ ಕೂಡಿದೆ. ಕಲಬುರಗಿ ನಗರದಲ್ಲಿ ಬೆಳಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶನಿವಾರದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಹವಾಮಾನ

ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ- ಜನಜೀವನ ಅಸ್ತವ್ಯಸ್ತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರವೂ ಕೂಡ ಸಾಧಾರಣದಿಂದ ಭಾರೀ ಮಳೆಯಾಗಿದೆ. ಮುಂಬೈ ಕರ್ನಾಟಕದ ಹಲವು ಭಾಗಗಳು ಮೋಡ ಕವಿದ ವಾತಾವರಣದಿಂದ ಕೂಡಿದೆ. ಕಲಬುರಗಿ ನಗರದಲ್ಲಿ, ಬೆಳಿಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಭಾರೀ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಹವಾಮಾನ

ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..!

(ನ್ಯೂಸ್‌ ಕಡಬ) newskadaba.com ಸೆ. 12. ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದ್ದು, ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ತಿಮ್ಮೊಟ್ಟು ಎಂಬಲ್ಲಿಯ ಸರಕಾರಿ ಸ್ಥಳಕ್ಕೆ ಹೋದಾಗ ಅಪಾದಿತರಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಮತ್ತು ಇತರರು ಸಂಘಟಿತರಾಗಿ

ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕನ್ನಡ ಚಿತ್ರರಂಗದ ಎರಡು ದಿಗ್ಗಜ ಕಲಾವಿದರು ಡಾ. ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಕರ್ನಾಟಕ ರತ್ನ

(ನ್ಯೂಸ್‌ ಕಡಬ) newskadaba.com ಸೆ. 12. ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಆಗಿದ್ದು, ಚಿತ್ರರಸಿಕರಲ್ಲಿ ಖುಷಿಯ ಉಳುಕನ್ನುಂಟುಮಾಡಿದೆ. ಇತ್ತೀಚೆಗೆ ವಿಷ್ಣುವರ್ಧನ್ ಅವರ ಅಭಿಮಾನ ಸ್ಟುಡಿಯೋ ನೆಲಸಮವಾದದ್ದು, ಅವರ ಸಾವಿರಾರು ಅಭಿಮಾನಿಗಳ ಮನಸ್ಸಿಗೆ ನೋವಿತ್ತಿದ್ದರೆ, ಈಗ ರಾಜ್ಯ ಸರ್ಕಾರದ ಈ ನಿರ್ಧಾರ ಅವರಿಗೆ ಸಾಂತ್ವನವಾಗಿ ಪರಿಣಮಿಸಿದೆ. ವಿಷ್ಣುವರ್ಧನ್ ಅಭಿಮಾನಿಗಳು ದಶಕಗಳ ಹಿಂದಿನಿಂದಲೇ ಅವರಿಗಾಗಿ ಕರ್ನಾಟಕ ರತ್ನ ಬೇಡಿಕೆಯಾಗಿಸಿದ್ದರು. ಇದೀಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಈ ಬಹು ನಿರೀಕ್ಷಿತ ಗೌರವವನ್ನು

ಕನ್ನಡ ಚಿತ್ರರಂಗದ ಎರಡು ದಿಗ್ಗಜ ಕಲಾವಿದರು ಡಾ. ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಕರ್ನಾಟಕ ರತ್ನ Read More »

ಕರ್ನಾಟಕ, ಸಿನಿಮಾ
Scroll to Top