News Kadaba

‘ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು : ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ನುಡಿದರು.. ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ […]

‘ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’- ಸಿಎಂ ಸಿದ್ದರಾಮಯ್ಯ Read More »

ಕರಾವಳಿ

Asia Cup 2025: 4.3 ಓವರ್‌ಗಳಲ್ಲಿ ಗೆಲುವು ಪಡೆದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ಭಾರತ ಕ್ರಿಕೆಟ್ ತಂಡವು ಯುಎಇ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದೆ. ಕುಲದೀಪ್ ಯಾದವ್, ಅಭಿಷೇಕ್ ಶರ್ಮಾ ಮತ್ತು ಶಿವಂ ದುಬೆ ಟೀಮ್ ಇಂಡಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಗೆಲುವಿನೊಂದಿಗೆ, ಭಾರತ ತಂಡವು ಎರಡು ಅಂಕಗಳನ್ನು ಗಳಿಸಿದೆ ಮತ್ತು ತನ್ನ ಗುಂಪಿನಲ್ಲಿ ಅಗ್ರಸ್ಥಾನವನ್ನು ತಲುಪಿದೆ. ಅಭಿಷೇಕ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದರು. ಅಭಿಷೇಕ್ 16 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು

Asia Cup 2025: 4.3 ಓವರ್‌ಗಳಲ್ಲಿ ಗೆಲುವು ಪಡೆದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆರ್ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.11 ಪಾಟನಾ: ಬಿಹಾರ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರದಲ್ಲಿ ಇರುವಾಗಲೇ ಪಾಟ್ನಾದಲ್ಲಿ ಆರ್​ಜೆಡಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಬುಧವಾರ ರಾತ್ರಿ ಇಬ್ಬರು ಅಪರಿಚಿತರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ರಾಜ್‌ಕುಮಾರ್ ರೈ ಅಲಿಯಾಸ್ ಅಲ್ಲಾ ರೈ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಚಿತ್ರಗುಪ್ತದ ಮುನ್ನಾಚಕ್ ಪ್ರದೇಶದಲ್ಲಿ ನಡೆದಿದ್ದು, ಮೂಲಗಳ ಪ್ರಕಾರ ರೈ, ರಾಘೋಪುರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿತ್ತು. ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು

ಆರ್ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ

(ನ್ಯೂಸ್‌ ಕಡಬ) newskadaba.com,  ಸೆ.11 ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ. ಆಭರಣ ಅರ್ಪಿಸುವ ಮುನ್ನ

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಮಳೆ ಚುರುಕು: ಮುಂದಿನ 4 ದಿನ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ಕಳೆದ 2 ದಿನಗಳಿಂದ ರಾಜ್ಯದಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮಾನ್ಸೂನ್ ಮತ್ತೆ ತೀವ್ರಗೊಂಡಿದ್ದು, ಸೆಪ್ಟೆಂಬರ್ 12 ರಿಂದ 15 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಆಂಧ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ವರೆಗೆ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ

ರಾಜ್ಯದಲ್ಲಿ ಮತ್ತೆ ಮಳೆ ಚುರುಕು: ಮುಂದಿನ 4 ದಿನ ಭಾರೀ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭೌತಚಿಕಿತ್ಸಕರು ಹೆಸರಿನ ಮೊದಲು ‘ಡಾ’ ಶೀರ್ಷಿಕೆಯನ್ನು ಬಳಸುವಂತಿಲ್ಲ ‘- ಆರೋಗ್ಯ ಸೇವೆಗಳ ಮಹಾನಿರ್ದೇಶಕರು ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಸೆ.11 ನವದೆಹಲಿ : ಭೌತಚಿಕಿತ್ಸಕರು ಹೆಸರಿನ ಮೊದಲು ‘ಡಾ’ (ಡಾಕ್ಟರ್‌) ಎಂಬ ಶೀರ್ಷಿಕೆಯನ್ನು ಬಳಸಲು ಅರ್ಹರಲ್ಲ, ಇದು ನೋಂದಾಯಿತ ವೈದ್ಯಕೀಯ ವೃತ್ತಿಪರರಿಗೆ ಮಾತ್ರ ಮೀಸಲಾಗಿದೆ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶಕರು (ಡಿಜಿಹೆಚ್ಎಸ್) ನಿರ್ದೇಶನವನ್ನು ಹೊರಡಿಸಿದ್ದಾರೆ. ಭೌತಚಿಕಿತ್ಸಕರು ‘ಡಾಕ್ಟರ್‌ ಎಂಬ ಶೀರ್ಷಿಕೆಯನ್ನು ಪೂರ್ವಪ್ರತ್ಯಯ ಮತ್ತು ‘ಪಿಟಿ’ ಪ್ರತ್ಯಯವನ್ನು ಬಳಸುವುದರ ಬಗ್ಗೆ ಭಾರತೀಯ ಭೌತಚಿಕಿತ್ಸಾ ಔಷಧ ಮತ್ತು ಪುನರ್ವಸತಿ ಸಂಘ ಸೇರಿದಂತೆ ವೈದ್ಯಕೀಯ ಸಂಸ್ಥೆಗಳಿಂದ ಹಲವಾರು ಪ್ರಾತಿನಿಧ್ಯಗಳು ಮತ್ತು ಆಕ್ಷೇಪಣೆಗಳ ನಂತರ ಈ ಸ್ಪಷ್ಟೀಕರಣ ಬಂದಿದೆ. ಭೌತಚಿಕಿತ್ಸಕರು

‘ಭೌತಚಿಕಿತ್ಸಕರು ಹೆಸರಿನ ಮೊದಲು ‘ಡಾ’ ಶೀರ್ಷಿಕೆಯನ್ನು ಬಳಸುವಂತಿಲ್ಲ ‘- ಆರೋಗ್ಯ ಸೇವೆಗಳ ಮಹಾನಿರ್ದೇಶಕರು ಸ್ಪಷ್ಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಂಪ್‌ ಆಪ್ತ ಉದ್ಯಮಿ ಚಾರ್ಲಿ ಕಿರ್ಕ್ ಗುಂಡೇಟಿಗೆ ಬಲಿ

(ನ್ಯೂಸ್‌ ಕಡಬ) newskadaba.com,  ಸೆ.11 ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ 31 ವರ್ಷದ ಚಾರ್ಲಿ ಕಿರ್ಕ್ ಅವರನ್ನು ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಚಾರ್ಲ್ಸ್ ಕಿರ್ಕ್ ಬಲಪಂಥೀಯ ರಾಜಕೀಯ ಕಾರ್ಯಕರ್ತರಾಗಿದ್ದರು. 2012 ರಲ್ಲಿ ಟರ್ನಿಂಗ್ ಪಾಯಿಂಟ್ ಹೆಸರಿನಲ್ಲಿ ಸಂಘಟನೆಯನ್ನು ಸ್ಥಾಪಿಸಿದ್ದರು. ಟರ್ನಿಂಗ್ ಪಾಯಿಂಟ್ ಆಕ್ಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ರಾಷ್ಟ್ರೀಯ ನೀತಿ ಮಂಡಳಿಯ ಸದಸ್ಯರಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಚಾರ್ಲಿ ಕಿರ್ಕ್ ಅವರು

ಟ್ರಂಪ್‌ ಆಪ್ತ ಉದ್ಯಮಿ ಚಾರ್ಲಿ ಕಿರ್ಕ್ ಗುಂಡೇಟಿಗೆ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿ, ಮಧ್ಯಂತರ ಪರಿಹಾರ ಬಿಡುಗಡೆ ಮಾಡಿ : ಬಸವರಾಜ ಬೊಮ್ಮಾಯಿ

(ನ್ಯೂಸ್‌ ಕಡಬ) newskadaba.com,  ಸೆ.11 ಹಾವೇರಿ : ರಾಜ್ಯ ಸರ್ಕಾರವು ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬೆಳೆ ನಷ್ಟ ಸಮೀಕ್ಷೆಗಳನ್ನು ನಡೆಸಿ ರೈತರಿಗೆ ಮಧ್ಯಂತರ ಪರಿಹಾರವನ್ನು ನೀಡಬೇಕು ಎಂದು ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಬೆಳೆ ನಷ್ಟದ ಕುರಿತು ವಿವರವಾದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬಹುದು. NDRF ಮತ್ತು SDRF ಮಾನದಂಡಗಳ ಅಡಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಹೇಳಿದರು. ಕಳೆದ ಎರಡು ವರ್ಷ ವಾಡಿಗೆಗಿಂತ

ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿ, ಮಧ್ಯಂತರ ಪರಿಹಾರ ಬಿಡುಗಡೆ ಮಾಡಿ : ಬಸವರಾಜ ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ’- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು : ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಸಿಎಂ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಸಿಎಂ ಸೂಚನೆ ಬಳಿಕ ಮುಖ್ಯಕಾರ್ಯದರ್ಶಿ

‘ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ’- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ಕಣ್ಮರೆ

  (ನ್ಯೂಸ್‌ ಕಡಬ) newskadaba.com,  ಸೆ.11 ಕಠ್ಮಂಡು : ನೇಪಾಳದಲ್ಲಿ ಯುವಜನರ ತೀವ್ರ ಪ್ರತಿಭಟನೆಗಳು ಹಿಂಸಾಚಾರದ ರೂಪ ಪಡೆದುಕೊಂಡಿದೆ. ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ಬೆನ್ನಲ್ಲೇ ನೇಪಾಳದಲ್ಲಿ ಹಿಂಸಾಚಾರ ಮತ್ತು ಸಾಮೂಹಿಕ ಜೈಲುದಾಳಿ ನಡೆದಿದೆ. ಪಶ್ಚಿಮ ನೇಪಾಳದ ಒಂದು ಸುಧಾರಣಾ ಗೃಹದಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ 5 ಬಾಲಾಪರಾಧಿಗಳು ಮೃತಪಟ್ಟಿದ್ದಾರೆ. ಪ್ರತಿಭಟನೆಗಳ ಮಧ್ಯೆ ನೇಪಾಳ ದೇಶಾದ್ಯಂತ 7,000ಕ್ಕೂ ಹೆಚ್ಚು ಕೈದಿಗಳು ಜೈಲುಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ನೇಪಾಳದಲ್ಲಿ ನಡೆದ ಪ್ರತಿಭಟನೆಗಳಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಬಿಕ್ಕಟ್ಟು

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top