News Kadaba

ಚೀನಾಗೆ ಬುದ್ಧಿ ಕಲಿಸಲು ಹೋಗಿ ನಾನು ಭಾರತ-ರಷ್ಯಾವನ್ನು ಕಳೆದುಕೊಂಡೆ- ಟ್ರಂಪ್‌

  (ನ್ಯೂಸ್‌ ಕಡಬ) newskadaba.com ಸೆ.06  ವಾಷಿಂಗ್ಟನ್‌ : ತೆರಿಗೆಯನ್ನು ಹೇರಿ ಭಾರತದ ಮೇಲೆ ಸಮರ ಸಾರಿದ್ದ ಟ್ರಂಪ್‌ ಇದೀಗ ಬೆಪ್ಪಾಗಿದ್ದಾರೆ. ಭಾರತ ಚೀನಾ ಹಾಗೂ ರಷ್ಯಾ ಒಗ್ಗಟ್ಟಾಗಿ ನಿಂತು ಅಮೆರಿಕವನ್ನು ಎದುರಿಸಿದೆ. ಇದೀಗ ಸ್ವತಃ ಟ್ರಂಪ್‌ ಅವರೇ ತಮ್ಮ ಮೂರ್ಖತನದ ಕುರಿತು ಮಾತನಾಡಿದ್ದಾರೆ. ಈ ವಾರ ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಟಿ 20 ಸಭೆಯಲ್ಲಿ ಧಾನಿ ನರೇಂದ್ರ ಮೋದಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಇರುವ ಫೋಟೋವನ್ನು ಟ್ರಂಪ್ ಹಂಚಿಕೊಂಡಿದ್ದಾರೆ. […]

ಚೀನಾಗೆ ಬುದ್ಧಿ ಕಲಿಸಲು ಹೋಗಿ ನಾನು ಭಾರತ-ರಷ್ಯಾವನ್ನು ಕಳೆದುಕೊಂಡೆ- ಟ್ರಂಪ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತೆ’- ಅಮೆರಿಕ ವಾಣಿಜ್ಯ ಕಾರ್ಯದರ್ಶಿ

(ನ್ಯೂಸ್‌ ಕಡಬ) newskadaba.com ಸೆ.06  ವಾಷಿಂಗ್ಟನ್ : ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತದೆ. ಮತ್ತೆ ಮಾತುಕತೆ ಮರಳಲಿದೆ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್ ಲುಟ್ನಿಕ್ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, “ರಷ್ಯಾದ ತೈಲವನ್ನು ಖರೀದಿಸದಂತೆ ಅಮೆರಿಕದ ಒತ್ತಡಕ್ಕೆ ಭಾರತ ಮಣಿದಿಲ್ಲ. ಆದರೂ, ಕೆಲವೇ ತಿಂಗಳುಗಳಲ್ಲಿ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಭಾರತ ಮತ್ತೆ ಬರುತ್ತದೆ” ಎಂದು ಹೇಳಿದ್ದಾರೆ. “ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ಕ್ಷಮಿಸಿ

‘ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತೆ’- ಅಮೆರಿಕ ವಾಣಿಜ್ಯ ಕಾರ್ಯದರ್ಶಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ

(ನ್ಯೂಸ್‌ ಕಡಬ) newskadaba.com ಸೆ.06 : ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿ ನಡೆಸಲಾಗುತ್ತಿರುವ ಎಸ್‌ಐಟಿ ತನಿಖೆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವಂತಾಗಬೇಕು. ಅಲ್ಲದೆ, ತನಿಖೆಯು ಆ ದಿಕ್ಕಿನತ್ತ ಸಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ 50 ಮಹಿಳೆಯರು ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಕೋರಿದ್ದಾರೆ. ನಟಿ ಮತ್ತು ರಂಗಕರ್ಮಿ ಅರುಂಧತಿ ನಾಗ್‌, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌, ಸಾಹಿತಿ ವಿಜಯಮ್ಮ, ನಟಿ ಸುಮನಾ ಕಿತ್ತೂರು ಮತ್ತು ಲೈಂಗಿಕ ಅಲ್ಪಸಂಖ್ಯಾತರ

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ

(ನ್ಯೂಸ್‌ ಕಡಬ) newskadaba.com,  ಸೆ.06 ಉಡುಪಿ, ಸೆ.5: ಬುಡೋಕಾನ್ ಕರಾಟೆ ಇಂಟರ್‌ನೇಷನಲ್‌ನ ಅಧ್ಯಕ್ಷ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಅಲೈಡ್ ಆರ್ಟ್ಸ್‌ನ ಸಂಸ್ಥಾಪಕ ಹನ್ಸಿ ಪ್ರವೀಣ್‌ ಕುಮಾರ್ ಅವರ ಸ್ಮರಣಾರ್ಥ ಎರಡು ದಿನಗಳ ಆಹ್ವಾನಿತ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಷಿಪ್ ನಾಳೆ ಅಂಬಾಗಿಲಿನ ಅಮೃತ ಗಾರ್ಡನ್ಸ್‌ನಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಸಹಾಯಕ ಮುಖ್ಯ ಶಿಕ್ಷಕ ಎಂ.ಸುರೇಶ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರ, ತಮಿಳುನಾಡು ಸೇರಿ ದಂತೆ ವಿವಿಧ ರಾಜ್ಯಗಳೂ ಸೇರಿದಂತೆ

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ Read More »

ಕರಾವಳಿ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ

  (ನ್ಯೂಸ್‌ ಕಡಬ) newskadaba.com ಸೆ.06  ಮುಂಬೈ : 2025 ರ ಏಷ್ಯಾಕಪ್‌ನಲ್ಲಿ ಭಾಗವಹಿಸಲು ಗುರುವಾರ ಟೀಂ ಇಂಡಿಯಾ ಮುಂಬೈನಿಂದ ದುಬೈ ತಲುಪಿದೆ. ಆದರೆ ಹಾರ್ದಿಕ್ ಪಾಂಡ್ಯ ತಮ್ಮ ಹೊಸ ಹೇರ್ ಸ್ಟೈಲ್‌ನಿಂದಾಗಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಏಷ್ಯಾಕಪ್‌ಗೂ ಮುನ್ನ ಹಾರ್ದಿಕ್ ಪಾಂಡ್ಯ ತಮ್ಮ ಕೇಶವಿನ್ಯಾಸವನ್ನು ಬದಲಾಯಿಸಿಕೊಂಡಿದ್ದಾರೆ. ಅದರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಹಾರ್ದಿಕ್ ಪಾಂಡ್ಯ, “ನ್ಯೂ ಮಿ” ಎಂಬ ಶೀರ್ಷಿಕೆಯನ್ನು ಸಹ ನೀಡಿದ್ದಾರೆ. ಗುರುವಾರ ಹಾರ್ದಿಕ್ ಪಾಂಡ್ಯ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಕಾಣಿಸಿಕೊಂಡಾಗ

ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು

(ನ್ಯೂಸ್‌ ಕಡಬ) newskadaba.com ಸೆ.06 ದಾವಣಗೆರೆ: ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್‌, ಫೈನಾನ್ಸ್‌ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ಡೆತ್‌ನೋಟ್‌ ಬರೆದಿಟ್ಟು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಶಿರಮಗೊಂಡನಹಳ್ಳಿಯ ಚಿತ್ರಲಿಂಗ (31) ಮೃತ. ಈತ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ಮಾಡಿಕೊಂಡಿದ್ದು, 2 ತಿಂಗಳ ಸಾಲದ ಕಂತು ಕಟ್ಟುವಂತೆ ಸಾಲ ವಸೂಲಾತಿ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ್ದರು.

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ

(ನ್ಯೂಸ್‌ ಕಡಬ) newskadaba.com ಸೆ.06 : ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್ ಚಿಕ್ಮುಳಿ ಅಂತಿಮ LLB, ಕಾರ್ಯದರ್ಶಿಯಾಗಿ ವೇಗನ್ ಅಮೈ  ಅಂತಿಮ BA.LLB, ಮತ್ತು ಜೊತೆ ಕಾರ್ಯದರ್ಶಿಯಾಗಿ  ಪ್ರಿಯಾ ಎಸ್.ಸಾಯ ಎಣ್ಮಕಜೆ ಅಂತಿಮ BA.LLB ಇವರು  ಆಯ್ಕೆಯಾಗಿದ್ದಾರೆ. ಉಜಿತ್ ಶ್ಯಾಮ್ ರವರು ಗುತ್ತಿಗಾರು ಗ್ರಾಮದ ಚಿಕ್ಮುಳಿ ಕಾರ್ಯಪ್ಪ ಗೌಡ ಮತ್ತು ದಮಯಂತಿ ದಂಪತಿ ಪುತ್ರ. ವೇಗನ್ ಅಮೈಯವರು  ಯೇನೇಕಲ್ ಗ್ರಾಮದ  ಅಮೈ, ಲೋಕೇಶ್ ಗೌಡ ಮತ್ತು ಇಂದಿರಾರವರ ಪುತ್ರ. .

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ

o   (ನ್ಯೂಸ್‌ ಕಡಬ) newskadaba.com ಸೆ.06  ಮುಂಬೈ:  3  ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಅವರ ಸಂಗೀತ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಅಂಗಳಕ್ಕೆ ಪ್ರವೇಶ ಪಡೆದಿದೆ. ಈ ಖುಷಿಯನ್ನ ಖುದ್ದು ರಿಕ್ಕಿ ಕೇಜ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. “ಪಾಪಾ ಬುಕಾ” ಇದು ಪಪುವಾ ನ್ಯೂಗಿನಿಯಾದ ಮೊದಲ ಅಧಿಕೃತ ಆಸ್ಕರ್ ಪ್ರವೇಶ ಪಡೆದ ಚಿತ್ರವಾಗಿದೆ. ಈ ಚಿತ್ರಕ್ಕೆ ರಿಕ್ಕಿ ಕೇಜ್ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ. 3 ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಕಾಸರಗೋಡು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ

(ನ್ಯೂಸ್‌ ಕಡಬ) newskadaba.com ಸೆ.06 ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ನಡೆದಿದೆ. ಮದಂಗಲ್ಲಿನ ಸುಬ್ರಾಯ ಭಟ್ (86) ಮೃತಪಟ್ಟವರು. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥತೆಯಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಸುಬ್ರಾಯ ಭಟ್ ಹಾಗೂ ಪತ್ನಿ ರಾಜಮ್ಮ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ

ಕಾಸರಗೋಡು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ’- ಎನ್.ರವಿಕುಮಾರ್

(ನ್ಯೂಸ್‌ ಕಡಬ) newskadaba.com,  ಸೆ.06  ಬೆಂಗಳೂರು: ಇವಿಎಂ ಯಂತ್ರಗಳನ್ನು ಬದಿಗಿಟ್ಟು ಮತಪತ್ರದೊಂದಿಗೆ ಚುನಾವಣೆ ನಡೆಸಲು ಈ ಸರಕಾರ ಮುಂದಾಗಿದ್ದು, ಮತ್ತೆ ಪುರಾತನ ಯುಗಕ್ಕೆ ಹೋಗುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಮತಪತ್ರ ಬಳಸಿದರೆ 2-3 ದಿನ ಮತ ಎಣಿಕೆ ಮಾಡಬೇಕಾಗುತ್ತದೆ. ರಾಹುಲ್ ಗಾಂಧಿಯವರು ಹೇಳಿದರೆಂಬ ಕಾರಣಕ್ಕಾಗಿ ಇವಿಎಂ ಬದಿಗಿಟ್ಟು, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುವುದನ್ನು ಬಿಜೆಪಿ

‘ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ’- ಎನ್.ರವಿಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top