News Kadaba

ತಡರಾತ್ರಿ ಭೂಕಂಪ- ಮಲಗಿದ್ದಲ್ಲೇ 20 ಜನ ಮೃತ್ಯು..!

(ನ್ಯೂಸ್‌ ಕಡಬ) newskadaba.com ಸೆ. 01. ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ ಪರಿಣಾಮ ಕನಿಷ್ಟ 20 ಮಂದಿ ಮೃತಪಟ್ಟಿರುವ ಕುರಿತು ಭಾನುವಾರ ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ನೆಲದಿಂದ 160 ಕಿಲೋಮೀಟರ್ ಆಳದಲ್ಲಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.   ಬಿಬಿಸಿ ವರದಿಯ ಪ್ರಕಾರ, ಇಲ್ಲಿಯವರೆಗೆ 20 ಜನರು ಮರತಪಟ್ಟಿದ್ದಾರೆ. ಈ ಭೂಕಂಪದ ಕಂಪನಗಳು ಪಾಕಿಸ್ತಾನದ ಇಸ್ಲಾಮಾಬಾದ್ ಮತ್ತು ಅಬೋಟಾಬಾದ್ ವರೆಗೆ ಅನುಭವಕ್ಕೆ ಬಂದಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭಾರತೀಯ ಸಮಯ ಬೆಳಗಿನ ಜಾವ […]

ತಡರಾತ್ರಿ ಭೂಕಂಪ- ಮಲಗಿದ್ದಲ್ಲೇ 20 ಜನ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com ಸೆ. 01. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 01 ಮತ್ತು ಸೆ. 4ರಿಂದ ಸೆ. 6ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನ ಎಚ್ಚರಿಕೆ ನೀಡಲಾಗಿದ್ದು, ಸೆ. 2 ಮತ್ತು ಸೆ.3ಕ್ಕೆ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ

ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಭಯೋತ್ಪಾದನೆ ಜಾಗತಿಕ ಶಾಂತಿಗೆ ಮತ್ತು ಭದ್ರತೆಗೆ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚೀನಾದ ಟಿಯಾಂಜಿನ್‌ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯದ್ದೇಶಿಸಿ ಮಾತನಾಡಿದರು. ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆಯಾಗಿದ್ದು, ಭಯೋತ್ಪಾದನೆಯಲ್ಲಿ ದ್ವಿಮುಖ ಧೋರಣೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಹೇಳಿದರು. ಕಳೆದ 4 ದಶಕಗಳಿಂದ ಭಯೋತ್ಪಾದನೆಯ ಭಾರವನ್ನು ಭಾರತ ಹೊರುತ್ತಿದೆ. ಇತ್ತೀಚೆಗೆ, ಪಹಲ್ಗಾಮ್‌ ನಲ್ಲಿ ಭಯೋತ್ಪಾದನೆಯ ಕರಾಳ ಮುಖವನ್ನು ನಾವೆಲ್ಲರೂ ನೋಡಿದ್ದೇವೆ. ಈ ದುಃಖದ

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನಾಭರಣ ಪ್ರಿಯರಿಗೆ ಬಿಗ್‌ ಶಾಕ್; ತಲೆ ಗಿರ್ ಅನ್ನುವಷ್ಟು ಏರಿಕೆಯಾದ ಬೆಲೆ

(ನ್ಯೂಸ್‌ ಕಡಬ) newskadaba.com ಸೆ.01. ಇಂದು ಬೆಳಗ್ಗೆಯಷ್ಟೇ ಜನರಿಗೆ ಎಲ್‌ಪಿಜಿ ದರ ಇಳಿಕೆಯ ಗುಡ್‌ ನ್ಯೂಸ್ ಸಿಕ್ಕಿತ್ತು. ಇದೀಗ ಇದರ ಬೆನ್ನಲ್ಲೇ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದ್ದು, ತಲೆ ಗಿರ್ ಅನ್ನುವಷ್ಟು ಚಿನ್ನದ ಬೆಲೆ ಹೆಚ್ಚಳವಾಗಿದೆ. ಚಿನ್ನವನ್ನು ಸುರಕ್ಷಿತ ಹೂಡಿಕೆ ಮತ್ತು ಆಪತ್ಕಾಲದ ನೆಂಟ ಎಂದು ಕರೆಯಲಾಗುತ್ತದೆ. ಈ ಹಿನ್ನೆಲೆ ದರ ಎಷ್ಟೇ ಏರಿಕೆಯಾದ್ರೂ ಚಿನ್ನದ ಬೇಡಿಕೆ ಮಾತ್ರ ಕಡಿಮೆಯಾಗಲಿಲ್ಲ. ಇತ್ತೀಚಿನ ದಿನಗಳಲ್ಲಿ ಚಿನ್ನದ ಜೊತೆ ಬೆಳ್ಳಿ ಮೇಲಿನ ಹೂಡಿಕೆಯೂ ಹೆಚ್ಚಾಗುತ್ತಿದೆ. ದೇಶದಲ್ಲಿಂದು 22 ಕ್ಯಾರಟ್ ಚಿನ್ನದ

ಚಿನ್ನಾಭರಣ ಪ್ರಿಯರಿಗೆ ಬಿಗ್‌ ಶಾಕ್; ತಲೆ ಗಿರ್ ಅನ್ನುವಷ್ಟು ಏರಿಕೆಯಾದ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಮೃತ್ಯು, ಐದು ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com ಸೆ.01. ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟು, ಐದು ಮಂದಿ ಗಾಯಗೊಂಡಿರುವ ಘಟನೆ ಲಕ್ನೋದ ಗುಡಂಬಾದ ಮೆಹ್ತಾ ಪ್ರದೇಶದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಗುಡಂಬಾದ ಬೆಹ್ತಾ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಪಕ್ಕದ ಮನೆಗಳಿಗೂ ಹಾನಿಯಾಗಿದೆ. ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐದು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಐವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಗಳಿಗೆ ಉತ್ತರ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಮೃತ್ಯು, ಐದು ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟು

(ನ್ಯೂಸ್‌ ಕಡಬ) newskadaba.com ಸೆ. 01. ಬಸ್, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು, ಇಂದಿನಿಂದಲೇ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ ಮಾಡಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2

ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಓಣಂ ಹಬ್ಬಕ್ಕೆ ಸಿಹಿಸುದ್ದಿ – ಕೆಎಸ್ಆರ್ ಟಿಸಿ ಬಸ್ ಹೆಚ್ಚುವರಿ

(ನ್ಯೂಸ್‌ ಕಡಬ) newskadaba.com ಸೆ.01.  ಓಣಂ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ಕೇರಳದ ನಡುವೆ ಸಂಚಾರ ಮಾಡುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಒಂದು ವಿಶೇಷ ಘೋಷಣೆಯೊಂದಿಗೆ ಶುಭವಾರ್ತೆ ನೀಡಿದೆ. ಸೆಪ್ಟೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನಿಂದ ಕೇರಳದ ವಿವಿಧ ಪ್ರಮುಖ ನಗರಗಳಿಗೆ ಹೆಚ್ಚುವರಿ 90 ಬಸ್ ಸೇವೆಗಳನ್ನು ನಿಗಮ ನಿರ್ವಹಿಸಲು ತೀರ್ಮಾನಿಸಿದೆ. ಓಣಂ ಹಬ್ಬಕ್ಕಾಗಿ ಊರಿಗೆ ಹೊರಡುವ ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು, ಸುಗಮ ಸಂಚಾರವನ್ನು ಕಲ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಈ

ಓಣಂ ಹಬ್ಬಕ್ಕೆ ಸಿಹಿಸುದ್ದಿ – ಕೆಎಸ್ಆರ್ ಟಿಸಿ ಬಸ್ ಹೆಚ್ಚುವರಿ Read More »

ಕರ್ನಾಟಕ

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಬಾಲಿವುಡ್ ನಟಿ ರವೀನಾ ಟಂಡನ್ ಮತ್ತು ಅವರ ಪುತ್ರಿ ರಾಶಾ ಥಡಾನಿ ಅವರು ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ, ಅಂದರೆ ಜೈನ ಕಾಶಿಗೆ, ಜೀವಂತ ಆನೆಯಂತೆ ಕಾಣುವ ಯಾಂತ್ರೀಕೃತ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಉಪಕ್ರಮವು ಪೆಟಾ ಇಂಡಿಯಾ ಮುಂಬೈ ಶಾಖೆಯಿಂದ ಪ್ರೇರಿತವಾಗಿದೆ. ಪೆಟಾ ಸಂಸ್ಥೆಯು ತರಬೇತಿ ಪಡೆದ ಜೀವಂತ ಆನೆಗಳ ಬದಲಾಗಿ ಯಾಂತ್ರಿಕ ಆನೆಗಳನ್ನು ಬಳಸುವಂತೆ ಪ್ರತಿಪಾದಿಸುತ್ತದೆ. ಏಕೆಂದರೆ ಜೀವಂತ ಆನೆಗಳಿಗೆ ಸಾಮಾನ್ಯವಾಗಿ ಹಿಂಸೆ ನೀಡಲಾಗುತ್ತದೆ.

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ 9 ಮಂದಿ ಆರೋಪಿಗಳನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನ ಬಂಧಿಸಿದ್ದಾರೆ. ಬಂಧಿತ ಇಬ್ಬರು ಕೂಡ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಾರೆಂದು ಎಂದು ಹೇಳಲಾಗಿದೆ. ನಟಿ ರಮ್ಯಾ

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

‘ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು’- ಸಿಎಂ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್

‘ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು’- ಸಿಎಂ Read More »

ಕರ್ನಾಟಕ
Scroll to Top