News Kadaba

ಕೇಂದ್ರ ಸರ್ಕಾರದಿಂದ ರೈತರಿಗೆ ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಬಂಪರ್‌ ಕೊಡುಗೆಯನ್ನು ನೀಡಲು ಮುಂದಾಗಿದೆ. ಜನೌಷಧಿ ಕೇಂದ್ರಗಳ ಮಾದರಿಯಲ್ಲಿ, ರೈತರಿಗೆ ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುವಂತೆ, ರೈತರಿಗೆ ಅಗತ್ಯವಾದ ಕೀಟನಾಶಕಗಳನ್ನು ಕಡಿಮೆ ದರದಲ್ಲಿ ಒದಗಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು […]

ಕೇಂದ್ರ ಸರ್ಕಾರದಿಂದ ರೈತರಿಗೆ ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ Read More »

ಬ್ರೇಕಿಂಗ್ ನ್ಯೂಸ್

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ವಿಶಾಖಪಟ್ಟಣಂ : ಕೇವಲ 14 ನೇ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ ಸ್ಫೋಟಕ ಶತಕ ಬಾರಿಸುವ ಮೂಲಕ ವಿಶ್ವದಾದ್ಯಂತ ಗಮನ ಸೆಳೆದಿದ್ದ ವೈಭವ್ ಸೂರ್ಯವಂಶಿ ಇದೀಗ ಕಬಡ್ಡಿ ಅಂಗಳದಲ್ಲೂ ಕಾಣಿಸಿಕೊಂಡಿದ್ದಾರೆ. ಪ್ರೊ ಕಬಡ್ಡಿ ಲೀಗ್‌ನ 12 ನೇ ಸೀಸನ್ ಆಗಸ್ಟ್ 29 ರ ಶುಕ್ರವಾರದಿಂದ ಪ್ರಾರಂಭವಾಗಿದೆ. ಅದರ ಉದ್ಘಾಟನೆಗೆ ವೈಭವ್ ಸೂರ್ಯವಂಶಿ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿತ್ತು. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ವೈಭವ್ ಅವರನ್ನು ನೋಡಿದ ತಕ್ಷಣ ಅಭಿಮಾನಿಗಳ ಹರ್ಷೋದ್ಘಾರ

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮೂಡಬಿದಿರೆ: ಮಂಕುಬೂದಿ ಎರಚಿ ಮಹಿಳೆಯೊಬ್ಬರಿಂದ ನಗ-ನಗದು ಎಗರಿಸಿಕೊಂಡು ವಂಚಿಸಿದ ಯುವಕನ ವರ್ತಿನೆಯಿಂದ ನೊಂದ ಮಹಿಳೆ ಬದುಕಿಗೆ ಅಂತ್ಯ‌ಹೇಳಿದ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ.‌ ಮಂಗಳೂರು ಉಳ್ಳಾಲದ ಕಲ್ಲಾಪು ಮೂಲದ ಮಹಿಳೆ ಶಫ್ರೀನಾ ಬಾನು(31) ಘಟನೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡವರು. ಕಳೆದ 14 ವರ್ಷಗಳ ಹಿಂದೆ ಮೂಡುಬಿದಿರೆ ಬೆಳುವಾಯಿ ನವಾಝ್ ರೊಂದಿಗೆ‌ ದಾಂಪತ್ಯ‌ ಜೀವನಕ್ಕೆ ಕಾಲಿರಿಸಿದ ಶಫ್ರೀನಾ ಬಾನು ತೋಡಾರು ಗ್ರಾಮದ ಏರ್ ಇಂಡಿಯಾ ನಾಮಾಂಕಿತದ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲಾಟ್

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮಂಗಳೂರು: ಕರ್ನಾಟಕ-ಕೇರಳ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಬಳಿ ಗುರುವಾರ ಸಂಭವಿಸಿದ ಅಪಘಾತಕ್ಕೆ ಬಸ್‌ನ ಬ್ರೇಕ್ ವೈಫಲ್ಯ ಕಾರಣವಲ್ಲ, ಬದಲಾಗಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಅಧಿಕಾರಿಗಳ ಪ್ರಕಾರ, ಮಂಗಳೂರು-1ನೇ ಘಟಕದ ಚಾಲಕ ನಿಜಲಿಂಗಪ್ಪ ಚಲವಾದಿ ಅವರು ಕಾಸರಗೋಡಿನಿಂದ ಮಂಗಳೂರಿಗೆ ಬಸ್ ಚಲಾಯಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ, ಇಳಿಜಾರಿನಲ್ಲಿ ತಲಪಾಡಿ ಟೋಲ್ ಗೇಟ್ ಸಮೀಪಿಸುತ್ತಿದ್ದಾಗ ಅವರು ಬಸ್ ಅನ್ನು ಅತಿ ವೇಗವಾಗಿ ಚಲಾಯಿಸಿದ್ದಾರೆ. ಆಟೋರಿಕ್ಷಾವೊಂದಕ್ಕೆ ಡಿಕ್ಕಿ

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮಂಗಳೂರು :  ಕಾಲೇಜುಗಳಿಗೆ ನಿಷೇದಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಎಂದು ಗುರುತಿಸಲಾಗಿದ್ದು, ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಇತನು  ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಎಮ್.ಡಿ.ಎಂ.ಎ, ಹೈಡ್ರೋವಿಡ್

ಮಂಗಳೂರು : ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರದಕ್ಷಿಣೆಗಾಗಿ ಸೊಸೆಗೆ ಆಸಿಡ್ ಕುಡಿಸಿ ಕೊಂದ ಅತ್ತೆ-ಮಾವ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಅಮ್ರೋಹ : ದೇಶದ ಹಲವೆಡೆ ಇನ್ನೂ ವರದಕ್ಷಿಣೆಯೆಂಬ ಪೆಂಡಭೂತ ಮಾಯವಾದಂತಿಲ್ಲ. ಅದೆಷ್ಟೋ ಹೆಣ್ಮಕ್ಕಳು ಇದರಿಂದ ನರಳಿದ್ದಾರೆ, ಪ್ರಾಣತೆತ್ತಿದ್ದಾರೆ. ಹೆಣ್ಣಿಗೆ ಹೆಣ್ಣೇ ಶತ್ರು ಎಂಬಂತೆ ಅತ್ತೆಯಾದವಳು ಕೂಡ ಅರ್ಥ ಮಾಡಿಕೊಳ್ಳದೆ ಸೊಸೆಯನ್ನು ವರದಕ್ಷಿಣೆಗಾಗಿ ಹಿಂಸಿಸಿದ ಅದೆಷ್ಟೋ ಪ್ರಕರಣಗಳಿವೆ. ಇದೀಗ ವರದಕ್ಷಿಣೆಯ ಕ್ರೌರ್ಯಕ್ಕೆ ಮಹಿಳೆಯೊಬ್ಬಳು ಬಲಿಯಾಗಿದ್ದಾಳೆ. ಅತ್ತೆ-ಮಾವ ಇಬ್ಬರೂ ಸೇರಿ ಬಲವಂತವಾಗಿ ಸೊಸೆಗೆ ಆಸಿಡ್ ಕುಡಿಸಿದ ಪರಿಣಾಮ 23 ವರ್ಷದ ಮಹಿಳೆ ದುರಂತವಾಗಿ ಸಾವಿಗೀಡಾಗಿದ್ದಾಳೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ  ಅಮ್ರೋಹ

ವರದಕ್ಷಿಣೆಗಾಗಿ ಸೊಸೆಗೆ ಆಸಿಡ್ ಕುಡಿಸಿ ಕೊಂದ ಅತ್ತೆ-ಮಾವ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡ: ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ- ಹಲವು ಮಂದಿ ಕಲ್ಮರೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಡೆಹ್ರಾಡೂನ್ : ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ಹಲವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಮತ್ತು ಮಂದಾಕಿನಿ ನದಿಗಳ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಹನುಮಾನ್ ದೇವಾಲಯ ಮುಳುಗಡೆಯಾಗಿದೆ. ಶ್ರೀನಗರ ಮತ್ತು ರುದ್ರಪ್ರಯಾಗ ನಡುವಿನ ಬದರಿನಾಥ ಹೆದ್ದಾರಿ

ಉತ್ತರಾಖಂಡ: ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ- ಹಲವು ಮಂದಿ ಕಲ್ಮರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ‘ಆರೆಂಜ್‌ ಅಲರ್ಟ್’ ಘೋಷಿಸಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯ ಹಲವು ಭಾಗಗಳಲ್ಲಿ ಇಂದು ಬೆಳಿಗ್ಗೆ ಭಾರೀ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕಲಬುರಗಿ ಜಿಲ್ಲೆಯಲ್ಲಿ, ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹೆಚ್ಚಿನ ಪ್ರಮಾಣದ ಹುಚ್ಚೆಳ್ಳು (Niger Seeds) ಬೆಳೆ ನಾಶವಾಗಿದ್ದು, ರೈತರಿಗೆ ಭಾರೀ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ Read More »

ಕರಾವಳಿ

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29ಮುಂಬಯಿ: ಭಾರತದ ಮಾಜಿ ಆಲ್‌ರೌಂಡರ್ ಬಿನ್ನಿ ಭಾರತದ ಪರ 27 ಟೆಸ್ಟ್‌ ಮತ್ತು 72 ಏಕದಿನ ಪಂದ್ಯಗಳಾಡಿದ್ದು, ಒಟ್ಟು 124 ವಿಕೆಟ್‌ ಪಡೆದಿದ್ದರು. 1983ರ ಐತಿಹಾಸಿಕ ವಿಶ್ವಕಪ್‌ ಗೆಲುವಿನಲ್ಲಿ ಬಿನ್ನಿ ಪ್ರಮುಖ ಪಾತ್ರ ವಹಿಸಿದ್ದರು. ಕೂಟದಲ್ಲಿ ಅತೀ ಹೆಚ್ಚು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದ ಬಿನ್ನಿ ಎಂಟು ಇನ್ನಿಂಗ್ಸ್‌ ಗಳಲ್ಲಿ 18 ವಿಕೆಟ್‌ ಪಡೆದಿದ್ದರು. 2022ರಿಂದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷರಾಗಿರುವ ಕರ್ನಾಟಕದ ರೋಜರ್‌ ಬಿನ್ನಿ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಸೆಪ್ಟೆಂಬರ್‌ನಲ್ಲಿ

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top