News Kadaba

ಫಿಟ್ನೆಸ್, ವಿಮೆ ಇಲ್ಲದ ವಾಹನದಲ್ಲಿ ಮಕ್ಕಳ ಜೀವದೊಂದಿಗೆ ಚೆಲ್ಲಾಟ: ಕಲ್ಲಡ್ಕ ಶ್ರೀರಾಮ ಶಾಲಾ ಆಡಳಿತದ ನಿರ್ಲಕ್ಷ್ಯಕ್ಕೆ SDPI ತೀವ್ರ ಖಂಡನೆ

(ನ್ಯೂಸ್‌ ಕಡಬ) newskadaba.com,  ಜು.27  ಬಂಟ್ವಾಳ : ತಾಲೂಕಿನ ಬರಿಮಾರ್‌ನಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು 6 ವರ್ಷದ ಎಲ್ ಕೆ ಜಿ ವಿದ್ಯಾರ್ಥಿನಿ ಮೃತಪಟ್ಟಿರುವ ಹಾಗೂ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುರಂತ ಅತ್ಯಂತ ಆಘಾತಕಾರಿ ಮತ್ತು ದುಃಖಕರ ಘಟನೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕದ ಆಡಳಿತ ಮಂಡಳಿಯ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಕ್ಕೆ ಅಗತ್ಯವಿರುವ ಫಿಟ್ನೆಸ್ […]

ಫಿಟ್ನೆಸ್, ವಿಮೆ ಇಲ್ಲದ ವಾಹನದಲ್ಲಿ ಮಕ್ಕಳ ಜೀವದೊಂದಿಗೆ ಚೆಲ್ಲಾಟ: ಕಲ್ಲಡ್ಕ ಶ್ರೀರಾಮ ಶಾಲಾ ಆಡಳಿತದ ನಿರ್ಲಕ್ಷ್ಯಕ್ಕೆ SDPI ತೀವ್ರ ಖಂಡನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪೂರ್ಣ ರಸ್ತೆ ಕಾಮಗಾರಿಗೆ ಬಲಿಯಾದ ವಾಹನ: ಸೇಡಿಯಾಪು ಕಾಪುವಿನಲ್ಲಿ ಟಾಟಾ ಏಸ್ ಮಗುಚಿ ಅಪಘಾತ

(ನ್ಯೂಸ್‌ ಕಡಬ) newskadaba.com,  ಜು. 24: ಉಪ್ಪಿನಂಗಡಿ ಸಮೀಪದ ಸೇಡಿಯಾಪು ಕಾಪು ಎಂಬಲ್ಲಿ ಜುಲೈ 23ರಂದು ಟಾಟಾ ಏಸ್ ಸರಕು ಸಾಗಣೆ ವಾಹನವೊಂದು ಪಲ್ಟಿಯಾಗಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕೊಯಿಲಾದ ಸನ್ಯಾಸಿಗುಡ್ಡೆ ನಿವಾಸಿ ಅಬ್ದುಲ್ ಮಜೀದ್ ಅವರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಚಲಾಯಿಸುತ್ತಿದ್ದ ವಾಹನದ ಚಕ್ರ ರಸ್ತೆಯಂಚಿಗೆ ಇಳಿದು ಈ ಅಪಘಾತ ಸಂಭವಿಸಿದೆ. ಪರಿಣಾಮ ವಾಹನದಲ್ಲಿದ್ದ ಅವರ ಪುತ್ರ ಗಾಯಗೊಂಡಿದ್ದಾರೆ. ಇತ್ತೀಚೆಗೆ ಪೂರ್ಣಗೊಂಡ ಕಾಂಕ್ರೀಟ್ ರಸ್ತೆ ಕಾಮಗಾರಿಯ ಬಳಿಕ ರಸ್ತೆಯಂಚಿಗೆ ಮಣ್ಣು ಹಾಕದ ಕಾರಣ ಆಳವಾದ

ಅಪೂರ್ಣ ರಸ್ತೆ ಕಾಮಗಾರಿಗೆ ಬಲಿಯಾದ ವಾಹನ: ಸೇಡಿಯಾಪು ಕಾಪುವಿನಲ್ಲಿ ಟಾಟಾ ಏಸ್ ಮಗುಚಿ ಅಪಘಾತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಡಿತರ ದಾರರ ಗಮನಕ್ಕೆ: ರಾಜ್ಯಾದ್ಯಂತ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಪಡಿತರ ಅಂಗಡಿ ಓಪನ್‌!

(ನ್ಯೂಸ್‌ ಕಡಬ) newskadaba.com,  ಜು. 24: ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ನ್ಯಾಯಬೆಲೆ (ಪಡಿತರ) ಅಂಗಡಿಗಳು ಪ್ರತಿದಿನ ಬೆಳಿಗ್ಗೆ 6:00 ರಿಂದ ರಾತ್ರಿ 10:00 ಗಂಟೆಯವರೆಗೆ ಕಡ್ಡಾಯವಾಗಿ ತೆರೆದಿರಬೇಕು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶಿಸಿದೆ. ದಾಸ್ತಾನು ತಲುಪಿದ್ದರೂ ಫಲಾನುಭವಿಗಳಿಗೆ ಪಡಿತರ ಸಿಗಲು ವಿಳಂಬವಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜುಲೈ ತಿಂಗಳ ಪಡಿತರ ವಿತರಣೆಯನ್ನು ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.ಈ ನಿರ್ದೇಶನವನ್ನು ಮಳಿಗೆಗಳ ವಿತರಕರು ಉಲ್ಲಂಘಿಸಿದರೆ ಅಥವಾ ನಿಗದಿತ

ಪಡಿತರ ದಾರರ ಗಮನಕ್ಕೆ: ರಾಜ್ಯಾದ್ಯಂತ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಪಡಿತರ ಅಂಗಡಿ ಓಪನ್‌! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ಜು.22 ಕಡಬ: ಉಪ್ಪಿನಂಗಡಿಗೆ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದ್ದ ಕಡಬ ಕಳಾರದ ಅಡ್ಪಾಡಿ ನಿವಾಸಿ ಮಹಮ್ಮದ್ ಅಕ್ಬರ್ (21) ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಕಡಬ ಪೊಲೀಸ್ ಠಾಣೆಗೆ ಹಾಜರಾದ ಅಕ್ಬರ್, ತಾನು ಕಾಣೆಯಾಗಿರಲಿಲ್ಲ. ಯಾರಿಗೂ ತಿಳಿಸದೆ ಕೆಲಸದ ಹುಡುಕಾಟಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರುದಲ್ಲಿ ಕೆಲಸ ಸಿಗದ ಕಾರಣ ಜು.19ರಂದು ವಾಪಸ್ ಹೊರಟು, ಜು.20ರಂದು ಕಡಬಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ. ಮನೆಗೆ ಬಂದ ಬಳಿಕವೇ ತಂದೆ ಕಾಣೆ ದೂರು ದಾಖಲಿಸಿರುವ

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಜು.22:  ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ  ದರ ಬ್ಯಾರಲ್‌ಗೆ $92.09 (ಸುಮಾರು ₹8,800) ತಲುಪಿದ್ದು, ಜೂನ್ ಬಳಿಕ ಅತ್ಯಧಿಕ ಮಟ್ಟ ದಾಖಲಿಸಿದೆ.ಅಮೆರಿಕದ ಡಬ್ಲ್ಯೂಟಿಐ ಕಚ್ಚಾ ತೈಲ ದರವೂ %1.1 ರಷ್ಟು ಏರಿಕೆಯಾಗಿ ಬ್ಯಾರಲ್‌ಗೆ $85.23 ಕ್ಕೆ ತಲುಪಿದೆ. ಜಗತ್ತಿನ ಶೇ. 20 ರಷ್ಟು ತೈಲ ಸಾಗಣೆಯಾಗುವ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳ ಮೇಲೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡೆಪಾಲದಲ್ಲಿ ಮಹಿಳೆಯ ನಿಗೂಢ ಮೃತ್ಯು ಆತ್ಮಹತ್ಯೆಯೋ? ವ್ಯವಸ್ಥಿತ ಕೊಲೆಯೋ? ತನಿಖೆ ಆರಂಭಿಸಿದ ಸುಳ್ಯ ಪೊಲೀಸ್

(ನ್ಯೂಸ್‌ ಕಡಬ) newskadaba.com,  ಜು.20   :  ಸಂಪಾಜೆ ಕಡೆಪಾಲದಲ್ಲಿ 22 ವರ್ಷದ ವಿವಾಹಿತ ಮಹಿಳೆ ಫಾತಿಮತ್ ನಿಶಾನ ಜುಲೈ 18ರಂದು ರಾತ್ರಿ ತೀವ್ರ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. 4 ವರ್ಷಗಳ ಹಿಂದೆ ಕಡೆಪಾಲದ ಅನ್ಸಾರ್ ಅವರೊಂದಿಗೆ ಮದುವೆಯಾಗಿದ್ದ ನಿಶಾನ ಅವರಿಗೆ 2.5 ವರ್ಷದ ಮಗುವಿದೆ. ಘಟನೆಯ ರಾತ್ರಿ ನಿಶಾನ ಅವರು ತಮ್ಮ ತಾಯಿ ಜುಬೈದಾ ಅವರಿಗೆ ಕರೆ ಮಾಡಿ ಗಂಡನ ಮನೆಯವರಿಂದ ಕಿರುಕುಳವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು. ತಕ್ಷಣ ತಾಯಿ ಮಗಳ ಮನೆಗೆ ಧಾವಿಸಿದಾಗ ನಿಶಾನ ಮೃತದೇಹ

ಕಡೆಪಾಲದಲ್ಲಿ ಮಹಿಳೆಯ ನಿಗೂಢ ಮೃತ್ಯು ಆತ್ಮಹತ್ಯೆಯೋ? ವ್ಯವಸ್ಥಿತ ಕೊಲೆಯೋ? ತನಿಖೆ ಆರಂಭಿಸಿದ ಸುಳ್ಯ ಪೊಲೀಸ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗರಿ: ‘ಡಿಜಿಟಲ್ ಸಾಕ್ಷರತೆ’ಯ ಮಹತ್ವ ಸಾರುವ ತುಳು ಚಿತ್ರ ‘ಇಂಬು’ಗೆ ಸಂದ ಗೌರವ

(ನ್ಯೂಸ್‌ ಕಡಬ) newskadaba.com,  ಜು.20 : ಪ್ರಶಸ್ತಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ,ವಿಜೇತ ಚಿತ್ರ: ಇಂಬು (ಅತ್ಯುತ್ತಮ ತುಳು ಚಲನಚಿತ್ರ),ನಿರ್ದೇಶನ: ಶಿವಧ್ವಜ್ ಶೆಟ್ಟಿ | ನಿರ್ಮಾಣ: ಪ್ರಶಾಂತ್ ರೈ ಗ್ರಾಮೀಣ ಸಂಪ್ರದಾಯ ಮತ್ತು ಆಧುನಿಕ ತಂತ್ರಜ್ಞಾನದ ನಡುವಿನ ಸಂಘರ್ಷವನ್ನು ಹೊಂದಿರುವ ಈ ಚಿತ್ರವು, ಇಂದಿನ ಡಿಜಿಟಲ್ ಯುಗದಲ್ಲಿ ‘ಡಿಜಿಟಲ್ ಸಾಕ್ಷರತೆ’ಯ ಮಹತ್ವವನ್ನು ಸಾರುತ್ತದೆ. ಹಿರಿಯ ನಟ ನವೀನ್ ಡಿ. ಪಡೀಲ್ ಅವರು ಗ್ರಾಮೀಣ ಅರ್ಚಕ ‘ಬಾಲಣ್ಣ’ ಎಂಬ ಪ್ರಮುಖ ಪಾತ್ರದಲ್ಲಿದ್ದಾರೆ. ಮೊಬೈಲ್ ಫೋನ್ ಖರೀದಿಸಿದ ಬಳಿಕ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗರಿ: ‘ಡಿಜಿಟಲ್ ಸಾಕ್ಷರತೆ’ಯ ಮಹತ್ವ ಸಾರುವ ತುಳು ಚಿತ್ರ ‘ಇಂಬು’ಗೆ ಸಂದ ಗೌರವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಬಲಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!

(ನ್ಯೂಸ್‌ ಕಡಬ) newskadaba.com,  ಜು.18  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿ ತನ್ನ ಮನೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ  ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ಜೊತೆಗೆ ಬಾಟಾ ಶೋರೂಂನಲ್ಲಿ ಪಾರ್ಟ್‌ ಟೈಂ ಕೆಲಸ ನಿರ್ವಹಿಸುತ್ತಿದ್ದ.ಮನೆಯ ಮೇಲ್ಭಾಗದ ಪ್ರತ್ಯೇಕ ಕೊಠಡಿಯಲ್ಲಿದ್ದ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಬಲಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ

(ನ್ಯೂಸ್ ಕಡಬ) newskadaba.com ಜು. 16  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 18,03,766 ಮತದಾರರ  ಪೈಕಿ 17,86,112 ಅಂದರೆ   ಶೇ. 99.02% ಮತದಾರರಿಗೆ ಎನ್ಯುಮರೇಶನ್ ಫಾರ್ಮ್‍ಗಳನ್ನು  ತಲುಪಿಸಲಾಗಿರುತ್ತದೆ. ಜುಲೈ 29  ಎನ್ಯುಮರೇಶನ್ ಫಾರ್ಮ್‍ಗಳ ಡಿಜಿಟೈಸೇಶನ್‍ಗೆ  ಕೊನೆಯ ದಿನವಾಗಿರುವುದರಿಂದ ಮತದಾರರು ಆದಷ್ಟು ಬೇಗ ಎನ್ಯುಮರೇಶನ್ ಫಾರ್ಮ್‍ಗಳನ್ನು  ಭರ್ತಿ ಮಾಡಿ ಬಿ.ಎಲ್.ಒ ರವರು ಮನೆಗೆ ಬಂದಾಗ ವಿಳಂಬ ಮಾಡದೇ ನೀಡಬೇಕು. ಬಿ.ಎಲ್.ಒ ರವರು ಮತದಾರರಿಂದ ಸ್ವೀಕೃತವಾಗುವ ಎನ್ಯುಮರೇಶನ್ ಫಾರ್ಮ್‍ಗಳನ್ನು  ಬಿ.ಎಲ್.ಒ  ಆ್ಯಪ್‍ನಲ್ಲಿ ಡಿಜಿಟೈಸೇಶನ್ ಮಾಡಲು ಕನಿಷ್ಠ 2 ರಿಂದ 4

ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಬ್ರೇಕ್: ಇನ್ಮುಂದೆ ದೆಹಲಿಯಲ್ಲೇ ಅಂತಿಮ ನಿರ್ಧಾರ!

(ನ್ಯೂಸ್ ಕಡಬ) newskadaba.com ಜು. 16: ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋದಿಂದ ಅನುಭವಿ ವಿಜ್ಞಾನಿಗಳು ಖಾಸಗಿ ಸಂಸ್ಥೆಗಳತ್ತ ಮುಖ ಮಾಡುತ್ತಿರುವುದನ್ನು ತಡೆಯಲು ಕೇಂದ್ರ ಬಾಹ್ಯಾಕಾಶ ಇಲಾಖೆ ಕಠಿಣ ಆಂತರಿಕ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಜುಲೈ 14ರ ಹೊಸ ನಿಯಮದ ಪ್ರಕಾರ, ಇಸ್ರೋದ ಪ್ರಮುಖ ವೈಜ್ಞಾನಿಕ ಮತ್ತು ತಾಂತ್ರಿಕ ಸಿಬ್ಬಂದಿಯ ರಾಜೀನಾಮೆ ಅಥವಾ ಸ್ವಯಂ ನಿವೃತ್ತಿ ಅರ್ಜಿಗಳನ್ನು ಇನ್ನು ಮುಂದೆ ಸ್ಥಳೀಯ ಮಟ್ಟದಲ್ಲಿ ಅಂಗೀಕರಿಸುವಂತಿಲ್ಲ. ಇದುವರೆಗೆ ಇಸ್ರೋದ ವಿವಿಧ ಕೇಂದ್ರಗಳ ನಿರ್ದೇಶಕರಿಗಿದ್ದ ಈ ಅಧಿಕಾರವನ್ನು ಹಿಂಪಡೆಯಲಾಗಿದ್ದು, ಇನ್ಮುಂದೆ ದೆಹಲಿಯಲ್ಲಿರುವ ಬಾಹ್ಯಾಕಾಶ

ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಬ್ರೇಕ್: ಇನ್ಮುಂದೆ ದೆಹಲಿಯಲ್ಲೇ ಅಂತಿಮ ನಿರ್ಧಾರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top