News Kadaba

ಕೆಆರ್‌ ನಗರ : ಜನಗಣತಿ ಸಮಯದಲ್ಲಿ ಹೃದಯಾಘಾತದಿಂದ ಶಿಕ್ಷಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.07:  ಜನಗಣತಿ ವೇಳೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿಯ ಸಿ.ಕೆ.ರಂಗನಾಥ್‌ ಮೃತಪಟ್ಟ ಶಿಕ್ಷಕ. ಹುಣಸೂರು ತಾಲ್ಲೂಕಿನ ಗಾವಡಗೆರೆ ಹೋಬಳಿಯ ಮುಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜನಗಣತಿ ಕಾರ್ಯಕ್ಕಾಗಿ ನಿಯೋಜಿಸಲಾಗಿತ್ತು. ಇಂದು ಬೆಳಿಗ್ಗೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ಜನಗಣತಿ ಮಾಹಿತಿ ಪಡೆಯುವ ವೇಳೆ ಹೃದಯಾಘಾತವಾಗಿದೆ. ಕೂಡಲೇ ಸ್ಥಳೀಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. […]

ಕೆಆರ್‌ ನಗರ : ಜನಗಣತಿ ಸಮಯದಲ್ಲಿ ಹೃದಯಾಘಾತದಿಂದ ಶಿಕ್ಷಕ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : 180 ಪಕ್ಷಿಗಳನ್ನು ಗುರುತಿಸಿ ಬಾನಾಡಿಗಳ ಬಗ್ಗೆ ಕೃತಿ ರಚಿಸಿದ 7ನೇ ತರಗತಿ ಬಾಲಕಿ!

(ನ್ಯೂಸ್‌ ಕಡಬ) newskadaba.com,  ಮೇ.07:  ಇಂದಿನ ಮಕ್ಕಳಲ್ಲಿ ಮೊಬೈಲ್ ಮತ್ತು ವಿಡಿಯೋ ಗೇಮ್‌ಗಳ ಆಸಕ್ತಿ ಹೆಚ್ಚುತ್ತಿರುವ ಕಾಲದಲ್ಲಿ, ಗಡಿನಾಡಿನ ಪುಟಾಣಿ ಬಾಲಕಿಯೊಬ್ಬಳು ಪ್ರಕೃತಿ ಮತ್ತು ಪಕ್ಷಿ ಲೋಕದತ್ತ ಅಪರೂಪದ ಆಸಕ್ತಿ ಬೆಳೆಸಿ ರಾಜ್ಯದ ಗಮನ ಸೆಳೆದಿದ್ದಾಳೆ. ಕೇವಲ ಐದನೇ ತರಗತಿಯಿಂದ ಏಳನೇ ತರಗತಿ ತನಕದ ಮೂರು ವರ್ಷದ ಅವಧಿಯಲ್ಲಿ 180ಕ್ಕೂ ಹೆಚ್ಚು ಪಕ್ಷಿಗಳನ್ನು ಸ್ವತಂತ್ರವಾಗಿ ಗುರುತಿಸಿ, ಅವುಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ವಿಶೇಷ ಕೃತಿ ರಚಿಸಿರುವ ಸಾಧನೆ ಮಾಡಿದ್ದಾಳೆ ಕು. ನೆಹಾರಿಕಾ.   “Birds, the Hidden

ಕಾಸರಗೋಡು : 180 ಪಕ್ಷಿಗಳನ್ನು ಗುರುತಿಸಿ ಬಾನಾಡಿಗಳ ಬಗ್ಗೆ ಕೃತಿ ರಚಿಸಿದ 7ನೇ ತರಗತಿ ಬಾಲಕಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯದ ತೊಡಿಕಾನ ಗ್ರಾಮದಲ್ಲಿ ಟವರ್‌ ಇದೆ, ಆದ್ರೆ ನೆಟ್‌ವರ್ಕ್ ಇಲ್ಲ ನೆಟ್‌ ವರ್ಕ್‌ ಸಮಸ್ಯೆಯಿಂದಾಗಿ ಸುಳ್ಯದ ತೊಡಿಕಾನ ಗ್ರಾಮ ತಿಂಗಳಿನಿಂದ ವ್ಯಾಪ್ತಿ ಪ್ರದೇಶದಿಂದ ಹೊರಗೆ

(ನ್ಯೂಸ್‌ ಕಡಬ) newskadaba.com,  ಮೇ.07:  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ 2 ಬಿಎಸ್‌ಎನ್‌ಎಲ್‌ ಟವರ್‌ ಇದ್ದರೂ ಮೊಬೈಲ್‌ನಲ್ಲಿ ನೆಟ್‌ವರ್ಕ್ ಮಾತ್ರ ಇಲ್ಲ. ಕಳೆದ ಒಂದು ತಿಂಗಳಿನಿಂದ ಇಡೀ ಗ್ರಾಮವೇ ನೆಟ್‌ವರ್ಕ್ ಸಮಸ್ಯೆಯಿಂದ ವ್ಯಾಪ್ತಿ ಪ್ರದೇಶದ ಹೊರಗಿದೆ.. BSNL ಟವರ್‌ ಇದ್ದರೂ ನೆಟ್‌ ವರ್ಕ್‌ ಸಿಗದೆ ಪರದಾಟ ತೊಡಿಕಾನದಲ್ಲಿರುವ ಬಿಎಸ್‌ಎನ್‌ಎಲ್‌ ಮೊಬೈಲ್‌ ಟವರ್‌ನಿಂದ 2ಜಿ, 3ಜಿ ನೆಟ್ವರ್ಕ್ ಸಂಪರ್ಕ ಕಡಿತಗೊಂಡಿರುವುದರಿಂದ ಗ್ರಾಮೀಣ ಪ್ರದೇಶದ ಜನರು ತೊಂದರೆಗೆ ಸಿಲುಕಿದ್ದಾರೆ. ಅಗತ್ಯ ಕೆಲಸ ಕಾರ್ಯಗಳಿಗೆ ಮೊಬೈಲ್‌ ನೆಟ್‌ವರ್ಕ್ ಹುಡುಕಿಕೊಂಡು

ಸುಳ್ಯದ ತೊಡಿಕಾನ ಗ್ರಾಮದಲ್ಲಿ ಟವರ್‌ ಇದೆ, ಆದ್ರೆ ನೆಟ್‌ವರ್ಕ್ ಇಲ್ಲ ನೆಟ್‌ ವರ್ಕ್‌ ಸಮಸ್ಯೆಯಿಂದಾಗಿ ಸುಳ್ಯದ ತೊಡಿಕಾನ ಗ್ರಾಮ ತಿಂಗಳಿನಿಂದ ವ್ಯಾಪ್ತಿ ಪ್ರದೇಶದಿಂದ ಹೊರಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಚಿನ್ನ ಖರೀದಿಸಲು ಸೂಪರ್ ಟೈಮ್!

(ನ್ಯೂಸ್‌ ಕಡಬ) newskadaba.com, ಮೇ.07: ಆಭರಣ ಪ್ರಿಯರಿಗೆ ಇಂದು ಖುಷಿಯ ಸುದ್ದಿ ಸಿಕ್ಕಿದ್ದು, ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ ಏರಿಕೆಯಾಗಿದ್ದ ದರ ಇಂದು ಕಡಿಮೆಯಾಗಿರುವುದರಿಂದ ಖರೀದಿದಾರರು ಜುವೆಲ್ಲರಿ ಅಂಗಡಿಗಳತ್ತ ಮುಖ ಮಾಡಿದ್ದಾರೆ. ಇಂದಿನ ದರ: 🔸 22 ಕ್ಯಾರೆಟ್ ಚಿನ್ನ – ₹13,975 18 ಕ್ಯಾರೆಟ್ ಚಿನ್ನ – ₹11,434  ಬೆಳ್ಳಿ – ₹261 ಅಂತರರಾಷ್ಟ್ರೀಯ ಮಾರುಕಟ್ಟೆಯ ಬದಲಾವಣೆ ಪರಿಣಾಮ ಸ್ಥಳೀಯ ಮಾರುಕಟ್ಟೆಯಲ್ಲೂ ದರದಲ್ಲಿ ಕುಸಿತ ದಾಖಲಾಗಿದೆ. ಮದುವೆ, ಶುಭಕಾರ್ಯ

ಇಂದು ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಚಿನ್ನ ಖರೀದಿಸಲು ಸೂಪರ್ ಟೈಮ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ಮಾನವೀಯತೆ ಮೆರೆದ ಪಾಕ್‌: ಭಾರತದ ಹಡಗು ರಕ್ಷಣೆ

(ನ್ಯೂಸ್‌ ಕಡಬ) newskadaba.com, ಮೇ.07: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ ಭಾರತೀಯ ಹಡಗನ್ನು ಪಾಕಿಸ್ತಾನ ನೌಕಾಪಡೆರಕ್ಷಿಸಿದೆ. ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಹಡಗಿನ ತುರ್ತು ಕರೆಗೆ ಪಾಕಿಸ್ತಾನಿ ನೌಕಾಪಡೆ ಸ್ಪಂದಿಸಿದೆ. ಸಿಬ್ಬಂದಿಗೆ ಆಹಾರ, ವೈದ್ಯಕೀಯ ಮತ್ತು ಇತರ ತುರ್ತು ಸಹಾಯವನ್ನು ನೀಡಿದೆ ಎಂದು ವರದಿಯಾಗಿದೆ.ಎಂವಿ ಗೌತಮ್ ಹೆಸರಿನ ಈ ಹಡಗು ಒಮಾನ್‌ನಿಂದ ಭಾರತಕ್ಕೆ ವಾಪಸ್‌ ಆಗುವಾಗ ತಾಂತ್ರಿಕ ವೈಫಲ್ಯವನ್ನು ಅನುಭವಿಸಿ ಸಮುದ್ರದಲ್ಲಿ ಸಿಲುಕಿಕೊಂಡಿತ್ತು ಎಂದು ಪಾಕಿಸ್ತಾನಿ ಮಿಲಿಟರಿ ತಿಳಿಸಿದೆ. ಮುಂಬೈನಲ್ಲಿರುವ ಸಾಗರ ರಕ್ಷಣಾ ಮತ್ತು ಸಮನ್ವಯ ಕೇಂದ್ರವು ಪಾಕಿಸ್ತಾನದ ಅಧಿಕಾರಿಗಳನ್ನು

ಅರಬ್ಬೀ ಸಮುದ್ರದಲ್ಲಿ ಮಾನವೀಯತೆ ಮೆರೆದ ಪಾಕ್‌: ಭಾರತದ ಹಡಗು ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರ ರಚನೆಗೆ ದಳಪತಿ ವಿಜಯ್‌ಗೆ ಸಂಖ್ಯಾಬಲ ಸವಾಲು: ಇಂದು ಸಿಗುತ್ತಾ ಬೆಂಬಲ?

(ನ್ಯೂಸ್‌ ಕಡಬ) newskadaba.com,  ಮೇ.07:  ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ತಮಿಳಿಗ ವೆಟ್ರಿ ಕಳಗಂ (TVK) ಮುಖ್ಯಸ್ಥ, ನಟ ದಳಪತಿ ವಿಜಯ್ ಸರ್ಕಾರ ರಚನೆಗೆ ತೀವ್ರ ಕಸರತ್ತು ಆರಂಭಿಸಿದ್ದಾರೆ. ಆದರೆ ಅಧಿಕಾರದ ಗದ್ದುಗೆಯತ್ತ ಸಾಗುತ್ತಿರುವ ವಿಜಯ್‌ಗೆ ಇದೀಗ ಸಂಖ್ಯಾಬಲವೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ವಿಜಯ್‌ಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಬಹುಮತ ಸಾಬೀತುಪಡಿಸುವಂತೆ ಸೂಚಿಸಿರುವುದರಿಂದ, ಮೈತ್ರಿ ಮಾತುಕತೆಗಳು ವೇಗ ಪಡೆದುಕೊಂಡಿವೆ.108 ಸ್ಥಾನಗಳನ್ನು ಗೆದ್ದಿರುವ ಟಿವಿಕೆಗೆ ಸರ್ಕಾರ ರಚಿಸಲು 118 ಶಾಸಕರ

ಸರ್ಕಾರ ರಚನೆಗೆ ದಳಪತಿ ವಿಜಯ್‌ಗೆ ಸಂಖ್ಯಾಬಲ ಸವಾಲು: ಇಂದು ಸಿಗುತ್ತಾ ಬೆಂಬಲ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ರಕ್ತರಂಜಿತ ಹಿಂಸಾಚಾರ

(ನ್ಯೂಸ್‌ ಕಡಬ) newskadaba.com,  ಮೇ.07:  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಭೀಕರ ಸ್ವರೂಪ ಪಡೆದುಕೊಂಡಿದೆ. ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬುಧವಾರ ರಾತ್ರಿ ಸುಮಾರು 10.20ರ ವೇಳೆಗೆ ಬಾರಾಸಾತ್‌ನಲ್ಲಿರುವ ಮನೆಗೆ

ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ರಕ್ತರಂಜಿತ ಹಿಂಸಾಚಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ- ವಿಶೇಷ ವಿಡಿಯೋ ಹಂಚಿಕೊಂಡ ವಾಯುಪಡೆ

(ನ್ಯೂಸ್‌ ಕಡಬ) newskadaba.com,  ಮೇ.07:  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ʻಆಪರೇಷನ್‌ ಸಿಂಧೂರʼ ವಿಶೇಷ ಕಾರ್ಯಾಚರಣೆಗೆ 1 ವರ್ಷ ಪೂರ್ಣಗೊಂಡಿದೆ.ಈ ಹೊತ್ತಿನಲ್ಲೇ ಪಾಕ್‌ ವಿರುದ್ಧ ತೀರಿಸಿಕೊಂಡ ಪ್ರತೀಕಾರ ಹಾಗೂ ಭಾರತೀಯ ಮೂರು ಸೇನೆಗಳ ಪರಾಕ್ರಮವನ್ನು ನೆನಪಿಸುವ ವಿಶೇಷ ವಿಡಿಯೋವೊಂದನ್ನು ಭಾರತೀಯ ವಾಯುಪಡೆ ಹಂಚಿಕೊಂಡಿದೆ. ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ ನ್ಯಾಯ ದೊರಕಿಸಿದೆ. ಈ ಕಾರ್ಯ ನಿಖರವಾಗಿದ್ದು, ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ- ವಿಶೇಷ ವಿಡಿಯೋ ಹಂಚಿಕೊಂಡ ವಾಯುಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರ ಕ್ರಮ: 8 ಗ್ಯಾರಂಟಿ ಘೋಷಣೆ

(ನ್ಯೂಸ್‌ ಕಡಬ) newskadaba.com,  ಮೇ.02: ಎಸ್‌ಎಸ್‌ಎಲ್‌ಸಿಯಲ್ಲಿ ಇತ್ತೀಚಿನ ದಾಖಲೆ ಫಲಿತಾಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಸಾರ್ವಜನಿಕ ಶಿಕ್ಷಣದ ಮೇಲೆ ಜನರ ವಿಶ್ವಾಸವನ್ನು ಪುನಃಸ್ಥಾಪಿಸಲು ಉದ್ದೇಶಿಸಿ ಎಂಟು ಭರವಸೆಗಳ ಸಮಗ್ರ ಪ್ಯಾಕೇಜ್ ನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಈ ಯೋಜನೆ ರೂಪುಗೊಂಡಿದ್ದು, ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಹಳೆಯ ಬೋಧನಾ ವಿಧಾನಗಳಂತಹ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಒತ್ತು

ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರ ಕ್ರಮ: 8 ಗ್ಯಾರಂಟಿ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಂಡತಿ ಪರಾರಿ : ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

(ನ್ಯೂಸ್‌ ಕಡಬ) newskadaba.com,  ಮೇ.02: ಹೆಂಡತಿ ಬೇರೋಬ್ಬನ ಜೊತೆ ಪರಾರಿಯಾಗಿದ್ದರಿಂದ ಮನನೊಂದ ಪತಿ ತನ್ನಿಬ್ಬರ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತಡರಾತ್ರಿ ನಡೆದಿದೆ. ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಆಲ್ಕೆರೆ ಗ್ರಾಮದ ಶಿವಣ್ಣ (40) ಎಂಬುವವರೇ ತನ್ನಿಬ್ಬರು ಮಕ್ಕಳಾದ ಜೀವನ್‌ (10), ಪ್ರಾಣೇಶ್‌ (6) ನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆತಹತ್ಯೆಗೆ ಶರಣಾದವರು. ಒಂದು ವಾರದ ಹಿಂದೆಯಷ್ಟೇ ಶಿವಣ್ಣ ಅವರ ಪತ್ನಿ ಕಾವ್ಯಾ ಅಕ್ಕನ ಮಗನಾದ ಹೇಮಂತ್‌ ಎಂಬುವವನ ಜೊತೆ ಪರಾರಿಯಾಗಿದ್ದಳು. ನಂತರ ಇದು

ಹೆಂಡತಿ ಪರಾರಿ : ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top