News Kadaba

ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ

(ನ್ಯೂಸ್‌ ಕಡಬ) newskadaba.com, ಆ.12:   ಕಾಂಗ್ರೆಸ್‌ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸರಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದೆ. ಸಚಿವ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್​. ಪ್ರಭುಶಂಕರ್​ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. ಹೈಕಮಾಂಡ್​ ಸೂಚನೆ […]

ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿಗೆ ಭರ್ಜರಿ ಸಂಭಾವನೆ

(ನ್ಯೂಸ್‌ ಕಡಬ) newskadaba.com, ಆ.11 : ನಟಿ ಹಾಗೂ ಕೇಂದ್ರದ ಮಾಜಿ ಸಚಿವೆಯಾಗಿದ್ದ ಸ್ಮೃತಿ ಇರಾನಿ ಅವರು, ಟಿವಿ ಧಾರಾವಾಹಿ ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ ರೀಬೂಟ್‌ನಲ್ಲಿ ಮತ್ತೊಮ್ಮೆ ‘ತುಳಸಿ ವಿರಾನಿ’ ಪಾತ್ರಕ್ಕೆ ಜೀವ ತುಂಬುವ ಮೂಲಕ, ಭಾರತೀಯ ದೂರದರ್ಶನದಲ್ಲಿ ಭಾರಿ ಸಂಭ್ರಮದೊಂದಿಗೆ ಮರಳಿದ್ದಾರೆ. ವರದಿಗಳ ಪ್ರಕಾರ, ಅವರು ಪ್ರತಿ ಸಂಚಿಕೆಗೆ ₹14 ಲಕ್ಷ ಸಂಭಾವನೆ ಪಡೆಯುತ್ತಿದ್ದಾರೆ, ಇದು ಅವರನ್ನು ಭಾರತದ ಟಿವಿ ಕ್ಷೇತ್ರದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿ ಸ್ಥಾಪಿಸಿದೆ. ಇದು

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿಗೆ ಭರ್ಜರಿ ಸಂಭಾವನೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ

(ನ್ಯೂಸ್‌ ಕಡಬ) newskadaba.com, ಆ.11 : ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ಕೆಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದಾರೆ. ಆರಂಭದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ ಮೂಡಿಸಿದ್ದರು. ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ ನಂತರ ರಾಜಣ್ಣ ನಮ್ಮ ಅವಧಿಯಲ್ಲಿ ಮತಪಟ್ಟಿ ಸಿದ್ಧವಾಗಿತ್ತು ಎಂದು ತಿಳಿಸಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಗ ಎಲ್ಲರು

ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಟ್ಟಿಂಗ್ ಆಪ್ ಪ್ರಕರಣ: ನಟ ರಾಣಾ ದಗ್ಗುಬಾಟಿ ಹೈದರಾಬಾದ್‌ನಲ್ಲಿ ಇಡಿ ಮುಂದೆ ಹಾಜರು

(ನ್ಯೂಸ್‌ ಕಡಬ) newskadaba.com, ಆ.11 : ತೆಲಂಗಾಣದಲ್ಲಿ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ರಾಣಾ ದಗ್ಗುಬಾಟಿ ಹೈದರಾಬಾದ್‌ನ ಬಶೀರ್‌ಬಾಗ್ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ರಾಣಾ ವಿವಿಧ ಆನ್‌ಲೈನ್ ಬೆಟ್ಟಿಂಗ್ ಆಪ್‌ಗಳನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪಗಳ ಹಿನ್ನೆಲೆ ನೋಟೀಸ್ ನೀಡಿತ್ತು. ಈಗಾಗಲೇ ನಟರಾದ ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಇಡಿ ವಿಚಾರಣೆಗೆ ಹಾಜರಾಗಿದ್ದರು. ಇನ್ನೂ ನಟಿ ಮಂಚು ಲಕ್ಷ್ಮಿ

ಬೆಟ್ಟಿಂಗ್ ಆಪ್ ಪ್ರಕರಣ: ನಟ ರಾಣಾ ದಗ್ಗುಬಾಟಿ ಹೈದರಾಬಾದ್‌ನಲ್ಲಿ ಇಡಿ ಮುಂದೆ ಹಾಜರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

25 ವರ್ಷಗಳ ಹಿಂದಿನ ಮಾನಹಾನಿ ಪ್ರಕರಣ: ಮೇಧಾ ಪಾಟ್ಕರ್ ದೋಷಿ- ಸುಪ್ರೀಂ ಕೋರ್ಟ್

(ನ್ಯೂಸ್‌ ಕಡಬ) newskadaba.com, ಆ.11 : ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ ಎಂದು ಸುಪ್ರೀಂ ಕೋರ್ಟ್ ಸೋಮವಾರ ದೃಢಪಡಿಸಿದೆ. ಈ ಪ್ರಕರಣದಲ್ಲಿ ಪಾಟ್ಕರ್ ಅವರಿಗೆ ವಿಧಿಸಲಾದ 1 ಲಕ್ಷ ದಂಡವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮೇಲ್ವಿಚಾರಣಾ ಆದೇಶ ಜಾರಿಗೆ ಬರುವುದಿಲ್ಲ ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್

25 ವರ್ಷಗಳ ಹಿಂದಿನ ಮಾನಹಾನಿ ಪ್ರಕರಣ: ಮೇಧಾ ಪಾಟ್ಕರ್ ದೋಷಿ- ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.11 : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com, ಆ.11 : ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟ ಮತ್ತು ಈ ಸರಕಾರ  ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮ ತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತಗಳ್ಳತನ ಆರೋಪ: ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

(ನ್ಯೂಸ್‌ ಕಡಬ) newskadaba.com, ಆ.11 : ಚುನಾವಣೆಯಲ್ಲಿ ಮತಗಳ್ಳತನ ಆಗಿದೆ ಎಂಬ ಆರೋಪಕ್ಕೆ ಸಂಬಧಿಸಿದಂತೆ ರಾಹುಲ್ ಗಾಂಧಿ ಚುನಾವಣ ಅಯೋಗದ ನೋಟಿಸ್ ಕಳುಹಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ನೀವು ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ಹೇಳಿದ್ದೀರಿ. ಇದು ಚುನಾವಣಾ ಆಯೋಗದ ಡೇಟಾನಾ ಎಂದು ಕಾಂಗ್ರೆಸ್ ನಾಯಕನಿಗೆ ಚುನಾವಣಾ ಆಯೋಗ ಪ್ರಶ್ನೆ ಮಾಡಿದೆ. ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಹೇಳಿದ್ದೀರಿ. ‘ಈಸ್ ಐಡಿ ಕಾರ್ಡ್ ಪರ್ ದೋ

ಮತಗಳ್ಳತನ ಆರೋಪ: ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು:  ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ. ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲಿಸರು  12 ಮಂದಿಯನ್ನು ಬಂಧಿಸಿದ್ದು, ಅವರೆಲ್ಲರನ್ನೂ ಹಲವು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿ ಹಲವೆಡೆ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಆ.16ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ತಿಳಿಸಿದೆ. ಕಳೆದ 2-3 ದಿನಗಳಿಂದ ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು (ಆ.11) ಕೂಡ ಮಧ್ಯಾಹ್ನದ ವೇಳೆಗೆ

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top