News Kadaba

ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ

(ನ್ಯೂಸ್ ಕಡಬ) newdkadaba.com, ಆ. 02: ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರು ಆಯ್ಕೆ ಆಗಿದ್ದಾರೆ. 20 ವರ್ಷಗಳ ರಾಜಕೀಯ ಜೀವನ ದೊಂದಿಗೆ ಬಣಕಲ್ ಹೋಬಳಿ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಅಲ್ಲದೇ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿಯಾಗಿ , ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಅಲ್ಲದೇ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳು ಮೂಡಿಗೆರೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ, […]

ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newdkadaba.com, ಆ. 02:ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌

(ನ್ಯೂಸ್ ಕಡಬ) newskadaba.com, ಆ. 01: ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ದೋಷಿ ಎಂದು ತೀರ್ಪು ಪ್ರಕಟಿಸಿದೆ. ಆದರೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು?

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ, SDPI ನಿಯೋಗದಿಂದ ತಹಶೀಲ್ದಾರ್ ಭೇಟಿ

(ನ್ಯೂಸ್ ಕಡಬ) newskadaba.com, ಆ. 01: ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಕಡಬ ತಹಶೀಲ್ದಾರ್ ರನ್ನು ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗವು ಭೇಟಿಯಾಗಿ ಚುನಾವಣಾ ಪ್ರಕ್ರಿಯೆಯ ಲೋಪಗಳ ಬಗ್ಗೆ ತಹಶೀಲ್ದಾರರ ಗಮನಕ್ಕೆ ತಂದು, ಸುದೀರ್ಘ ಚರ್ಚೆ ನಡೆಸಿದರು. ನಿಯೋಗದಲ್ಲಿ ಕಡಬ ಬ್ಲಾಕ್ ಸಮಿತಿ ಅಧ್ಯಕ್ಷ ಬಶೀರ್ ಕಡಬ, ಸದಸ್ಯರಾದ ಹಾರಿಸ್ ಕಳಾರ ಮತ್ತು ರಮ್ಲ ಸನ್ ರೈಸ್ ಮತ್ತಿತರರು ಉಪಸ್ಥಿತರಿದ್ದರು.

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ, SDPI ನಿಯೋಗದಿಂದ ತಹಶೀಲ್ದಾರ್ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಥನಿ ಐಟಿಐಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಗೌರವ

(ನ್ಯೂಸ್ ಕಡಬ) newskadaba.com, ಆ. 01: ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 25 ವರ್ಷಗಳ ಸೇವೆ ಯಶಸ್ವಿಯಾಗಿ ಪೂರೈಸಿದ ಶ್ರೀ ಪ್ರಕಾಶ್ ಕೆ ವೈ ಹಾಗೂ ಶ್ರೀ ಸುನಿಲ್ ಜೋಸೆಫ್ ಅವರಿಗೆ ಗೌರವ ಸೂಚ್ಯವಾಗಿ ಅಭಿನಂದನಾ ಕಾರ್ಯಕ್ರಮವನ್ನು ಸಂಸ್ಥೆಯ ವತಿಯಿಂದ ನೆರವೇರಿಸಲಾಯಿತು. ಈ ಭಾವಪೂರ್ಣ ಕ್ಷಣದಲ್ಲಿ ಬೆಥನಿ ವಿದ್ಯಾ ಸಂಸ್ಥೆಗಳು ನೆಲ್ಯಾಡಿ ಇದರ ಸಂಚಾಲಕರಾದ ರೆ. ಫಾ. ಜೈಸನ್ ಸೈಮನ್ ಓಐಸಿ ಅವರು ಮಾತನಾಡಿ, “ನಿಸ್ವಾರ್ಥ ಸೇವೆಯನ್ನು 25 ವರ್ಷಗಳ ಕಾಲ ನಿರಂತರವಾಗಿ ನೀಡಿದ ಇಬ್ಬರೂ

ಬೆಥನಿ ಐಟಿಐಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಗೌರವ Read More »

ಕರಾವಳಿ

ಬಿಸಿಯೂಟ ತಯಾರಕರು, ದೈಹಿಕ, ಆರೋಗ್ಯ ಶಿಕ್ಷಕರ ಗೌರವಧನ ಹೆಚ್ಚಳ

(ನ್ಯೂಸ್ ಕಡಬ) newskadaba.com, ಆ. 01: ಬಿಸಿಯೂಟ ತಯಾರಕರು, ರಾತ್ರಿ ಕಾವಲುಗಾರರು ಹಾಗೂ ಗೌರವ ಧನವನ್ನ ಹೆಚ್ಚಳ ಮಾಡಲಾಗಿದೆ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶಿಕ್ಷಣ ವ್ಯವಸ್ಥೆ ಬಲಪಡಿಸುವಲ್ಲಿ ಅಡುಗೆಯವರು, ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನ ಗಮನದಲ್ಲಿಟ್ಟುಕೊಂಡು, ಗೌರವಧನ ದ್ವಿಗುಣಗೊಳಿಸುವ ಮೂಲಕ ಗೌರವಾನ್ವಿತ ಹೆಚ್ಚಳ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಬಿಸಿಯೂಟ ತಯಾರಕರು, ದೈಹಿಕ, ಆರೋಗ್ಯ ಶಿಕ್ಷಕರ ಗೌರವಧನ ಹೆಚ್ಚಳ Read More »

ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಶವ ಹೂತು ಪ್ರಕರಣ: ಕೇಶವ್‌ಗೌಡನ ಸ್ಪಷ್ಟನೆ, SIT ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com, ಆ. 01: ಧರ್ಮಸ್ಥಳದ ಬಳಿ ಶವಗಳನ್ನು ಹೂತಿಟ್ಟ ಆರೋಪದ ಕುರಿತು ಗ್ರಾಪಂ ಮಾಜಿ ಅಧ್ಯಕ್ಷ ಕೇಶವ್‌ಗೌಡ ಸ್ಪಷ್ಟನೆ ನೀಡಿದ್ದಾರೆ. “ಷಡ್ಯಂತ್ರದ ಹಿಂದೆ ಯಾರು ಇದ್ದಾರೆ ಎಂಬುದು ನಮಗೆ ಗೊತ್ತಿದೆ,” ಎಂದವರು ಹೇಳಿದ್ದಾರೆ. ದೂರದಾರನುPreviously notoriety ಇರುವ ವ್ಯಕ್ತಿ ಎಂದು ಹೇಳಿದ ಅವರು, ಮೃತದೇಹಗಳು ಸಿಕ್ಕರೂ ಅಚ್ಚರಿಯಿಲ್ಲ ಎಂದಿದ್ದಾರೆ. ಮಂಪರು ಪರೀಕ್ಷೆ ಮಾಡಬೇಕೆಂದೂ, ಎಲ್ಲರ ಮೇಲೆ ಸಮಗ್ರ ತನಿಖೆ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ. “ಬಣ್ಣ ಬಣ್ಣದ ಕಾಗೆಗಳನ್ನು ಹಾರಿಸುತ್ತಿದ್ದಾರೆ” ಎಂದು ಆರೋಪಕರ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಧರ್ಮಸ್ಥಳ ಶವ ಹೂತು ಪ್ರಕರಣ: ಕೇಶವ್‌ಗೌಡನ ಸ್ಪಷ್ಟನೆ, SIT ತನಿಖೆಗೆ ಆಗ್ರಹ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ

(ನ್ಯೂಸ್ ಕಡಬ) newskadaba.com, ಆ. 01: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಗುರುವಾರ ಬೆಳಗ್ಗೆ ದೆಹಲಿಯಲ್ಲಿ ಸಚಿವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಮಂಗಳೂರು ತನ್ನ

ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com, ಆ. 01: ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21)ಎಂಬಾತನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ ಮುಗೇರು ಬಳಿ ನೇತ್ರಾವತಿ ನದಿಯ ಮಧ್ಯದಲ್ಲಿ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದೆ. ಜು 27 ರಂದು ಹೇಮಂತ್ ನಾಪತ್ತೆಯಾಗಿದ್ದು, ಈ ಕುರಿತಾಗಿ ಜು.28 ರಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಜು.29 ರಂದು ಹೇಮಂತ್ ನ ದ್ವಿಚಕ್ರ ವಾಹನ ಜಕ್ರಿಬೆಟ್ಟುವಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಮೊಬೈಲ್

ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತಗಳ್ಳತನ: ‘ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ’- ಸಿಎಂ

(ನ್ಯೂಸ್ ಕಡಬ) newskadaba.com, ಜು. 31: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮಾಡಲು ಬರುತ್ತಿದ್ದಾರೆ. ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು

ಮತಗಳ್ಳತನ: ‘ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ’- ಸಿಎಂ Read More »

ಕರಾವಳಿ, ಕರ್ನಾಟಕ
Scroll to Top