News Kadaba

ಮಂಗಳೂರು : ಕುಸಿದುಬಿದ್ದ ತಡೆಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com,ಜು .17.ಮಂಗಳೂರು ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ಭಾರೀ ಮಳೆಗೆ ಮೇರಿಹಿಲ್ ಬಳಿ ತಡೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಇನ್ನು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ […]

ಮಂಗಳೂರು : ಕುಸಿದುಬಿದ್ದ ತಡೆಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ Read More »

ಕರಾವಳಿ, ಕರ್ನಾಟಕ

ಇಂದು ಸಚಿವ ಸಂಪುಟ ಸಭೆ: ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com,ಜು .17. ಬೆಂಗಳೂರು: ಗ್ರಾಮಸ್ಥರ ವಿರೋಧದ ನಡುವೆಯೂ ಗೂರುವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೊಪ್ಪಳ, ವಿಜಯಪುರ, ರಾಯಚೂರು ಮತ್ತು ಇತರ ಸ್ಥಳಗಳ ಪ್ರಾಥಮಿಕ ಅಧ್ಯಯನವನ್ನು ಕೈಗೊಳ್ಳಲು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ (ಎನ್‌ಟಿಪಿಸಿ) ಸಂಪುಟವು ಅನುಮತಿ ನೀಡುವ ಸಾಧ್ಯತೆಗಳಿವೆ ಈ ವರ್ಷದ ಕೇಂದ್ರ ಬಜೆಟ್‌ನಲ್ಲಿ, ಭಾರತದ ದೀರ್ಘಕಾಲೀನ ಇಂಧನ ಪರಿವರ್ತನಾ ಕಾರ್ಯತಂತ್ರದ ಭಾಗವಾಗಿ ಪರಮಾಣು ಶಕ್ತಿಗೆ ಹೆಚ್ಚಿನ

ಇಂದು ಸಚಿವ ಸಂಪುಟ ಸಭೆ: ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ಸಾಧ್ಯತೆ..! Read More »

ಕರ್ನಾಟಕ

‘ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ’- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜು.16. ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮಂಡಳಿ ಸಭೆಯಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಜಾತಿಗಣತಿ ವಿಚಾರಗಳ ಬಗ್ಗೆ ಮೂರು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ಮೂರು

‘ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ’- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ: ರಮಾನಾಥ ರೈ ಆರೋಪ

(ನ್ಯೂಸ್ ಕಡಬ) newskadaba.com, ಜು.16. ಮಂಗಳೂರು, ಜು.16: ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪು ಕಲ್ಲು, ಮರಳು ಸಿಗುತ್ತಿಲ್ಲವೆಂದು ರಸ್ತೆಯಲ್ಲಿ ನಿಂತು ಮಾತನಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಲ್ಲ. ಆದರೆ ದ.ಕ. ಜಿಲ್ಲೆಯ ಬಿಜೆಪಿ ಶಾಸಕರು ಅದನ್ನೇ ಮಾಡುತ್ತಿದ್ದಾರೆ. ಅವರು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ ಎಂದು ಹೇಳಿದರು.

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ: ರಮಾನಾಥ ರೈ ಆರೋಪ Read More »

ಕರಾವಳಿ

ರಾಜ್ ಬಿ ಶೆಟ್ಟಿ ನಿರ್ಮಾಣದ ʼಸು ಫ್ರಮ್ ಸೋʼ ಚಿತ್ರ ಜು.25ಕ್ಕೆ ರಿಲೀಸ್‌

(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಖ್ಯಾತ ನಟ ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ಹಾಗೂ ರಾಜ್ ಬಿ ಶೆಟ್ಟಿ ಅವರು ನಿರ್ಮಾಣ ಮಾಡಿರುವ ಹಾಗೂ ಜೆಪಿ ತುಮಿನಾಡು ನಿರ್ದೇಶನದ ʼಸು ಫ್ರಮ್ ಸೋʼ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ʼಡ್ಯಾಂಕ್ಸ್ ಅಂಥಮ್; ಹಾಡಿಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಕಾಮಿಡಿ ಹಾರಾರ್ ಕಥಾಹಂದರ ಹೊಂದಿರುವ ಈ

ರಾಜ್ ಬಿ ಶೆಟ್ಟಿ ನಿರ್ಮಾಣದ ʼಸು ಫ್ರಮ್ ಸೋʼ ಚಿತ್ರ ಜು.25ಕ್ಕೆ ರಿಲೀಸ್‌ Read More »

ಕರ್ನಾಟಕ, ಸಿನಿಮಾ

ರೌಡಿಶೀಟರ್ ಹತ್ಯೆ ಕೇಸು: ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ. ನಿನ್ನೆ ಮಂಗಳವಾರ ರಾತ್ರಿ ನಗರದ ಭಾರತಿ ನಗರದಲ್ಲಿ ಹಲ್ಲೆಕೋರರು ಕಾರಿನಲ್ಲಿ ಬಂದು ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ. ಮೃತನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಭೈರತಿ ಬಸವರಾಜ್ ಜೊತೆಗೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ರೌಡಿಶೀಟರ್ ಹತ್ಯೆ ಕೇಸು: ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ

ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್- ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com, ಜು.16. ನವದೆಹಲಿ: ದೆಹಲಿಯಿಂದ ಪಾಟ್ನಾಗೆ ಹೊರಟಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ಸಮಸ್ಯೆಯಾದ ಪರಿಣಾಮ ಪೈಲಟ್‌ನ ಚಾಣಾಕ್ಷತನದಿಂದ ಮತ್ತೆ ಟೇಕಾಫ್ ಆಗಿ ಬಳಿಕ ಸೇಫ್ ಲ್ಯಾಂಡಿಂಗ್ ಆಗಿದೆ. ಮಂಗಳವಾರ ರಾತ್ರಿ ದೆಹಲಿಯಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದ 6ಇ2482 ಇಂಡಿಗೋ ವಿಮಾನ ಪಾಟ್ನಾದ ಜಯ ಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ವಿಮಾನವು ಲ್ಯಾಂಡ್ ಆಗುವಾಗ ಗೊತ್ತುಪಡಿಸಿದ ಟಚ್‌ಡೌನ್ ಪಾಯಿಂಟ್‌ಗಿಂತ ಮುಂದೆ ಇಳಿದಿದೆ. ಇದನ್ನರಿತ ಪೈಲಟ್ ಉಳಿದ ರನ್‌ವೇ ಉದ್ದವು

ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್- ತಪ್ಪಿದ ದುರಂತ Read More »

ಬ್ರೇಕಿಂಗ್ ನ್ಯೂಸ್

ಭಾರತ-ಪಾಕಿಸ್ತಾನ ಕದನ ವಿರಾಮ: ಟ್ರಂಪ್ ಹೇಳಿಕೆ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಉತ್ತರಿಸಬೇಕು- ಕಾಂಗ್ರೆಸ್

(ನ್ಯೂಸ್ ಕಡಬ) newskadaba.com, ಜು.16. ನವದೆಹಲಿ: ಭಾರತ-ಪಾಕಿಸ್ತಾನ “ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಕುರಿತು ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಉಲ್ಲೇಖಿಸಿ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳಿರುವ ಪೋಸ್ಟ್ ಅನ್ನು ಟ್ಯಾಗ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 66 ದಿನಗಳಲ್ಲಿ 23 ಬಾರಿ ಪುನರಾವರ್ತನೆ ಆಗಿರುವುದಾಗಿ ತಿಳಿಸಿದ್ದಾರೆ. ಜುಲೈ

ಭಾರತ-ಪಾಕಿಸ್ತಾನ ಕದನ ವಿರಾಮ: ಟ್ರಂಪ್ ಹೇಳಿಕೆ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಉತ್ತರಿಸಬೇಕು- ಕಾಂಗ್ರೆಸ್ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು ಕಾಲ್ತುಳಿತ ಕೇಸ್‌: ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಆರ್‌ಸಿಬಿ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆಯ ಸ್ಥಿತಿಗತಿ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಈ ದುರದೃಷ್ಟಕರ ದುರಂತದಲ್ಲಿ 11 ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ವರದಿಯನ್ನು ಗೌಪ್ಯವಾಗಿಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿತ್ತು. ಆದರೆ ಅಂತಹ ಗೌಪ್ಯತೆಗೆ ಯಾವುದೇ ಕಾನೂನು ಆಧಾರಗಳಿಲ್ಲ ಮತ್ತು ಅವು ಸರ್ಕಾರದಿಂದ ಗ್ರಹಿಸಲ್ಪಟ್ಟ ಸಂಗತಿಗಳು ಎಂದು ನ್ಯಾಯಾಲಯ

ಬೆಂಗಳೂರು ಕಾಲ್ತುಳಿತ ಕೇಸ್‌: ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾರ್ಖಂಡ್‌: ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ, ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com, ಜು.16. ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮತ್ತು ಒಬ್ಬ ಸಿಆರ್‌ಪಿಎಫ್‌‍ ಜವಾನ್‌ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋಮಿಯಾ ಪೊಲೀಸ್‌‍ ಠಾಣೆ ಪ್ರದೇಶದ ಬಿರ್ಹೋರ್ಡೆರಾ ಅರಣ್ಯದಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದರು.

ಜಾರ್ಖಂಡ್‌: ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ, ಯೋಧ ಹುತಾತ್ಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top