News Kadaba

ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್ ಕಡಬ) newskadaba.com, ಜು.15. ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸೂಚನೆ ನೀಡಿದೆ. ದ್ವೇಷದ ಭಾಷಣವನ್ನು ʻಅಭಿವ್ಯಕ್ತಿ ಸ್ವಾತಂತ್ರ‍್ಯʼ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸಿದ ನ್ಯಾ. ಬಿ.ವಿ ನಾಗರತ್ನ ಮತ್ತು ನ್ಯಾ. ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಅದನ್ನ […]

ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜು.15. ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್ ಅಹ್ಮದ್, ಯಾಸರ್ ಅರಫತ್ ವಿ.ಪಿ., ಮುಹಮ್ಮದ್ ಸಾಹಿರ್ ಎಂಬವರು ದುಬೈಯಲ್ಲಿ ವ್ಯವಹಾರ ಮತ್ತು ಲ್ಯಾಂಡ್ ಪ್ರೋಕರಿಂಗ್ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿನಿಂದ ತನ್ನೂರಾದ ಕೋಝಿಕೋಡ್‌ನಲ್ಲಿ ಪ್ರೋಕರಿಂಗ್ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನಾಫ್‌ರ ಪರಿಚಯದ ಮಂಗಳೂರಿನಲ್ಲಿರುವ

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ʼಧರ್ಮಸ್ಥಳʼ ಸಾವಿನ ಪ್ರಕರಣಗಳ ಬಗ್ಗೆ ವಿಸ್ತೃತ ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ

(ನ್ಯೂಸ್ ಕಡಬ) newskadaba.com, ಜು. 14. ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ ಬಳಿಕವೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣಿಸಿರಲಿಲ್ಲ. ಇದೀಗ ಮಹಿಳಾ ಆಯೋಗ ಈ ವಿಚಾರವನ್ನು ಗಂಭೀರವಾಗಿ

ʼಧರ್ಮಸ್ಥಳʼ ಸಾವಿನ ಪ್ರಕರಣಗಳ ಬಗ್ಗೆ ವಿಸ್ತೃತ ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ್ಯಾಷನಲ್ ಹೆರಾಲ್ಡ್ ಕೇಸ್: ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ನ್ಯಾಯಾಲಯ

(ನ್ಯೂಸ್ ಕಡಬ) newskadaba.com, ಜು. 14. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಹಾಗೂ ಉಳಿದ ಐವರ ವಿರುದ್ಧದ ಹಣ ವರ್ಗಾವಣೆ ಆರೋಪವನ್ನು ಪರಿಗಣಿಸಬೇಕೆ ಎಂಬ ಕುರಿತು ದೆಹಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ. ಜುಲೈ 29ರಂದು ಆದೇಶ ಪ್ರಕಟಿಸುವುದಾಗಿ ರೋಸ್ ಅವೆನ್ಯೂ ಕೋರ್ಟ್ ಸಂಕೀರ್ಣದಲ್ಲಿನ ಭ್ರಷ್ಟಾಚಾರ ತಡೆ ಕಾಯ್ದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ತಿಳಿಸಿದ್ದಾರೆ. ಗಾಂಧಿ ಕುಟುಂಬದವರಲ್ಲದೇ ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ಸುನಿಲ್ ಭಂಡಾರಿ ಹಾಗೂ ಯಂಗ್

ನ್ಯಾಷನಲ್ ಹೆರಾಲ್ಡ್ ಕೇಸ್: ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ನ್ಯಾಯಾಲಯ Read More »

ಕರ್ನಾಟಕ

ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ, 9 ಜನರು ಸಾವು

(ನ್ಯೂಸ್ ಕಡಬ) newskadaba.com, ಜು. 14. ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹನ್ನೊಂದು ಜನರು ಗಾಯಗೊಂಡಿರು ಘಟನೆ ಅಂಧ್ರದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಬಳಿ ನಡೆದಿದೆ. ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡು ಸಮತೋಲನ ಕಳೆದುಕೊಂಡು ಮಿನಿ ಟ್ರಕ್‌ ಮೇಲೆ ಬಿದ್ದಾಗ ಇದು ದುರಂತ ಸಂಭವಿಸಿದೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾವು

ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ, 9 ಜನರು ಸಾವು Read More »

ಬ್ರೇಕಿಂಗ್ ನ್ಯೂಸ್

ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

(ನ್ಯೂಸ್ ಕಡಬ) newskadaba.com, ಜು. 14. ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ

ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ Read More »

ಕರ್ನಾಟಕ

ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ

(ನ್ಯೂಸ್ ಕಡಬ) newskadaba.com, ಜು. 14. 2024- 25 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ವಾರ್ಷಿಕ ಪರೀಕ್ಷೆಯ ಪ್ರಥಮ ಮತ್ತು ದ್ವಿತೀಯ ಭಾಷೆ ಕನ್ನಡದಲ್ಲಿ ಪೂರ್ಣ ಅಂಕಗಳಿಸಿದ ಹಾಗೂ ಅತ್ಯುತ್ತಮ ಸಾಧನೆಗೈದ ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜುಲೈ 12 2025 ಶನಿವಾರದಂದು  ರಾಮಕುಂಜ ವಸತಿ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ

ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..?

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ರಾಜ್ಯ ರಾಜಕಾರಣದ ರೆಬೆಲ್‌ ಲೇಡಿ ಎಂದಿನಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ರಾಜರಾಕಾರಣದ ಜೊತೆಗೆ ಇದೀಗ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಅವರು ತಮ್ಮದೇ ಹೊಸ ಪ್ರೊಡಕ್ಷನ್‌ ಹೌಸ್‌ ತೆರಯಲು ಸಜ್ಜಾಗಿದ್ದಾರೆ. ಹೆಬ್ಬಾಳ್ಕರ್​ ತಮ್ಮ ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ರಾಜಕಾರಣದ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಗುರುತು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..? Read More »

ಕರ್ನಾಟಕ, ಸಿನಿಮಾ

ಅತಿಯಾದ ಮಳೆ ಹಿನ್ನೆಲೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com, ಜು. 14. ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆಯು ಸಾರ್ವಜನಿಕ ಕಾಮಗಾರಿ ಅಥವಾ ಪಂಚಾಯತ್ ರಾಜ್ ಇಲಾಖೆಗಳ ಎಂಜಿನಿಯರ್‌ಗಳು ಶಾಲಾ ಕಟ್ಟಡಗಳನ್ನು ಪರಿಶೀಲಿಸಬೇಕು ಮತ್ತು ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯಬೇಕು ಎಂದು ತಿಳಿಸಿದೆ. ಯಾವುದೇ ತರಗತಿ ಕೊಠಡಿ ಅಸುರಕ್ಷಿತ ಅಥವಾ ಶಿಥಿಲಗೊಂಡಿರುವುದು ಕಂಡುಬಂದರೆ, ಅವುಗಳನ್ನು ತಕ್ಷಣವೇ ತೆರವುಗೊಳಿಸಬೇಕು ಮತ್ತು

ಅತಿಯಾದ ಮಳೆ ಹಿನ್ನೆಲೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com, ಜು. 14. ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ರಾಷ್ಟ್ರೀಯ ಹೆದ್ದಾರಿ 369E ನಲ್ಲಿ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾದ ಬಹುನಿರೀಕ್ಷಿತ ಕೇಬಲ್-ಸ್ಟೇಡ್ ಸೇತುವೆಯು ರಾಜ್ಯದಲ್ಲಿಯೇ ಅತಿ ಉದ್ದವಾಗಿದೆ ಮತ್ತು ದೇಶದಲ್ಲಿಯೇ ಎರಡನೇ ಅತಿ ಉದ್ದವಾದ ಸೇತುವೆಯಾಗಿದೆ. 2.44 ಕಿ.ಮೀ.: ಸಿಂಗದೂರು ಸೇತುವೆಯ ಒಟ್ಟು ಉದ್ದ 16 ಮೀ.: ಸೇತುವೆ ಹೊಂದಿರುವ ಅಗಲದ ದ್ವಿಪಥದ

ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top