News Kadaba

ಸುಹಾಸ್ ಹತ್ಯೆ ಕೇಸ್‌: ಎನ್‌ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲರ ಭೇಟಿ

(ನ್ಯೂಸ್ ಕಡಬ) newskadaba.com, ಮೇ.09: ಸುಹಾಸ್ ಹತ್ಯೆ ಪ್ರಕರಣದ ಎನ್‍ಐಎ ತನಿಖೆ ಆಗಬೇಕು. ಈ ವಿಷಯದಲ್ಲಿ ರಾಜ್ಯಪಾಲರು ರಾಜ್ಯ ಸರಕಾರಕ್ಕೆ ಆಗ್ರಹಿಸಿ ಆದೇಶ ಮಾಡಿಸಲು ವಿನಂತಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಹಾಸ್ ಹತ್ಯೆ ವಿಷಯದಲ್ಲಿ ನಿಷ್ಪಕ್ಷಪಾತ ತನಿಖೆಯ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ನಮ್ಮೆಲ್ಲ ಜನಪ್ರತಿನಿಧಿಗಳು, ಸುಹಾಸ್ ಮನೆಯವರು, ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದರು. ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ […]

ಸುಹಾಸ್ ಹತ್ಯೆ ಕೇಸ್‌: ಎನ್‌ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲರ ಭೇಟಿ Read More »

ಕರಾವಳಿ, ಕರ್ನಾಟಕ

ಎಲ್‌ಒಸಿಯಲ್ಲಿ ಪಾಕ್‌ ಗುಂಡಿನ ದಾಳಿ- ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com, ಮೇ.09: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಈ ಘಟನೆ ಸಂಭವಿಸಿದೆ. ವಿವಿಧ ವಲಯಗಳಲ್ಲಿ ಗಡಿಯಾಚೆಗಿನ ಶೆಲ್ ದಾಳಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ಗುಂಡಿನ ಚಕಮಕಿಯ

ಎಲ್‌ಒಸಿಯಲ್ಲಿ ಪಾಕ್‌ ಗುಂಡಿನ ದಾಳಿ- ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ Read More »

ಬ್ರೇಕಿಂಗ್ ನ್ಯೂಸ್

ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರ ಹೆಡೆಮುರಿ ಕಟ್ಟಿದ BSF; ಪಾಕಿಸ್ತಾನ ರೇಂಜರ್ಸ್ ಪೋಸ್ಟ್ ಧ್ವಂಸ!

(ನ್ಯೂಸ್ ಕಡಬ) newskadaba.com, ಮೇ.09:ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ಇದರ ನಡುವೆ ಭಾರತ ಗಡಿ ಪ್ರವೇಶಕ್ಕೆ ಯತ್ನಿಸಿದ ಪಾಕಿಸ್ತಾನ ಮೂಲದ 7 ಉಗ್ರರನ್ನು ಗಡಿ ಭದ್ರತಾ ಪಡೆ (BSF) ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ. ಮೂಲಗಳ ಪ್ರಕಾರ ಮೇ 8ರ

ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರ ಹೆಡೆಮುರಿ ಕಟ್ಟಿದ BSF; ಪಾಕಿಸ್ತಾನ ರೇಂಜರ್ಸ್ ಪೋಸ್ಟ್ ಧ್ವಂಸ! Read More »

ಬ್ರೇಕಿಂಗ್ ನ್ಯೂಸ್

ಭಾರತ-ಪಾಕ್ ನಡುವೆ ಯುದ್ಧ ಭೀತಿ, ತಾತ್ಕಾಲಿಕವಾಗಿ ಎಲ್ಲಾ ಐಪಿಎಲ್ ಪಂದ್ಯಗಳು ಅಮಾನತು

(ನ್ಯೂಸ್ ಕಡಬ) newskadaba.com, ಮೇ.09: ಮೇ – ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಹಿನ್ನೆಲೆಯಲ್ಲಿ ಪ್ರೇಕ್ಷಕರ ಹಾಗೂ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಪ್ರೀಮಿಯರ್ ಲೀಗ್ ( ಐಪಿಎಲ್) ನ ಮುಂದಿನ ಎಲ್ಲಾ ಹಂತದ ಪಂದ್ಯಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಾತ್ಕಾಲಿಕವಾಗಿ ಅಮಾನತುಪಡಿಸುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಕಳೆದ ರಾತ್ರಿ ಪಾಕಿಸ್ತಾನ ಭಾರತದ ಮೂರು ಗಡಿ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಡೋನ್ ದಾಳಿ ನಡೆಸಿತ್ತು. ಹೀಗಾಗಿ ಹಿಮಚಾಲ ಪ್ರದೇಶದಲ್ಲಿ ನಡೆಯುತ್ತಿದ್ದ ದೆಹಲಿ

ಭಾರತ-ಪಾಕ್ ನಡುವೆ ಯುದ್ಧ ಭೀತಿ, ತಾತ್ಕಾಲಿಕವಾಗಿ ಎಲ್ಲಾ ಐಪಿಎಲ್ ಪಂದ್ಯಗಳು ಅಮಾನತು Read More »

ಬ್ರೇಕಿಂಗ್ ನ್ಯೂಸ್

‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com, ಮೇ.09: ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ, ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ  ಚಾನೆಲ್‌ಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಕಳುಹಿಸಿರುವ ರಕ್ಷಣಾ ಇಲಾಖೆ,  ನೇರ ಪ್ರಸಾರದ ಸುದ್ದಿಯಿಂದ ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುತ್ತದೆ ಎಂದು ಸೂಚನೆ ನೀಡಲಾಗಿದೆ. ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು

‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಪಾಕ್‌ನಿಂದ ಸುಳ್ಳು ಮಾಹಿತಿ ಹರಡುವ ಯತ್ನ; ರಿಪೋರ್ಟ್‌ ಮಾಡಲು ಪಿಐಬಿ ಮನವಿ

(ನ್ಯೂಸ್ ಕಡಬ) newskadaba.com, ಮೇ.09: ನವದೆಹಲಿ: ಭಾರತದಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಸುವ ಉದ್ದೇಶದಿಂದ ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ಸಂಘಟಿತ ತಪ್ಪು ಮಾಹಿತಿ ಹರಡುವಿಕೆಯನ್ನು ಆರಂಭಿಸಿದ್ದು ಕ್ಷಿಪಣಿ, ಡ್ರೋನ್‌ ಸೇರಿ ವೈಮಾನಿಕ ದಾಳಿಗಳ ಕುರಿತು ನಿಖರವಾದ ಮಾಹಿತಿಗಳಿಗಾಗಿ ಭಾರತ ಸರ್ಕಾರ ಅಧಿಕೃತ ಖಾತೆಗಳನ್ನು ಮಾತ್ರ ಅವಲಂಬಿಸಿ ಎಂದು ಪಿಐಬಿ(PIB) ದೇಶದ ಜನರನ್ನು ಎಚ್ಚರಿಸಿದೆ. ಜತೆಗೆ ಪರಿಶೀಲಿಸದೇ ಯಾವುದೇ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಮತ್ತು ಅಂತಹ ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ. ಯಾವುದೇ ತಪ್ಪು ಮಾಹಿತಿ ಕಂಡುಬಂದರೆ,

ಪಾಕ್‌ನಿಂದ ಸುಳ್ಳು ಮಾಹಿತಿ ಹರಡುವ ಯತ್ನ; ರಿಪೋರ್ಟ್‌ ಮಾಡಲು ಪಿಐಬಿ ಮನವಿ Read More »

ಕರ್ನಾಟಕ

ಪಾಕ್‌ನಿಂದ ಸಂಭಾವ್ಯ ದಾಳಿ ಮುನ್ಸೂಚನೆ – ಚಂಢೀಗಡದಲ್ಲಿ ಸೈರನ್ ಮೊಳಗಿಸಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಮೇ.09: ಸೇನೆ ದಾಳಿ ಮಾಡುವ ಮುನ್ಸೂಚನೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ವಾಯು ಸೇನೆಯ ಸೂಚನೆಯಂತೆ ಚಂಢೀಗಡದಲ್ಲಿ ಸೈರನ್ ಮೊಳಗಿಸಲಾಗಿದೆ. ಜನರು ರಸ್ತೆಗಳಲ್ಲಿ ಓಡಾಡದಂತೆ, ಬಾಲ್ಕನಿಗಳಲ್ಲೂ ಕಾಣಿಸಿಕೊಳ್ಳದಂತೆ ಸೂಚನೆ ನೀಡಲಾಗಿದೆ. ಗುರುವಾರ ರಾತ್ರಿ ಪಂಜಾಬ್, ಚಂಡೀಗಢದ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್, ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತೀಯ ಸೇನೆ ಪಾಕಿಸ್ತಾನದ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸಿತ್ತು.

ಪಾಕ್‌ನಿಂದ ಸಂಭಾವ್ಯ ದಾಳಿ ಮುನ್ಸೂಚನೆ – ಚಂಢೀಗಡದಲ್ಲಿ ಸೈರನ್ ಮೊಳಗಿಸಿ ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್

ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ- ಪಾಕ್‌ ಗೆ ಪ್ರವಾಹ ಭೀತಿ

(ನ್ಯೂಸ್ ಕಡಬ) newskadaba.com, ಮೇ.09: ಭಾರತ ಸಲಾಲ್ ಹಾಗೂ ಬಾಗ್ಲಿಹಾರ್​ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಿದ್ದು, ಪಾಕ್‌ಗೆ ಪ್ರವಾಹ ಭೀತಿ ಎದುರಾಗಿದೆ. ಈಗ ಭಾರತ ಪಾಕಿಸ್ತಾನದ ವಿರುದ್ಧ ಜಲದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮೇ 6-7ರ ರಾತ್ರಿ ಭಾರತ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿತ್ತು. ಗುರುವಾರವೂ ಭಾರತವು ಲಾಹೋರ್ ಮತ್ತು

ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ- ಪಾಕ್‌ ಗೆ ಪ್ರವಾಹ ಭೀತಿ Read More »

ಬ್ರೇಕಿಂಗ್ ನ್ಯೂಸ್

ಗಣಿಗಾರಿಕೆ ಹಗರಣ: ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ

(ನ್ಯೂಸ್ ಕಡಬ) newskadaba.com, ಮೇ.09: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಗಣಿ ದೊರೆ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೇ 8 ರಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅನರ್ಹತೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ

ಗಣಿಗಾರಿಕೆ ಹಗರಣ: ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ Read More »

ಕರ್ನಾಟಕ

ದೇಶಾದ್ಯಂತ ಹೈಅಲರ್ಟ್‌ – 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ

(ನ್ಯೂಸ್ ಕಡಬ) newskadaba.com, ಮೇ.09: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಮಾಡಿಕೊಳ್ಳುವಂತೆ ತಿಳಿಸಿವೆ. ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಬಿಗಿ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ

ದೇಶಾದ್ಯಂತ ಹೈಅಲರ್ಟ್‌ – 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top